ಪ್ರಮೋದ್ ಮುತಾಲಿಕ್ ವಿರುದ್ಧ ಪ್ರಕರಣ ದಾಖಲಿಸಿ: ಶ್ರೀರಾಮ ಸೇನೆ ಸಂಘಟನೆಯನ್ನ ಬ್ಯಾನ್ ಮಾಡಿ- ವಕೀಲ ಪ್ರೊ.ಹರಿರಾಂ

ಸೆ.24 ರಂದು ನಗರದ ಡಾ.ಬಿ.ಆರ್.ಅಂಬೇಡ್ಕರ್‌ ವೃತ್ತದಲ್ಲಿ  ಹಿಂದೂಪುರದಿಂದ ಬೆಂಗಳೂರಿಗೆ ಗೋಮಾಂಸ ಸಾಗಾಟ ಮಾಡುತ್ತಿದ್ದ ವಾಹನಗಳನ್ನ ತಡೆದು, ಗೋಮಾಂಸ ಸಾಗಾಟ ಮಾಡುತ್ತಿದ್ದ ಮುಸ್ಲಿಂ ಯುವಕರನ್ನ ಥಳಿಸಿ, ಒಂದು ಕಾರಿಗೆ ಬೆಂಕಿ ಇಟ್ಟು ಅಮಾನವೀಯ ಕೃತ್ಯ ಎಸಗಿರುವ ಶ್ರೀರಾಮ ಸೇನೆ ಸಂಘಟನೆಯನ್ನ ಕೂಡಲೇ ರಾಜ್ಯದಲ್ಲಿ ಬ್ಯಾನ್ ಮಾಡಬೇಕು ಎಂದು ವಕೀಲ ಪ್ರೊ.ಹರಿರಾಂ ಆಗ್ರಹಿಸಿದರು.

ಈ ಕುರಿತು ನಗರದ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಶ್ರೀರಾಮ ಸೇನೆಯು ಸಂವಿಧಾನ ವಿರೋಧಿ, ಸಮಾಜ ಘಾತುಕ ಹಾಗೂ ಭಯೋತ್ಪಾದಕ ಸಂಘಟನೆಯಾಗಿದೆ. ದಲಿತ, ಅಮಾಯಕ ಯುವಕರನ್ನ ಒಗ್ಗೂಡಿಸಿ, ಕೋಮುವಾದಿ ಕೃತ್ಯಗಳಿಗೆ ಬಳಸಿಕೊಂಡು, ಸಮಾಜ ಘಾತುಕ ಕೆಲಸಗಳನ್ನ ಇವರ ಕೈಯಲ್ಲಿ ಮಾಡಿಸಿ ಜೈಲಿಗೆ ಕಳುಹಿಸುವ ಹುನ್ನಾರ ಮಾಡುತ್ತಿದೆ. ಆದ್ದರಿಂದ ಈ ಸಂಘಟನೆಯನ್ನ ನಿಷೇಧ ಮಾಡಿ, ಇದರ ರಾಜ್ಯಧ್ಯಕ್ಷರಾದ ಪ್ರಮೋದ್ ಮುತಾಲಿಕ್ ಅವರ ಮೇಲೂ ಪ್ರಕರಣ ದಾಖಲಿಸಬೇಕು ಎಂದು ಒತ್ತಾಯಿಸಿದರು.

ಸಮಾಜದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ಪೊಲೀಸ್ ಇಲಾಖೆ ಇದೆ. ಯಾರಿಗೆ ಆಗಲಿ ತಮಗೆ ತಪ್ಪು ಅನಿಸಿದರೆ ಕೂಡಲೇ ಪೊಲೀಸ್ ಇಲಾಖೆಗೆ ಮಾಹಿತಿ ನೀಡಬೇಕು. ಅದನ್ನ ಬಿಟ್ಟು ತಾವೇ ಯಾವ ಅಧಿಕಾರವಿಲ್ಲದೇ ತಪ್ಪನ್ನ ಸರಿಪಡಿಸಲು ಮುಂದಾಗುವುದು ಕಾನೂನಾತ್ಮಕವಾಗಿ ಅಪರಾಧ. ದಲಿತರು ಹಾಗೂ ಮುಸ್ಲಿಂರ ನಡುವೆ ಬಿರುಕು ಉಂಟುಮಾಡುವ ಕೆಲಸವನ್ನ ಶ್ರೀ ರಾಮ ಸೇನೆ ಮಾಡುತ್ತಿದೆ ಎಂದು ಆರೋಪಿಸಿದರು.

ಈಗಿನ ರಾಜಕೀಯ ಪಕ್ಷಗಳು ತಮ್ಮ ವೋಟ್ ಬ್ಯಾಂಕ್ ಗಾಗಿ ಎಲ್ಲರನ್ನು ಎಲ್ಲಾ ರೀತಿಯಲ್ಲಿ ಅದರಲ್ಲೂ ಮುಸಲ್ಮಾನರನ್ನ, ದಲಿತರು, ಅಮಾಯಕ ಯುವಕರನ್ನು ಬಳಸಿಕೊಂಡು ತಮ್ಮ ಬೇಳೆ ಬೇಯಿಸಿಕೊಳ್ಳುತ್ತಿವೆ. ಈಗಿನ ಕಾಂಗ್ರೆಸ್ ಸರ್ಕಾರವು ಸಮಾಜ ಘಾತುಕ ಸಂಘಟನೆಗಳನ್ನು ನಿಷೇಧ ಮಾಡುತ್ತೇವೆ ಎಂದು ತಮ್ಮ ಪ್ರಣಾಳಿಕೆಯಲ್ಲಿ ಹೇಳಲಾಗಿತ್ತು.ಆದರೆ ಇದುವರೆಗೆ ಅಂತಹ ಯಾವ ಸಂಘಟನೆಯನ್ನ ಬ್ಯಾನ್ ಮಾಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ನಂತರ ಬಿ.ಆರ್.ಭಾಸ್ಕರ್ ಪ್ರಸಾದ್ ಮಾತನಾಡಿ, ಪ್ರತಿದಿನ ನಮ್ಮ ದೇಶದಿಂದ ಹೊರ ದೇಶಕ್ಕೆ ಒಂದೂವರೆ ಲಕ್ಷ ಟನ್ ನಿಂದ ಹಿಡಿದು ಎರಡು ಲಕ್ಷ ಟನ್ ವರೆಗೆ ದನದ ಮಾಂಸ ರಫ್ತು ಆಗುತ್ತದೆ. ಇದನ್ನ ರಫ್ತು ಮಡುತ್ತಿರುವ ಆರು ಕಂಪನಿಗಳ ಮಾಲೀಕರು ಉನ್ನತ ಜಾತಿಗೆ ಸೇರಿದವರು. ಈ ಆರು ಕಂಪನಿಗಳಿಂದ ನೂರಾರು ಕೋಟಿ ರೂಪಾಯಿಗಳನ್ನ ಬಿಜೆಪಿ ದೇಣಿಗೆ ಪಡೆಯುತ್ತಿದೆ. ಅಂತಹ ಕಂಪನಿಗಳ ಮುಂದೆ ಈ ಶ್ರೀರಾಮ ಸೇನೆ ಎಂದಾದರು ಹೋಗಿ ದನದ ಮಾಂಸ ರಫ್ತು ಆಗುವುದನ್ನ ಎಂದಾದರೂ ತಡೆದಿದ್ದಾರಾ?. ತಡೆಯುವ ತಾಕತ್ತು ಈ ಶ್ರೀರಾಮ ಸೇನೆಯ ರಾಜ್ಯಾಧ್ಯಕ್ಷ ಪ್ರಮೋದ್ ಮುತಾಲಿಕ್ ಅವರಿಗೆ ಇದಿಯಾ? ಎಂದು ಪ್ರಶ್ನೆ ಮಾಡಿದ್ದಾರೆ.

ದನದ ಚರ್ಮ, ಮೂಳೆಗಳಿಂದ ಚಪ್ಪಲಿ, ಬೆಲ್ಟ್, ಟೋಪಿ, ವ್ಯಾನಿಟಿ ಬ್ಯಾಗ್, ಲಿಪ್‌ಸ್ಟಿಕ್, ಬಿಪಿ ಶುಗರ್ ಮಾತ್ರೆ, ಸಕ್ಕರೆ ಸೇರಿದಂತೆ ಇತರೆ ವಸ್ತುಗಳನ್ನು ತಯಾರಿಸಲಾಗುತ್ತದೆ, ಅದನ್ನು ನಾವು ಉಪಯೋಗಿಸುತ್ತೇವೆ ಎಂದರು.

ಹಫ್ತಾ ಕೊಟ್ಟಿಲ್ಲ ಎಂದು ಏಕಾಏಕಿ ಕಾರಿಗೆ ಬೆಂಕಿ ಇಟ್ಟು ಸಮಾಜದಲ್ಲಿ ಅಶಾಂತಿ ಉಂಟುಮಾಡಿ, ಮುಸ್ಲಿಂ ಯುವಕರನ್ನ ಮನಬಂದಂತೆ ಥಳಿಸಿ, ಗೋ ರುಂಡಗಳನ್ನ ತಲೆ ಮೇಲೆ ಹೊರಿಸಿ ಜೈ ಶ್ರೀರಾಮ್ ಎಂದು ಘೋಷಣೆ ಕೂಗುವಂತೆ ಒತ್ತಾಯ ಮಾಡಿ ಕೋಮು‌ ಸೌಹಾರ್ದ ಕದಡುವ ಕೆಲಸ ಮಾಡಲಾಗಿದೆ. ಇದು ಅಕ್ಷಮ್ಯ ಅಪರಾಧ. ಇದರಲ್ಲಿ ಭಾಗಿಯಾದವರಿಗೆ ತಕ್ಕ ಶಿಕ್ಷೆ ಆಗಲೇಬೇಕು, ಇನ್ನೂ ಮುಂದೆ ಇಂತಹ ಘಟನೆಗಳು ಮರುಕಳಿಸದಂತೆ ಸಂಬಂಧಿತ ಇಲಾಖೆ ಎಚ್ಚರ ವಹಿಸಬೇಕು ಎಂದು ಒತ್ತಾಯಿಸಿದರು.

Ramesh Babu

Journalist

Recent Posts

ನಾಳೆ(ಮಾರ್ಚ್ 11ರಿಂದ) ರಾಜ್ಯ ಸರ್ಕಾರಿ ಆಸ್ಪತ್ರೆಗಳ ವೈದ್ಯರ‌ ಮುಷ್ಕರ: ಸರ್ಕಾರಿ ಆಸ್ಪತ್ರೆಗಳಲ್ಲಿ ಓಪಿಡಿ ಸೇವೆಗಳು ಸ್ಥಗಿತ ಸಾಧ್ಯತೆ

ಕರ್ನಾಟಕದ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವ ರೋಗಿಗಳಿಗೆ ಮಾರ್ಚ್ 11ರಿಂದ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು…

11 hours ago

ಮಾ.19 ರಿಂದ ಮಾ.22ರವರೆಗೆ ಮೇಲಿನ ಜೂಗಾನಹಳ್ಳಿಯಲ್ಲಿ ವಿಕ್ಕಿ ಬಾಲ್ ಕ್ರಿಕೆಟ್ ಟೂರ್ನಿಮೆಂಟ್ ಆಯೋಜನೆ

ಮೇಲಿನ ಜೂಗಾನಹಳ್ಳಿ ಕ್ರಿಕೆಟರ್ಸ್ ವತಿಯಿಂದ (ದಿವಂಗತ ಡಾ. ಪುನಿತ್ ರಾಜ್‌ಕುಮಾರ್‌ ಸವಿನೆನಪಿಗಾಗಿ) ವಿಕ್ಕಿ ಬಾಲ್ ಕ್ರಿಕೆಟ್ ಟೂರ್ನಿಮೆಂಟನ್ನು ಮಾ.19 ರಿಂದ…

11 hours ago

25 ವರ್ಷಗಳ ನಂತರ ತಮಗೆ ಶಿಕ್ಷಣ ನೀಡಿದ ಗುರುಗಳ ಪಾದಪೂಜೆ

ನನ್ನ ಶಾಲೆ ನನ್ನ ಜವಾಬ್ದಾರಿ ಎಂಬ ಧ್ಯೇಯ ವಾಕ್ಯದೊಂದಿಗೆ ತಾನು ಓದಿದ ಸರ್ಕಾರಿ ಶಾಲೆಯ ಪರಿಸ್ಥಿತಿ ಹೇಗಿದೆ ಎಂಬುದನ್ನು ಹಿಂದಿರುಗಿ…

14 hours ago

ಮುಂದಿದ್ದ ವಾಹನವನ್ನ ಹಿಂದಿಕ್ಕುವ ಭರ: ನಿಯಂತ್ರಣ ತಪ್ಪಿದ ಸರಕು ಸಾಗಣೆಯ ಟೆಂಪೋ ವಿದ್ಯುತ್ ಪ್ರಸರಣ ಕೇಂದ್ರಕ್ಕೆ ಡಿಕ್ಕಿ

ಮುಂದಿದ್ದ ವಾಹನವನ್ನ ಹಿಂದಿಕ್ಕುವ ಭರದಲ್ಲಿ ನಿಯಂತ್ರಣ ತಪ್ಪಿದ ಸರಕು ಸಾಗಣೆಯ ಟೆಂಪೋ ವಿದ್ಯುತ್ ಪ್ರಸರಣ ಕೇಂದ್ರಕ್ಕೆ ಡಿಕ್ಕಿ ಹೊಡೆದಿರುವ ಘಟನೆ…

14 hours ago

ಹಳಿ ತಪ್ಪಿದಂತಿರುವ ಭಾರತದ ವಿದೇಶಾಂಗ ನೀತಿ……..

ಭಾರತದ ವಿದೇಶಾಂಗ ನೀತಿ ವ್ಯಾವಹಾರಿಕವೇ ?ಮೌಲ್ಯಯುತವೇ ? ಸೈದ್ದಾಂತಿಕವೇ ? ಅವಕಾಶವಾದಿತನವೇ ? ವ್ಯಕ್ತಿಗತವೇ ? ಸಾಂದರ್ಭಿಕ ತೀರ್ಮಾನಗಳೇ ?…

23 hours ago