ಪ್ರಮೋದ್ ಮುತಾಲಿಕ್ ವಿರುದ್ಧ ಪ್ರಕರಣ ದಾಖಲಿಸಿ: ಶ್ರೀರಾಮ ಸೇನೆ ಸಂಘಟನೆಯನ್ನ ಬ್ಯಾನ್ ಮಾಡಿ- ವಕೀಲ ಪ್ರೊ.ಹರಿರಾಂ

ಸೆ.24 ರಂದು ನಗರದ ಡಾ.ಬಿ.ಆರ್.ಅಂಬೇಡ್ಕರ್‌ ವೃತ್ತದಲ್ಲಿ  ಹಿಂದೂಪುರದಿಂದ ಬೆಂಗಳೂರಿಗೆ ಗೋಮಾಂಸ ಸಾಗಾಟ ಮಾಡುತ್ತಿದ್ದ ವಾಹನಗಳನ್ನ ತಡೆದು, ಗೋಮಾಂಸ ಸಾಗಾಟ ಮಾಡುತ್ತಿದ್ದ ಮುಸ್ಲಿಂ ಯುವಕರನ್ನ ಥಳಿಸಿ, ಒಂದು ಕಾರಿಗೆ ಬೆಂಕಿ ಇಟ್ಟು ಅಮಾನವೀಯ ಕೃತ್ಯ ಎಸಗಿರುವ ಶ್ರೀರಾಮ ಸೇನೆ ಸಂಘಟನೆಯನ್ನ ಕೂಡಲೇ ರಾಜ್ಯದಲ್ಲಿ ಬ್ಯಾನ್ ಮಾಡಬೇಕು ಎಂದು ವಕೀಲ ಪ್ರೊ.ಹರಿರಾಂ ಆಗ್ರಹಿಸಿದರು.

ಈ ಕುರಿತು ನಗರದ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಶ್ರೀರಾಮ ಸೇನೆಯು ಸಂವಿಧಾನ ವಿರೋಧಿ, ಸಮಾಜ ಘಾತುಕ ಹಾಗೂ ಭಯೋತ್ಪಾದಕ ಸಂಘಟನೆಯಾಗಿದೆ. ದಲಿತ, ಅಮಾಯಕ ಯುವಕರನ್ನ ಒಗ್ಗೂಡಿಸಿ, ಕೋಮುವಾದಿ ಕೃತ್ಯಗಳಿಗೆ ಬಳಸಿಕೊಂಡು, ಸಮಾಜ ಘಾತುಕ ಕೆಲಸಗಳನ್ನ ಇವರ ಕೈಯಲ್ಲಿ ಮಾಡಿಸಿ ಜೈಲಿಗೆ ಕಳುಹಿಸುವ ಹುನ್ನಾರ ಮಾಡುತ್ತಿದೆ. ಆದ್ದರಿಂದ ಈ ಸಂಘಟನೆಯನ್ನ ನಿಷೇಧ ಮಾಡಿ, ಇದರ ರಾಜ್ಯಧ್ಯಕ್ಷರಾದ ಪ್ರಮೋದ್ ಮುತಾಲಿಕ್ ಅವರ ಮೇಲೂ ಪ್ರಕರಣ ದಾಖಲಿಸಬೇಕು ಎಂದು ಒತ್ತಾಯಿಸಿದರು.

ಸಮಾಜದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ಪೊಲೀಸ್ ಇಲಾಖೆ ಇದೆ. ಯಾರಿಗೆ ಆಗಲಿ ತಮಗೆ ತಪ್ಪು ಅನಿಸಿದರೆ ಕೂಡಲೇ ಪೊಲೀಸ್ ಇಲಾಖೆಗೆ ಮಾಹಿತಿ ನೀಡಬೇಕು. ಅದನ್ನ ಬಿಟ್ಟು ತಾವೇ ಯಾವ ಅಧಿಕಾರವಿಲ್ಲದೇ ತಪ್ಪನ್ನ ಸರಿಪಡಿಸಲು ಮುಂದಾಗುವುದು ಕಾನೂನಾತ್ಮಕವಾಗಿ ಅಪರಾಧ. ದಲಿತರು ಹಾಗೂ ಮುಸ್ಲಿಂರ ನಡುವೆ ಬಿರುಕು ಉಂಟುಮಾಡುವ ಕೆಲಸವನ್ನ ಶ್ರೀ ರಾಮ ಸೇನೆ ಮಾಡುತ್ತಿದೆ ಎಂದು ಆರೋಪಿಸಿದರು.

ಈಗಿನ ರಾಜಕೀಯ ಪಕ್ಷಗಳು ತಮ್ಮ ವೋಟ್ ಬ್ಯಾಂಕ್ ಗಾಗಿ ಎಲ್ಲರನ್ನು ಎಲ್ಲಾ ರೀತಿಯಲ್ಲಿ ಅದರಲ್ಲೂ ಮುಸಲ್ಮಾನರನ್ನ, ದಲಿತರು, ಅಮಾಯಕ ಯುವಕರನ್ನು ಬಳಸಿಕೊಂಡು ತಮ್ಮ ಬೇಳೆ ಬೇಯಿಸಿಕೊಳ್ಳುತ್ತಿವೆ. ಈಗಿನ ಕಾಂಗ್ರೆಸ್ ಸರ್ಕಾರವು ಸಮಾಜ ಘಾತುಕ ಸಂಘಟನೆಗಳನ್ನು ನಿಷೇಧ ಮಾಡುತ್ತೇವೆ ಎಂದು ತಮ್ಮ ಪ್ರಣಾಳಿಕೆಯಲ್ಲಿ ಹೇಳಲಾಗಿತ್ತು.ಆದರೆ ಇದುವರೆಗೆ ಅಂತಹ ಯಾವ ಸಂಘಟನೆಯನ್ನ ಬ್ಯಾನ್ ಮಾಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ನಂತರ ಬಿ.ಆರ್.ಭಾಸ್ಕರ್ ಪ್ರಸಾದ್ ಮಾತನಾಡಿ, ಪ್ರತಿದಿನ ನಮ್ಮ ದೇಶದಿಂದ ಹೊರ ದೇಶಕ್ಕೆ ಒಂದೂವರೆ ಲಕ್ಷ ಟನ್ ನಿಂದ ಹಿಡಿದು ಎರಡು ಲಕ್ಷ ಟನ್ ವರೆಗೆ ದನದ ಮಾಂಸ ರಫ್ತು ಆಗುತ್ತದೆ. ಇದನ್ನ ರಫ್ತು ಮಡುತ್ತಿರುವ ಆರು ಕಂಪನಿಗಳ ಮಾಲೀಕರು ಉನ್ನತ ಜಾತಿಗೆ ಸೇರಿದವರು. ಈ ಆರು ಕಂಪನಿಗಳಿಂದ ನೂರಾರು ಕೋಟಿ ರೂಪಾಯಿಗಳನ್ನ ಬಿಜೆಪಿ ದೇಣಿಗೆ ಪಡೆಯುತ್ತಿದೆ. ಅಂತಹ ಕಂಪನಿಗಳ ಮುಂದೆ ಈ ಶ್ರೀರಾಮ ಸೇನೆ ಎಂದಾದರು ಹೋಗಿ ದನದ ಮಾಂಸ ರಫ್ತು ಆಗುವುದನ್ನ ಎಂದಾದರೂ ತಡೆದಿದ್ದಾರಾ?. ತಡೆಯುವ ತಾಕತ್ತು ಈ ಶ್ರೀರಾಮ ಸೇನೆಯ ರಾಜ್ಯಾಧ್ಯಕ್ಷ ಪ್ರಮೋದ್ ಮುತಾಲಿಕ್ ಅವರಿಗೆ ಇದಿಯಾ? ಎಂದು ಪ್ರಶ್ನೆ ಮಾಡಿದ್ದಾರೆ.

ದನದ ಚರ್ಮ, ಮೂಳೆಗಳಿಂದ ಚಪ್ಪಲಿ, ಬೆಲ್ಟ್, ಟೋಪಿ, ವ್ಯಾನಿಟಿ ಬ್ಯಾಗ್, ಲಿಪ್‌ಸ್ಟಿಕ್, ಬಿಪಿ ಶುಗರ್ ಮಾತ್ರೆ, ಸಕ್ಕರೆ ಸೇರಿದಂತೆ ಇತರೆ ವಸ್ತುಗಳನ್ನು ತಯಾರಿಸಲಾಗುತ್ತದೆ, ಅದನ್ನು ನಾವು ಉಪಯೋಗಿಸುತ್ತೇವೆ ಎಂದರು.

ಹಫ್ತಾ ಕೊಟ್ಟಿಲ್ಲ ಎಂದು ಏಕಾಏಕಿ ಕಾರಿಗೆ ಬೆಂಕಿ ಇಟ್ಟು ಸಮಾಜದಲ್ಲಿ ಅಶಾಂತಿ ಉಂಟುಮಾಡಿ, ಮುಸ್ಲಿಂ ಯುವಕರನ್ನ ಮನಬಂದಂತೆ ಥಳಿಸಿ, ಗೋ ರುಂಡಗಳನ್ನ ತಲೆ ಮೇಲೆ ಹೊರಿಸಿ ಜೈ ಶ್ರೀರಾಮ್ ಎಂದು ಘೋಷಣೆ ಕೂಗುವಂತೆ ಒತ್ತಾಯ ಮಾಡಿ ಕೋಮು‌ ಸೌಹಾರ್ದ ಕದಡುವ ಕೆಲಸ ಮಾಡಲಾಗಿದೆ. ಇದು ಅಕ್ಷಮ್ಯ ಅಪರಾಧ. ಇದರಲ್ಲಿ ಭಾಗಿಯಾದವರಿಗೆ ತಕ್ಕ ಶಿಕ್ಷೆ ಆಗಲೇಬೇಕು, ಇನ್ನೂ ಮುಂದೆ ಇಂತಹ ಘಟನೆಗಳು ಮರುಕಳಿಸದಂತೆ ಸಂಬಂಧಿತ ಇಲಾಖೆ ಎಚ್ಚರ ವಹಿಸಬೇಕು ಎಂದು ಒತ್ತಾಯಿಸಿದರು.

Ramesh Babu

Journalist

Recent Posts

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

2 hours ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

13 hours ago

ದೇವಾಲಯಗಳ ಹುಂಡಿ ಭದ್ರತೆಗೆ ಸಿಸಿಟಿವಿ ಕಣ್ಗಾವಲು- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಪ್ರವರ್ಗ ಎ ಮತ್ತು ಬಿ ದೇವಾಲಯಗಳ ಹುಂಡಿ ಭದ್ರತೆ ಸೇರಿದಂತೆ ಎಣಿಕೆ ಕಾರ್ಯ,…

18 hours ago

ಜು.25ರಂದು ಹಲವೆಡೆ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ಬೆಸ್ಕಾಂ ವತಿಯಿಂದ ತುರ್ತು ನಿರ್ವಹಣೆ ಮತ್ತು ವಿದ್ಯುತ್ ಮಾರ್ಗಗಳ ಕಾಮಗಾರಿ ಹಿನ್ನೆಲೆಯಲ್ಲಿ ಜುಲೈ 25ರಂದು (ಶನಿವಾರ) ದೊಡ್ಡಬಳ್ಳಾಪುರ ನಗರದ…

18 hours ago

ಆಕ್ರೋಶ, ಅರಾಜಕತೆ ಮತ್ತು ಮಾಧ್ಯಮಗಳು…..

ದೆಹಲಿ ಮತ್ತು ದೇಶದ ಇತರ ಭಾಗಗಳಲ್ಲಿ ಕಳೆದ ಕೆಲವು ದಿನಗಳ ಘಟನೆಗಳನ್ನು ನೋಡುತ್ತಿದ್ದರೆ ನಮ್ಮ ದೇಶದ ಸುತ್ತಮುತ್ತ ನಡೆದ ಬಾಂಗ್ಲಾ,…

1 day ago

ಪ್ರವಾಸೋದ್ಯಮ ಕ್ಷೇತ್ರದಲ್ಲಿ ಹೂಡಿಕೆಗೆ ಕರ್ನಾಟಕ ಮುಕ್ತ – ಖಾಸಗಿ ಹೂಡಿಕೆದಾರರಿಗೆ ಸರ್ಕಾರದಿಂದ ಸಂಪೂರ್ಣ ಬೆಂಬಲ- ಸಚಿವ ಕೆ.ಜೆ. ಜಾರ್ಜ್

ಕರ್ನಾಟಕವನ್ನು ದೇಶದ ಹೂಡಿಕೆ ಸ್ನೇಹಿ ಪ್ರವಾಸೋದ್ಯಮ ರಾಜ್ಯವನ್ನಾಗಿ ರೂಪಿಸುವ ನಿಟ್ಟಿನಲ್ಲಿ ಸರ್ಕಾರ ಪ್ರವಾಸೋದ್ಯಮ ನೀತಿಗಳನ್ನು ಮತ್ತಷ್ಟು ಸರಳೀಕರಿಸುತ್ತಿದ್ದು, ಖಾಸಗಿ ಹೂಡಿಕೆದಾರರಿಗೆ…

1 day ago