ಪ್ರಯೋಗಾಲಯ ಆಲೋಚನಾ ಮತ್ತು ಕಲಿಕಾ ಸಾಮರ್ಥ್ಯವನ್ನು ಹೆಚ್ಚಿಸುತ್ತದೆ-ಪ್ರಾಂಶುಪಾಲ ಜಿ.ದಯಾನಂದ್

ವಿಜ್ಞಾನದ ವಿಷಯಗಳಲ್ಲಿ ಬರುವ ಹಲವಾರು ಸಿದ್ಧಾಂತಗಳನ್ನು ಪ್ರಯೋಗಗಳ ಸಹಾಯದಿಂದ ಸುಲಭವಾಗಿ ಅರ್ಥಮಾಡಿಕೊಳ್ಳಬಹುದು. ಕೇಳಿ ಕಲಿಯುವುದಕ್ಕಿಂತ ನೋಡಿ ಕಲಿಯುವುದು ಉತ್ತಮ, ನೋಡಿ ಕಲಿಯುವುದಕ್ಕಿಂತ ಮಾಡಿ ಕಲಿಯುವುದು ಇನ್ನೂ ಉತ್ತಮ ಎಂಬುದನ್ನು ಸಾಬೀತು ಮಾಡಲು ಪ್ರಯೋಗಾಲಯಗಳು ಸಹಕಾರಿ ಆಗುತ್ತವೆ ಎಂದು ಪ್ರಾಂಶುಪಾಲ ಜಿ.ದಯಾನಂದ್ ತಿಳಿಸಿದರು.

ದೊಡ್ಡಬಳ್ಳಾಪುರ ತಾಲ್ಲೂಕಿನ ಕೊನಘಟ್ಟ ಸರ್ಕಾರಿ ಸ್ವತಂತ್ರ ಪದವಿ ಪೂರ್ವ ಕಾಲೇಜಿನಲ್ಲಿ ಮುಸಾಶಿ ಕಂಪನಿಯ  ನೆರವಿನೊಂದಿಗೆ ನಿರ್ಮಾಣವಾಗಿರುವ ನೂತನ ವಿಜ್ಞಾನ ಪ್ರಯೋಗಾಲಯದ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಪ್ರಯೋಗಾಲದ ವೀಕ್ಷಣೆಯೂ ವಿದ್ಯಾರ್ಥಿಗಳಲ್ಲಿ  ಆಲೋಚನಾ ಮತ್ತು ಕಲಿಕಾ ಸಾಮರ್ಥ್ಯವನ್ನು ಹೆಚ್ಚಿಸುತ್ತದೆ.  ವಿದ್ಯಾರ್ಥಿಗಳಿಗೆ ವೈಜ್ಞಾನಿಕವಾಗಿ ಯೋಚಿಸುವ, ವೈಜ್ಞಾನಿಕ ಮನೋಭಾವವನ್ನು ರೂಢಿಸಿಕೊಳ್ಳುವ ಪ್ರವೃತ್ತಿ ಬೆಳೆಯುತ್ತದೆ ಎಂದರು.

ಶೈಕ್ಷಣಿಕ ವಿಷಯಗಳಲ್ಲಿ ವಿಜ್ಞಾನ ಕಲಿಕೆಯು ಮಹತ್ವದ ಸ್ಥಾನ ಪಡೆದುಕೊಂಡಿದೆ. ವಿಜ್ಞಾನ ಕೇವಲ ಮಾಹಿತಿಗಷ್ಟೇ ಸಿಮೀತವಾಗಿಲ್ಲ. ವಿಜ್ಞಾನ ನಮ್ಮ ವೈಜ್ಞಾನಿಕ ಆಲೋಚನೆಯನ್ನು ಉತ್ತೇಜಿಸುತ್ತದೆ. ವಿಜ್ಞಾನದ ಪ್ರಗತಿಯಿಂದ ಸುಲಭ ಜೀವನ ನಿರ್ವಹಣೆಗೆ   ಅನುಕೂಲವಾಗುತ್ತದೆ. ಶಿಕ್ಷಕರು ವಿದ್ಯಾರ್ಥಿಗಳಿಗೆ ವಿಜ್ಞಾನ ವಿಷಯದಲ್ಲಿ ಆಸಕ್ತಿ ಮೂಡಿಸಲು ಮುಂದಾಗಬೇಕು.  ವಿಜ್ಞಾನದ ಹಲವು ಪ್ರಯೋಗಗಳಿಗೆ ಪ್ರಾತ್ಯಕ್ಷಿಕೆ ನೀಡಿದಾಗ  ವಿದ್ಯಾರ್ಥಿಗಳು ಸುಲಭವಾಗಿ ಅರ್ಥ ಮಾಡಿಕೊಳ್ಳಲು   ಸಾಧ್ಯವಾಗುತ್ತದೆ ಎಂದರು.

ಮುಸಾಶಿ ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ಸೆತಗೊವಾ ಮಾತನಾಡಿ, ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸೌಲಭ್ಯಗಳು ದೊರೆತಾಗ ಮಾತ್ರ ಅವರಿಗೆ ಉತ್ತಮ ಶಿಕ್ಷಣ ದೊರೆಯುತ್ತದೆ. ಗ್ರಾಮೀಣ ಭಾಗದ ಪದವಿ ಪೂರ್ವ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಕೊನಘಟ್ಟ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮುಸಾಶಿ ಕಂಪನಿಯಿಂದ ಪ್ರಯೋಗಾಲಯ ನಿರ್ಮಿಸಿಕೊಡಲಾಗಿದೆ. ವಿದ್ಯಾರ್ಥಿಗಳು ಪ್ರಯೋಗಾಲಯದ ಸದುಪಯೋಗವನ್ಬು ಪಡೆದುಕೊಂಡು ಶೈಕ್ಷಣಿಕ ಪ್ರಗತಿಯನ್ನು ಹೊಂದಬೇಕು ಎಂದರು.

ಕಾರ್ಯಕ್ರಮದಲ್ಲಿ ಕೊನಘಟ್ಟ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯರಾದ ಗ್ರೇಸ್ ವಿನುತಾ,  ಉಪನ್ಯಾಸಕರುಗಳಾದ ನಾಗಪ್ಪಗೌಡ, ಅರ್ಚನಾ, ಕಲ್ಪನಾ,  ನಂದಕುಮಾರ್, ಮುಸಾಶಿ ಕಂಪನಿಯ ಉಪಾಧ್ಯಕ್ಷ ವೆಂಕಟೇಶ್ವರಲು, ಹಿರಿಯ ವ್ಯವಸ್ಥಾಪಕ ಸುದರ್ಶನರೆಡ್ಡಿ, ಯೋಜನಾ ನಿರ್ದೇಶಕ ಸುಧಾಕರ್, ನಿರ್ದೇಶಕ ಶಿವಕುಮಾರ್  ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು

Ramesh Babu

Journalist

Recent Posts

ಬಿಎಲ್‌ಒ ಕೆಲಸ ಬೇಡ: ಅಂಗನವಾಡಿಗಳಲ್ಲೇ ಎಲ್‌ಕೆಜಿ–ಯುಕೆಜಿ ಆರಂಭಕ್ಕೆ ಅಂಗನವಾಡಿ ನೌಕರರ ಸಂಘ ಒತ್ತಾಯ

ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್‌ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ…

12 hours ago

ಟ್ರಂಪ್ ಕಾರ್ಡ್…….

ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…

21 hours ago

ಚಿಕ್ಕಮಧುರೆ ಶನಿಮಹಾತ್ಮ ದೇವಾಲಯ ಬಳಿ ಕ್ಯಾಂಟರ್ ಪಲ್ಟಿ: ರಸ್ತೆಬದಿಯ ಅಂಗಡಿಗಳು ಜಖಂ

ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…

22 hours ago

ಹಾಲಿನ ಖರೀದಿ ದರ ಹೆಚ್ಚಳಕ್ಕೆ ರೈತರ ಬೃಹತ್ ಪ್ರತಿಭಟನೆ

ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…

1 day ago

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರ ಉನ್ನತೀಕರಣಕ್ಕೆ ಗುದ್ದಲಿ ಪೂಜೆ

ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್‌ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…

1 day ago

ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್‌ನಲ್ಲಿ ಕರಡಿಗಳ ಪ್ರತ್ಯಕ್ಷ: ನಂದಿಬೆಟ್ಟ ಸಮೀಪ ವನ್ಯಜೀವಿಗಳ ಓಡಾಟದಿಂದ ಆತಂಕ

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…

1 day ago