ಪ್ರಯೋಗಾಲಯ ಆಲೋಚನಾ ಮತ್ತು ಕಲಿಕಾ ಸಾಮರ್ಥ್ಯವನ್ನು ಹೆಚ್ಚಿಸುತ್ತದೆ-ಪ್ರಾಂಶುಪಾಲ ಜಿ.ದಯಾನಂದ್

ವಿಜ್ಞಾನದ ವಿಷಯಗಳಲ್ಲಿ ಬರುವ ಹಲವಾರು ಸಿದ್ಧಾಂತಗಳನ್ನು ಪ್ರಯೋಗಗಳ ಸಹಾಯದಿಂದ ಸುಲಭವಾಗಿ ಅರ್ಥಮಾಡಿಕೊಳ್ಳಬಹುದು. ಕೇಳಿ ಕಲಿಯುವುದಕ್ಕಿಂತ ನೋಡಿ ಕಲಿಯುವುದು ಉತ್ತಮ, ನೋಡಿ ಕಲಿಯುವುದಕ್ಕಿಂತ ಮಾಡಿ ಕಲಿಯುವುದು ಇನ್ನೂ ಉತ್ತಮ ಎಂಬುದನ್ನು ಸಾಬೀತು ಮಾಡಲು ಪ್ರಯೋಗಾಲಯಗಳು ಸಹಕಾರಿ ಆಗುತ್ತವೆ ಎಂದು ಪ್ರಾಂಶುಪಾಲ ಜಿ.ದಯಾನಂದ್ ತಿಳಿಸಿದರು.

ದೊಡ್ಡಬಳ್ಳಾಪುರ ತಾಲ್ಲೂಕಿನ ಕೊನಘಟ್ಟ ಸರ್ಕಾರಿ ಸ್ವತಂತ್ರ ಪದವಿ ಪೂರ್ವ ಕಾಲೇಜಿನಲ್ಲಿ ಮುಸಾಶಿ ಕಂಪನಿಯ  ನೆರವಿನೊಂದಿಗೆ ನಿರ್ಮಾಣವಾಗಿರುವ ನೂತನ ವಿಜ್ಞಾನ ಪ್ರಯೋಗಾಲಯದ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಪ್ರಯೋಗಾಲದ ವೀಕ್ಷಣೆಯೂ ವಿದ್ಯಾರ್ಥಿಗಳಲ್ಲಿ  ಆಲೋಚನಾ ಮತ್ತು ಕಲಿಕಾ ಸಾಮರ್ಥ್ಯವನ್ನು ಹೆಚ್ಚಿಸುತ್ತದೆ.  ವಿದ್ಯಾರ್ಥಿಗಳಿಗೆ ವೈಜ್ಞಾನಿಕವಾಗಿ ಯೋಚಿಸುವ, ವೈಜ್ಞಾನಿಕ ಮನೋಭಾವವನ್ನು ರೂಢಿಸಿಕೊಳ್ಳುವ ಪ್ರವೃತ್ತಿ ಬೆಳೆಯುತ್ತದೆ ಎಂದರು.

ಶೈಕ್ಷಣಿಕ ವಿಷಯಗಳಲ್ಲಿ ವಿಜ್ಞಾನ ಕಲಿಕೆಯು ಮಹತ್ವದ ಸ್ಥಾನ ಪಡೆದುಕೊಂಡಿದೆ. ವಿಜ್ಞಾನ ಕೇವಲ ಮಾಹಿತಿಗಷ್ಟೇ ಸಿಮೀತವಾಗಿಲ್ಲ. ವಿಜ್ಞಾನ ನಮ್ಮ ವೈಜ್ಞಾನಿಕ ಆಲೋಚನೆಯನ್ನು ಉತ್ತೇಜಿಸುತ್ತದೆ. ವಿಜ್ಞಾನದ ಪ್ರಗತಿಯಿಂದ ಸುಲಭ ಜೀವನ ನಿರ್ವಹಣೆಗೆ   ಅನುಕೂಲವಾಗುತ್ತದೆ. ಶಿಕ್ಷಕರು ವಿದ್ಯಾರ್ಥಿಗಳಿಗೆ ವಿಜ್ಞಾನ ವಿಷಯದಲ್ಲಿ ಆಸಕ್ತಿ ಮೂಡಿಸಲು ಮುಂದಾಗಬೇಕು.  ವಿಜ್ಞಾನದ ಹಲವು ಪ್ರಯೋಗಗಳಿಗೆ ಪ್ರಾತ್ಯಕ್ಷಿಕೆ ನೀಡಿದಾಗ  ವಿದ್ಯಾರ್ಥಿಗಳು ಸುಲಭವಾಗಿ ಅರ್ಥ ಮಾಡಿಕೊಳ್ಳಲು   ಸಾಧ್ಯವಾಗುತ್ತದೆ ಎಂದರು.

ಮುಸಾಶಿ ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ಸೆತಗೊವಾ ಮಾತನಾಡಿ, ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸೌಲಭ್ಯಗಳು ದೊರೆತಾಗ ಮಾತ್ರ ಅವರಿಗೆ ಉತ್ತಮ ಶಿಕ್ಷಣ ದೊರೆಯುತ್ತದೆ. ಗ್ರಾಮೀಣ ಭಾಗದ ಪದವಿ ಪೂರ್ವ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಕೊನಘಟ್ಟ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮುಸಾಶಿ ಕಂಪನಿಯಿಂದ ಪ್ರಯೋಗಾಲಯ ನಿರ್ಮಿಸಿಕೊಡಲಾಗಿದೆ. ವಿದ್ಯಾರ್ಥಿಗಳು ಪ್ರಯೋಗಾಲಯದ ಸದುಪಯೋಗವನ್ಬು ಪಡೆದುಕೊಂಡು ಶೈಕ್ಷಣಿಕ ಪ್ರಗತಿಯನ್ನು ಹೊಂದಬೇಕು ಎಂದರು.

ಕಾರ್ಯಕ್ರಮದಲ್ಲಿ ಕೊನಘಟ್ಟ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯರಾದ ಗ್ರೇಸ್ ವಿನುತಾ,  ಉಪನ್ಯಾಸಕರುಗಳಾದ ನಾಗಪ್ಪಗೌಡ, ಅರ್ಚನಾ, ಕಲ್ಪನಾ,  ನಂದಕುಮಾರ್, ಮುಸಾಶಿ ಕಂಪನಿಯ ಉಪಾಧ್ಯಕ್ಷ ವೆಂಕಟೇಶ್ವರಲು, ಹಿರಿಯ ವ್ಯವಸ್ಥಾಪಕ ಸುದರ್ಶನರೆಡ್ಡಿ, ಯೋಜನಾ ನಿರ್ದೇಶಕ ಸುಧಾಕರ್, ನಿರ್ದೇಶಕ ಶಿವಕುಮಾರ್  ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು

Ramesh Babu

Journalist

Recent Posts

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

1 hour ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

1 hour ago

ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ,…

4 hours ago

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

5 hours ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

9 hours ago

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

13 hours ago