ಪ್ರಯೋಗಾಲಯ ಆಲೋಚನಾ ಮತ್ತು ಕಲಿಕಾ ಸಾಮರ್ಥ್ಯವನ್ನು ಹೆಚ್ಚಿಸುತ್ತದೆ-ಪ್ರಾಂಶುಪಾಲ ಜಿ.ದಯಾನಂದ್

ವಿಜ್ಞಾನದ ವಿಷಯಗಳಲ್ಲಿ ಬರುವ ಹಲವಾರು ಸಿದ್ಧಾಂತಗಳನ್ನು ಪ್ರಯೋಗಗಳ ಸಹಾಯದಿಂದ ಸುಲಭವಾಗಿ ಅರ್ಥಮಾಡಿಕೊಳ್ಳಬಹುದು. ಕೇಳಿ ಕಲಿಯುವುದಕ್ಕಿಂತ ನೋಡಿ ಕಲಿಯುವುದು ಉತ್ತಮ, ನೋಡಿ ಕಲಿಯುವುದಕ್ಕಿಂತ ಮಾಡಿ ಕಲಿಯುವುದು ಇನ್ನೂ ಉತ್ತಮ ಎಂಬುದನ್ನು ಸಾಬೀತು ಮಾಡಲು ಪ್ರಯೋಗಾಲಯಗಳು ಸಹಕಾರಿ ಆಗುತ್ತವೆ ಎಂದು ಪ್ರಾಂಶುಪಾಲ ಜಿ.ದಯಾನಂದ್ ತಿಳಿಸಿದರು.

ದೊಡ್ಡಬಳ್ಳಾಪುರ ತಾಲ್ಲೂಕಿನ ಕೊನಘಟ್ಟ ಸರ್ಕಾರಿ ಸ್ವತಂತ್ರ ಪದವಿ ಪೂರ್ವ ಕಾಲೇಜಿನಲ್ಲಿ ಮುಸಾಶಿ ಕಂಪನಿಯ  ನೆರವಿನೊಂದಿಗೆ ನಿರ್ಮಾಣವಾಗಿರುವ ನೂತನ ವಿಜ್ಞಾನ ಪ್ರಯೋಗಾಲಯದ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಪ್ರಯೋಗಾಲದ ವೀಕ್ಷಣೆಯೂ ವಿದ್ಯಾರ್ಥಿಗಳಲ್ಲಿ  ಆಲೋಚನಾ ಮತ್ತು ಕಲಿಕಾ ಸಾಮರ್ಥ್ಯವನ್ನು ಹೆಚ್ಚಿಸುತ್ತದೆ.  ವಿದ್ಯಾರ್ಥಿಗಳಿಗೆ ವೈಜ್ಞಾನಿಕವಾಗಿ ಯೋಚಿಸುವ, ವೈಜ್ಞಾನಿಕ ಮನೋಭಾವವನ್ನು ರೂಢಿಸಿಕೊಳ್ಳುವ ಪ್ರವೃತ್ತಿ ಬೆಳೆಯುತ್ತದೆ ಎಂದರು.

ಶೈಕ್ಷಣಿಕ ವಿಷಯಗಳಲ್ಲಿ ವಿಜ್ಞಾನ ಕಲಿಕೆಯು ಮಹತ್ವದ ಸ್ಥಾನ ಪಡೆದುಕೊಂಡಿದೆ. ವಿಜ್ಞಾನ ಕೇವಲ ಮಾಹಿತಿಗಷ್ಟೇ ಸಿಮೀತವಾಗಿಲ್ಲ. ವಿಜ್ಞಾನ ನಮ್ಮ ವೈಜ್ಞಾನಿಕ ಆಲೋಚನೆಯನ್ನು ಉತ್ತೇಜಿಸುತ್ತದೆ. ವಿಜ್ಞಾನದ ಪ್ರಗತಿಯಿಂದ ಸುಲಭ ಜೀವನ ನಿರ್ವಹಣೆಗೆ   ಅನುಕೂಲವಾಗುತ್ತದೆ. ಶಿಕ್ಷಕರು ವಿದ್ಯಾರ್ಥಿಗಳಿಗೆ ವಿಜ್ಞಾನ ವಿಷಯದಲ್ಲಿ ಆಸಕ್ತಿ ಮೂಡಿಸಲು ಮುಂದಾಗಬೇಕು.  ವಿಜ್ಞಾನದ ಹಲವು ಪ್ರಯೋಗಗಳಿಗೆ ಪ್ರಾತ್ಯಕ್ಷಿಕೆ ನೀಡಿದಾಗ  ವಿದ್ಯಾರ್ಥಿಗಳು ಸುಲಭವಾಗಿ ಅರ್ಥ ಮಾಡಿಕೊಳ್ಳಲು   ಸಾಧ್ಯವಾಗುತ್ತದೆ ಎಂದರು.

ಮುಸಾಶಿ ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ಸೆತಗೊವಾ ಮಾತನಾಡಿ, ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸೌಲಭ್ಯಗಳು ದೊರೆತಾಗ ಮಾತ್ರ ಅವರಿಗೆ ಉತ್ತಮ ಶಿಕ್ಷಣ ದೊರೆಯುತ್ತದೆ. ಗ್ರಾಮೀಣ ಭಾಗದ ಪದವಿ ಪೂರ್ವ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಕೊನಘಟ್ಟ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮುಸಾಶಿ ಕಂಪನಿಯಿಂದ ಪ್ರಯೋಗಾಲಯ ನಿರ್ಮಿಸಿಕೊಡಲಾಗಿದೆ. ವಿದ್ಯಾರ್ಥಿಗಳು ಪ್ರಯೋಗಾಲಯದ ಸದುಪಯೋಗವನ್ಬು ಪಡೆದುಕೊಂಡು ಶೈಕ್ಷಣಿಕ ಪ್ರಗತಿಯನ್ನು ಹೊಂದಬೇಕು ಎಂದರು.

ಕಾರ್ಯಕ್ರಮದಲ್ಲಿ ಕೊನಘಟ್ಟ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯರಾದ ಗ್ರೇಸ್ ವಿನುತಾ,  ಉಪನ್ಯಾಸಕರುಗಳಾದ ನಾಗಪ್ಪಗೌಡ, ಅರ್ಚನಾ, ಕಲ್ಪನಾ,  ನಂದಕುಮಾರ್, ಮುಸಾಶಿ ಕಂಪನಿಯ ಉಪಾಧ್ಯಕ್ಷ ವೆಂಕಟೇಶ್ವರಲು, ಹಿರಿಯ ವ್ಯವಸ್ಥಾಪಕ ಸುದರ್ಶನರೆಡ್ಡಿ, ಯೋಜನಾ ನಿರ್ದೇಶಕ ಸುಧಾಕರ್, ನಿರ್ದೇಶಕ ಶಿವಕುಮಾರ್  ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು

Ramesh Babu

Journalist

Recent Posts

ಗಣೇಶ ವಿಸರ್ಜನೆಗೆ ಗುಂಡಮಗೆರೆ ಕೆರೆ ಬಳಿ ವಿಶೇಷ ವ್ಯವಸ್ಥೆ

ದೊಡ್ಡಬಳ್ಳಾಪುರ: ಗಣೇಶೋತ್ಸವದ ಹಿನ್ನೆಲೆಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗೆ ಅನುಕೂಲವಾಗುವಂತೆ ಹೊಸಹಳ್ಳಿ ಪೊಲೀಸ್ ಠಾಣೆ ವತಿಯಿಂದ ಗುಂಡಮಗೆರೆ ಕೆರೆಯಲ್ಲಿ ವಿಶೇಷ ವ್ಯವಸ್ಥೆ…

35 minutes ago

ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ: ತೂಬಗೆರೆಯಲ್ಲೂ ಕಳೆಗಟ್ಟಿದ ಗೌರಿ ಗಣೇಶ ಹಬ್ಬದ ಆಚರಣೆ: 20 ಅಡಿ ಗಣೇಶ ಮೂರ್ತಿ ಪ್ರತಿಷ್ಠಾಪನೆ

ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…

5 hours ago

ಅಕ್ಷರ ಜ್ಞಾನದ ಬೆಳಕಿನಲ್ಲಿ ಗ್ರಾಮಾಂತರ; ಸಂಪೂರ್ಣ ಸಾಕ್ಷರತೆಯತ್ತ ದಾಪುಗಾಲು!

ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…

11 hours ago

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

1 day ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

1 day ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

1 day ago