ಪ್ರವರ್ಗ-2ಎ ಅಡಿ ಮೀಸಲಾತಿಗಾಗಿ ಪಂಚಮಸಾಲಿ ಲಿಂಗಾಯತ ಸಮುದಾಯ ಬೇಡಿಕೆ ವಿಚಾರ: ಕಾನೂನು ಪ್ರಕಾರ, ಸಂವಿಧಾನದ ಆಶಯಕ್ಕೆ ಅನುಗುಣವಾಗಿ ತೀರ್ಮಾನ ಕೈಗೊಳ್ಳಲಾಗುವುದು- ಸಿಎಂ ಸಿದ್ದರಾಮಯ್ಯ

ಪ್ರವರ್ಗ-2ಎ ಅಡಿ ಮೀಸಲಾತಿ ಒದಗಿಸುವಂತೆ ಪಂಚಮಸಾಲಿ ಲಿಂಗಾಯತ ಸಮುದಾಯದ ಬೇಡಿಕೆ ಕುರಿತು ಕಾನೂನು ಪ್ರಕಾರ, ಸಂವಿಧಾನದ ಆಶಯಕ್ಕೆ ಅನುಗುಣವಾಗಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಪಂಚಮಸಾಲಿ ಸಮುದಾಯದ ಮೀಸಲಾತಿ ಕುರಿತಾಗಿ ಕೂಡಲ ಸಂಗಮದ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಅವರ ನೇತೃತ್ವದ ನಿಯೋಗದೊಂದಿಗೆ ಸಮಾಲೋಚನೆ ನಡೆಸಿ ಅವರು ಮಾತನಾಡಿದರು.

ಸರ್ಕಾರ ಮೀಸಲಾತಿ ವಿಷಯದಲ್ಲಿ ಮುಕ್ತಮನಸ್ಸು ಹೊಂದಿದೆ. ನಮ್ಮ ಸರ್ಕಾರ ಸಾಮಾಜಿಕ ನ್ಯಾಯದ ಪರವಾಗಿದೆ. ಎಲ್ಲಾ ದುರ್ಬಲ ವರ್ಗದವರಿಗೂ ನ್ಯಾಯ ದೊರೆಯಬೇಕು ಎಂಬುವುದು ನಮ್ಮ ಸರ್ಕಾರದ ನಿಲುವು ಎಂದರು.

ಶಾಶ್ವತ ಹಿಂದುಳಿದ ವರ್ಗಗಳ ಆಯೋಗವಿದೆ. ಅದರ ಅಂತಿಮ ಶಿಫಾರಸ್ಸು ಇನ್ನೂ ನಮ್ಮ ಕೈಗೆ ತಲುಪಿಲ್ಲ. ಚುನಾವಣೆ ನೀತಿ ಸಂಹಿತೆ ಇರುವುದರಿಂದ ಮೀಸಲಾತಿ ಕುರಿತಾಗಿ ಅಡ್ವೊಕೇಟ್‌ ಜನರಲ್‌, ಕಾನೂನು ಇಲಾಖೆ, ತಜ್ಞರೊಂದಿಗೆ, ಸಂಪುಟದಲ್ಲಿ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು. ಈಗಲೇ ಯಾವುದೇ ತೀರ್ಮಾನ ಕೈಗೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದರು.

ಸಂವಿಧಾನದ ಆಶಯದಂತೆ ಕ್ರಮ. ಯಾವುದೇ ತೀರ್ಮಾನ ಕೈಗೊಳ್ಳುವುದಿದ್ದರೂ, ಕಾನೂನು ಪ್ರಕಾರ ಪ್ರಾಮಾಣಿಕವಾಗಿ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಮೀಸಲಾತಿ ಕುರಿತು ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ಮುಂದೆ ಪ್ರಸ್ತಾವನೆ ಸಲ್ಲಿಸಬೇಕು, ಅದರ ಶಿಫಾರಸ್ಸಿನನ್ವಯ ಕ್ರಮ ಕೈಗೊಳ್ಳಬೇಕು ಎಂದು ಈ ಹಿಂದೆ ಪಂಚಮಸಾಲಿ ಸಮುದಾಯದ ಮುಖಂಡರು ಭೇಟಿಯಾದಾಗ ನಾನು ಸಲಹೆ ನೀಡಿದ್ದೆ. ಯಾವುದೇ ತೀರ್ಮಾನ ನ್ಯಾಯಯುತವಾಗಿ ಎಲ್ಲರಿಗೂ ಒಪ್ಪಿತವಾಗುವಂತೆ, ನ್ಯಾಯಾಲಯಕ್ಕೂ ಒಪ್ಪಿಗೆಯಾಗುವಂತಿರಬೇಕು ಎಂದು ಹೇಳಿದರು.

ಹಿಂದಿನ ಸರ್ಕಾರ ಸಮುದಾಯದ ಮನವಿ ಮೇರೆಗೆ 2ಸಿ ಮತ್ತು 2ಡಿ ಹೊಸ ಪ್ರವರ್ಗ ಮಾಡಿತು. 3ಎ ನಲ್ಲಿರುವ ಒಕ್ಕಲಿಗರನ್ನು 2ಸಿ ಗೆ ಸೇರಿಸುವುದು. 3ಬಿಯಲ್ಲಿರುವ  ಲಿಂಗಾಯತರನ್ನು 2ಡಿಗೆ ಸೇರಿಸುವ ಪ್ರಸ್ತಾಪ ಮುಂದಿರಿಸಿತು. ಮುಸ್ಲಿಂಮರ ಮೀಸಲಾತಿಯನ್ನು ತೆಗೆದು ಹಾಕಿತ್ತು. ಮುಸ್ಲಿಂಮರು ಇದನ್ನು ಸುಪ್ರೀಂಕೋರ್ಟ್‌ನಲ್ಲಿ ಪ್ರಶ್ನಿಸಿದಾಗ, ಯಥಾಸ್ಥಿತಿ ಮುಂದುವರೆಸಲು ರಾಜ್ಯ ಸರ್ಕಾರ ಒಪ್ಪಿಕೊಂಡಿತ್ತು. ಆದ್ದರಿಂದ ಈ ಪ್ರಕರಣ ಇನ್ನೂ ನ್ಯಾಯಾಲಯದಲ್ಲಿದೆ ಎಂದರು.

ಈಗ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿದೆ. ಆದರೆ ಪೂರ್ವನಿಗದಿಯಂತೆ ಸಮುದಾಯದ ಮುಖಂಡರೊಂದಿಗೆ ಇಂದು ಸಭೆ ನಡೆಸಲಾಗಿದೆ. ಪಂಚಮಸಾಲಿ ಸಮುದಾಯ ಪ್ರಸ್ತುತ ಪ್ರವರ್ಗ-3 ಬಿ ಯಲ್ಲಿದೆ. ಈ ಪ್ರವರ್ಗದಡಿ ಲಿಂಗಾಯತ ಹಾಗೂ ಅದರ ಉಪಜಾತಿಗಳೇ ಮೀಸಲಾತಿ ಸೌಲಭ್ಯ ಪಡೆಯುತ್ತಿವೆ. ಹಾಗಾಗಿ 2ಎ ಪ್ರವರ್ಗದಡಿ ಪಂಚಮಸಾಲಿಗರನ್ನು ಸೇರಿಸಬೇಕೆಂದು ನಿಯೋಗ ಒತ್ತಾಯಿಸಿದೆ ಎಂದರು.

ಸೂಕ್ತ ಮೀಸಲಾತಿ ಇಲ್ಲದ ಕಾರಣ ಸಮುದಾಯದ ವಿದ್ಯಾರ್ಥಿಗಳು ಉನ್ನತ ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ. ಕೃಷಿ ಕಾರ್ಮಿಕರು ಹೆಚ್ಚಾಗಿರುವ ಪಂಚಮಸಾಲಿ ಸಮುದಾಯವನ್ನು ಪ್ರವರ್ಗ-2ಎ ಸೇರಿಸಿ ಸಾಮಾಜಿಕ ನ್ಯಾಯ ಒದಗಿಸಲು ನಿಯೋಗ ಮನವಿ ಮಾಡಿದೆ ಎಂದು ಹೇಳಿದರು.

ಈ ವೇಳೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್‌, ಶಿವರಾಜ ತಂಗಡಗಿ, ಶಾಸಕರುಗಳಾದ ವಿನಯ್ ಕುಲಕರ್ಣಿ, ವಿಜಯಾನಂದ ಕಾಶಪ್ಪನವರ್,  ಹಾಗೂ ಸರ್ಕಾರದ ಹಿರಿಯ ಅಧಿಕಾರಿಗಳು, ಸಮುದಾಯದ 40ಕ್ಕೂ ಹೆಚ್ಚು ಮುಖಂಡರು, ವಕೀಲರು ಮತ್ತು ಪ್ರಮುಖರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಚಿಕ್ಕನಹಳ್ಳಿ ಡೇರಿಗೆ 2.07 ಲಕ್ಷ ನಿವ್ವಳ ಲಾಭ: ಹೈನುಗಾರಿಕೆ ರೈತರ ಆರ್ಥಿಕ ಮೂಲ- ಸಿ.ಅಮರೇಶ್

ಕೋಲಾರ: ತಾಲೂಕಿನ ವಕ್ಕಲೇರಿ ಹೋಬಳಿಯ ಚಿಕ್ಕನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘವು 2025–26ನೇ ಸಾಲಿನಲ್ಲಿ ₹2.07 ಲಕ್ಷ ನಿವ್ವಳ ಲಾಭ…

2 hours ago

ಅಪ್ರಾಪ್ತೆಯ ಮೇಲೆ ಅತ್ಯಾಚಾರ: ಅಪರಾಧಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಬೆಂಗಳೂರು ಗ್ರಾಮಾಂತರ: ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 20 ವರ್ಷಗಳ ಕಠಿಣ ಕಾರಾಗೃಹ…

24 hours ago

ಬೆಸ್ಕಾಂ ವಿರುದ್ಧ ರೈತರ ಆಕ್ರೋಶ: 10 ತಾಸು ಗುಣಮಟ್ಟದ ವಿದ್ಯುತ್‌ಗೆ ಆಗ್ರಹ: ನಷ್ಟ ಬೆಳೆ, ಮೆಣಸಿನಕಾಯಿ ಹಾಗೂ ಜಾನುವಾರುಗಳ ಸಮೇತ ಪ್ರತಿಭಟನೆ

ಕೋಲಾರ: ಬರದಿಂದ ತತ್ತರಿಸಿರುವ ರೈತರ ಬೆಳೆಗಳನ್ನು ರಕ್ಷಿಸಲು ಕೃಷಿ ಪಂಪ್‌ಸೆಟ್‌ಗಳಿಗೆ ಪ್ರತಿದಿನ 10 ತಾಸು ಗುಣಮಟ್ಟದ ವಿದ್ಯುತ್ ಪೂರೈಸಬೇಕು. ಬೆಸ್ಕಾಂ…

1 day ago

ಘಾಟಿ ತೇರಿನಬೀದಿ ಒತ್ತುವರಿ ತೆರವು; ವ್ಯಾಪಾರಸ್ಥರಲ್ಲಿ ಆತಂಕ

ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಮುಂಭಾಗದ ತೇರಿನಬೀದಿಯಲ್ಲಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಅಂಗಡಿ ಮಳಿಗೆಗಳನ್ನು ಒತ್ತುವರಿ…

1 day ago

ಹೃದಯ ವೈಶಾಲ್ಯತೆ ಮತ್ತು ಶುದ್ಧತೆ…

" ಹೃದಯ ವಿಶಾಲವಾಗಿದ್ದರೆ ಮಾತ್ರ ಅಲ್ಲಿ ನಿಜವಾದ ಜ್ಞಾನ ಹೊಮ್ಮುತ್ತದೆ " ಸ್ವಾಮಿ ವಿವೇಕಾನಂದ....... ಜೊತೆಗೆ ಹೃದಯ ಅಥವಾ ಮನಸ್ಸು…

1 day ago

ರೈತರ ಸಾರ್ಥಕ ಜೀವನಕ್ಕೆ ವಿಬಿ- ಜಿ ರಾಮ್ ಜಿ ನಾಂದಿ: ಪಿಡಿಒ ಗೌರಮ್ಮ

ಚಿಕ್ಕನಾಯಕನಹಳ್ಳಿ ಸೆ.07: ರೈತರ ಸಾರ್ಥಕ ಜೀವನಕ್ಕೆ ವಿಬಿ- ಜಿ ರಾಮ್ ಜಿ ನಾಂದಿ ಹಾಗಾಗಿ ಅರ್ಹ ರೈತರು ಸರ್ಕಾರದ ಮಹಾತ್ವಾಕಾಂಕ್ಷಿ…

2 days ago