ಪ್ರವರ್ಗ-2ಎ ಅಡಿ ಮೀಸಲಾತಿ ಒದಗಿಸುವಂತೆ ಪಂಚಮಸಾಲಿ ಲಿಂಗಾಯತ ಸಮುದಾಯದ ಬೇಡಿಕೆ ಕುರಿತು ಕಾನೂನು ಪ್ರಕಾರ, ಸಂವಿಧಾನದ ಆಶಯಕ್ಕೆ ಅನುಗುಣವಾಗಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಪಂಚಮಸಾಲಿ ಸಮುದಾಯದ ಮೀಸಲಾತಿ ಕುರಿತಾಗಿ ಕೂಡಲ ಸಂಗಮದ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಅವರ ನೇತೃತ್ವದ ನಿಯೋಗದೊಂದಿಗೆ ಸಮಾಲೋಚನೆ ನಡೆಸಿ ಅವರು ಮಾತನಾಡಿದರು.
ಸರ್ಕಾರ ಮೀಸಲಾತಿ ವಿಷಯದಲ್ಲಿ ಮುಕ್ತಮನಸ್ಸು ಹೊಂದಿದೆ. ನಮ್ಮ ಸರ್ಕಾರ ಸಾಮಾಜಿಕ ನ್ಯಾಯದ ಪರವಾಗಿದೆ. ಎಲ್ಲಾ ದುರ್ಬಲ ವರ್ಗದವರಿಗೂ ನ್ಯಾಯ ದೊರೆಯಬೇಕು ಎಂಬುವುದು ನಮ್ಮ ಸರ್ಕಾರದ ನಿಲುವು ಎಂದರು.
ಶಾಶ್ವತ ಹಿಂದುಳಿದ ವರ್ಗಗಳ ಆಯೋಗವಿದೆ. ಅದರ ಅಂತಿಮ ಶಿಫಾರಸ್ಸು ಇನ್ನೂ ನಮ್ಮ ಕೈಗೆ ತಲುಪಿಲ್ಲ. ಚುನಾವಣೆ ನೀತಿ ಸಂಹಿತೆ ಇರುವುದರಿಂದ ಮೀಸಲಾತಿ ಕುರಿತಾಗಿ ಅಡ್ವೊಕೇಟ್ ಜನರಲ್, ಕಾನೂನು ಇಲಾಖೆ, ತಜ್ಞರೊಂದಿಗೆ, ಸಂಪುಟದಲ್ಲಿ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು. ಈಗಲೇ ಯಾವುದೇ ತೀರ್ಮಾನ ಕೈಗೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದರು.
ಸಂವಿಧಾನದ ಆಶಯದಂತೆ ಕ್ರಮ. ಯಾವುದೇ ತೀರ್ಮಾನ ಕೈಗೊಳ್ಳುವುದಿದ್ದರೂ, ಕಾನೂನು ಪ್ರಕಾರ ಪ್ರಾಮಾಣಿಕವಾಗಿ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಮೀಸಲಾತಿ ಕುರಿತು ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ಮುಂದೆ ಪ್ರಸ್ತಾವನೆ ಸಲ್ಲಿಸಬೇಕು, ಅದರ ಶಿಫಾರಸ್ಸಿನನ್ವಯ ಕ್ರಮ ಕೈಗೊಳ್ಳಬೇಕು ಎಂದು ಈ ಹಿಂದೆ ಪಂಚಮಸಾಲಿ ಸಮುದಾಯದ ಮುಖಂಡರು ಭೇಟಿಯಾದಾಗ ನಾನು ಸಲಹೆ ನೀಡಿದ್ದೆ. ಯಾವುದೇ ತೀರ್ಮಾನ ನ್ಯಾಯಯುತವಾಗಿ ಎಲ್ಲರಿಗೂ ಒಪ್ಪಿತವಾಗುವಂತೆ, ನ್ಯಾಯಾಲಯಕ್ಕೂ ಒಪ್ಪಿಗೆಯಾಗುವಂತಿರಬೇಕು ಎಂದು ಹೇಳಿದರು.
ಹಿಂದಿನ ಸರ್ಕಾರ ಸಮುದಾಯದ ಮನವಿ ಮೇರೆಗೆ 2ಸಿ ಮತ್ತು 2ಡಿ ಹೊಸ ಪ್ರವರ್ಗ ಮಾಡಿತು. 3ಎ ನಲ್ಲಿರುವ ಒಕ್ಕಲಿಗರನ್ನು 2ಸಿ ಗೆ ಸೇರಿಸುವುದು. 3ಬಿಯಲ್ಲಿರುವ ಲಿಂಗಾಯತರನ್ನು 2ಡಿಗೆ ಸೇರಿಸುವ ಪ್ರಸ್ತಾಪ ಮುಂದಿರಿಸಿತು. ಮುಸ್ಲಿಂಮರ ಮೀಸಲಾತಿಯನ್ನು ತೆಗೆದು ಹಾಕಿತ್ತು. ಮುಸ್ಲಿಂಮರು ಇದನ್ನು ಸುಪ್ರೀಂಕೋರ್ಟ್ನಲ್ಲಿ ಪ್ರಶ್ನಿಸಿದಾಗ, ಯಥಾಸ್ಥಿತಿ ಮುಂದುವರೆಸಲು ರಾಜ್ಯ ಸರ್ಕಾರ ಒಪ್ಪಿಕೊಂಡಿತ್ತು. ಆದ್ದರಿಂದ ಈ ಪ್ರಕರಣ ಇನ್ನೂ ನ್ಯಾಯಾಲಯದಲ್ಲಿದೆ ಎಂದರು.
ಈಗ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿದೆ. ಆದರೆ ಪೂರ್ವನಿಗದಿಯಂತೆ ಸಮುದಾಯದ ಮುಖಂಡರೊಂದಿಗೆ ಇಂದು ಸಭೆ ನಡೆಸಲಾಗಿದೆ. ಪಂಚಮಸಾಲಿ ಸಮುದಾಯ ಪ್ರಸ್ತುತ ಪ್ರವರ್ಗ-3 ಬಿ ಯಲ್ಲಿದೆ. ಈ ಪ್ರವರ್ಗದಡಿ ಲಿಂಗಾಯತ ಹಾಗೂ ಅದರ ಉಪಜಾತಿಗಳೇ ಮೀಸಲಾತಿ ಸೌಲಭ್ಯ ಪಡೆಯುತ್ತಿವೆ. ಹಾಗಾಗಿ 2ಎ ಪ್ರವರ್ಗದಡಿ ಪಂಚಮಸಾಲಿಗರನ್ನು ಸೇರಿಸಬೇಕೆಂದು ನಿಯೋಗ ಒತ್ತಾಯಿಸಿದೆ ಎಂದರು.
ಸೂಕ್ತ ಮೀಸಲಾತಿ ಇಲ್ಲದ ಕಾರಣ ಸಮುದಾಯದ ವಿದ್ಯಾರ್ಥಿಗಳು ಉನ್ನತ ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ. ಕೃಷಿ ಕಾರ್ಮಿಕರು ಹೆಚ್ಚಾಗಿರುವ ಪಂಚಮಸಾಲಿ ಸಮುದಾಯವನ್ನು ಪ್ರವರ್ಗ-2ಎ ಸೇರಿಸಿ ಸಾಮಾಜಿಕ ನ್ಯಾಯ ಒದಗಿಸಲು ನಿಯೋಗ ಮನವಿ ಮಾಡಿದೆ ಎಂದು ಹೇಳಿದರು.
ಈ ವೇಳೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್, ಶಿವರಾಜ ತಂಗಡಗಿ, ಶಾಸಕರುಗಳಾದ ವಿನಯ್ ಕುಲಕರ್ಣಿ, ವಿಜಯಾನಂದ ಕಾಶಪ್ಪನವರ್, ಹಾಗೂ ಸರ್ಕಾರದ ಹಿರಿಯ ಅಧಿಕಾರಿಗಳು, ಸಮುದಾಯದ 40ಕ್ಕೂ ಹೆಚ್ಚು ಮುಖಂಡರು, ವಕೀಲರು ಮತ್ತು ಪ್ರಮುಖರು ಉಪಸ್ಥಿತರಿದ್ದರು.
ಶ್ರೀ ರಾಮಾಂಜನೇಯ ಸ್ವಾಮಿ ಸೇವಾ ಸಮಿತಿ ಅಭಿವೃದ್ಧಿ ಟ್ರಸ್ಟ್ ವತಿಯಿಂದ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಗಂಗಸಂದ್ರ ಗ್ರಾಮದಲ್ಲಿ ಮೇ.6,…
ಸಿಗ್ಮಂಡ್ ಫ್ರಾಯ್ಡ್ ಎಂಬುವವನನ್ನು ಪ್ರಖ್ಯಾತ ಮನಶಾಸ್ತ್ರಜ್ಞ ಎಂದು ಕರೆಯಲಾಗುತ್ತದೆ. ಪಾಶ್ಚಾತ್ಯ ಸಂಸ್ಕೃತಿಯ ಹಿನ್ನಲೆಯ ಆತನ ವಿಚಾರಗಳು ವಿಶ್ವವ್ಯಾಪಿ ಮನ್ನಣೆ ಪಡೆದಿವೆ.....…
ದೊಡ್ಡಬಳ್ಳಾಪುರ ನಗರದ ಕೋರ್ಟ್ ಎದುರಿನ ಕಾರ್ಮಲ್ ಜ್ಯೋತಿ ರಸ್ತೆಯಲ್ಲಿ ಕಳೆದ ಒಂದು ತಿಂಗಳ ಹಿಂದೆಯೇ ಒಳಚರಂಡಿಯ ಹೊಸ ಮ್ಯಾನ್ ಹೋಲ್…
ಜ್ಞಾನದ ಬೆಳಕನ್ನು ಜಗತ್ತಿಗೇ ಸಾರಿದಂತಹ ಮಹಾನ್ ಪುರುಷ ಭಗವಾನ್ ಬುದ್ಧರ ತತ್ವಾದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಒಳ್ಳೆಯ ಸಮಾಜ ನಿರ್ಮಿಸಲು…
ಕಾಲೇಜು ಶಿಕ್ಷಣ ಇಲಾಖೆ, ಡಾ|| ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾಲಯ, ಮಲ್ಲೇಶ್ವರಂನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ…
ಗೋಡೆ ಕೊರೆದ ಕಳ್ಳರು ಕೋಟ್ಯಂತರ ರೂ. ಮೌಲ್ಯದ ಚಿನ್ನಾಭರಣ ದೋಚಿ ಎಸ್ಕೇಪ್ ಆಗಿದ್ದಾರೆ. ಗೋಡೆ ಕೊರೆದು 1.20 ಕೋಟಿ ಬೆಲೆ…