ಪ್ರವಾಸೋದ್ಯಮ ಇಲಾಖೆಯಿಂದ ಕೌಶಲ್ಯಾಭಿವೃದ್ದಿ ತರಬೇತಿಗೆ ಅರ್ಜಿ ಆಹ್ವಾನ

ಪ್ರವಾಸೋದ್ಯಮ ಇಲಾಖೆಯ ವತಿಯಿಂದ ಎಸ್.ಸಿ.ಎಸ್.ಪಿ/ಟಿ.ಎಸ್.ಪಿ ಯೋಜನೆಯಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 2024-25ನೇ ಸಾಲಿನಲ್ಲಿ ಪ್ರವಾಸೋದ್ಯಮ/ಆತಿಥ್ಯ ಕ್ಷೇತ್ರದಲ್ಲಿ ಕೌಶಲ್ಯಾಭಿವೃದ್ದಿ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲು ಅರ್ಜಿ ಆಹ್ವಾನಿಸಲಾಗಿದೆ.

ಕಾರ್ಯಕ್ರಮದಲ್ಲಿ ಪರಿಶಿಷ್ಟ ಜಾತಿಗೆ ಸೇರಿದ 292 ಅಭ್ಯರ್ಥಿಗಳಿಗೆ ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದ 162 ಅಭ್ಯರ್ಥಿಗಳಿಗೆ ರಾಜ್ಯ ಮತ್ತು ಕೇಂದ್ರ ಸರ್ಕಾರದ ಆತಿಥ್ಯ ಕ್ಷೇತ್ರದ ಸಂಸ್ಥೆಗಳಾದ ಫುಡ್ ಕ್ರಾಫ್ಟ್ ಇನ್ಸ್ಟಿಟ್ಯೂಟ್ (FCI) ಹಾಗೂ ಇನ್ಸ್ಟಿಟ್ಯೂಟ್ ಆಫ್ ಹೋಟೆಲ್ ಮ್ಯಾನೇಜ್ಮೆಂಟ್ (IHM) ಬೆಂಗಳೂರು ರವರ ಮೂಲಕ ವಸತಿ ಸಹಿತ ಕಾರ್ಯಕ್ರಮವನ್ನು ಜಾರಿಗೊಳಿಸಲು ಉದ್ದೇಶಿಸಲಾಗಿದೆ.

ತರಬೇತಿ ಹಂತದಲ್ಲಿ ಒದಗಿಸುವ ಸೌಲಭ್ಯಗಳು :

ಈಗಾಗಲೇ ತರಬೇತಿ ಪಡೆಯುತ್ತಿರುವ ಅಭ್ಯರ್ಥಿಗಳಿಗೆ ರಾಜ್ಯದ ವಿವಿಧ ಪಂಚತಾರಾ ಹಾಗೂ ಇತರೆ ಹೋಟೆಲ್ ಗಳಲ್ಲಿ ಕೆಲಸ ಕಾತರಿಯಾಗಿರುವುದು.
ತರಬೇತಿ ಪಡೆಯುವ ವೇಳೆ ರೂ.2000/- ಗಳು ಮಾಹೆಯಾನ ಸ್ಟೈಪೆಂಡ್ ನೀಡಲಾಗುವುದು.
ತರಬೇತಿ ಹಾಜರಾಗುವವರಿಗೆ ವಸತಿ, ಊಟ ಹಾಗೂ ಯೂನಿಫಾರ್ಮ್ ನೀಡಲಾಗುವುದು.

ತರಬೇತಿ ಜೊತೆಗೆ ರಾಜ್ಯದ ವಿವಿಧ ಪಂಚತಾರಾ ಹಾಗೂ ಇತರೆ ಹೋಟೆಲ್ ಗಳಲ್ಲಿ ಕೆಲಸದ ನೈಜ ಅನುಭವ ಸಹ ನೀಡಲಾಗುವುದು.
IHM,ಬೆಂಗಳೂರು ಹಾಗೂ FCI ಮೈಸೂರು ಸಂಸ್ಥೆಗಳು ಪ್ರತಿಷ್ಠಿತ ಆತಿಥ್ಯ ಕ್ಷೇತ್ರದಲ್ಲಿ ತರಬೇತಿ ನೀಡುವ ಕೇಂದ್ರ ಹಾಗೂ ರಾಜ್ಯ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳಾಗಿದ್ದು, ಈ ಸಂಸ್ಥೆಗಳಿಂದ ತರಬೇತಿ ನೀಡಿ ಸರ್ಟಿಫಿಕೇಟ್ ನೀಡುವುದರಿಂದ ರಾಜ್ಯದೊಳಗೆ ಅಲ್ಲದೇ ದೇಶದ ಯಾವುದೇ ಭಾಗದ ಹೋಟೆಲ್ ಉದ್ಯಮದಲ್ಲಿ ಕೆಲಸ ಖಾತರಿಯಾಗುವುದು.

ತರಬೇತಿಗಳು:

1. Food and Beverage Service Steward) ಈ ತರಬೇತಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 4 ತಿಂಗಳ ತರಬೇತಿಯಿದ್ದು,SSLC ಅಥವಾ ಹತ್ತನೇ ತರಗತಿ ಉತ್ತೀರ್ಣವಾಗಿರಬೇಕು, 20 ರಿಂದ 45 ರ ವಯಸ್ಸಿನವರಾಗಿರಬೇಕು.

2. ಬಹು ತಿನಿಸು ಅಡುಗೆ (Multi Cuisine Cook) ಈ ತರಬೇತಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 5 ತಿಂಗಳ ತರಬೇತಿಯಿದ್ದು, 8ನೇ ತರಗತಿ ಉತ್ತೀರ್ಣವಾಗಿರಬೇಕು, 20 ರಿಂದ 45 ರ ವಯಸ್ಸಿನವರಾಗಿರಬೇಕು.

ತರಬೇತಿ ಪಡೆಯಲು ಆಸಕ್ತಿ ಇರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಲು ಏಪ್ರಿಲ್ 01 ಕೊನೆಯ ದಿನವಾಗಿದೆ.

ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಪ್ರವಾಸೋದ್ಯಮ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೂರವಾಣಿ ಸಂಖ್ಯೆ:080-22040633 ಇವರನ್ನು ಕಚೇರಿಯ ಸಮಯದಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

8 hours ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

12 hours ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

12 hours ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

15 hours ago

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

1 day ago

ತೂಬಗೆರೆ ಸೊಸೈಟಿ ಅಧ್ಯಕ್ಷರಾಗಿ ವಾಸುದೇವ್, ಉಪಾಧ್ಯಕ್ಷರಾಗಿ ಸತ್ಯನಾರಾಯಣಸ್ವಾಮಿ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್‌ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…

2 days ago