ಪ್ರಸಕ್ತ ಸಾಲಿನಲ್ಲಿ ವಿದ್ಯುತ್ ಬೇಡಿಕೆ ಶೇ.43ಕ್ಕೆ ಏರಿಕೆ: ವಿದ್ಯುತ್ ಬಳಕೆಯಲ್ಲಿ ಶೇ.45ರಷ್ಟು‌ ಹೆಚ್ಚಾಗಿದೆ- ಸಿಎಂ ಸಿದ್ದರಾಮಯ್ಯ

2022ನೇ ಇಸವಿಗೆ ಹೋಲಿಸಿದರೆ 2023 ರಲ್ಲಿ ವಿದ್ಯುತ್‌ ಬೇಡಿಕೆ ಸರಾಸರಿ ಶೇ. 43 ರಷ್ಟು ಹೆಚ್ಚಿದೆ. ಅಕ್ಟೋಬರ್‌ ತಿಂಗಳಲ್ಲಿ 15,978 ಮೆಗಾವ್ಯಾಟ್‌ ಬೇಡಿಕೆ ದಾಖಲಾಗಿದೆ. ವಿದ್ಯುತ್‌ ಬಳಕೆಯಲ್ಲಿ ಕಳೆದ ವರ್ಷಕ್ಕಿಂತ ಶೇ. 45 ರಷ್ಟು ಹೆಚ್ಚಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಇಂಧನ ಇಲಾಖೆ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಕೃಷಿ ಬಳಕೆಯಲ್ಲಿ ಶೇ. 55ರಿಂದ 119 ರಷ್ಟು ಹೆಚ್ಚಳವಾಗಿದೆ. ಇತರ ವಿಭಾಗಗಳಲ್ಲಿ ಶೇ. 9 ರಿಂದ 14 ರಷ್ಟು ಹೆಚ್ಚಳವಾಗಿದೆ. ಮಳೆ ಕೊರತೆ, ವಾಡಿಕೆಗಿಂತ ಮೊದಲೇ ಐಪಿ ಸೆಟ್‌ ಗಳ ಬಳಕೆ ಪ್ರಾರಂಭವಾಗಿರುವುದು ಹಾಗೂ ಕೋವಿಡ್‌ 19ರ ನಂತರದ ಆರ್ಥಿಕ ಪುನಶ್ಚೇತನ ಇದಕ್ಕೆ ಕಾರಣವಾಗಿದೆ ಎಂದರು.

ಕಳೆದ ಬಾರಿ ಪ್ರಗತಿ ಪರಿಶೀಲನೆಯ ನಂತರ ರಾಯಚೂರು, ಬಳ್ಳಾರಿ ಉಷ್ಣವಿದ್ಯುತ್‌ ಸ್ಥಾವರಗಳ ಉತ್ಪಾದನೆ ಹೆಚ್ಚಾಗಿದೆ. ಉತ್ತರ ಪ್ರದೇಶ, ಪಂಜಾಬ್‌ ಮತ್ತು ಹಿಮಾಚಲ ಪ್ರದೇಶಗಳಿಂದ ವಿದ್ಯುತ್‌ ಪಡೆಯಲಾಗುತ್ತಿದೆ.

ಸೆಕ್ಷನ್‌ 11 ಅಡಿ ಬೇರೆ ರಾಜ್ಯಗಳಿಗೆ ವಿದ್ಯುತ್‌ ನೀಡದಂತೆ ಆದೇಶ ಹೊರಡಿಸಿ, ವಿದ್ಯುತ್‌ ಪಡೆಯಲಾಗುತ್ತಿದೆ. ಆ ಮೂಲಕ ವಿದ್ಯುತ್‌ ವಿತರಣೆ ಸಹಜ ಸ್ಥಿತಿಗೆ ಬಂದಿದೆ. ನೋಡಲ್‌ ಅಧಿಕಾರಿಗಳು ನಿರಂತರವಾಗಿ ಪರಿಸ್ಥಿತಿಯನ್ನು ಗಮನಿಸುತ್ತಿದ್ದಾರೆ ಎಂದು ಹೇಳಿದರು.

ವಿವಿಧ ವಿದ್ಯುತ್‌ ಸರಬರಾಜು ಕಂಪೆನಿಗಳ ವ್ಯಾಪ್ತಿಯಲ್ಲಿ ರೈತರ ಅಗತ್ಯತೆಗನುಗುಣವಾಗಿ ಐದರಿಂದ ಏಳು ಗಂಟೆಗಳ ಅವಧಿಗೆ ನಿರಂತರ ವಿದ್ಯುತ್‌ ಪೂರೈಕೆ ಮಾಡಲಾಗುತ್ತಿದೆ. ರಾಜ್ಯಾದ್ಯಂತ ಐಪಿ ಸೆಟ್‌ಗಳಿಗೆ ನಿರಂತರ ಏಳು ಗಂಟೆಗಳ ಅವಧಿಗೆ ವಿದ್ಯುತ್‌ ಒದಗಿಸಲು 600 ಮೆಗಾವ್ಯಾಟ್‌/ಗಂಟೆ ಹಾಗೂ ಪ್ರತಿದಿನಕ್ಕೆ 14 ಮಿಲಿಯನ್‌ ಯುನಿಟ್‌ಗಳ ಅಗತ್ಯವಿದೆ ಎಂದರು.

ಸರ್ಕಾರದ ಮೇಲೆ ಹೆಚ್ಚಿನ ಹೊರೆಯಾಗದಂತೆ ಪ್ರತಿದಿನ ಏಳು ತಾಸು ವಿದ್ಯುತ್‌ ನೀಡಲು ನಿರ್ಧರಿಸಲಾಗಿದೆ. ಇದಕ್ಕಾಗಿ ಸುಮಾರು 1500 ಕೋಟಿ ರೂ. ಅಗತ್ಯವಿದೆ. ಅನುದಾನದ ಉಳಿತಾಯ, ಮರುಹಂಚಿಕೆಯ ಮೂಲಕ ಈ ವೆಚ್ಚ ಭರಿಸಲಾಗುವುದು ಎಂದು ತಿಳಿಸಿದರು.

ಮುಂದಿನ ವರ್ಷದಲ್ಲಿ ಐಪಿ ಸೆಟ್‌ಗಳಿಗೆ ವಿದ್ಯುತ್‌ ಪೂರೈಕೆಯನ್ನು ಸೌರವಿದ್ಯುತ್‌ ಮೂಲದಿಂದ ಒದಗಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. (Solarisation of EIP Feeders). ಟೆಂಡರ್‌ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಮುಂದಿನ ವರ್ಷದ ವೇಳೆಗೆ ಹಗಲು ವೇಳೆಯಲ್ಲಿಯೇ ರೈತರಿಗೆ ವಿದ್ಯುತ್‌ ನೀಡಲು ಇದರಿಂದ ಅನುಕೂಲವಾಗಲಿದೆ ಎಂದರು.

Ramesh Babu

Journalist

Recent Posts

ತಲಾ ಆದಾಯದಲ್ಲಿ ನಾವು ದೇಶದಲ್ಲೇ ನಂಬರ್ ಒನ್: ತೆರಿಗೆ ಸಂಗ್ರಹದಲ್ಲಿ ರಾಜ್ಯ ಎರಡನೇ ಸ್ಥಾನದಲ್ಲಿದೆ- ಸಿಎಂ ಸಿದ್ದರಾಮಯ್ಯ

ತಲಾ ಆದಾಯದಲ್ಲಿ ನಾವು ದೇಶದಲ್ಲೇ ನಂಬರ್ ಒನ್ ಆಗಿದ್ದೇವೆ. ಆದ್ದರಿಂದ ದೇಶಕ್ಕೆ ಕಾಂಗ್ರೆಸ್ ಬೇಕು. ತೆರಿಗೆ ಸಂಗ್ರಹದಲ್ಲಿ ರಾಜ್ಯ ಎರಡನೇ…

10 hours ago

ಭಕ್ತಿ ಭಾವ ಉತ್ಸವದಲ್ಲಿ ಅಸಭ್ಯ ನೃತ್ಯ: ಸಾರ್ವಜನಿಕರಿಂದ ತೀವ್ರ ಅಸಮಾಧಾನ

ದೇವಿಯ ಕರಗ ಉತ್ಸವದಲ್ಲಿ ಅಶ್ಲೀಲ ನರ್ತನ ಮಾಡಿದ್ದರಿಂದ ಸಾರ್ವಜನಿಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ನಗರದ…

12 hours ago

ಏ.5ಕ್ಕೆ ತೂಬಗೆರೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ

ಬಾಬು ಜಗಜೀವನ್ ರಾಮ್ ಜಯಂತಿ ಪ್ರಯುಕ್ತ ಏ.5ರ ಭಾನುವಾರ ತೂಬಗೆರೆ ಸರ್ಕಾರಿ ಶಾಲೆಯಲ್ಲಿ ಬಾಬು ಜಗಜೀವನ ರಾಮ್ ರಾಷ್ಟ್ರೀಯ ಶಿಕ್ಷಣ…

14 hours ago

ಡ್ರಿಪ್ ಹಾಕಿಸಿಕೊಂಡೇ SSLC ಪರೀಕ್ಷೆ ಬರೆದ ವಿದ್ಯಾರ್ಥಿ….

ಎಸ್ ಎಸ್ ಎಲ್ ಸಿ ವಿದ್ಯಾರ್ಥಿ ಹೊಟ್ಟೆ ನೋವಿನಿಂದ ಬಳಲುತ್ತಿದ್ದ. ಹೊಟ್ಟೆನೋವಿಗೆ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ನೇರವಾಗಿ ಪರೀಕ್ಷಾ ಕೊಠಡಿಗೆ…

19 hours ago

ಜೈಲಿನ ಜೈಲರ್ ಲೋಕಾಯುಕ್ತ ಬಲೆಗೆ

ಉತ್ತರಕನ್ನಡ ಜಿಲ್ಲೆಯ ಹಳಿಯಾಳ ಜೈಲಿನ ಜೈಲರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.. ಕೈದಿಗೆ ಸರ್ಕಾರದಿಂದ ಬಂದ ಹಣ ನೀಡಲು 60 ಸಾವಿರ…

22 hours ago

ದ್ವಿಚಕ್ರ ವಾಹನ ಹಾಗೂ ಪಂಪ್ ಸೆಟ್ ಗೆ ಅಳವಡಿಸಿದ್ದ ಮೋಟಾರ್ ಗಳ ಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ರಾಮನಗರ ಗ್ರಾಮಾಂತರ ಹಾಗೂ ಅಕ್ಕೂರು ಪೊಲೀಸ್ ಠಾಣಾ ವ್ಯಾಪ್ತಿಯ ವಿವಿಧ ಗ್ರಾಮಗಳ ರೈತರ ಜಮೀನಿನಲ್ಲಿ ಪಂಪ್ ಸೆಟ್ ಗಳಿಗೆ ಅಳವಡಿಸಿದ್ದ…

2 days ago