ಪ್ರಸಕ್ತ ಸಾಲಿನಲ್ಲಿ ವಿದ್ಯುತ್ ಬೇಡಿಕೆ ಶೇ.43ಕ್ಕೆ ಏರಿಕೆ: ವಿದ್ಯುತ್ ಬಳಕೆಯಲ್ಲಿ ಶೇ.45ರಷ್ಟು‌ ಹೆಚ್ಚಾಗಿದೆ- ಸಿಎಂ ಸಿದ್ದರಾಮಯ್ಯ

2022ನೇ ಇಸವಿಗೆ ಹೋಲಿಸಿದರೆ 2023 ರಲ್ಲಿ ವಿದ್ಯುತ್‌ ಬೇಡಿಕೆ ಸರಾಸರಿ ಶೇ. 43 ರಷ್ಟು ಹೆಚ್ಚಿದೆ. ಅಕ್ಟೋಬರ್‌ ತಿಂಗಳಲ್ಲಿ 15,978 ಮೆಗಾವ್ಯಾಟ್‌ ಬೇಡಿಕೆ ದಾಖಲಾಗಿದೆ. ವಿದ್ಯುತ್‌ ಬಳಕೆಯಲ್ಲಿ ಕಳೆದ ವರ್ಷಕ್ಕಿಂತ ಶೇ. 45 ರಷ್ಟು ಹೆಚ್ಚಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಇಂಧನ ಇಲಾಖೆ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಕೃಷಿ ಬಳಕೆಯಲ್ಲಿ ಶೇ. 55ರಿಂದ 119 ರಷ್ಟು ಹೆಚ್ಚಳವಾಗಿದೆ. ಇತರ ವಿಭಾಗಗಳಲ್ಲಿ ಶೇ. 9 ರಿಂದ 14 ರಷ್ಟು ಹೆಚ್ಚಳವಾಗಿದೆ. ಮಳೆ ಕೊರತೆ, ವಾಡಿಕೆಗಿಂತ ಮೊದಲೇ ಐಪಿ ಸೆಟ್‌ ಗಳ ಬಳಕೆ ಪ್ರಾರಂಭವಾಗಿರುವುದು ಹಾಗೂ ಕೋವಿಡ್‌ 19ರ ನಂತರದ ಆರ್ಥಿಕ ಪುನಶ್ಚೇತನ ಇದಕ್ಕೆ ಕಾರಣವಾಗಿದೆ ಎಂದರು.

ಕಳೆದ ಬಾರಿ ಪ್ರಗತಿ ಪರಿಶೀಲನೆಯ ನಂತರ ರಾಯಚೂರು, ಬಳ್ಳಾರಿ ಉಷ್ಣವಿದ್ಯುತ್‌ ಸ್ಥಾವರಗಳ ಉತ್ಪಾದನೆ ಹೆಚ್ಚಾಗಿದೆ. ಉತ್ತರ ಪ್ರದೇಶ, ಪಂಜಾಬ್‌ ಮತ್ತು ಹಿಮಾಚಲ ಪ್ರದೇಶಗಳಿಂದ ವಿದ್ಯುತ್‌ ಪಡೆಯಲಾಗುತ್ತಿದೆ.

ಸೆಕ್ಷನ್‌ 11 ಅಡಿ ಬೇರೆ ರಾಜ್ಯಗಳಿಗೆ ವಿದ್ಯುತ್‌ ನೀಡದಂತೆ ಆದೇಶ ಹೊರಡಿಸಿ, ವಿದ್ಯುತ್‌ ಪಡೆಯಲಾಗುತ್ತಿದೆ. ಆ ಮೂಲಕ ವಿದ್ಯುತ್‌ ವಿತರಣೆ ಸಹಜ ಸ್ಥಿತಿಗೆ ಬಂದಿದೆ. ನೋಡಲ್‌ ಅಧಿಕಾರಿಗಳು ನಿರಂತರವಾಗಿ ಪರಿಸ್ಥಿತಿಯನ್ನು ಗಮನಿಸುತ್ತಿದ್ದಾರೆ ಎಂದು ಹೇಳಿದರು.

ವಿವಿಧ ವಿದ್ಯುತ್‌ ಸರಬರಾಜು ಕಂಪೆನಿಗಳ ವ್ಯಾಪ್ತಿಯಲ್ಲಿ ರೈತರ ಅಗತ್ಯತೆಗನುಗುಣವಾಗಿ ಐದರಿಂದ ಏಳು ಗಂಟೆಗಳ ಅವಧಿಗೆ ನಿರಂತರ ವಿದ್ಯುತ್‌ ಪೂರೈಕೆ ಮಾಡಲಾಗುತ್ತಿದೆ. ರಾಜ್ಯಾದ್ಯಂತ ಐಪಿ ಸೆಟ್‌ಗಳಿಗೆ ನಿರಂತರ ಏಳು ಗಂಟೆಗಳ ಅವಧಿಗೆ ವಿದ್ಯುತ್‌ ಒದಗಿಸಲು 600 ಮೆಗಾವ್ಯಾಟ್‌/ಗಂಟೆ ಹಾಗೂ ಪ್ರತಿದಿನಕ್ಕೆ 14 ಮಿಲಿಯನ್‌ ಯುನಿಟ್‌ಗಳ ಅಗತ್ಯವಿದೆ ಎಂದರು.

ಸರ್ಕಾರದ ಮೇಲೆ ಹೆಚ್ಚಿನ ಹೊರೆಯಾಗದಂತೆ ಪ್ರತಿದಿನ ಏಳು ತಾಸು ವಿದ್ಯುತ್‌ ನೀಡಲು ನಿರ್ಧರಿಸಲಾಗಿದೆ. ಇದಕ್ಕಾಗಿ ಸುಮಾರು 1500 ಕೋಟಿ ರೂ. ಅಗತ್ಯವಿದೆ. ಅನುದಾನದ ಉಳಿತಾಯ, ಮರುಹಂಚಿಕೆಯ ಮೂಲಕ ಈ ವೆಚ್ಚ ಭರಿಸಲಾಗುವುದು ಎಂದು ತಿಳಿಸಿದರು.

ಮುಂದಿನ ವರ್ಷದಲ್ಲಿ ಐಪಿ ಸೆಟ್‌ಗಳಿಗೆ ವಿದ್ಯುತ್‌ ಪೂರೈಕೆಯನ್ನು ಸೌರವಿದ್ಯುತ್‌ ಮೂಲದಿಂದ ಒದಗಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. (Solarisation of EIP Feeders). ಟೆಂಡರ್‌ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಮುಂದಿನ ವರ್ಷದ ವೇಳೆಗೆ ಹಗಲು ವೇಳೆಯಲ್ಲಿಯೇ ರೈತರಿಗೆ ವಿದ್ಯುತ್‌ ನೀಡಲು ಇದರಿಂದ ಅನುಕೂಲವಾಗಲಿದೆ ಎಂದರು.

Ramesh Babu

Journalist

Recent Posts

ಅಕ್ಷರ ಜ್ಞಾನದ ಬೆಳಕಿನಲ್ಲಿ ಗ್ರಾಮಾಂತರ; ಸಂಪೂರ್ಣ ಸಾಕ್ಷರತೆಯತ್ತ ದಾಪುಗಾಲು!

ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…

2 hours ago

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

16 hours ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

17 hours ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

18 hours ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…

18 hours ago

ಯೋಜನಾ ಪ್ರಾಧಿಕಾರಕ್ಕೆ ಮುನಿರಾಜು ಆಯ್ಕೆ: ಯುವ ಕಾಂಗ್ರೆಸ್‌ನಿಂದ ಆತ್ಮೀಯ ಅಭಿನಂದನೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…

22 hours ago