ಪ್ರಸಕ್ತ ಸಾಲಿನಲ್ಲಿ ವಿದ್ಯುತ್ ಬೇಡಿಕೆ ಶೇ.43ಕ್ಕೆ ಏರಿಕೆ: ವಿದ್ಯುತ್ ಬಳಕೆಯಲ್ಲಿ ಶೇ.45ರಷ್ಟು‌ ಹೆಚ್ಚಾಗಿದೆ- ಸಿಎಂ ಸಿದ್ದರಾಮಯ್ಯ

2022ನೇ ಇಸವಿಗೆ ಹೋಲಿಸಿದರೆ 2023 ರಲ್ಲಿ ವಿದ್ಯುತ್‌ ಬೇಡಿಕೆ ಸರಾಸರಿ ಶೇ. 43 ರಷ್ಟು ಹೆಚ್ಚಿದೆ. ಅಕ್ಟೋಬರ್‌ ತಿಂಗಳಲ್ಲಿ 15,978 ಮೆಗಾವ್ಯಾಟ್‌ ಬೇಡಿಕೆ ದಾಖಲಾಗಿದೆ. ವಿದ್ಯುತ್‌ ಬಳಕೆಯಲ್ಲಿ ಕಳೆದ ವರ್ಷಕ್ಕಿಂತ ಶೇ. 45 ರಷ್ಟು ಹೆಚ್ಚಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಇಂಧನ ಇಲಾಖೆ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಕೃಷಿ ಬಳಕೆಯಲ್ಲಿ ಶೇ. 55ರಿಂದ 119 ರಷ್ಟು ಹೆಚ್ಚಳವಾಗಿದೆ. ಇತರ ವಿಭಾಗಗಳಲ್ಲಿ ಶೇ. 9 ರಿಂದ 14 ರಷ್ಟು ಹೆಚ್ಚಳವಾಗಿದೆ. ಮಳೆ ಕೊರತೆ, ವಾಡಿಕೆಗಿಂತ ಮೊದಲೇ ಐಪಿ ಸೆಟ್‌ ಗಳ ಬಳಕೆ ಪ್ರಾರಂಭವಾಗಿರುವುದು ಹಾಗೂ ಕೋವಿಡ್‌ 19ರ ನಂತರದ ಆರ್ಥಿಕ ಪುನಶ್ಚೇತನ ಇದಕ್ಕೆ ಕಾರಣವಾಗಿದೆ ಎಂದರು.

ಕಳೆದ ಬಾರಿ ಪ್ರಗತಿ ಪರಿಶೀಲನೆಯ ನಂತರ ರಾಯಚೂರು, ಬಳ್ಳಾರಿ ಉಷ್ಣವಿದ್ಯುತ್‌ ಸ್ಥಾವರಗಳ ಉತ್ಪಾದನೆ ಹೆಚ್ಚಾಗಿದೆ. ಉತ್ತರ ಪ್ರದೇಶ, ಪಂಜಾಬ್‌ ಮತ್ತು ಹಿಮಾಚಲ ಪ್ರದೇಶಗಳಿಂದ ವಿದ್ಯುತ್‌ ಪಡೆಯಲಾಗುತ್ತಿದೆ.

ಸೆಕ್ಷನ್‌ 11 ಅಡಿ ಬೇರೆ ರಾಜ್ಯಗಳಿಗೆ ವಿದ್ಯುತ್‌ ನೀಡದಂತೆ ಆದೇಶ ಹೊರಡಿಸಿ, ವಿದ್ಯುತ್‌ ಪಡೆಯಲಾಗುತ್ತಿದೆ. ಆ ಮೂಲಕ ವಿದ್ಯುತ್‌ ವಿತರಣೆ ಸಹಜ ಸ್ಥಿತಿಗೆ ಬಂದಿದೆ. ನೋಡಲ್‌ ಅಧಿಕಾರಿಗಳು ನಿರಂತರವಾಗಿ ಪರಿಸ್ಥಿತಿಯನ್ನು ಗಮನಿಸುತ್ತಿದ್ದಾರೆ ಎಂದು ಹೇಳಿದರು.

ವಿವಿಧ ವಿದ್ಯುತ್‌ ಸರಬರಾಜು ಕಂಪೆನಿಗಳ ವ್ಯಾಪ್ತಿಯಲ್ಲಿ ರೈತರ ಅಗತ್ಯತೆಗನುಗುಣವಾಗಿ ಐದರಿಂದ ಏಳು ಗಂಟೆಗಳ ಅವಧಿಗೆ ನಿರಂತರ ವಿದ್ಯುತ್‌ ಪೂರೈಕೆ ಮಾಡಲಾಗುತ್ತಿದೆ. ರಾಜ್ಯಾದ್ಯಂತ ಐಪಿ ಸೆಟ್‌ಗಳಿಗೆ ನಿರಂತರ ಏಳು ಗಂಟೆಗಳ ಅವಧಿಗೆ ವಿದ್ಯುತ್‌ ಒದಗಿಸಲು 600 ಮೆಗಾವ್ಯಾಟ್‌/ಗಂಟೆ ಹಾಗೂ ಪ್ರತಿದಿನಕ್ಕೆ 14 ಮಿಲಿಯನ್‌ ಯುನಿಟ್‌ಗಳ ಅಗತ್ಯವಿದೆ ಎಂದರು.

ಸರ್ಕಾರದ ಮೇಲೆ ಹೆಚ್ಚಿನ ಹೊರೆಯಾಗದಂತೆ ಪ್ರತಿದಿನ ಏಳು ತಾಸು ವಿದ್ಯುತ್‌ ನೀಡಲು ನಿರ್ಧರಿಸಲಾಗಿದೆ. ಇದಕ್ಕಾಗಿ ಸುಮಾರು 1500 ಕೋಟಿ ರೂ. ಅಗತ್ಯವಿದೆ. ಅನುದಾನದ ಉಳಿತಾಯ, ಮರುಹಂಚಿಕೆಯ ಮೂಲಕ ಈ ವೆಚ್ಚ ಭರಿಸಲಾಗುವುದು ಎಂದು ತಿಳಿಸಿದರು.

ಮುಂದಿನ ವರ್ಷದಲ್ಲಿ ಐಪಿ ಸೆಟ್‌ಗಳಿಗೆ ವಿದ್ಯುತ್‌ ಪೂರೈಕೆಯನ್ನು ಸೌರವಿದ್ಯುತ್‌ ಮೂಲದಿಂದ ಒದಗಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. (Solarisation of EIP Feeders). ಟೆಂಡರ್‌ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಮುಂದಿನ ವರ್ಷದ ವೇಳೆಗೆ ಹಗಲು ವೇಳೆಯಲ್ಲಿಯೇ ರೈತರಿಗೆ ವಿದ್ಯುತ್‌ ನೀಡಲು ಇದರಿಂದ ಅನುಕೂಲವಾಗಲಿದೆ ಎಂದರು.

Ramesh Babu

Journalist

Recent Posts

ಗೃಹರಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ 349 ಗೃಹರಕ್ಷಕರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳು ಮೇ…

1 hour ago

ಪ್ರಶ್ನೆ ಪತ್ರಿಕೆ ಬಯಲಾಗುತ್ತಲೇ ಇದೆ….

ನೀಟ್ ಪ್ರಶ್ನೆ ಪತ್ರಿಕೆ ಬಯಲು.... ಪ್ರಶ್ನೆ ಪತ್ರಿಕೆ ಬಯಲಾಗುತ್ತಲೇ ಇದೆ. ನನಗೆ ಇದೇನು ದೊಡ್ಡ ಆಶ್ಚರ್ಯವಲ್ಲ. ಇಡೀ ಸಮಾಜದ ನಡೆಯುತ್ತಿರುವುದೇ…

4 hours ago

ಹವಾಮಾನ ವೈಪರಿತ್ಯಕ್ಕೆ ತತ್ತರಿಸಿದ ಕೃಷಿ: ಮಾವು, ದ್ರಾಕ್ಷಿ, ತರಕಾರಿ ಬೆಳೆಗಳಿಗೆ ಭಾರೀ ಹೊಡೆತ

ರಾಜ್ಯದ ಹಲವು ಭಾಗಗಳಲ್ಲಿ ಈ ಬಾರಿ ತೀವ್ರ ಬೇಸಿಗೆ ಮತ್ತು ಮಳೆ ಕೊರತೆಯಿಂದ ಕೃಷಿ ಚಟುವಟಿಕೆಗಳು ಸಂಕಷ್ಟಕ್ಕೆ ಸಿಲುಕಿವೆ. 2026-27ನೇ…

6 hours ago

ಸೈಕಲ್‌ಗೆ ಡಿಕ್ಕಿ ಹೊಡೆದು ನಿಯಂತ್ರಣ ತಪ್ಪಿದ ಬೈಕ್: ಮಹಿಳೆ ಸಾವು

ದೇವನಹಳ್ಳಿ: ರಸ್ತೆಯಲ್ಲಿ ತೆರಳುತ್ತಿದ್ದ ಸೈಕಲ್‌ಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದು, ಬಳಿಕ ಬೈಕ್ ಡಿವೈಡರ್‌ಗೆ ಅಪ್ಪಳಿಸಿದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟಿರುವ…

17 hours ago

ಬೆಳೆಗಳಿಗೆ ಅಸಮರ್ಪಕ ರಸಗೊಬ್ಬರ ಬಳಕೆ: ಪರಿಸರದ ಮೇಲೆ ವ್ಯತಿರಿಕ್ತ ಪರಿಣಾಮ- ಮಣ್ಣು ವಿಜ್ಞಾನಿ ಡಾ. ಬಾಲಾಜಿ ನಾಯ್ಕ್

ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾದ್ರಿಪುರ ಗ್ರಾಮದಲ್ಲಿ ಸಮತೋಲಿತ ರಸಗೊಬ್ಬರಗಳ ಬಳಕೆ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಕೃಷಿ…

22 hours ago

ಬಾಲ್ಯ ವಿವಾಹ ತಡೆದ ಅಧಿಕಾರಿಗಳು: 16 ವರ್ಷದ ಬಾಲಕಿ ರಕ್ಷಣೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ಅಧಿಕಾರಿಗಳು ತಡೆದು 16 ವರ್ಷದ ಬಾಲಕಿಯನ್ನು ರಕ್ಷಿಸಿದ ಘಟನೆ ನಡೆದಿದೆ.…

23 hours ago