ಪ್ರಸಕ್ತ ಸಾಲಿನಲ್ಲಿ ವಿದ್ಯುತ್ ಬೇಡಿಕೆ ಶೇ.43ಕ್ಕೆ ಏರಿಕೆ: ವಿದ್ಯುತ್ ಬಳಕೆಯಲ್ಲಿ ಶೇ.45ರಷ್ಟು‌ ಹೆಚ್ಚಾಗಿದೆ- ಸಿಎಂ ಸಿದ್ದರಾಮಯ್ಯ

2022ನೇ ಇಸವಿಗೆ ಹೋಲಿಸಿದರೆ 2023 ರಲ್ಲಿ ವಿದ್ಯುತ್‌ ಬೇಡಿಕೆ ಸರಾಸರಿ ಶೇ. 43 ರಷ್ಟು ಹೆಚ್ಚಿದೆ. ಅಕ್ಟೋಬರ್‌ ತಿಂಗಳಲ್ಲಿ 15,978 ಮೆಗಾವ್ಯಾಟ್‌ ಬೇಡಿಕೆ ದಾಖಲಾಗಿದೆ. ವಿದ್ಯುತ್‌ ಬಳಕೆಯಲ್ಲಿ ಕಳೆದ ವರ್ಷಕ್ಕಿಂತ ಶೇ. 45 ರಷ್ಟು ಹೆಚ್ಚಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಇಂಧನ ಇಲಾಖೆ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಕೃಷಿ ಬಳಕೆಯಲ್ಲಿ ಶೇ. 55ರಿಂದ 119 ರಷ್ಟು ಹೆಚ್ಚಳವಾಗಿದೆ. ಇತರ ವಿಭಾಗಗಳಲ್ಲಿ ಶೇ. 9 ರಿಂದ 14 ರಷ್ಟು ಹೆಚ್ಚಳವಾಗಿದೆ. ಮಳೆ ಕೊರತೆ, ವಾಡಿಕೆಗಿಂತ ಮೊದಲೇ ಐಪಿ ಸೆಟ್‌ ಗಳ ಬಳಕೆ ಪ್ರಾರಂಭವಾಗಿರುವುದು ಹಾಗೂ ಕೋವಿಡ್‌ 19ರ ನಂತರದ ಆರ್ಥಿಕ ಪುನಶ್ಚೇತನ ಇದಕ್ಕೆ ಕಾರಣವಾಗಿದೆ ಎಂದರು.

ಕಳೆದ ಬಾರಿ ಪ್ರಗತಿ ಪರಿಶೀಲನೆಯ ನಂತರ ರಾಯಚೂರು, ಬಳ್ಳಾರಿ ಉಷ್ಣವಿದ್ಯುತ್‌ ಸ್ಥಾವರಗಳ ಉತ್ಪಾದನೆ ಹೆಚ್ಚಾಗಿದೆ. ಉತ್ತರ ಪ್ರದೇಶ, ಪಂಜಾಬ್‌ ಮತ್ತು ಹಿಮಾಚಲ ಪ್ರದೇಶಗಳಿಂದ ವಿದ್ಯುತ್‌ ಪಡೆಯಲಾಗುತ್ತಿದೆ.

ಸೆಕ್ಷನ್‌ 11 ಅಡಿ ಬೇರೆ ರಾಜ್ಯಗಳಿಗೆ ವಿದ್ಯುತ್‌ ನೀಡದಂತೆ ಆದೇಶ ಹೊರಡಿಸಿ, ವಿದ್ಯುತ್‌ ಪಡೆಯಲಾಗುತ್ತಿದೆ. ಆ ಮೂಲಕ ವಿದ್ಯುತ್‌ ವಿತರಣೆ ಸಹಜ ಸ್ಥಿತಿಗೆ ಬಂದಿದೆ. ನೋಡಲ್‌ ಅಧಿಕಾರಿಗಳು ನಿರಂತರವಾಗಿ ಪರಿಸ್ಥಿತಿಯನ್ನು ಗಮನಿಸುತ್ತಿದ್ದಾರೆ ಎಂದು ಹೇಳಿದರು.

ವಿವಿಧ ವಿದ್ಯುತ್‌ ಸರಬರಾಜು ಕಂಪೆನಿಗಳ ವ್ಯಾಪ್ತಿಯಲ್ಲಿ ರೈತರ ಅಗತ್ಯತೆಗನುಗುಣವಾಗಿ ಐದರಿಂದ ಏಳು ಗಂಟೆಗಳ ಅವಧಿಗೆ ನಿರಂತರ ವಿದ್ಯುತ್‌ ಪೂರೈಕೆ ಮಾಡಲಾಗುತ್ತಿದೆ. ರಾಜ್ಯಾದ್ಯಂತ ಐಪಿ ಸೆಟ್‌ಗಳಿಗೆ ನಿರಂತರ ಏಳು ಗಂಟೆಗಳ ಅವಧಿಗೆ ವಿದ್ಯುತ್‌ ಒದಗಿಸಲು 600 ಮೆಗಾವ್ಯಾಟ್‌/ಗಂಟೆ ಹಾಗೂ ಪ್ರತಿದಿನಕ್ಕೆ 14 ಮಿಲಿಯನ್‌ ಯುನಿಟ್‌ಗಳ ಅಗತ್ಯವಿದೆ ಎಂದರು.

ಸರ್ಕಾರದ ಮೇಲೆ ಹೆಚ್ಚಿನ ಹೊರೆಯಾಗದಂತೆ ಪ್ರತಿದಿನ ಏಳು ತಾಸು ವಿದ್ಯುತ್‌ ನೀಡಲು ನಿರ್ಧರಿಸಲಾಗಿದೆ. ಇದಕ್ಕಾಗಿ ಸುಮಾರು 1500 ಕೋಟಿ ರೂ. ಅಗತ್ಯವಿದೆ. ಅನುದಾನದ ಉಳಿತಾಯ, ಮರುಹಂಚಿಕೆಯ ಮೂಲಕ ಈ ವೆಚ್ಚ ಭರಿಸಲಾಗುವುದು ಎಂದು ತಿಳಿಸಿದರು.

ಮುಂದಿನ ವರ್ಷದಲ್ಲಿ ಐಪಿ ಸೆಟ್‌ಗಳಿಗೆ ವಿದ್ಯುತ್‌ ಪೂರೈಕೆಯನ್ನು ಸೌರವಿದ್ಯುತ್‌ ಮೂಲದಿಂದ ಒದಗಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. (Solarisation of EIP Feeders). ಟೆಂಡರ್‌ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಮುಂದಿನ ವರ್ಷದ ವೇಳೆಗೆ ಹಗಲು ವೇಳೆಯಲ್ಲಿಯೇ ರೈತರಿಗೆ ವಿದ್ಯುತ್‌ ನೀಡಲು ಇದರಿಂದ ಅನುಕೂಲವಾಗಲಿದೆ ಎಂದರು.

Ramesh Babu

Journalist

Recent Posts

ಅತಿವೃಷ್ಟಿ–ಬರ ಎದುರಿಸಲು ಸಚಿವರಿಗೆ ಜಿಲ್ಲೆಗಳ ಉಸ್ತುವಾರಿ: ಯಾವ ಸಚಿವರಿಗೆ ಯಾವ ಜಿಲ್ಲೆ? ಸರ್ಕಾರದಿಂದ ಉಸ್ತುವಾರಿ ಪಟ್ಟಿ ಪ್ರಕಟ

ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…

54 minutes ago

ಲಯನ್ಸ್ ಕ್ಲಬ್ ಆಫ್ ಕೊನಘಟ್ಟ ಲೆಜೆಂಡ್ಸ್ ಅಧ್ಯಕ್ಷರಾಗಿ ಜಿ.ಲಕ್ಷ್ಮಿಪತಿ ಆಯ್ಕೆ

ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್‌ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…

1 hour ago

ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ; ₹5.50 ಲಕ್ಷ ಲಂಚ ಸ್ವೀಕರಿಸುವ ವೇಳೆ ಟ್ರ್ಯಾಪ್

ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…

9 hours ago

ಸಚಿವ ಸಂಪುಟ ವಿಸ್ತರಣೆ: 20 ಮಂದಿಗೆ ಸಚಿವ ಸ್ಥಾನ; ಶರತ್ ಬಚ್ಚೇಗೌಡಗೆ ಮತ್ತೆ ನಿರಾಸೆ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…

20 hours ago

ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡರಿಗೆ ಕೈತಪ್ಪಿದ ಮಂತ್ರಿಗಿರಿ; ಎರಡನೇ ಪಟ್ಟಿಯಲ್ಲಿ 20 ಮಂದಿಗೆ ಅವಕಾಶ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…

1 day ago

ಆಧಾರ್ ಸಮಸ್ಯೆಗೆ ಸಿಲುಕಿದ 16 ಸಾವಿರ ವಿದ್ಯಾರ್ಥಿಗಳು! ಸೌಲಭ್ಯಗಳಿಂದ ವಂಚಿತರಾಗುವ ಆತಂಕ; ವಲಸೆ ಕಾರ್ಮಿಕರ ಮಕ್ಕಳಿಗೇ ಹೆಚ್ಚು ಸಂಕಷ್ಟ

ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…

1 day ago