ಪ್ರಸಕ್ತ ಸಾಲಿನಲ್ಲಿ ವಿದ್ಯುತ್ ಬೇಡಿಕೆ ಶೇ.43ಕ್ಕೆ ಏರಿಕೆ: ವಿದ್ಯುತ್ ಬಳಕೆಯಲ್ಲಿ ಶೇ.45ರಷ್ಟು‌ ಹೆಚ್ಚಾಗಿದೆ- ಸಿಎಂ ಸಿದ್ದರಾಮಯ್ಯ

2022ನೇ ಇಸವಿಗೆ ಹೋಲಿಸಿದರೆ 2023 ರಲ್ಲಿ ವಿದ್ಯುತ್‌ ಬೇಡಿಕೆ ಸರಾಸರಿ ಶೇ. 43 ರಷ್ಟು ಹೆಚ್ಚಿದೆ. ಅಕ್ಟೋಬರ್‌ ತಿಂಗಳಲ್ಲಿ 15,978 ಮೆಗಾವ್ಯಾಟ್‌ ಬೇಡಿಕೆ ದಾಖಲಾಗಿದೆ. ವಿದ್ಯುತ್‌ ಬಳಕೆಯಲ್ಲಿ ಕಳೆದ ವರ್ಷಕ್ಕಿಂತ ಶೇ. 45 ರಷ್ಟು ಹೆಚ್ಚಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಇಂಧನ ಇಲಾಖೆ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಕೃಷಿ ಬಳಕೆಯಲ್ಲಿ ಶೇ. 55ರಿಂದ 119 ರಷ್ಟು ಹೆಚ್ಚಳವಾಗಿದೆ. ಇತರ ವಿಭಾಗಗಳಲ್ಲಿ ಶೇ. 9 ರಿಂದ 14 ರಷ್ಟು ಹೆಚ್ಚಳವಾಗಿದೆ. ಮಳೆ ಕೊರತೆ, ವಾಡಿಕೆಗಿಂತ ಮೊದಲೇ ಐಪಿ ಸೆಟ್‌ ಗಳ ಬಳಕೆ ಪ್ರಾರಂಭವಾಗಿರುವುದು ಹಾಗೂ ಕೋವಿಡ್‌ 19ರ ನಂತರದ ಆರ್ಥಿಕ ಪುನಶ್ಚೇತನ ಇದಕ್ಕೆ ಕಾರಣವಾಗಿದೆ ಎಂದರು.

ಕಳೆದ ಬಾರಿ ಪ್ರಗತಿ ಪರಿಶೀಲನೆಯ ನಂತರ ರಾಯಚೂರು, ಬಳ್ಳಾರಿ ಉಷ್ಣವಿದ್ಯುತ್‌ ಸ್ಥಾವರಗಳ ಉತ್ಪಾದನೆ ಹೆಚ್ಚಾಗಿದೆ. ಉತ್ತರ ಪ್ರದೇಶ, ಪಂಜಾಬ್‌ ಮತ್ತು ಹಿಮಾಚಲ ಪ್ರದೇಶಗಳಿಂದ ವಿದ್ಯುತ್‌ ಪಡೆಯಲಾಗುತ್ತಿದೆ.

ಸೆಕ್ಷನ್‌ 11 ಅಡಿ ಬೇರೆ ರಾಜ್ಯಗಳಿಗೆ ವಿದ್ಯುತ್‌ ನೀಡದಂತೆ ಆದೇಶ ಹೊರಡಿಸಿ, ವಿದ್ಯುತ್‌ ಪಡೆಯಲಾಗುತ್ತಿದೆ. ಆ ಮೂಲಕ ವಿದ್ಯುತ್‌ ವಿತರಣೆ ಸಹಜ ಸ್ಥಿತಿಗೆ ಬಂದಿದೆ. ನೋಡಲ್‌ ಅಧಿಕಾರಿಗಳು ನಿರಂತರವಾಗಿ ಪರಿಸ್ಥಿತಿಯನ್ನು ಗಮನಿಸುತ್ತಿದ್ದಾರೆ ಎಂದು ಹೇಳಿದರು.

ವಿವಿಧ ವಿದ್ಯುತ್‌ ಸರಬರಾಜು ಕಂಪೆನಿಗಳ ವ್ಯಾಪ್ತಿಯಲ್ಲಿ ರೈತರ ಅಗತ್ಯತೆಗನುಗುಣವಾಗಿ ಐದರಿಂದ ಏಳು ಗಂಟೆಗಳ ಅವಧಿಗೆ ನಿರಂತರ ವಿದ್ಯುತ್‌ ಪೂರೈಕೆ ಮಾಡಲಾಗುತ್ತಿದೆ. ರಾಜ್ಯಾದ್ಯಂತ ಐಪಿ ಸೆಟ್‌ಗಳಿಗೆ ನಿರಂತರ ಏಳು ಗಂಟೆಗಳ ಅವಧಿಗೆ ವಿದ್ಯುತ್‌ ಒದಗಿಸಲು 600 ಮೆಗಾವ್ಯಾಟ್‌/ಗಂಟೆ ಹಾಗೂ ಪ್ರತಿದಿನಕ್ಕೆ 14 ಮಿಲಿಯನ್‌ ಯುನಿಟ್‌ಗಳ ಅಗತ್ಯವಿದೆ ಎಂದರು.

ಸರ್ಕಾರದ ಮೇಲೆ ಹೆಚ್ಚಿನ ಹೊರೆಯಾಗದಂತೆ ಪ್ರತಿದಿನ ಏಳು ತಾಸು ವಿದ್ಯುತ್‌ ನೀಡಲು ನಿರ್ಧರಿಸಲಾಗಿದೆ. ಇದಕ್ಕಾಗಿ ಸುಮಾರು 1500 ಕೋಟಿ ರೂ. ಅಗತ್ಯವಿದೆ. ಅನುದಾನದ ಉಳಿತಾಯ, ಮರುಹಂಚಿಕೆಯ ಮೂಲಕ ಈ ವೆಚ್ಚ ಭರಿಸಲಾಗುವುದು ಎಂದು ತಿಳಿಸಿದರು.

ಮುಂದಿನ ವರ್ಷದಲ್ಲಿ ಐಪಿ ಸೆಟ್‌ಗಳಿಗೆ ವಿದ್ಯುತ್‌ ಪೂರೈಕೆಯನ್ನು ಸೌರವಿದ್ಯುತ್‌ ಮೂಲದಿಂದ ಒದಗಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. (Solarisation of EIP Feeders). ಟೆಂಡರ್‌ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಮುಂದಿನ ವರ್ಷದ ವೇಳೆಗೆ ಹಗಲು ವೇಳೆಯಲ್ಲಿಯೇ ರೈತರಿಗೆ ವಿದ್ಯುತ್‌ ನೀಡಲು ಇದರಿಂದ ಅನುಕೂಲವಾಗಲಿದೆ ಎಂದರು.

Ramesh Babu

Journalist

Recent Posts

ಮತದಾರರ ಪಟ್ಟಿ ಪರಿಷ್ಕರಣೆ ಚುರುಕು: 7.96 ಲಕ್ಷ ಮತದಾರರ ಹೆಸರು ಅಂತಿಮ ಹಂತಕ್ಕೆ

ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…

5 hours ago

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

1 day ago

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

1 day ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

2 days ago

ದೊಡ್ಡಬಳ್ಳಾಪುರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…

3 days ago

ಘಾಟಿ ಕ್ಷೇತ್ರದಲ್ಲಿ ವರಮಹಾಲಕ್ಷ್ಮಿ ಸಂಭ್ರಮ; ಮಹಿಳೆಯರಿಗೆ ಬಳೆ, ಅರಶಿನ–ಕುಂಕುಮ ವಿತರಣೆ

ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…

3 days ago