ಪ್ರಸಕ್ತ ಸಾಲಿನಲ್ಲಿ ವಿದ್ಯುತ್ ಬೇಡಿಕೆ ಶೇ.43ಕ್ಕೆ ಏರಿಕೆ: ವಿದ್ಯುತ್ ಬಳಕೆಯಲ್ಲಿ ಶೇ.45ರಷ್ಟು‌ ಹೆಚ್ಚಾಗಿದೆ- ಸಿಎಂ ಸಿದ್ದರಾಮಯ್ಯ

2022ನೇ ಇಸವಿಗೆ ಹೋಲಿಸಿದರೆ 2023 ರಲ್ಲಿ ವಿದ್ಯುತ್‌ ಬೇಡಿಕೆ ಸರಾಸರಿ ಶೇ. 43 ರಷ್ಟು ಹೆಚ್ಚಿದೆ. ಅಕ್ಟೋಬರ್‌ ತಿಂಗಳಲ್ಲಿ 15,978 ಮೆಗಾವ್ಯಾಟ್‌ ಬೇಡಿಕೆ ದಾಖಲಾಗಿದೆ. ವಿದ್ಯುತ್‌ ಬಳಕೆಯಲ್ಲಿ ಕಳೆದ ವರ್ಷಕ್ಕಿಂತ ಶೇ. 45 ರಷ್ಟು ಹೆಚ್ಚಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಇಂಧನ ಇಲಾಖೆ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಕೃಷಿ ಬಳಕೆಯಲ್ಲಿ ಶೇ. 55ರಿಂದ 119 ರಷ್ಟು ಹೆಚ್ಚಳವಾಗಿದೆ. ಇತರ ವಿಭಾಗಗಳಲ್ಲಿ ಶೇ. 9 ರಿಂದ 14 ರಷ್ಟು ಹೆಚ್ಚಳವಾಗಿದೆ. ಮಳೆ ಕೊರತೆ, ವಾಡಿಕೆಗಿಂತ ಮೊದಲೇ ಐಪಿ ಸೆಟ್‌ ಗಳ ಬಳಕೆ ಪ್ರಾರಂಭವಾಗಿರುವುದು ಹಾಗೂ ಕೋವಿಡ್‌ 19ರ ನಂತರದ ಆರ್ಥಿಕ ಪುನಶ್ಚೇತನ ಇದಕ್ಕೆ ಕಾರಣವಾಗಿದೆ ಎಂದರು.

ಕಳೆದ ಬಾರಿ ಪ್ರಗತಿ ಪರಿಶೀಲನೆಯ ನಂತರ ರಾಯಚೂರು, ಬಳ್ಳಾರಿ ಉಷ್ಣವಿದ್ಯುತ್‌ ಸ್ಥಾವರಗಳ ಉತ್ಪಾದನೆ ಹೆಚ್ಚಾಗಿದೆ. ಉತ್ತರ ಪ್ರದೇಶ, ಪಂಜಾಬ್‌ ಮತ್ತು ಹಿಮಾಚಲ ಪ್ರದೇಶಗಳಿಂದ ವಿದ್ಯುತ್‌ ಪಡೆಯಲಾಗುತ್ತಿದೆ.

ಸೆಕ್ಷನ್‌ 11 ಅಡಿ ಬೇರೆ ರಾಜ್ಯಗಳಿಗೆ ವಿದ್ಯುತ್‌ ನೀಡದಂತೆ ಆದೇಶ ಹೊರಡಿಸಿ, ವಿದ್ಯುತ್‌ ಪಡೆಯಲಾಗುತ್ತಿದೆ. ಆ ಮೂಲಕ ವಿದ್ಯುತ್‌ ವಿತರಣೆ ಸಹಜ ಸ್ಥಿತಿಗೆ ಬಂದಿದೆ. ನೋಡಲ್‌ ಅಧಿಕಾರಿಗಳು ನಿರಂತರವಾಗಿ ಪರಿಸ್ಥಿತಿಯನ್ನು ಗಮನಿಸುತ್ತಿದ್ದಾರೆ ಎಂದು ಹೇಳಿದರು.

ವಿವಿಧ ವಿದ್ಯುತ್‌ ಸರಬರಾಜು ಕಂಪೆನಿಗಳ ವ್ಯಾಪ್ತಿಯಲ್ಲಿ ರೈತರ ಅಗತ್ಯತೆಗನುಗುಣವಾಗಿ ಐದರಿಂದ ಏಳು ಗಂಟೆಗಳ ಅವಧಿಗೆ ನಿರಂತರ ವಿದ್ಯುತ್‌ ಪೂರೈಕೆ ಮಾಡಲಾಗುತ್ತಿದೆ. ರಾಜ್ಯಾದ್ಯಂತ ಐಪಿ ಸೆಟ್‌ಗಳಿಗೆ ನಿರಂತರ ಏಳು ಗಂಟೆಗಳ ಅವಧಿಗೆ ವಿದ್ಯುತ್‌ ಒದಗಿಸಲು 600 ಮೆಗಾವ್ಯಾಟ್‌/ಗಂಟೆ ಹಾಗೂ ಪ್ರತಿದಿನಕ್ಕೆ 14 ಮಿಲಿಯನ್‌ ಯುನಿಟ್‌ಗಳ ಅಗತ್ಯವಿದೆ ಎಂದರು.

ಸರ್ಕಾರದ ಮೇಲೆ ಹೆಚ್ಚಿನ ಹೊರೆಯಾಗದಂತೆ ಪ್ರತಿದಿನ ಏಳು ತಾಸು ವಿದ್ಯುತ್‌ ನೀಡಲು ನಿರ್ಧರಿಸಲಾಗಿದೆ. ಇದಕ್ಕಾಗಿ ಸುಮಾರು 1500 ಕೋಟಿ ರೂ. ಅಗತ್ಯವಿದೆ. ಅನುದಾನದ ಉಳಿತಾಯ, ಮರುಹಂಚಿಕೆಯ ಮೂಲಕ ಈ ವೆಚ್ಚ ಭರಿಸಲಾಗುವುದು ಎಂದು ತಿಳಿಸಿದರು.

ಮುಂದಿನ ವರ್ಷದಲ್ಲಿ ಐಪಿ ಸೆಟ್‌ಗಳಿಗೆ ವಿದ್ಯುತ್‌ ಪೂರೈಕೆಯನ್ನು ಸೌರವಿದ್ಯುತ್‌ ಮೂಲದಿಂದ ಒದಗಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. (Solarisation of EIP Feeders). ಟೆಂಡರ್‌ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಮುಂದಿನ ವರ್ಷದ ವೇಳೆಗೆ ಹಗಲು ವೇಳೆಯಲ್ಲಿಯೇ ರೈತರಿಗೆ ವಿದ್ಯುತ್‌ ನೀಡಲು ಇದರಿಂದ ಅನುಕೂಲವಾಗಲಿದೆ ಎಂದರು.

Ramesh Babu

Journalist

Recent Posts

ಜೆಡಿಎಸ್ ತಾಲೂಕು ಅಧ್ಯಕ್ಷರಾಗಿ ಹರೀಶ್ ಗೌಡ ಆಯ್ಕೆ

ಜೆಡಿಎಸ್ ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷರಾಗಿ ಹರೀಶ್ ಗೌಡ ಅವರನ್ನು ಆಯ್ಕೆ ಮಾಡಲಾಗಿದೆ. ಬೆಂಗಳೂರಿನಲ್ಲಿರುವ ಜೆಡಿಎಸ್ ಪಕ್ಷದ ಕಚೇರಿಯಲ್ಲಿ ನಡೆದ ಜೆಡಿಎಸ್…

2 hours ago

ಇ-ಸ್ವತ್ತು ಅರ್ಜಿ ಸಲ್ಲಿಕೆಗೆ ಬಾಪೂಜಿ ಸೇವಾ ಕೇಂದ್ರ (ಗ್ರಾಮ ಒನ್), ಕರ್ನಾಟಕ ಒನ್, ಬೆಂಗಳೂರು ಒನ್ ಕೇಂದ್ರಗಳಲ್ಲೂ ಸೌಲಭ್ಯ

ನಾಗರಿಕರಿಗೆ ಇನ್ನಷ್ಟು ಹತ್ತಿರದಲ್ಲಿ ಸರ್ಕಾರಿ ಸೇವೆಗಳನ್ನು ಒದಗಿಸುವ ಉದ್ದೇಶದಿಂದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಇ-ಆಡಳಿತ ಇಲಾಖೆಯ…

7 hours ago

Effektives Schreiben einer Facharbeit_ Ein Leitfaden

Das Schreiben einer Facharbeit stellt für viele Schüler und Studenten eine große Herausforderung dar. Der…

7 hours ago

ಡಾಕ್ಟರ್ ರಾಜ್ ಕುಮಾರ್ ಅವರಿಗೆ ಜನ್ಮದಿನದ ಶುಭಾಶಯಗಳು

ಏಪ್ರಿಲ್ ಧಮಾಕಾ....... ಕನ್ನಡ ಸಿನಿಮಾದ ಡಾಕ್ಟರ್ ರಾಜಕುಮಾರ್ ಏಪ್ರಿಲ್ 24, ಇಂಗ್ಲೀಷ್ ಸಾಹಿತ್ಯದ ವಿಲಿಯಂ ಶೇಕ್ಸ್ಪಿಯರ್ ಏಪ್ರಿಲ್ 23, ವಿಶ್ವ…

12 hours ago

ಎಸ್ಸೆಸ್ಸೆಲ್ಸಿ ಪರೀಕ್ಷೆ-01 ಫಲಿತಾಂಶ ಪ್ರಕಟ: ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ 11ನೇ ಸ್ಥಾನ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು ಬೆಂಗಳೂರು ಗ್ರಾಮಾಂತರ ಜಿಲ್ಲೆಯು ಶೇ. 95.62% ರಷ್ಟು ಫಲಿತಾಂಶ ಪಡೆಯುವ…

24 hours ago

ಭಗೀರಥ ಜಯಂತಿ ಆಚರಣೆ

ದೊಡ್ಡಬಳ್ಳಾಪುರ: ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಮತ್ತು ತಾಲೂಕು ಆಡಳಿತದ ವತಿಯಿಂದ ತಹಶಿಲ್ದಾರ್ ಮಲ್ಲಪ್ಪ ಎರಗೋಡ ನೇತೃತ್ವದಲ್ಲಿ ತಾಲ್ಲೂಕು ಕಚೇರಿ…

1 day ago