ಕೋಲಾರ: ನಗರದ ಅಮ್ಮವಾರಿಪೇಟೆಯ ಶ್ರೀ ಪ್ರಸನ್ನ ಅಂಜನೇಯಸ್ವಾಮಿಗೆ ಮುಂದಿನ ದಿನಗಳಲ್ಲಿ ವಿಶೇಷವಾದ ರಥವನ್ನು ನಾಲ್ಕು ಜನರ ಸಹಕಾರದೊಂದಿಗೆ ಮಾಡಿಸಿಕೊಡಲಾಗುತ್ತದೆ ಅದರಲ್ಲಿ ನನ್ನ ಕೊಡುಗೆ ಹೆಚ್ವಿರುತ್ತದೆ ಎಂದು ಶಾಸಕ ಕೊತ್ತೂರು ಮಂಜುನಾಥ್ ಭರವಸೆ ನೀಡಿದರು
ಸೋಮವಾರ ಬ್ರಹ್ಮ ರಥೋತ್ಸವದಲ್ಲಿ ಭಾಗವಹಿಸಿ ವಿಶೇಷ ಪೂಜೆ ಸಲ್ಲಿಸಿದ ನಂತರ ಮಾತನಾಡಿದ ಅವರು ಮುಂದಿನ ವರ್ಷದ ಹೊಸ ರಥದೊಂದಿದೆ ಬ್ರಹ್ಮ ರಥೋತ್ಸವವನ್ನು ಅದ್ದೂರಿಯಾಗಿ ಆಚರಣೆ ಮಾಡಲಾಗುತ್ತದೆ ದೇವರ ಕೆಲಸಕ್ಕೆ ಸದಾಕಾಲವೂ ನಿಮ್ಮ ಜೊತೆಗೆ ಇರತ್ತೇವೆ ದೇವರ ಸೇವೆ ಮಾಡಲು ನಮಗೂ ಅತಿವ ಸಂತೋಷ ತರುತ್ತದೆ ಈಗಾಗಲೇ ನಗರಭಾಗದಲ್ಲಿರುವ ಕೀಲುಕೋಟೆ ಅಂಜನೇಯ ಸ್ವಾಮಿ ದೇವಾಲಯದ ಜೀರ್ಣೋದ್ಧಾರಕ್ಕೆ ಮುಂದಾಗಿದ್ದು ಯಾರೇ ಬರಲಿ ಬಿಡಲಿ ದೇವಾಲಯಗಳ ನಿರ್ಮಾಣಕ್ಕೆ ಕಾರ್ಯಕ್ಕೆ ಸದಾಸಿದ್ದವಿದ್ದೇವೆ ಎಂದರು.
ಹಿಂದೂ ಧರ್ಮದಲ್ಲಿ ದೇವತಾರಾಧನೆಗೆ ಅದರದ್ದೇ ಆದ ಮಹತ್ವವಿದೆ. ಕಷ್ಟ ಬಂದಾಗ, ಒಳ್ಳೆಯ ಕೆಲಸಗಳನ್ನು ಆರಂಭಿಸಬೇಕೆಂದಾಗ, ಮನಸ್ಸಿಗೆ ಖುಷಿ ಮೂಡಿದಾಗ ಎಲ್ಲರೂ ದೇವರ ಪೂಜೆಯಲ್ಲಿ ಸಂತೃಪ್ತಿ ಇಂತಹ ಸಂದರ್ಭದಲ್ಲಿ ಎಲ್ಲರೂ ದೇವರ ಮೊರೆ ಹೋಗುತ್ತಾರೆ. ಯಶಸ್ಸಿಗೆ ಇರುವ ಅಡ್ಡಿಯನ್ನು ಪರಿಹರಿಸಲು ಪ್ರಾರ್ಥಿಸಿಕೊಳ್ಳುತ್ತಾರೆ. ನಮ್ಮಲ್ಲಿ ಪ್ರಾರ್ಥನೆ, ಪೂಜೆಗಳ ಮೂಲಕ ಯಶಸ್ಸು, ಕಷ್ಟ ಪರಿಹಾರಕ್ಕೆ ಈ ಪೂಜೆಗಳು ಒಳ್ಳೆಯದು ಸಹಕಾರಿಯಾಗಿದೆ ಎಂದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಎಂ.ಎಲ್ ಅನಿಲ್ ಕುಮಾರ್, ಜಿಲ್ಲಾ ಗ್ಯಾರಂಟಿ ಪ್ರಾಧಿಕಾರದ ಅಧ್ಯಕ್ಷ ವೈ ಶಿವಕುಮಾರ್, ನಗರಸಭೆ ಸದಸ್ಯ ಗಂಗಮ್ಮನಪಾಳ್ಯ ರಾಮಯ್ಯ, ವಕ್ಕಲೇರಿ ಗ್ರಾಪಂ ಮಾಜಿ ಅಧ್ಯಕ್ಷ ಮೈಲಾಂಡಹಳ್ಳಿ ಮುರಳಿ, ದೇವಾಲಯ ಸಮಿತಿ ಸದಸ್ಯರಾದ ರಾಜು, ಸುಬ್ರಮಣಿ, ಬಾಲಾಜಿ, ಅರ್ಜುನ್, ರೂಪೇಶ್, ಅಭಿಲಾಷ್, ಗಂಗಮ್ಮನಪಾಳ್ಯ ಚಂದ್ರು, ಮಹೇಶ್ ಮುಂತಾದವರು ಇದ್ದರು.
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…
ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…
ಸ್ಪರ್ಧೆ ಇರಲಿ, ಆದರೆ ಬದುಕೇ ಸ್ಪರ್ಧೆಯಾಗುವುದು ಬೇಡ..... ಎಲ್ಲಿ ಜೀವನ ನಡೆವುದೋ ಅದೇ ನನ್ನೂರು, ಯಾರು ಸ್ನೇಹದಿ ಬರುವರೋ ಅವರೇ…
ರಾಜಾನುಕುಂಟೆ: ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯ ರಾಜಾನುಕುಂಟೆ ಸಮೀಪ ಶುಕ್ರವಾರ ಮುಂಜಾನೆ ವೇಗವಾಗಿ ಬಂದ ವಾಹನವೊಂದು ಜಿಂಕೆಗೆ ಡಿಕ್ಕಿ ಹೊಡೆದ ಪರಿಣಾಮ…
ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…
ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…