Categories: ಕೋಲಾರ

ಪ್ರಸನ್ನ ಆಂಜನೇಯಸ್ವಾಮಿ ದೇವಾಲಯಕ್ಕೆ ರಥದ ಭರವಸೆ ನೀಡಿದ ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ನಗರದ ಅಮ್ಮವಾರಿಪೇಟೆಯ ಶ್ರೀ ಪ್ರಸನ್ನ ಅಂಜನೇಯಸ್ವಾಮಿಗೆ ಮುಂದಿನ ದಿನಗಳಲ್ಲಿ ವಿಶೇಷವಾದ ರಥವನ್ನು ನಾಲ್ಕು ಜನರ ಸಹಕಾರದೊಂದಿಗೆ ಮಾಡಿಸಿಕೊಡಲಾಗುತ್ತದೆ ಅದರಲ್ಲಿ ನನ್ನ ಕೊಡುಗೆ ಹೆಚ್ವಿರುತ್ತದೆ ಎಂದು ಶಾಸಕ ಕೊತ್ತೂರು ಮಂಜುನಾಥ್ ಭರವಸೆ ನೀಡಿದರು

ಸೋಮವಾರ ಬ್ರಹ್ಮ ರಥೋತ್ಸವದಲ್ಲಿ ಭಾಗವಹಿಸಿ ವಿಶೇಷ ಪೂಜೆ ಸಲ್ಲಿಸಿದ ನಂತರ ಮಾತನಾಡಿದ ಅವರು ಮುಂದಿನ ವರ್ಷದ ಹೊಸ ರಥದೊಂದಿದೆ ಬ್ರಹ್ಮ ರಥೋತ್ಸವವನ್ನು ಅದ್ದೂರಿಯಾಗಿ ಆಚರಣೆ ಮಾಡಲಾಗುತ್ತದೆ ದೇವರ ಕೆಲಸಕ್ಕೆ ಸದಾಕಾಲವೂ ನಿಮ್ಮ ಜೊತೆಗೆ ಇರತ್ತೇವೆ ದೇವರ ಸೇವೆ ಮಾಡಲು ನಮಗೂ ಅತಿವ ಸಂತೋಷ ತರುತ್ತದೆ ಈಗಾಗಲೇ ನಗರಭಾಗದಲ್ಲಿರುವ ಕೀಲುಕೋಟೆ ಅಂಜನೇಯ ಸ್ವಾಮಿ ದೇವಾಲಯದ ಜೀರ್ಣೋದ್ಧಾರಕ್ಕೆ ಮುಂದಾಗಿದ್ದು ಯಾರೇ ಬರಲಿ ಬಿಡಲಿ ದೇವಾಲಯಗಳ ನಿರ್ಮಾಣಕ್ಕೆ ಕಾರ್ಯಕ್ಕೆ ಸದಾಸಿದ್ದವಿದ್ದೇವೆ ಎಂದರು.

ಹಿಂದೂ ಧರ್ಮದಲ್ಲಿ ದೇವತಾರಾಧನೆಗೆ ಅದರದ್ದೇ ಆದ ಮಹತ್ವವಿದೆ. ಕಷ್ಟ ಬಂದಾಗ, ಒಳ್ಳೆಯ ಕೆಲಸಗಳನ್ನು ಆರಂಭಿಸಬೇಕೆಂದಾಗ, ಮನಸ್ಸಿಗೆ ಖುಷಿ ಮೂಡಿದಾಗ ಎಲ್ಲರೂ ದೇವರ ಪೂಜೆಯಲ್ಲಿ ಸಂತೃಪ್ತಿ ಇಂತಹ ಸಂದರ್ಭದಲ್ಲಿ ಎಲ್ಲರೂ ದೇವರ ಮೊರೆ ಹೋಗುತ್ತಾರೆ. ಯಶಸ್ಸಿಗೆ ಇರುವ ಅಡ್ಡಿಯನ್ನು ಪರಿಹರಿಸಲು ಪ್ರಾರ್ಥಿಸಿಕೊಳ್ಳುತ್ತಾರೆ. ನಮ್ಮಲ್ಲಿ ಪ್ರಾರ್ಥನೆ, ಪೂಜೆಗಳ ಮೂಲಕ ಯಶಸ್ಸು, ಕಷ್ಟ ಪರಿಹಾರಕ್ಕೆ ಈ ಪೂಜೆಗಳು ಒಳ್ಳೆಯದು ಸಹಕಾರಿಯಾಗಿದೆ ಎಂದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಎಂ.ಎಲ್ ಅನಿಲ್ ಕುಮಾರ್, ಜಿಲ್ಲಾ ಗ್ಯಾರಂಟಿ ಪ್ರಾಧಿಕಾರದ ಅಧ್ಯಕ್ಷ ವೈ ಶಿವಕುಮಾರ್, ನಗರಸಭೆ ಸದಸ್ಯ ಗಂಗಮ್ಮನಪಾಳ್ಯ ರಾಮಯ್ಯ, ವಕ್ಕಲೇರಿ ಗ್ರಾಪಂ ಮಾಜಿ ಅಧ್ಯಕ್ಷ ಮೈಲಾಂಡಹಳ್ಳಿ ಮುರಳಿ, ದೇವಾಲಯ ಸಮಿತಿ ಸದಸ್ಯರಾದ ರಾಜು, ಸುಬ್ರಮಣಿ, ಬಾಲಾಜಿ, ಅರ್ಜುನ್, ರೂಪೇಶ್, ಅಭಿಲಾಷ್, ಗಂಗಮ್ಮನಪಾಳ್ಯ ಚಂದ್ರು, ಮಹೇಶ್ ಮುಂತಾದವರು ಇದ್ದರು.

Ramesh Babu

Journalist

Recent Posts

ಯೂರಿಯಾ ಖರೀದಿಗೆ ಎಫ್‌ಐಡಿ ಕಡ್ಡಾಯ: ಎಕರೆಗೆ ತಿಂಗಳಿಗೆ ಒಂದು ಬ್ಯಾಗ್ ವಿತರಣೆ

ಬೆಂಗಳೂರು ಗ್ರಾಮಾಂತರ: ಮುಂಗಾರು ಕೃಷಿ ಚಟುವಟಿಕೆಗಳು ಚುರುಕುಗೊಂಡಿರುವ ನಡುವೆಯೇ ರೈತರಿಗೆ ಯೂರಿಯಾ ರಸಗೊಬ್ಬರ ವಿತರಣೆಯಲ್ಲಿ ಹೊಸ ನಿಯಮ ಜಾರಿಯಾಗಿದೆ. ಯೂರಿಯಾ…

8 hours ago

ಒಂದೇ ರಾತ್ರಿ ಎರಡು ಕಡೆ ಶ್ರೀಗಂಧದ ಮರಗಳ ಕಳವು

ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…

18 hours ago

ಬೈಕ್‌ಗೆ ಟಿಟಿ ವಾಹನ ಡಿಕ್ಕಿ ಪ್ರಕರಣ: ಇಬ್ಬರು ಯುವತಿಯರ ದುರ್ಮರಣ – ಮೃತರ ಕಣ್ಣು ದಾನ ಮಾಡಿ ಸಾರ್ಥಕತೆ ಮೆರೆದ ಕುಟುಂಬಸ್ಥರು

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…

20 hours ago

ಬೈಕ್ ಗೆ ಟಿಟಿ ವಾಹನ ಡಿಕ್ಕಿ: ಮಹಿಳೆ ಸಾವು: ಮತ್ತೋರ್ವ ಯುವತಿಗೆ ಗಂಭೀರ ಗಾಯ

ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ‌ ಬಾಶೆಟ್ಟಿಹಳ್ಳಿ ಕೈಗಾರಿಕಾ…

1 day ago

ಹೆಣ್ಣು ಕೊಟ್ಟ ಮಾವನನ್ನೇ ಕೊಲೆಗೈದ ಅಳಿಯ

ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…

1 day ago

ಕರ್ನಾಟಕದ ಮುಖ್ಯಮಂತ್ರಿ  ಡಿಕೆ ಶಿವಕುಮಾರ್ ಅವರಿಗೊಂದು ಬಹಿರಂಗ ಪತ್ರ..

ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…

1 day ago