ಪ್ರಸ್ತುತ ಒಂದು ಮಲೇರಿಯಾ, 6 ಡೆಂಗ್ಯೂ ದಾಖಲು: ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಿ:- ಡಿಸಿ ಡಾ.ಕೆ ಎನ್ ಅನುರಾಧ

ಮುಂಗಾರು ಹಂಗಾಮಿನಲ್ಲಿ ಮಳೆಯಿಂದಾಗಿ ಸೊಳ್ಳೆಗಳ ಉತ್ಪತ್ತಿ ಹೆಚ್ಚಾಗಲಿದ್ದು ಇದರಿಂದ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆ ಇರುವುದರಿಂದ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ಡಾ.ಕೆ ಎನ್ ಅನುರಾಧ ಅವರು ಆರೋಗ್ಯಾಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ವಿವಿಧ ಇಲಾಖೆಗಳ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಡೆಂಗಿ ಜ್ವರ, ಚಿಕನ್ ಗುನ್ಯಾ ಹಾಗೂ ಜಿಕಾ ಸೋಂಕು ಹರಡುವ ಈಡೀಸ್ ಜಾತಿಯ ಸೊಳ್ಳೆಗಳು ಪೂರ್ವ ಮುಂಗಾರು ಹಾಗೂ ಮುಂಗಾರು ನಂತರದ ದಿನಗಳಲ್ಲಿ ಹೆಚ್ಚಾಗಿ ಉತ್ಪತ್ತಿಯಾಗುತ್ತವೆ, ಇದರಿಂದ ಡೆಂಗ್ಯೂ ಸೇರಿದಂತೆ ಇತರೆ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆ ಅಧಿಕವಾಗಿರುತ್ತದೆ. ಹವಾಮಾನ ಬದಲಾವಣೆ ಪರಿಣಾಮ, ತ್ವರಿತ ನಗರೀಕರಣ, ನೀರಿನ ಕೊರತೆ, ವ್ಯವಸ್ಥಿತವಲ್ಲದ ಕಟ್ಟಡ ಕಾಮಗಾರಿ, ಹೆಚ್ಚುತ್ತಿರುವ ಜನರ ಚಲನವಲದ ಜೊತೆಗೆ ಘನ ತ್ಯಾಜ್ಯ ವಸ್ತುಗಳ ಅಸಮರ್ಪಕ ವಿಲೇವಾರಿಯಿಂದ ಈಡಿಸ್ ಸೊಳ್ಳೆಗಳ ಉತ್ಪತ್ತಿ ಕಾರಣವಾಗುತ್ತಿದೆ.

ಸೊಳ್ಳೆಗಳಿಂದ ಹರಡುವ ರೋಗಗಳಾದ ಮಲೇರಿಯಾ, ಮೆದುಳು ಜ್ವರ, ಡೆಂಗಿ ಜ್ವರ, ಚಿಕ್ಕನ್ ಗುನ್ಯಾ ಹಾಗೂ ಆನೇಕಾಲು ರೋಗಗಳನ್ನು ತಡೆಗಟ್ಟಲು ಮತ್ತು ನಿಯಂತ್ರಿಸಲು ಸಂಬಂಧಪಟ್ಟ ಇಲಾಖೆಗಳ ಸಹಕಾರವು ಮುಖ್ಯ ಜೊತೆಗೆ ಸಾರ್ವಜನಿಕರು ಕೂಡ ಮುಂಜಾಗ್ರತ ಕ್ರಮಗಳನ್ನು ಕೈಗೊಳ್ಳಬೇಕು ಎಂದರು.

ಸೊಳ್ಳೆ ಉತ್ಪತ್ತಿ  ತಾಣಗಳಾದ ತೆರೆದ ತೊಟ್ಟಿ, ಸಿಮೆಂಟ್ ತೊಟ್ಟಿ, ಪ್ಲಾಸ್ಟಿಕ್ ಡ್ರಂಗಳು, ಮೇಲ್ಚಾವಣಿ ಇಲ್ಲದ ತೊಟ್ಟಿಗಳು, ಕಿರು ನೀರು ಸರಬರಾಜು ಮಾಡುವಂತಹ ತೊಟ್ಟಿಗಳು ಹೀಗೆ ಎಲ್ಲೆಲ್ಲಿ ಸ್ವಚ್ಛ ನೀರು ನಿಲ್ಲಬಹುದು ಅಲ್ಲೆಲ್ಲ ಸೊಳ್ಳೆಗಳು ಹೇರಳವಾಗಿ ಉತ್ಪತ್ತಿಯಾಗುತ್ತವೆ. ಹಾಗಾಗಿ ಸಾರ್ವಜನಿಕರು ಎಲ್ಲಾ ನೀರಿನ ತೊಟ್ಟಿಗಳು, ಡ್ರಮ್ ಬ್ಯಾರೆಲ್ ಗಳು ಏರ್ ಕೂಲರ್ ಇತ್ಯಾದಿಗಳನ್ನು ವಾರಕ್ಕೊಮ್ಮೆ ಖಾಲಿ ಮಾಡಿ ಸ್ವಚ್ಛಪಡಿಸಿ ಮತ್ತೆ ಭರ್ತಿ ಮಾಡಿಕೊಳ್ಳುವುದು. ಜೊತೆಗೆ ಭದ್ರವಾದ ಮುಚ್ಚಳ ಅಥವಾ ಬಟ್ಟೆಯನ್ನು ಮುಚ್ಚಬೇಕು. ಆರೋಗ್ಯ ಇಲಾಖೆಯಿಂದ ಹಮ್ಮಿಕೊಂಡ ಸೊಳ್ಳೆ ನಿಯಂತ್ರಣ ಕ್ರಮಗಳಿಗೆ ಸಹಕಾರ ನೀಡುವುದು. ಸ್ವಯಂ ರಕ್ಷಣಾ ವಿಧಾನಗಳಾದ ಸೊಳ್ಳೆ ನಿರೋಧಕಗಳನ್ನು ಹಾಗೂ ಸೊಳ್ಳೆ ಪರದೆಗಳನ್ನು ಬಳಸುವುದು. ಮನೆ ಕಿಟಕಿಗಳಿಗೆ ಮೆಶ್ ಅಳವಡಿಸುವುದು ಮೈತುಂಬ ಬಟ್ಟೆ ಧರಿಸುವುದು. ಜೊತೆಗೆ ಹಗಲಿನಲ್ಲಿ ಸೊಳ್ಳೆಗಳ ಕಚ್ಚುವಿಕೆಯಿಂದ ಸಾಧ್ಯವಾದಷ್ಟು ದೂರ ಇರಬೇಕು.

*ಸೊಳ್ಳೆ ಉತ್ಪತ್ತಿ ತಾಣಗಳು*

ಒಡೆದ ಟೈರ್ ಗಳು, ತೆಂಗಿನ ಚಿಪ್ಪುಗಳು, ಸಿಮೆಂಟ್ ತೊಟ್ಟಿಗಳು, ತೆರೆದ ಪ್ಲಾಸ್ಟಿಕ್ ಪರಿಕರಗಳು, ಪ್ಲಾಸ್ಟಿಕ್ ಡ್ರಮ್ ಗಳು, ಬಕೆಟ್ಗಳು, ನೀರಿನ ತೊಟ್ಟಿಗಳು, ಅನುಪಯುಕ್ತ ಒರಳು ಕಲ್ಲುಗಳು, ಬಿಸಾಡಿದ ಪ್ಲಾಸ್ಟಿಕ್ ಲೋಟಗಳು, ಬಾಟಲ್ ಗಳು, ಮಡಕೆಗಳು, ಹೊಡೆದ ಪಿಂಗಾಣಿ ಪಾತ್ರೆಗಳು, ಹೂವಿನ ಕುಂಡಗಳ ತಟ್ಟೆಗಳು ಇತ್ಯಾದಿ.

ಸಭೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಿಲ್ಲಾ ಆರೋಗ್ಯಾಧಕಾರಿ ಲಕ್ಕ ಕೃಷ್ಣ ರೆಡ್ಡಿ, ಅರೋಗ್ಯಾಧಿಕಾರಿಗಳಾದ ಡಾ.ಹೇಮಾವತಿ, ಡಾ.ಕೋಮಲ, ಜಿಲ್ಲಾ ಮತ್ತು ತಾಲೂಕು ಆರೋಗ್ಯ ಅಧಿಕಾರಿಗಳು, ವೈದ್ಯಾಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.

Ramesh Babu

Journalist

Recent Posts

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

2 hours ago

ತೂಬಗೆರೆ ಸೊಸೈಟಿ ಅಧ್ಯಕ್ಷರಾಗಿ ವಾಸುದೇವ್, ಉಪಾಧ್ಯಕ್ಷರಾಗಿ ಸತ್ಯನಾರಾಯಣಸ್ವಾಮಿ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್‌ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…

8 hours ago

80ರ ಹೊಸ್ತಿಲಲ್ಲಿ ಭಾರತ…..

ಅಂತೂ ಇಂತೂ, ಹಾಗೂ ಹೀಗೂ ಸ್ವಾತಂತ್ರ್ಯ ಪಡೆದ ನಂತರದ 79 ವರ್ಷಗಳನ್ನು ಪೂರೈಸಿದ್ದೇವೆ. ಬಹುತೇಕ ಒಂದು ಪೀಳಿಗೆ ಅಂತ್ಯವಾಗಿ ಮುಂದಿನ…

14 hours ago

ಆಹಾರ ಭದ್ರತೆಯಲ್ಲಿ ಯಾವುದೇ ಲೋಪವಾಗದಿರಲಿ- ಆಹಾರ ಆಯೋಗ ಅಧ್ಯಕ್ಷ ಡಾ.ಹೆಚ್ ಕೃಷ್ಣ

ಜಿಲ್ಲೆಯಲ್ಲಿ ಸಾರ್ವಜನಿಕ ವಿತರಣಾ ವ್ಯವಸ್ಥೆಯಲ್ಲಿ ವಿತರಿಸುವ ಮಕ್ಕಳಿಗೆ, ಮಹಿಳೆಯರಿಗೆ ದುರ್ಬಲರಿಗೆ, ಹಿರಿಯರಿಗೆ ಆಹಾರ ವಿತರಣೆಯಲ್ಲಿ ಯಾವುದೇ ರೀತಿಯ ಲೋಪದೋಷ ಕಂಡು…

15 hours ago

ನಾಳೆ(ಆ.14) ತೂಬಗೆರೆ ಸೊಸೈಟಿಗೆ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ

ದೊಡ್ಡಬಳ್ಳಾಪುರ: ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘದ (ಎಂ.ಪಿ.ಆರ್.ಎ.ಸಿ.ಎಸ್.) ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ…

1 day ago

“ನನಗೆ ನೀರು ಬೇಕು, ಮಾತಾಡಲ್ಲ” — ಬಾಯಿಗೆ ಪ್ಲಾಸ್ಟರ್ ಹಾಕಿದ ವಾಟಾಳ್ ನಾಗರಾಜ್

ಬೆಂಗಳೂರು: ಕಾವೇರಿ ನದಿ ನೀರಿನ ವಿಚಾರವಾಗಿ ಕರ್ನಾಟಕ ಬಂದ್‌ಗೆ ಕರೆ ನೀಡಿದ್ದ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರನ್ನು ಪೊಲೀಸರು…

1 day ago