ಪ್ರಾಚೀನ ಶೈಲಿಯ ಕಲ್ಲಿನಲ್ಲಿ ಶ್ರೀ ಘಾಟಿ ಸುಬ್ರಹ್ಮಣ್ಯ ದೇವಾಲಯದ ಒಳಾಂಗಣ ದುರಸ್ತಿ: ಗತ ವೈಭವ ಮರುಕಳಿಸುವಂತೆ ದೇವಾಲಯ‌ ಅಭಿವೃದ್ಧಿ

ದೊಡ್ಡಬಳ್ಳಾಪುರ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಘಾಟಿ ಸುಬ್ರಹ್ಮಣ್ಯ ದೇವಾಲಯದ ಒಳಾಂಗಣ ದುರಸ್ತಿ ಕಾರ್ಯ ಬರದಿಂದ ಸಾಗುತ್ತಿದೆ.

ಶ್ರೀ ಘಾಟಿ ಸುಬ್ರಹ್ಮಣ್ಯ ದೇವಾಲಯ ಅಭಿವೃದ್ಧಿ ಪ್ರಾಧಿಕಾರ ರಚನೆ ಆದ ನಂತರ ಮೊದಲ ಬಾರಿಗೆ ದೇವಾಲಯದ ಒಳಾಂಗಣ ಭಾಗದಲ್ಲಿ ದುರಸ್ತಿ ಕಾರ್ಯ ಕೈಗೊಳ್ಳಲಾಗಿದೆ. ದೇವಾಲಯ ಹಾಗೂ ಭಕ್ತಾಧಿಗಳ ಸಹಕಾರದಿಂದ ದುರಸ್ತಿ ಕಾರ್ಯ ನಡೆಯುತ್ತಿದೆ.‌ ಮುಂಬರುವ ಸುಬ್ರಹ್ಮಣ್ಯ ಬ್ರಹ್ಮರಥೋತ್ಸವ ವೇಳೆಗೆ ದುರಸ್ತಿ ಕಾರ್ಯ ಪೂರ್ಣಗೊಳ್ಳಲಿದೆ ಎಂದು ಶ್ರೀ ಘಾಟಿ ಸುಬ್ರಹ್ಮಣ್ಯ ದೇವಾಲಯ ಅಭಿವೃದ್ಧಿ ಪ್ರಾಧಿಕಾರ ಸದಸ್ಯ ರಂಗಪ್ಪ  ತಿಳಿಸಿದರು.

ಶ್ರೀ ಘಾಟಿ ಸುಬ್ರಹ್ಮಣ್ಯ ದೇವಾಲಯವು ಮುಜರಾಯಿ ಇಲಾಖೆಗೆ ಒಳಪಡುತ್ತದೆ. ಭಕ್ತಾಧಿಗಳ ಅನುಕೂಲಕ್ಕೆ ತಕ್ಕಂತೆ ದೇವಾಲಯವನ್ನು ಕಾಲಕ್ಕೆ ತಕ್ಕಂತೆ ಅಭಿವೃದ್ಧಿಪಡಿಸಲಾಗುವುದು.

ಘಾಟಿ ದೇವಾಲಯವನ್ನು ಕುಕ್ಕೆ ಸುಬ್ರಹ್ಮಣ್ಯ ದೇವಾಲಯ ಮಾದರಿ ಅಭಿವೃದ್ಧಿಪಡಿಸಬೇಕೆಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಹಾಗೂ ಆಹಾರ ಸಚಿವ ಕೆ.ಎಚ್ ಮುನಿಯಪ್ಪನವರ ಆಸೆ. ಅದರಂತೆ ದೇವಾಲಯಕ್ಕೆ ಸಂಬಂಧಪಟ್ಟ ಒಂದೊಂದೇ ಅಭಿವೃದ್ಧಿ ಕಾರ್ಯಗಳನ್ನು ನಡೆಸಲಾಗುತ್ತಿದೆ ಎಂದರು.

ಕ್ಯೂ ನಿಲ್ಲುವ ಸಂಕಿರಣ, ದಾಸೋಹ ಭವನ ನಿರ್ಮಿಸಲು ಪ್ಲ್ಯಾನ್ ಮಾಡಲಾಗಿದೆ. ಅದನ್ನು ಆದಷ್ಟು ಬೇಗ ಕಾಮಗಾರಿ ನಡೆಸಲಾಗುವುದು ಎಂದು ಹೇಳಿದರು.

ಘಾಟಿ ಕ್ಷೇತ್ರದಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ಸಂಪೂರ್ಣವಾಗಿ ನಿಷೇಧ ಮಾಡಲಾಗಿದೆ. ದೇವಾಲಯದ ಸುತ್ತಾಮುತ್ತ ಪ್ಲಾಸ್ಟಿಕ್ ನಿಷೇಧ ಕುರಿತು ಸೂಚನಾ ಫಲಕಗಳನ್ನು ಅಳವಡಿಸಲಾಗಿದೆ. ಭಕ್ತಾಧಿಗಳು ಇದಕ್ಕೆ ಸಹಕರಿಸಬೇಕು ಎಂದು ಮನವಿ ಮಾಡಿದರು.

ನಂತರ ಪ್ರಾಧಿಕಾರದ ಸದಸ್ಯ ಆರ್.ವಿ‌ ಮಹೇಶ್ ಮಾತನಾಡಿ, ಪ್ರತಿ ವರ್ಷ ಕೋಟ್ಯಾಂತರ ಭಕ್ತಾಧಿಗಳು ದೇವರ ದರ್ಶನಕ್ಕೆ ಆಗಮಿಸುತ್ತಾರೆ. ಭಕ್ತಾಧಿಗಳ ಅನೂಕಲಕ್ಕೆ ತಕ್ಕಂತೆ ದಾಸೋಹ ಭವನ ನಿರ್ಮಾಣ ಮಾಡಲಾಗುತ್ತದೆ ಎಂದರು.

ಕ್ಷೇತ್ರದಲ್ಲಿ ವೈಜ಼್ಞಾನಿಕ ಕಸ ವಿಲೇವಾರಿ ಮಾಡಿ, ಸ್ವಚ್ಛತೆಗೆ ಆದ್ಯತೆ ನೀಡಲಾಗುವುದು. ಕ್ಷೇತ್ರಕ್ಕೆ ಸಂಬಂಧಿಸಿದ ಒತ್ತುವರಿಯಾಗಿರುವ ಜಮೀನನ್ನು ಬಿಡಿಸುಕೊಳ್ಳಲಾಗುವುದು. ದೇವಸ್ಥಾನಕ್ಕೆ ಬರುವ ಮಾರ್ಗದಲ್ಲಿ ಬೀದಿ ದೀಪ ಒದಗಿಸಲಾಗುವುದು ಎಂದು ತಿಳಿಸಿದರು.

ಪ್ರಥಮ ಚಿಕಿತ್ಸೆ‌ ಕೇಂದ್ರವನ್ನು ಆಧುನೀಕರಣಗೊಳಸಿ ಉನ್ನತೀಕರಣ ಮಾಡಲಾಗುವುದು. ಅತೀಶೀಘ್ರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ನೆರವೇರಿಸಲಾಗುವುದು ಎಂದು ಹೇಳಿದರು.

ತಿರುಪತಿ ಹಾಗೂ ಧರ್ಮಸ್ಥಳ ಮಾದರಿಯಲ್ಲಿ ಕ್ಯೂ ಕಾಂಪ್ಲೆಕ್ಸ್ ನಿರ್ಮಾಣ ಮಾಡಲಾಗುವುದು. ಕುಡಿಯುವ ನೀರು, ಶೌಚಾಲಯ, ಕ್ಯಾಂಟೀನ್, ಮಕ್ಕಳ ಆರೈಕೆ ಕೇಂದ್ರ ನಿರ್ಮಾಣ ಮಾಡಲಾಗುವುದು ಎಂದರು.

Ramesh Babu

Journalist

Recent Posts

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು….ಮನಸ್ಸಿನ ದಾರಿಯಲ್ಲಿ ಅನಂತ ಪಯಣ….

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…

43 minutes ago

ನಿರ್ಜನ ಪ್ರದೇಶದಲ್ಲಿ ದೊರೆತಿದ್ದ ನವಜಾತ ಶಿಶುವಿನ ಆರೋಗ್ಯ ಸ್ಥಿರ: ಜಿಲ್ಲಾ ಸರ್ಕಾರಿ ದತ್ತು ಕೇಂದ್ರಕ್ಕೆ ಹಸ್ತಾಂತರ

ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…

2 hours ago

ಕೆ.ಸಿ.ವ್ಯಾಲಿಯಿಂದ ಜಿಲ್ಲೆಯ ರೈತರ ಬದುಕು ಹಸನು- ಕಾಂಗ್ರೆಸ್‌ ಮುಖಂಡ ಜನಪಹಳ್ಳಿ ನವೀನ್‌

ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್‌ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…

13 hours ago

ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು  ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…

13 hours ago

ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆ: ಮಕ್ಕಳು, ಶಿಕ್ಷಕ ಭಾವುಕ

ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆಗೊಂಡಿದ್ದು, ಈ ಹಿನ್ನೆಲೆ ಇಂದು ಎಸ್…

16 hours ago

ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ.‌ ಪ್ರಹ್ಲಾದ್ ಜೋಶಿ ಕೂಡ ಒಂದೇ ಒಂದು ದಿನ…

1 day ago