ಪ್ರಾಚೀನ ಶೈಲಿಯ ಕಲ್ಲಿನಲ್ಲಿ ಶ್ರೀ ಘಾಟಿ ಸುಬ್ರಹ್ಮಣ್ಯ ದೇವಾಲಯದ ಒಳಾಂಗಣ ದುರಸ್ತಿ: ಗತ ವೈಭವ ಮರುಕಳಿಸುವಂತೆ ದೇವಾಲಯ‌ ಅಭಿವೃದ್ಧಿ

ದೊಡ್ಡಬಳ್ಳಾಪುರ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಘಾಟಿ ಸುಬ್ರಹ್ಮಣ್ಯ ದೇವಾಲಯದ ಒಳಾಂಗಣ ದುರಸ್ತಿ ಕಾರ್ಯ ಬರದಿಂದ ಸಾಗುತ್ತಿದೆ.

ಶ್ರೀ ಘಾಟಿ ಸುಬ್ರಹ್ಮಣ್ಯ ದೇವಾಲಯ ಅಭಿವೃದ್ಧಿ ಪ್ರಾಧಿಕಾರ ರಚನೆ ಆದ ನಂತರ ಮೊದಲ ಬಾರಿಗೆ ದೇವಾಲಯದ ಒಳಾಂಗಣ ಭಾಗದಲ್ಲಿ ದುರಸ್ತಿ ಕಾರ್ಯ ಕೈಗೊಳ್ಳಲಾಗಿದೆ. ದೇವಾಲಯ ಹಾಗೂ ಭಕ್ತಾಧಿಗಳ ಸಹಕಾರದಿಂದ ದುರಸ್ತಿ ಕಾರ್ಯ ನಡೆಯುತ್ತಿದೆ.‌ ಮುಂಬರುವ ಸುಬ್ರಹ್ಮಣ್ಯ ಬ್ರಹ್ಮರಥೋತ್ಸವ ವೇಳೆಗೆ ದುರಸ್ತಿ ಕಾರ್ಯ ಪೂರ್ಣಗೊಳ್ಳಲಿದೆ ಎಂದು ಶ್ರೀ ಘಾಟಿ ಸುಬ್ರಹ್ಮಣ್ಯ ದೇವಾಲಯ ಅಭಿವೃದ್ಧಿ ಪ್ರಾಧಿಕಾರ ಸದಸ್ಯ ರಂಗಪ್ಪ  ತಿಳಿಸಿದರು.

ಶ್ರೀ ಘಾಟಿ ಸುಬ್ರಹ್ಮಣ್ಯ ದೇವಾಲಯವು ಮುಜರಾಯಿ ಇಲಾಖೆಗೆ ಒಳಪಡುತ್ತದೆ. ಭಕ್ತಾಧಿಗಳ ಅನುಕೂಲಕ್ಕೆ ತಕ್ಕಂತೆ ದೇವಾಲಯವನ್ನು ಕಾಲಕ್ಕೆ ತಕ್ಕಂತೆ ಅಭಿವೃದ್ಧಿಪಡಿಸಲಾಗುವುದು.

ಘಾಟಿ ದೇವಾಲಯವನ್ನು ಕುಕ್ಕೆ ಸುಬ್ರಹ್ಮಣ್ಯ ದೇವಾಲಯ ಮಾದರಿ ಅಭಿವೃದ್ಧಿಪಡಿಸಬೇಕೆಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಹಾಗೂ ಆಹಾರ ಸಚಿವ ಕೆ.ಎಚ್ ಮುನಿಯಪ್ಪನವರ ಆಸೆ. ಅದರಂತೆ ದೇವಾಲಯಕ್ಕೆ ಸಂಬಂಧಪಟ್ಟ ಒಂದೊಂದೇ ಅಭಿವೃದ್ಧಿ ಕಾರ್ಯಗಳನ್ನು ನಡೆಸಲಾಗುತ್ತಿದೆ ಎಂದರು.

ಕ್ಯೂ ನಿಲ್ಲುವ ಸಂಕಿರಣ, ದಾಸೋಹ ಭವನ ನಿರ್ಮಿಸಲು ಪ್ಲ್ಯಾನ್ ಮಾಡಲಾಗಿದೆ. ಅದನ್ನು ಆದಷ್ಟು ಬೇಗ ಕಾಮಗಾರಿ ನಡೆಸಲಾಗುವುದು ಎಂದು ಹೇಳಿದರು.

ಘಾಟಿ ಕ್ಷೇತ್ರದಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ಸಂಪೂರ್ಣವಾಗಿ ನಿಷೇಧ ಮಾಡಲಾಗಿದೆ. ದೇವಾಲಯದ ಸುತ್ತಾಮುತ್ತ ಪ್ಲಾಸ್ಟಿಕ್ ನಿಷೇಧ ಕುರಿತು ಸೂಚನಾ ಫಲಕಗಳನ್ನು ಅಳವಡಿಸಲಾಗಿದೆ. ಭಕ್ತಾಧಿಗಳು ಇದಕ್ಕೆ ಸಹಕರಿಸಬೇಕು ಎಂದು ಮನವಿ ಮಾಡಿದರು.

ನಂತರ ಪ್ರಾಧಿಕಾರದ ಸದಸ್ಯ ಆರ್.ವಿ‌ ಮಹೇಶ್ ಮಾತನಾಡಿ, ಪ್ರತಿ ವರ್ಷ ಕೋಟ್ಯಾಂತರ ಭಕ್ತಾಧಿಗಳು ದೇವರ ದರ್ಶನಕ್ಕೆ ಆಗಮಿಸುತ್ತಾರೆ. ಭಕ್ತಾಧಿಗಳ ಅನೂಕಲಕ್ಕೆ ತಕ್ಕಂತೆ ದಾಸೋಹ ಭವನ ನಿರ್ಮಾಣ ಮಾಡಲಾಗುತ್ತದೆ ಎಂದರು.

ಕ್ಷೇತ್ರದಲ್ಲಿ ವೈಜ಼್ಞಾನಿಕ ಕಸ ವಿಲೇವಾರಿ ಮಾಡಿ, ಸ್ವಚ್ಛತೆಗೆ ಆದ್ಯತೆ ನೀಡಲಾಗುವುದು. ಕ್ಷೇತ್ರಕ್ಕೆ ಸಂಬಂಧಿಸಿದ ಒತ್ತುವರಿಯಾಗಿರುವ ಜಮೀನನ್ನು ಬಿಡಿಸುಕೊಳ್ಳಲಾಗುವುದು. ದೇವಸ್ಥಾನಕ್ಕೆ ಬರುವ ಮಾರ್ಗದಲ್ಲಿ ಬೀದಿ ದೀಪ ಒದಗಿಸಲಾಗುವುದು ಎಂದು ತಿಳಿಸಿದರು.

ಪ್ರಥಮ ಚಿಕಿತ್ಸೆ‌ ಕೇಂದ್ರವನ್ನು ಆಧುನೀಕರಣಗೊಳಸಿ ಉನ್ನತೀಕರಣ ಮಾಡಲಾಗುವುದು. ಅತೀಶೀಘ್ರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ನೆರವೇರಿಸಲಾಗುವುದು ಎಂದು ಹೇಳಿದರು.

ತಿರುಪತಿ ಹಾಗೂ ಧರ್ಮಸ್ಥಳ ಮಾದರಿಯಲ್ಲಿ ಕ್ಯೂ ಕಾಂಪ್ಲೆಕ್ಸ್ ನಿರ್ಮಾಣ ಮಾಡಲಾಗುವುದು. ಕುಡಿಯುವ ನೀರು, ಶೌಚಾಲಯ, ಕ್ಯಾಂಟೀನ್, ಮಕ್ಕಳ ಆರೈಕೆ ಕೇಂದ್ರ ನಿರ್ಮಾಣ ಮಾಡಲಾಗುವುದು ಎಂದರು.

Ramesh Babu

Journalist

Recent Posts

9 ತಿಂಗಳಲ್ಲಿ ಬಮೂಲ್ ಒಕ್ಕೂಟಕ್ಕೆ 60 ಕೋಟಿ ಲಾಭ: ಸಂಪೂರ್ಣ ರೈತರ ಖಾತೆಗೆ ಲಾಭಾಂಶ ಹಣ

ಪಶು ಆಹಾರಗಳ ಬೆಲೆ ಏರಿಕೆ.. ಬೇಸಿಗೆಯಿಂದಾಗಿ ಹಾಲು ಉತ್ಪಾದನೆ ಕುಂಠಿತ.. ಹಸುಗಳಲ್ಲಿ ಹೆಚ್ಚಿದ ಕೆಚ್ಚಲುಬಾವು ರೋಗ.. ರಾಸುಗಳಿಗೆ ಮೇವು ಇಲ್ಲದೆ…

2 hours ago

ಶ್ರೀ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಚಿಂತನೆ: ₹184 ಕೋಟಿ ಮೊತ್ತದ ಕೇಂದ್ರ ಸರ್ಕಾರದ ಯೋಜನೆಗೆ ಶೀಘ್ರವೇ ಅನುಮೋದನೆ – ಸಂಸದ ಡಾ.ಕೆ‌ ಸುಧಾಕರ್

ಇಂದು ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿ ಮಾಡಿ, 'ಪ್ರಸಾದ್ 2.0' (PRASHAD…

2 hours ago

ಮಹಿಳೆಯರು ಸ್ವಾವಲಂಬಿಗಳಾಗಿ ಬದುಕಬೇಕು- ಪೊಲೀಸ್ ಸಬ್ ಇನ್ಸ್ಪೆಕ್ಟರ್ ವರಲಕ್ಷ್ಮಿ .ವಿ

ದೊಡ್ಡಬಳ್ಳಾಪುರ: ಮಹಿಳಾ ದಿನ ಕೇವಲ ಒಂದು ದಿನದ ಆಚರಣೆಯಲ್ಲ ಬದಲಾಗಿ ಮಹಿಳೆಯರ ಸಮಾನತೆಗಾಗಿ ನಡೆಯುತ್ತಿರುವ ನಿರಂತರ ಹೋರಾಟದ ಸಂಕೇತ ಎಂದು…

21 hours ago

ಕೇಂದ್ರ ಮೀಸಲು ಪೊಲೀಸ್ ಪಡೆ (CRPF) 87ನೇ ಸ್ಥಾಪನಾ ದಿನಾಚರಣೆ: ಉಚಿತ ಆರೋಗ್ಯ ಶಿಬರ ಮತ್ತು ರಕ್ತದಾನ ಶಿಬಿರ ಆಯೋಜನೆ

ಕೇಂದ್ರ ಮೀಸಲು ಪೊಲೀಸ್ ಪಡೆ (CRPF) 87ನೇ ಸ್ಥಾಪನಾ ದಿನಾಚರಣೆ ಹಿನ್ನೆಲೆ ಕರ್ನಾಟಕ ಮತ್ತು ಕೇರಳ ವಲಯದ CRPF ಬೆಂಗಳೂರು…

21 hours ago

ವಾಣಿಜ್ಯ ಸಿಲಿಂಡರ್‌ಗಳ ಪೂರೈಕೆಯಲ್ಲಿ ವ್ಯತ್ಯಯ: ದೊಡ್ಡಬಳ್ಳಾಪುರಕ್ಕೆ ಕಳೆದ ಒಂದು ವಾರದಿಂದ ಬಾರದ ವಾಣಿಜ್ಯ ಸಿಲಿಂಡರ್ ಗಳು: ನಗರದ ಹೋಟೆಲ್ ಗಳು, ಘಾಟಿ ಕ್ಷೇತ್ರಕ್ಕೂ ತಟ್ಟಿದ ಬಿಸಿ: ಸೌದೆ ಒಲೆ ಮೊರೆ ಹೋದ ಜನ

ಮದ್ಯಪ್ರಾಚ್ಯಗಳ ದೇಶಗಳಲ್ಲಿ ನಡೆಯುತ್ತಿರುವ ಯುದ್ದಗಳಿಂದಾಗಿ ಎಲ್.ಪಿ.ಜಿ ಕೊರತೆ ದೇಶಕ್ಕೆ ಎದುರಾಗಿದೆ. ಹೋಟೆಲ್ ಗಳಲ್ಲಿ ವಾಣಿಜ್ಯ ಸಿಲಿಂಡರ್ ಗಳ ಅಭಾವ ಸೃಷ್ಟಿಯಾಗಿ…

21 hours ago

ಮಧ್ಯಪ್ರಾಚ್ಯದಲ್ಲಿ ಯುದ್ಧ ಹಿನ್ನೆಲೆ: ರಾಜ್ಯದ ಹಲವೆಡೆ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ಅಭಾವ: ಗೃಹ ಬಳಕೆಯ ಗ್ಯಾಸ್ ಸಿಲಿಂಡರ್ ಸಮಸ್ಯೆ ಇಲ್ಲ- ಆಹಾರ ಸಚಿವ ಕೆ.ಎಚ್. ಮುನಿಯಪ್ಪ

ಮಧ್ಯಪ್ರಾಚ್ಯದಲ್ಲಿ ಯುದ್ಧದ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ಅಭಾವದ ಪರಿಸ್ಥಿತಿ ಸೃಷ್ಟಿಯಾಗಿರುವ ವರದಿಗಳ ನಡುವೆ ಗೃಹ ಬಳಕೆಯ…

1 day ago