ಪ್ರಾಚೀನ ಶೈಲಿಯ ಕಲ್ಲಿನಲ್ಲಿ ಶ್ರೀ ಘಾಟಿ ಸುಬ್ರಹ್ಮಣ್ಯ ದೇವಾಲಯದ ಒಳಾಂಗಣ ದುರಸ್ತಿ: ಗತ ವೈಭವ ಮರುಕಳಿಸುವಂತೆ ದೇವಾಲಯ‌ ಅಭಿವೃದ್ಧಿ

ದೊಡ್ಡಬಳ್ಳಾಪುರ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಘಾಟಿ ಸುಬ್ರಹ್ಮಣ್ಯ ದೇವಾಲಯದ ಒಳಾಂಗಣ ದುರಸ್ತಿ ಕಾರ್ಯ ಬರದಿಂದ ಸಾಗುತ್ತಿದೆ.

ಶ್ರೀ ಘಾಟಿ ಸುಬ್ರಹ್ಮಣ್ಯ ದೇವಾಲಯ ಅಭಿವೃದ್ಧಿ ಪ್ರಾಧಿಕಾರ ರಚನೆ ಆದ ನಂತರ ಮೊದಲ ಬಾರಿಗೆ ದೇವಾಲಯದ ಒಳಾಂಗಣ ಭಾಗದಲ್ಲಿ ದುರಸ್ತಿ ಕಾರ್ಯ ಕೈಗೊಳ್ಳಲಾಗಿದೆ. ದೇವಾಲಯ ಹಾಗೂ ಭಕ್ತಾಧಿಗಳ ಸಹಕಾರದಿಂದ ದುರಸ್ತಿ ಕಾರ್ಯ ನಡೆಯುತ್ತಿದೆ.‌ ಮುಂಬರುವ ಸುಬ್ರಹ್ಮಣ್ಯ ಬ್ರಹ್ಮರಥೋತ್ಸವ ವೇಳೆಗೆ ದುರಸ್ತಿ ಕಾರ್ಯ ಪೂರ್ಣಗೊಳ್ಳಲಿದೆ ಎಂದು ಶ್ರೀ ಘಾಟಿ ಸುಬ್ರಹ್ಮಣ್ಯ ದೇವಾಲಯ ಅಭಿವೃದ್ಧಿ ಪ್ರಾಧಿಕಾರ ಸದಸ್ಯ ರಂಗಪ್ಪ  ತಿಳಿಸಿದರು.

ಶ್ರೀ ಘಾಟಿ ಸುಬ್ರಹ್ಮಣ್ಯ ದೇವಾಲಯವು ಮುಜರಾಯಿ ಇಲಾಖೆಗೆ ಒಳಪಡುತ್ತದೆ. ಭಕ್ತಾಧಿಗಳ ಅನುಕೂಲಕ್ಕೆ ತಕ್ಕಂತೆ ದೇವಾಲಯವನ್ನು ಕಾಲಕ್ಕೆ ತಕ್ಕಂತೆ ಅಭಿವೃದ್ಧಿಪಡಿಸಲಾಗುವುದು.

ಘಾಟಿ ದೇವಾಲಯವನ್ನು ಕುಕ್ಕೆ ಸುಬ್ರಹ್ಮಣ್ಯ ದೇವಾಲಯ ಮಾದರಿ ಅಭಿವೃದ್ಧಿಪಡಿಸಬೇಕೆಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಹಾಗೂ ಆಹಾರ ಸಚಿವ ಕೆ.ಎಚ್ ಮುನಿಯಪ್ಪನವರ ಆಸೆ. ಅದರಂತೆ ದೇವಾಲಯಕ್ಕೆ ಸಂಬಂಧಪಟ್ಟ ಒಂದೊಂದೇ ಅಭಿವೃದ್ಧಿ ಕಾರ್ಯಗಳನ್ನು ನಡೆಸಲಾಗುತ್ತಿದೆ ಎಂದರು.

ಕ್ಯೂ ನಿಲ್ಲುವ ಸಂಕಿರಣ, ದಾಸೋಹ ಭವನ ನಿರ್ಮಿಸಲು ಪ್ಲ್ಯಾನ್ ಮಾಡಲಾಗಿದೆ. ಅದನ್ನು ಆದಷ್ಟು ಬೇಗ ಕಾಮಗಾರಿ ನಡೆಸಲಾಗುವುದು ಎಂದು ಹೇಳಿದರು.

ಘಾಟಿ ಕ್ಷೇತ್ರದಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ಸಂಪೂರ್ಣವಾಗಿ ನಿಷೇಧ ಮಾಡಲಾಗಿದೆ. ದೇವಾಲಯದ ಸುತ್ತಾಮುತ್ತ ಪ್ಲಾಸ್ಟಿಕ್ ನಿಷೇಧ ಕುರಿತು ಸೂಚನಾ ಫಲಕಗಳನ್ನು ಅಳವಡಿಸಲಾಗಿದೆ. ಭಕ್ತಾಧಿಗಳು ಇದಕ್ಕೆ ಸಹಕರಿಸಬೇಕು ಎಂದು ಮನವಿ ಮಾಡಿದರು.

ನಂತರ ಪ್ರಾಧಿಕಾರದ ಸದಸ್ಯ ಆರ್.ವಿ‌ ಮಹೇಶ್ ಮಾತನಾಡಿ, ಪ್ರತಿ ವರ್ಷ ಕೋಟ್ಯಾಂತರ ಭಕ್ತಾಧಿಗಳು ದೇವರ ದರ್ಶನಕ್ಕೆ ಆಗಮಿಸುತ್ತಾರೆ. ಭಕ್ತಾಧಿಗಳ ಅನೂಕಲಕ್ಕೆ ತಕ್ಕಂತೆ ದಾಸೋಹ ಭವನ ನಿರ್ಮಾಣ ಮಾಡಲಾಗುತ್ತದೆ ಎಂದರು.

ಕ್ಷೇತ್ರದಲ್ಲಿ ವೈಜ಼್ಞಾನಿಕ ಕಸ ವಿಲೇವಾರಿ ಮಾಡಿ, ಸ್ವಚ್ಛತೆಗೆ ಆದ್ಯತೆ ನೀಡಲಾಗುವುದು. ಕ್ಷೇತ್ರಕ್ಕೆ ಸಂಬಂಧಿಸಿದ ಒತ್ತುವರಿಯಾಗಿರುವ ಜಮೀನನ್ನು ಬಿಡಿಸುಕೊಳ್ಳಲಾಗುವುದು. ದೇವಸ್ಥಾನಕ್ಕೆ ಬರುವ ಮಾರ್ಗದಲ್ಲಿ ಬೀದಿ ದೀಪ ಒದಗಿಸಲಾಗುವುದು ಎಂದು ತಿಳಿಸಿದರು.

ಪ್ರಥಮ ಚಿಕಿತ್ಸೆ‌ ಕೇಂದ್ರವನ್ನು ಆಧುನೀಕರಣಗೊಳಸಿ ಉನ್ನತೀಕರಣ ಮಾಡಲಾಗುವುದು. ಅತೀಶೀಘ್ರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ನೆರವೇರಿಸಲಾಗುವುದು ಎಂದು ಹೇಳಿದರು.

ತಿರುಪತಿ ಹಾಗೂ ಧರ್ಮಸ್ಥಳ ಮಾದರಿಯಲ್ಲಿ ಕ್ಯೂ ಕಾಂಪ್ಲೆಕ್ಸ್ ನಿರ್ಮಾಣ ಮಾಡಲಾಗುವುದು. ಕುಡಿಯುವ ನೀರು, ಶೌಚಾಲಯ, ಕ್ಯಾಂಟೀನ್, ಮಕ್ಕಳ ಆರೈಕೆ ಕೇಂದ್ರ ನಿರ್ಮಾಣ ಮಾಡಲಾಗುವುದು ಎಂದರು.

Ramesh Babu

Journalist

Recent Posts

ಕುಖ್ಯಾತ ಅಂತರರಾಜ್ಯ ಕೇಬಲ್ ಕಳ್ಳರ ಬಂಧನ: ₹15 ಲಕ್ಷ ಮೌಲ್ಯದ ಕೇಬಲ್ ವಶ

ದೊಡ್ಡಬಳ್ಳಾಪುರ: ಅಲ್ಯೂಮಿನಿಯಂ ವಿದ್ಯುತ್ ಕೇಬಲ್ ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು, ಅಂತರರಾಜ್ಯ ಕೇಬಲ್ ಕಳ್ಳರ ಜಾಲವನ್ನು…

9 hours ago

RSS ನೋಂದಣಿಗೆ ಆಗ್ರಹಿಸಿ ಪ್ರತಿಭಟನೆ; ರಾಷ್ಟ್ರಪತಿಗಳಿಗೆ ಮನವಿ

ದೊಡ್ಡಬಳ್ಳಾಪುರ : ಹೊರದೇಶಗಳಲ್ಲಿ ಅಲ್ಲಿನ ನೆಲದ ಕಾನೂನಿಗೆ ಬದ್ಧವಾಗಿ ನೋಂದಣಿ ಮಾಡಿಸಿಕೊಂಡಿರುವ ಸಂಘ ಪರಿವಾರ, ಇಲ್ಲಿನ ನೆಲದ ಕಾನೂನಿಗೆ ವ್ಯತಿರಿಕ್ತವಾಗಿ…

9 hours ago

ಕೊನೆಯ ಕ್ಷಣದಲ್ಲಿ ಅನುಮತಿ ನಿರಾಕರಣೆ: ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ರದ್ದು: ಮುಂದಿನ ದಿನಗಳಲ್ಲಿ ಕಾರ್ಯಕ್ರಮ ಆಯೋಜನೆ-ವಕೀಲ ಪ್ರತಾಪ್

ದೊಡ್ಡಬಳ್ಳಾಪುರ: ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮಂಗಳವಾರ ನಡೆಯಬೇಕಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಕೊನೆಯ ಕ್ಷಣದಲ್ಲಿ ಕಾಲೇಜು ವತಿಯಿಂದ…

14 hours ago

ಮುಂಗಾರು ಮಳೆ ಕೊರತೆ, ಭೂಗರ್ಭದ ನೀರಿಗೆ ಭಾರೀ ಹೊಡೆತ: ಜಲಬಿಕ್ಕಟ್ಟಿನ ಮುನ್ಸೂಚನೆ

ಮುಂಗಾರು ಆರಂಭವಾಗಿದ್ದರೂ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಆತಂಕಕಾರಿ ರೀತಿಯಲ್ಲಿ ಕುಸಿಯುತ್ತಿದೆ. ಸಾಮಾನ್ಯವಾಗಿ…

20 hours ago

ರಕ್ತ ಸಿಕ್ತ ದೆಹಲಿ… ಇದು ಒಳ್ಳೆಯ ಬೆಳವಣಿಗೆಯಲ್ಲ….

ರಕ್ತ ಸಿಕ್ತ ದೆಹಲಿ...... ಇದು ಒಳ್ಳೆಯ ಬೆಳವಣಿಗೆಯಲ್ಲ.... ದೆಹಲಿ ವಿದ್ಯಾರ್ಥಿಗಳ ಪ್ರತಿಭಟನೆ ಲಾಟಿಚಾರ್ಜ್ ಹಂತಕ್ಕೆ ತಲುಪುವ ಮೊದಲೇ ಸರ್ಕಾರ ಒಂದಷ್ಟು…

21 hours ago

ಲಕ್ಕೇನಹಳ್ಳಿ ಬಳಿ ಎತ್ತಿನಹೊಳೆ ಡ್ಯಾಂ ನಿರ್ಮಾಣಕ್ಕೆ ವಿರೋಧ: ಜಲಸಂಪನ್ಮೂಲ ಸಚಿವರಿಗೆ ರೈತರ ಮನವಿ

ದೊಡ್ಡಬಳ್ಳಾಪುರ: ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯ ಅಂಗವಾಗಿ ದೊಡ್ಡಬಳ್ಳಾಪುರ ತಾಲ್ಲೂಕಿನ ಲಕ್ಕೇನಹಳ್ಳಿ ಬಳಿ ಡ್ಯಾಂ ನಿರ್ಮಿಸಲು ಉದ್ದೇಶಿಸಿರುವ ಕ್ರಮಕ್ಕೆ…

1 day ago