ಪ್ರಾಣವನ್ನೆ ತೆಗೆದ ಕುಡಿತದ ಚಟ: ಕುಡಿದ ನಶೆಯಲ್ಲಿ ಅಣ್ಣ-ತಮ್ಮನ ನಡುವೆ ಜಗಳ: ಜಗಳ ತಮ್ಮನ ಕೊಲೆಯಲ್ಲಿ ಅಂತ್ಯ

ಕಂಠ ಪೂರ್ತಿ ಕುಡಿದು, ಕುಡಿದ ಅಮಲಿನಲ್ಲಿ ಅಣ್ಣ-ತಮ್ಮನ ನಡುವೆ ಜಗಳವಾಗಿ ತಮ್ಮನ ಕೊಲೆಯಲ್ಲಿ ಅಂತ್ಯವಾಗಿದೆ.

ಆನೇಕಲ್ ಪೊಲೀಸ್ ಉಪವಿಭಾಗದ ಸರ್ಜಾಪುರ ಠಾಣಾ ವ್ಯಾಪ್ತಿಯ ಪಂಡಿತನ ಅಗ್ರಹಾರದಲ್ಲಿ ಈ ಘಟನೆ ನಡೆದಿದೆ. ತಮಿಳುನಾಡು ಮೂಲದ ಆನಂದ್ (27) ಕೊಲೆಯಾದ ವ್ಯಕ್ತಿ. ಅಣ್ಣ ಮಣಿಕಂಠ (32) ಕೊಲೆ ಆರೋಪಿ.

ತಮಿಳುನಾಡು ಮೂಲದ ಈ ಅಣ್ಣ-ತಮ್ಮಂದಿರು ಪಂಡಿತನ ಅಗ್ರಹಾರದಲ್ಲಿ ಗಾರೆ ಕೆಲಸಕ್ಕಾಗಿ ಬಂದಿದ್ದರು. ನಿರ್ಮಾಣ ಹಂತದ ಕಟ್ಟಡದಲ್ಲಿ ಆನಂದ್ ತಂದೆ-ತಾಯಿ ಜತೆಗೆ ವಾಸವಿದ್ದರೆ, ಇತ್ತ ಮಣಿಕಂಠ ಮಂಡ್ಯದಲ್ಲಿ ಗಾರೆ ಕೆಲಸ ಮಾಡಿಕೊಂಡಿದ್ದ.

ನಿನ್ನೆ ತಂದೆ-ತಾಯಿಯನ್ನು ನೋಡಿಕೊಂಡು ಹೋಗಲು ಮಣಿಕಂಠ ಬಂದಿದ್ದ. ಆನಂದ ಕುಡಿದು ಬಂದು ನಿತ್ಯ ಗಲಾಟೆ ಮಾಡುತ್ತಿದ್ದ. ಸುಖಾ ಸುಮ್ಮನೆ ತಂದೆ, ತಾಯಿ, ಅಣ್ಣನ ಜತೆಗೆ ಕಿರಿಕ್ ತೆಗೆಯುತ್ತಿದ್ದ. ಕಳೆದ ರಾತ್ರಿ ಹನ್ನೊಂದು ಗಂಟೆ ಸುಮಾರಿಗೆ ಕುಡಿದು ಬಂದು ಆನಂದ ಗಲಾಟೆ ಮಾಡಿದ್ದ. ಗಲಾಟೆ ವಿಕೋಪಕ್ಕೆ ತಿರುಗಿ ದೊಣ್ಣೆಯಿಂದ ಮಣಿಕಂಠ ಆನಂದ್‌ಗೆ ಹೊಡೆದಿದ್ದಾನೆ. ತೀವ್ರ ರಕ್ತಸ್ರಾವವಾಗಿ ಆನಂದ್‌ ಸ್ಥಳದಲ್ಲೆ ಮೃತಪಟ್ಟಿದ್ದಾನೆ ಎಂದು ಮೂಲಗಳಿಂದ ತಿಳಿದುಬಂದಿದೆ.

ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಸರ್ಜಾಪುರ ಪೊಲೀಸರು ಪರಿಶೀಲನೆ ನಡೆಸಿ, ಆರೋಪಿ ಮಣಿಕಂಠನನ್ನು ಸರ್ಜಾಪುರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸರ್ಜಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ramesh Babu

Journalist

Recent Posts

ಏ.12ರಂದು ದೊಡ್ಡಬಳ್ಳಾಪುರ ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ನಗರದಲ್ಲಿ ಏ.12 ರಂದು 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F02-Birla Super ಫೀಡರ್‌ನಲ್ಲಿ ವಿದ್ಯುತ್ ಕಾಮಗಾರಿಗಳು…

5 hours ago

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರ ಸಾವು

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರವಾಗಿ ಸಾವನ್ನಪ್ಪಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯ ಮನೋರಾಯನಪಾಳ್ಯದಲ್ಲಿ ನಡೆದಿದೆ.. 17 ವರ್ಷದ…

10 hours ago

ಲೋಕಾಯುಕ್ತ ಬಲೆಗೆ ಬಿದ್ದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ

ರಾಯಚೂರು ಸಿರವಾರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸುರೇಶ್ ಶೆಟ್ಟಿ ಲೋಕಾಯುಕ್ತರ ಬಲೆಗೆ ಬಿದ್ದ ಮುಖ್ಯಾಧಿಕಾರಿ. ರಾಘವೇಂದ್ರ…

10 hours ago

ಹುಚ್ಚನೊಬ್ಬನ ಕನಸು….

ದೇಶದ ಎಲ್ಲಾ ದಲಿತ ಕೇರಿಗಳನ್ನು ನಾಶ ಮಾಡಬೇಕು. ಅಲ್ಲಿನ ಎಲ್ಲರಿಗೂ ಊರ ಒಳಗಿನ ಸ್ಥಳದಲ್ಲಿ ವಾಸಕ್ಕೆ ಅವಕಾಶ ಕಲ್ಪಿಸಬೇಕು. ಬ್ರಾಹ್ಮಣರ…

15 hours ago

PUC Result: ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ….ಈ ಕಥೆ ಕೇಳಿದರೆ ಎಂಥವರ ಕಣ್ಣಲ್ಲೂ ನೀರು ಬರುವುದು ಗ್ಯಾರಂಟಿ

600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…

1 day ago

ತೂಬಗೆರೆ ಸರ್ಕಾರಿ ಪಿಯು ಕಾಲೇಜಿಗೆ ಮತ್ತೊಮ್ಮೆ ಮೆರುಗು: ಶೇ.95.45 ಫಲಿತಾಂಶ

ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…

1 day ago