ಕಂಠ ಪೂರ್ತಿ ಕುಡಿದು, ಕುಡಿದ ಅಮಲಿನಲ್ಲಿ ಅಣ್ಣ-ತಮ್ಮನ ನಡುವೆ ಜಗಳವಾಗಿ ತಮ್ಮನ ಕೊಲೆಯಲ್ಲಿ ಅಂತ್ಯವಾಗಿದೆ.
ಆನೇಕಲ್ ಪೊಲೀಸ್ ಉಪವಿಭಾಗದ ಸರ್ಜಾಪುರ ಠಾಣಾ ವ್ಯಾಪ್ತಿಯ ಪಂಡಿತನ ಅಗ್ರಹಾರದಲ್ಲಿ ಈ ಘಟನೆ ನಡೆದಿದೆ. ತಮಿಳುನಾಡು ಮೂಲದ ಆನಂದ್ (27) ಕೊಲೆಯಾದ ವ್ಯಕ್ತಿ. ಅಣ್ಣ ಮಣಿಕಂಠ (32) ಕೊಲೆ ಆರೋಪಿ.
ತಮಿಳುನಾಡು ಮೂಲದ ಈ ಅಣ್ಣ-ತಮ್ಮಂದಿರು ಪಂಡಿತನ ಅಗ್ರಹಾರದಲ್ಲಿ ಗಾರೆ ಕೆಲಸಕ್ಕಾಗಿ ಬಂದಿದ್ದರು. ನಿರ್ಮಾಣ ಹಂತದ ಕಟ್ಟಡದಲ್ಲಿ ಆನಂದ್ ತಂದೆ-ತಾಯಿ ಜತೆಗೆ ವಾಸವಿದ್ದರೆ, ಇತ್ತ ಮಣಿಕಂಠ ಮಂಡ್ಯದಲ್ಲಿ ಗಾರೆ ಕೆಲಸ ಮಾಡಿಕೊಂಡಿದ್ದ.
ನಿನ್ನೆ ತಂದೆ-ತಾಯಿಯನ್ನು ನೋಡಿಕೊಂಡು ಹೋಗಲು ಮಣಿಕಂಠ ಬಂದಿದ್ದ. ಆನಂದ ಕುಡಿದು ಬಂದು ನಿತ್ಯ ಗಲಾಟೆ ಮಾಡುತ್ತಿದ್ದ. ಸುಖಾ ಸುಮ್ಮನೆ ತಂದೆ, ತಾಯಿ, ಅಣ್ಣನ ಜತೆಗೆ ಕಿರಿಕ್ ತೆಗೆಯುತ್ತಿದ್ದ. ಕಳೆದ ರಾತ್ರಿ ಹನ್ನೊಂದು ಗಂಟೆ ಸುಮಾರಿಗೆ ಕುಡಿದು ಬಂದು ಆನಂದ ಗಲಾಟೆ ಮಾಡಿದ್ದ. ಗಲಾಟೆ ವಿಕೋಪಕ್ಕೆ ತಿರುಗಿ ದೊಣ್ಣೆಯಿಂದ ಮಣಿಕಂಠ ಆನಂದ್ಗೆ ಹೊಡೆದಿದ್ದಾನೆ. ತೀವ್ರ ರಕ್ತಸ್ರಾವವಾಗಿ ಆನಂದ್ ಸ್ಥಳದಲ್ಲೆ ಮೃತಪಟ್ಟಿದ್ದಾನೆ ಎಂದು ಮೂಲಗಳಿಂದ ತಿಳಿದುಬಂದಿದೆ.
ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಸರ್ಜಾಪುರ ಪೊಲೀಸರು ಪರಿಶೀಲನೆ ನಡೆಸಿ, ಆರೋಪಿ ಮಣಿಕಂಠನನ್ನು ಸರ್ಜಾಪುರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸರ್ಜಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನನ್ನ ಸಾವಿನೊಂದಿಗೆ ಈ ಜಗತ್ತೂ ಇಲ್ಲವಾಗುತ್ತದೆ.......... ದಿಢೀರ್ ಸಾವುಗಳ ಸುತ್ತಾ..... ಇತ್ತೀಚಿನ ಕೆಲವು ಮಾಧ್ಯಮ ವರದಿಗಳನ್ನು ನೋಡುತ್ತಿದ್ದರೆ ಅನೇಕ ಯುವಕ…
ಬಾಣಸವಾಡಿ ರೈಲ್ವೆ ನಿಲ್ದಾಣದ ಸಮೀಪ ಒಳಚರಂಡಿ ಕಾಮಗಾರಿ ಕೈಗೊಳ್ಳಲು ಸಹಕರಿಸಿ, ರಾಜ್ಯ ಸರ್ಕಾರದ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸುವಂತೆ ಕೇಂದ್ರ ಸರ್ಕಾರದ…
ದೇವನಹಳ್ಳಿ: ತೈಲ ಬೆಲೆ ಏರಿಕೆ ವಿಚಾರವಾಗಿ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ವಿರುದ್ಧ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ…
ದೊಡ್ಡಬಳ್ಳಾಪುರ: ಆಂಧ್ರ ಪ್ರದೇಶದಿಂದ ಒಣ ಗಾಂಜಾವನ್ನು ತಂದು ಸ್ಥಳೀಯವಾಗಿ ಮಾರಾಟ ಮಾಡಲು ಯತ್ನಿಸಿದ್ದ ವ್ಯಕ್ತಿಯನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಬಂಧಿಸಿ,…
ಬೆಂಗಳೂರು ಗ್ರಾಮಾಂತರ: ರಾಜ್ಯ ರಾಜಕೀಯದಲ್ಲಿ ಸದ್ದು ಮಾಡುತ್ತಿರುವ ಸಿಎಂ ಕುರ್ಚಿ ಕಾದಾಟಕ್ಕೆ ಕಾಂಗ್ರೆಸ್ ಹೈಕಮಾಂಡ್ ಅಂತಿಮ ಸ್ಪರ್ಶ ನೀಡುವ ಲಕ್ಷಣಗಳು…
ದೊಡ್ಡಬಳ್ಳಾಪುರ: ಪ್ರತಿಭಾ ಪುರಸ್ಕಾರಗಳು ವಿದ್ಯಾರ್ಥಿಗಳ ಜವಾಬ್ದಾರಿಯನ್ನು ಮತ್ತಷ್ಟು ಹೆಚ್ಚಿಸುವುದರ ಜೊತೆಗೆ ಇತರೆ ವಿದ್ಯಾರ್ಥಿಗಳಿಗೆ ಪ್ರೇರಣೆಯಾಗುತ್ತವೆ ಎಂದು ಶಾಸಕ ಧೀರಜ್ ಮುನಿರಾಜು…