ಕಂಠ ಪೂರ್ತಿ ಕುಡಿದು, ಕುಡಿದ ಅಮಲಿನಲ್ಲಿ ಅಣ್ಣ-ತಮ್ಮನ ನಡುವೆ ಜಗಳವಾಗಿ ತಮ್ಮನ ಕೊಲೆಯಲ್ಲಿ ಅಂತ್ಯವಾಗಿದೆ.
ಆನೇಕಲ್ ಪೊಲೀಸ್ ಉಪವಿಭಾಗದ ಸರ್ಜಾಪುರ ಠಾಣಾ ವ್ಯಾಪ್ತಿಯ ಪಂಡಿತನ ಅಗ್ರಹಾರದಲ್ಲಿ ಈ ಘಟನೆ ನಡೆದಿದೆ. ತಮಿಳುನಾಡು ಮೂಲದ ಆನಂದ್ (27) ಕೊಲೆಯಾದ ವ್ಯಕ್ತಿ. ಅಣ್ಣ ಮಣಿಕಂಠ (32) ಕೊಲೆ ಆರೋಪಿ.
ತಮಿಳುನಾಡು ಮೂಲದ ಈ ಅಣ್ಣ-ತಮ್ಮಂದಿರು ಪಂಡಿತನ ಅಗ್ರಹಾರದಲ್ಲಿ ಗಾರೆ ಕೆಲಸಕ್ಕಾಗಿ ಬಂದಿದ್ದರು. ನಿರ್ಮಾಣ ಹಂತದ ಕಟ್ಟಡದಲ್ಲಿ ಆನಂದ್ ತಂದೆ-ತಾಯಿ ಜತೆಗೆ ವಾಸವಿದ್ದರೆ, ಇತ್ತ ಮಣಿಕಂಠ ಮಂಡ್ಯದಲ್ಲಿ ಗಾರೆ ಕೆಲಸ ಮಾಡಿಕೊಂಡಿದ್ದ.
ನಿನ್ನೆ ತಂದೆ-ತಾಯಿಯನ್ನು ನೋಡಿಕೊಂಡು ಹೋಗಲು ಮಣಿಕಂಠ ಬಂದಿದ್ದ. ಆನಂದ ಕುಡಿದು ಬಂದು ನಿತ್ಯ ಗಲಾಟೆ ಮಾಡುತ್ತಿದ್ದ. ಸುಖಾ ಸುಮ್ಮನೆ ತಂದೆ, ತಾಯಿ, ಅಣ್ಣನ ಜತೆಗೆ ಕಿರಿಕ್ ತೆಗೆಯುತ್ತಿದ್ದ. ಕಳೆದ ರಾತ್ರಿ ಹನ್ನೊಂದು ಗಂಟೆ ಸುಮಾರಿಗೆ ಕುಡಿದು ಬಂದು ಆನಂದ ಗಲಾಟೆ ಮಾಡಿದ್ದ. ಗಲಾಟೆ ವಿಕೋಪಕ್ಕೆ ತಿರುಗಿ ದೊಣ್ಣೆಯಿಂದ ಮಣಿಕಂಠ ಆನಂದ್ಗೆ ಹೊಡೆದಿದ್ದಾನೆ. ತೀವ್ರ ರಕ್ತಸ್ರಾವವಾಗಿ ಆನಂದ್ ಸ್ಥಳದಲ್ಲೆ ಮೃತಪಟ್ಟಿದ್ದಾನೆ ಎಂದು ಮೂಲಗಳಿಂದ ತಿಳಿದುಬಂದಿದೆ.
ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಸರ್ಜಾಪುರ ಪೊಲೀಸರು ಪರಿಶೀಲನೆ ನಡೆಸಿ, ಆರೋಪಿ ಮಣಿಕಂಠನನ್ನು ಸರ್ಜಾಪುರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸರ್ಜಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…
ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…
ದೊಡ್ಡಬಳ್ಳಾಪುರ: ಒಡ್ಡರಹಳ್ಳಿ ಹಾಗೂ ದೊಡ್ಡಬಳ್ಳಾಪುರ ರೈಲು ನಿಲ್ದಾಣಗಳ ನಡುವಿನ ಡಿ ಕ್ರಾಸ್ ರೈಲ್ವೆ ಬ್ರಿಡ್ಜ್ ಸಮೀಪ ಶುಕ್ರವಾರ (ಸೆ.11) ಮಧ್ಯಾಹ್ನ…
ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಗೆ ಸರ್ಕಾರವು ಮೂವರು ನಾಮನಿರ್ದೇಶಿತ ಸದಸ್ಯರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಕರ್ನಾಟಕ ಪೌರಸಭೆಗಳ…
ಗೌರಿ-ಗಣೇಶ ಹಬ್ಬದ ಪ್ರಯುಕ್ತ ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಶಾಂತಿ ಸುವ್ಯವಸ್ಥೆ ಕಾಪಾಡುವುದರ ಜೊತೆಗೆ, ಸಾರ್ವಜನಿಕರು ಪರಿಸರಸ್ನೇಹಿಯಾಗಿ ಹಬ್ಬವನ್ನು…
ಬೆಂಗಳೂರು ಗ್ರಾಮಾಂತರ: ಬರದ ಪರಿಣಾಮ ಕೃಷಿ ಹಾಗೂ ತೋಟಗಾರಿಕಾ ಬೆಳೆಗಳಿಗೆ ಮಾತ್ರ ಸೀಮಿತವಾಗಿಲ್ಲ. ಜೇನು ಕೃಷಿಯ ಮೇಲೂ ಬರದ ಛಾಯೆ…