ಪ್ರಾಣಿ ಸಂಪತ್ತು ಇಲ್ಲದೆ ಅರಣ್ಯ ಸಂಪತ್ತಿಗೆ ಮೌಲ್ಯವೇ ಇಲ್ಲ- ಸಿಎಂ ಸಿದ್ದರಾಮಯ್ಯ

ಪ್ರಾಣಿ ಸಂಪತ್ತು ಇಲ್ಲದೆ ಅರಣ್ಯ ಸಂಪತ್ತಿಗೆ ಮೌಲ್ಯವೇ ಇಲ್ಲ. ಹೀಗಾಗಿ ಪ್ರಾಣಿ ಸಂಪತ್ತನ್ನು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಸಾಕಿದ ಹಸುವನ್ನು ಹುಲಿ ತಿಂದಿದೆ ಎನ್ನುವ ಕಾರಣಕ್ಕೆ ಹುಲಿಗಳಿಗೆ ವಿಷ ಹಾಕುವುದನ್ನು ಸಹಿಸಲು ಸಾಧ್ಯವಿಲ್ಲ. ಯಾರೇ ಅರಣ್ಯ ಮತ್ತು ಪ್ರಾಣಿ ಸಂಪತ್ತನ್ನು ಕೊಲ್ಲಲು ಮುಂದಾದರೆ ಅಂಥವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು. ಅವರು ಎಷ್ಟೇ ದೊಡ್ಡವರಾಗಿದ್ದರೂ ಮುಲಾಜು ನೋಡದೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಮಾನವ-ವನ್ಯಜೀವಿ ಸಹಬಾಳ್ವೆಯ ಪರಿಸರ ಪೂರಕವಾದ ಆಶಯಕ್ಕಾಗಿ ವನ್ಯಜೀವಿ ಸಪ್ತಾಹವನ್ನು ಆಚರಿಸಲಾಗುತ್ತಿದೆ. ಅರಣ್ಯ ಪರಿಸರ ಆರೋಗ್ಯಕರವಾಗಿ ವಿಸ್ತರಣೆ ಆದಷ್ಟೂ ಮನುಷ್ಯ ಪರಿಸರ ಹೆಚ್ಚು ಆರೋಗ್ಯಕರವಾಗಿರುತ್ತದೆ. ಅರಣ್ಯದ ಉಳಿವು ಭೂಮಿಯ ಉಳಿವು ಎನ್ನುವುದನ್ನು ಮರೆಯಬಾರದು ಎಂದು ತಿಳಿಸಿದರು.

ಆನೆ ಮತ್ತು ಹುಲಿ ಸಂಪತ್ತಿನಲ್ಲಿ ನಮ್ಮ ರಾಜ್ಯ ಮೊದಲ ಮತ್ತು ಎರಡನೇ ಸ್ಥಾನದಲ್ಲಿದೆ. ಇದರ ಜೊತೆಗೆ ಪ್ರಾಣಿ ಮತ್ತು ಮನುಷ್ಯರ ಸಂಘರ್ಷ ತಪ್ಪಿ ಸಹಬಾಳ್ವೆ ಏರ್ಪಡಬೇಕು. ಇದಕ್ಕಾಗಿ ಪ್ರಾಣಿಗಳು ಕಾಡು ಬಿಟ್ಟು ಹೊರಗೆ ಏಕೆ ಬರುತ್ತಿವೆ ಎನ್ನುವ ಬಗ್ಗೆ ಅಧ್ಯಯನಗಳು ನಡೆದು ವೈಜ್ಞಾನಿಕ ಪರಿಹಾರಗಳನ್ನು ಕಂಡುಕೊಳ್ಳಬೇಕಿದೆ ಎಂದು ಹೇಳಿದರು.

ಹುಲಿ, ಆನೆಗಳ ಹತ್ಯೆ ಅತ್ಯಂತ ಗಂಭೀರ ಅಪರಾಧಗಳು. ಅರಣ್ಯಾಧಿಕಾರಿಗಳು ಹೆಚ್ಚು ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸಬೇಕು. ಹುಲಿ ಹತ್ಯೆ ಮಾಡಿದವರು ಮತ್ತು ಪ್ರಾಣಿ ಸಂಪತ್ತನ್ನು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ ಎಂದರು.

ದಿನೇ ದಿನೇ ಅರಣ್ಯ ಪ್ರದೇಶ ಕಡಿಮೆ ಆಗುತ್ತಿದ್ದರೆ ಮನುಷ್ಯ ಕುಲ ಉಳಿಯಲು ಸಾಧ್ಯವಿಲ್ಲ. ಆದ್ದರಿಂದ ಅರಣ್ಯದ ಉಳಿವು ಮನುಷ್ಯನ ಉಳಿವು ಎನ್ನುವುದನ್ನು ಪ್ರತಿಯೊಬ್ಬರೂ ಅರ್ಥ ಮಾಡಿಕೊಳ್ಳಬೇಕು ಎಂದು ತಿಳಿಸಿದರು.

Ramesh Babu

Journalist

Recent Posts

ನಾಳೆ(ಆ.14) ತೂಬಗೆರೆ ಸೊಸೈಟಿಗೆ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ

ದೊಡ್ಡಬಳ್ಳಾಪುರ: ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘದ (ಎಂ.ಪಿ.ಆರ್.ಎ.ಸಿ.ಎಸ್.) ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ…

10 hours ago

“ನನಗೆ ನೀರು ಬೇಕು, ಮಾತಾಡಲ್ಲ” — ಬಾಯಿಗೆ ಪ್ಲಾಸ್ಟರ್ ಹಾಕಿದ ವಾಟಾಳ್ ನಾಗರಾಜ್

ಬೆಂಗಳೂರು: ಕಾವೇರಿ ನದಿ ನೀರಿನ ವಿಚಾರವಾಗಿ ಕರ್ನಾಟಕ ಬಂದ್‌ಗೆ ಕರೆ ನೀಡಿದ್ದ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರನ್ನು ಪೊಲೀಸರು…

14 hours ago

ಶ್ರಾವಣದ ಹಬ್ಬಗಳಿಗೆ ಮುನ್ನವೇ ಹೂವಿನ ದರದ ಬಿಸಿ! ಇಳುವರಿ ಶೇ.30–40ರಷ್ಟು ಕುಸಿತ: ಹವಾಮಾನ ವೈಪರೀತ್ಯದ ಪರಿಣಾಮ: ಸಾಲುಸಾಲು ಹಬ್ಬಗಳಿಂದ ಬೇಡಿಕೆ ಹೆಚ್ಚಳ

  ಬೆಂಗಳೂರು: ಹಬ್ಬಗಳ ಸೀಸನ್‌ ಆರಂಭಕ್ಕೂ ಮುನ್ನವೇ ಹೂವಿನ ದರ ಏರಿಕೆಯ ಬಿಸಿ ಗ್ರಾಹಕರಿಗೆ ತಟ್ಟಲಾರಂಭಿಸಿದೆ. ರಾಜ್ಯದಲ್ಲಿ ಅನಿರೀಕ್ಷಿತ ಬರ,…

14 hours ago

ಕೂಗೇನಹಳ್ಳಿ ಗೇಟ್ ಬಳಿ ಟೊಮೆಟೊ ಲಾರಿ ಪಲ್ಟಿ; ಚಾಲಕ, ಕ್ಲೀನರ್‌ಗೆ ಗಾಯ

ದೊಡ್ಡಬಳ್ಳಾಪುರ: ಟೊಮೆಟೊ ತುಂಬಿಕೊಂಡು ಸಾಗುತ್ತಿದ್ದ ಲಾರಿಯೊಂದು ಪಲ್ಟಿಯಾದ ಘಟನೆ ದಾಬಸ್‌ಪೇಟೆ–ದೊಡ್ಡಬಳ್ಳಾಪುರ ರಾಷ್ಟ್ರೀಯ ಹೆದ್ದಾರಿಯ ಕೂಗೇನಹಳ್ಳಿ ಗೇಟ್ ಸಮೀಪ ಗುರುವಾರ ಬೆಳಗ್ಗೆ…

16 hours ago

ಸ್ವಾತಂತ್ರ್ಯ ಎಂಬ ಅರ್ಥದ ಮೂಲ ಭಾವ ಹುಡುಕುತ್ತಾ ಹೊರಟಾಗ……

ಸ್ವಾತಂತ್ರ್ಯ........ ಸ್ವಾತಂತ್ರ್ಯ ಎಂಬ ಅರ್ಥದ ಮೂಲ ಭಾವವನ್ನು ಹುಡುಕುತ್ತಾ ಹೊರಟಾಗ...... ಸ್ವಾತಂತ್ರ್ಯ ಎಂಬುದು... ಮಾನಸಿಕ ಸ್ಥಿತಿಯೇ, ದೈಹಿಕ ವ್ಯಾಪ್ತಿಯೇ, ಇವೆರಡರ…

2 days ago

ಕುವೆಂಪು ಥೀಮ್ ಪಾರ್ಕ್‌ ಲೋಕಾರ್ಪಣೆಗೊಳಿಸಿದ ಸಚಿವರಾದ ಕೆ.ಜೆ.ಜಾರ್ಜ್, ಕೃಷ್ಣಬೈರೇಗೌಡ

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕೆಪಿಟಿಸಿಎಲ್) ವು ತನ್ನ ಸಾಮಾಜಿಕ ಹೊಣೆಗಾರಿಕೆ ನಿಧಿಯಡಿ ನಿರ್ಮಿಸಿರುವ 'ಕುವೆಂಪು ಥೀಮ್ ಪಾರ್ಕ್'ಅನ್ನು…

2 days ago