ಪ್ರಾಣಿ ಸಂಪತ್ತು ಇಲ್ಲದೆ ಅರಣ್ಯ ಸಂಪತ್ತಿಗೆ ಮೌಲ್ಯವೇ ಇಲ್ಲ. ಹೀಗಾಗಿ ಪ್ರಾಣಿ ಸಂಪತ್ತನ್ನು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಸಾಕಿದ ಹಸುವನ್ನು ಹುಲಿ ತಿಂದಿದೆ ಎನ್ನುವ ಕಾರಣಕ್ಕೆ ಹುಲಿಗಳಿಗೆ ವಿಷ ಹಾಕುವುದನ್ನು ಸಹಿಸಲು ಸಾಧ್ಯವಿಲ್ಲ. ಯಾರೇ ಅರಣ್ಯ ಮತ್ತು ಪ್ರಾಣಿ ಸಂಪತ್ತನ್ನು ಕೊಲ್ಲಲು ಮುಂದಾದರೆ ಅಂಥವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು. ಅವರು ಎಷ್ಟೇ ದೊಡ್ಡವರಾಗಿದ್ದರೂ ಮುಲಾಜು ನೋಡದೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಮಾನವ-ವನ್ಯಜೀವಿ ಸಹಬಾಳ್ವೆಯ ಪರಿಸರ ಪೂರಕವಾದ ಆಶಯಕ್ಕಾಗಿ ವನ್ಯಜೀವಿ ಸಪ್ತಾಹವನ್ನು ಆಚರಿಸಲಾಗುತ್ತಿದೆ. ಅರಣ್ಯ ಪರಿಸರ ಆರೋಗ್ಯಕರವಾಗಿ ವಿಸ್ತರಣೆ ಆದಷ್ಟೂ ಮನುಷ್ಯ ಪರಿಸರ ಹೆಚ್ಚು ಆರೋಗ್ಯಕರವಾಗಿರುತ್ತದೆ. ಅರಣ್ಯದ ಉಳಿವು ಭೂಮಿಯ ಉಳಿವು ಎನ್ನುವುದನ್ನು ಮರೆಯಬಾರದು ಎಂದು ತಿಳಿಸಿದರು.
ಆನೆ ಮತ್ತು ಹುಲಿ ಸಂಪತ್ತಿನಲ್ಲಿ ನಮ್ಮ ರಾಜ್ಯ ಮೊದಲ ಮತ್ತು ಎರಡನೇ ಸ್ಥಾನದಲ್ಲಿದೆ. ಇದರ ಜೊತೆಗೆ ಪ್ರಾಣಿ ಮತ್ತು ಮನುಷ್ಯರ ಸಂಘರ್ಷ ತಪ್ಪಿ ಸಹಬಾಳ್ವೆ ಏರ್ಪಡಬೇಕು. ಇದಕ್ಕಾಗಿ ಪ್ರಾಣಿಗಳು ಕಾಡು ಬಿಟ್ಟು ಹೊರಗೆ ಏಕೆ ಬರುತ್ತಿವೆ ಎನ್ನುವ ಬಗ್ಗೆ ಅಧ್ಯಯನಗಳು ನಡೆದು ವೈಜ್ಞಾನಿಕ ಪರಿಹಾರಗಳನ್ನು ಕಂಡುಕೊಳ್ಳಬೇಕಿದೆ ಎಂದು ಹೇಳಿದರು.
ಹುಲಿ, ಆನೆಗಳ ಹತ್ಯೆ ಅತ್ಯಂತ ಗಂಭೀರ ಅಪರಾಧಗಳು. ಅರಣ್ಯಾಧಿಕಾರಿಗಳು ಹೆಚ್ಚು ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸಬೇಕು. ಹುಲಿ ಹತ್ಯೆ ಮಾಡಿದವರು ಮತ್ತು ಪ್ರಾಣಿ ಸಂಪತ್ತನ್ನು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ ಎಂದರು.
ದಿನೇ ದಿನೇ ಅರಣ್ಯ ಪ್ರದೇಶ ಕಡಿಮೆ ಆಗುತ್ತಿದ್ದರೆ ಮನುಷ್ಯ ಕುಲ ಉಳಿಯಲು ಸಾಧ್ಯವಿಲ್ಲ. ಆದ್ದರಿಂದ ಅರಣ್ಯದ ಉಳಿವು ಮನುಷ್ಯನ ಉಳಿವು ಎನ್ನುವುದನ್ನು ಪ್ರತಿಯೊಬ್ಬರೂ ಅರ್ಥ ಮಾಡಿಕೊಳ್ಳಬೇಕು ಎಂದು ತಿಳಿಸಿದರು.
ಮಾವು ಮತ್ತು ಹಲಸು ಹಣ್ಣಿನ ಋತುಮಾನದ ಈ ಸಂದರ್ಭದಲ್ಲಿ ತೋಟಗಾರಿಕೆ ಇಲಾಖೆ ವತಿಯಿಂದ ರೈತರಿಗೆ ಹಾಗೂ ಗ್ರಾಹಕರಿಗೆ ಅನುಕೂಲವಾಗಲೆಂದು ಒಂದೇ…
ದೊಡ್ಡಬಳ್ಳಾಪುರ ನಗರದ ಡಿ ಕ್ರಾಸ್ ಬಳಿ ನಿಲ್ಲಿಸಿದ್ದ ಟಿವಿಎಸ್ ಎಕ್ಸ್ಎಲ್-100 ವಾಹನವನ್ನು ಕಳ್ಳನೊಬ್ಬ ಕಳವು ಮಾಡಿಕೊಂಡು ಹೋಗಿರುವ ಘಟನೆ ಬುಧವಾರ…
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(KPCC)ಯ ನೂತನ ಅಧ್ಯಕ್ಷರಾಗಿ ಬಿ.ಕೆ ಹರಿಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ. ಡಿಕೆ ಶಿವಕುಮಾರ್ ಅವರು ಬುಧವಾರ…
ಡಿ.ಕೆ ಶಿವಕುಮಾರ್ ಅವರು ಬುಧವಾರ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.…
ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಜೂನ್ 20 ರಿಂದ ಎಸ್ಐಆರ್ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಲಿದೆ. ತಾಲ್ಲೂಕಿನಲ್ಲಿ 2,23,457 ಮಂದಿ ಮತದಾರರಿದ್ದಾರೆ. ಈ ಪೈಕಿ…
ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಡಿ.ಕೆ. ಶಿವಕುಮಾರ್ ಅವರು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಭಾವನಾತ್ಮಕ ಸಂದೇಶ ಹಂಚಿಕೊಂಡಿದ್ದಾರೆ.…