ಶಿಕ್ಷಣ ಇಲಾಖೆ ಪ್ರಾಥಮಿಕ ಶಿಕ್ಷಣವನ್ನು ಸಾರ್ವತ್ರೀಕರಣ ಗೊಳಿಸುವಲ್ಲಿ ಹಲವು ಯೋಜನೆ ಜಾರಿಗೆ ತರುತ್ತಿದೆ. ಇಂತಹ ಯೋಜನೆಗಳನ್ನು ವಿದ್ಯಾರ್ಥಿಗಳಿಗೆ ತಲುಪಿಸುವ ನಿಟ್ಟಿನಲ್ಲಿ ಶಿಕ್ಷಕರು ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದು ಶಾಸಕ ಧೀರಜ್ ಮುನಿರಾಜು ಅಭಿಪ್ರಾಯಪಟ್ಟರು.
ತಾಲ್ಲೂಕಿನ ಆರೂಡಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ಶಾಲಾ ಮಕ್ಕಳಿಗೆ ಪ್ರಣವ್ ಫೌಂಡೇಶನ್ ಸಂಸ್ಥೆಯಿಂದ ಹಮ್ಮಿಕೊಂಡಿದ್ದ ಉಚಿತ ಪಠ್ಯ ಪುಸ್ತಕ ಹಾಗೂ ಸಮವಸ್ತ್ರ ವಿತರಿಸಿ ಅವರು ಮಾತನಾಡಿದರು.
ಪ್ರಾಥಮಿಕ ಶಿಕ್ಷಣ ಎಂಬುದು ಭವಿಷ್ಯದ ತಳಹದಿಯಾಗಿದೆ. ಈ ಹಂತದಲ್ಲಿ ಉತ್ತಮ ಕಲಿಕೆ ಸಾಧ್ಯವಾದರೆ ಜೀವನದಲ್ಲಿ ಶೈಕ್ಷಣಿಕ ಸಾಧನೆ ಮಾಡುವಲ್ಲಿ ಸುಲಭವಾಗುತ್ತದೆ ಎಂದು ಹೇಳಿದರು.
ಆರೂಢಿ ಗ್ರಾಪಂ ಅಧ್ಯಕ್ಷ ಶ್ರೀಧರ್ ಮಾತನಾಡಿ, ಸ್ಪರ್ಧಾತ್ಮಕ ಜಗತ್ತಿನಲ್ಲಿ ಕಲಿಯುತ್ತಿರುವ ಮಕ್ಕಳಿಗೆ ಪ್ರಸಕ್ತ ವಿದ್ಯಮಾನಗಳ ಜ್ಞಾನ ಅತ್ಯವಶ್ಯಕ. ಇಂತಹ ಜ್ಞಾನವನ್ನು ವೃದ್ಧಿಸಿಕೊಳ್ಳಲು ವಿದ್ಯಾರ್ಥಿಗಳು ಹೆಚ್ಚು ಆಸಕ್ತಿ ತೋರಬೇಕಿದೆ ಎಂದರು.
ಮುಖ್ಯ ಶಿಕ್ಷಕ ಅಜ್ಜಪ್ಪ ಮಾತನಾಡಿ, ಶಾಲೆ ಪ್ರಾರಂಭಕ್ಕೂ ಮುಂಚಿತವಾಗಿಯೇ ಶಿಕ್ಷಣ ಇಲಾಖೆ ಸಮವಸ್ತ್ರ ಹಾಗೂ ಪಠ್ಯಪುಸ್ತಕ ವಿತರಿಸುವ ಮೂಲಕ ಶಿಕ್ಷಣಕ್ಕೆ ಹೆಚ್ಚು ಪ್ರಾಶಸ್ತ್ಯ ನೀಡುತ್ತಿರುವುದು ಶ್ಲಾಘನೀಯವಾದುದು ಎಂದರು.
ಪ್ರಣವ್ ಫೌಂಡೇಶನ್ ಮುಖ್ಯಸ್ಥ ನಾಗರಾಜ್ ಹೆಬ್ಬಾಳ್, ಆರ್.ವಿ ಇಂಜಿನಿಯರಿಂಗ್ ಕಾಲೇಜು ಡೀನ್ ಡಾ. ಉಮಾ ಮಾತನಾಡಿ, ಸರ್ಕಾರಿ ಶಾಲೆಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಯಾರಿಗೂ ಕಡಿಮೆ ಇಲ್ಲದಂತೆ ತಮ್ಮ ಜ್ಞಾನವನ್ನು ವಿಸ್ತರಿಸಿಕೊಳ್ಳುತ್ತಿದ್ದಾರೆ. ಖಾಸಗಿ ಶಾಲೆಗಳ ವ್ಯಾಮೋಹ ಬಿಟ್ಟು ಸರ್ಕಾರಿ ಶಾಲೆಗಳಲ್ಲಿ ವಿದ್ಯಾಭ್ಯಾಸ ಮಾಡುವುದು ಒಳಿತು ಎಂದು ಹೇಳಿದರು.
ಎಸ್ಡಿಎಂಸಿ ಅಧ್ಯಕ್ಷ ರೇಣುಗೋಪಾಲ್ ಮಾತನಾಡಿ, ಶಿಕ್ಷಣಕ್ಕೆ ಒತ್ತು ನೀಡುವ ಮೂಲಕ ಈ ಭಾಗದ ಸರ್ಕಾರಿ ಶಾಲೆಗಳ ಸಮಸ್ಯೆ ಬಗೆಹರಿಸಲು ಸಹಕರಿಸಬೇಕು ಎಂದು ಕೋರಿದರು.
ಈ ವೇಳೆ ದೊ.ಯೋ.ಪ್ರಾಧಿಕಾರ ಮಾಜಿ ನಿರ್ದೇಶಕ ಆನಂದ್ ಮೂರ್ತಿ, ಪ್ರಣವ್ ಫೌಂಡೇಶನ್ ಟ್ರಸ್ಟಿ ನೇತ್ರಾ, ಎನ್ಎಸ್ಎಸ್ ಶಿಕ್ಷಕಿ ಡಾ.ಎಂ ಲೋಕೇಶ್ವರಿ ಸೇರಿದಂತೆ ಇತರರು ಇದ್ದರು.
ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…
ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…