ಪ್ರಾಥಮಿಕ ಶಿಕ್ಷಣ ಸಾರ್ವತ್ರೀಕರಣಕ್ಕಾಗಿ ಹಲವು ಯೋಜನೆ ಜಾರಿ- ಶಾಸಕ ಧೀರಜ್‌ ಮುನಿರಾಜ್

ಶಿಕ್ಷಣ ಇಲಾಖೆ ಪ್ರಾಥಮಿಕ ಶಿಕ್ಷಣವನ್ನು ಸಾರ್ವತ್ರೀಕರಣ ಗೊಳಿಸುವಲ್ಲಿ ಹಲವು ಯೋಜನೆ ಜಾರಿಗೆ ತರುತ್ತಿದೆ. ಇಂತಹ ಯೋಜನೆಗಳನ್ನು ವಿದ್ಯಾರ್ಥಿಗಳಿಗೆ ತಲುಪಿಸುವ ನಿಟ್ಟಿನಲ್ಲಿ ಶಿಕ್ಷಕರು ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದು ಶಾಸಕ ಧೀರಜ್ ಮುನಿರಾಜು ಅಭಿಪ್ರಾಯಪಟ್ಟರು.

ತಾಲ್ಲೂಕಿನ ಆರೂಡಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ಶಾಲಾ ಮಕ್ಕಳಿಗೆ ಪ್ರಣವ್ ಫೌಂಡೇಶನ್ ಸಂಸ್ಥೆಯಿಂದ ಹಮ್ಮಿಕೊಂಡಿದ್ದ ಉಚಿತ ಪಠ್ಯ ಪುಸ್ತಕ ಹಾಗೂ ಸಮವಸ್ತ್ರ ವಿತರಿಸಿ ಅವರು ಮಾತನಾಡಿದರು.

ಪ್ರಾಥಮಿಕ ಶಿಕ್ಷಣ ಎಂಬುದು ಭವಿಷ್ಯದ ತಳಹದಿಯಾಗಿದೆ. ಈ ಹಂತದಲ್ಲಿ ಉತ್ತಮ ಕಲಿಕೆ ಸಾಧ್ಯವಾದರೆ ಜೀವನದಲ್ಲಿ ಶೈಕ್ಷಣಿಕ ಸಾಧನೆ ಮಾಡುವಲ್ಲಿ ಸುಲಭವಾಗುತ್ತದೆ ಎಂದು ಹೇಳಿದರು.

ಆರೂಢಿ ಗ್ರಾಪಂ ಅಧ್ಯಕ್ಷ ಶ್ರೀಧರ್ ಮಾತನಾಡಿ, ಸ್ಪರ್ಧಾತ್ಮಕ ಜಗತ್ತಿನಲ್ಲಿ ಕಲಿಯುತ್ತಿರುವ ಮಕ್ಕಳಿಗೆ ಪ್ರಸಕ್ತ ವಿದ್ಯಮಾನಗಳ ಜ್ಞಾನ ಅತ್ಯವಶ್ಯಕ. ಇಂತಹ ಜ್ಞಾನವನ್ನು ವೃದ್ಧಿಸಿಕೊಳ್ಳಲು ವಿದ್ಯಾರ್ಥಿಗಳು ಹೆಚ್ಚು ಆಸಕ್ತಿ ತೋರಬೇಕಿದೆ ಎಂದರು.

ಮುಖ್ಯ ಶಿಕ್ಷಕ ಅಜ್ಜಪ್ಪ ಮಾತನಾಡಿ, ಶಾಲೆ ಪ್ರಾರಂಭಕ್ಕೂ ಮುಂಚಿತವಾಗಿಯೇ ಶಿಕ್ಷಣ ಇಲಾಖೆ ಸಮವಸ್ತ್ರ ಹಾಗೂ ಪಠ್ಯಪುಸ್ತಕ ವಿತರಿಸುವ ಮೂಲಕ ಶಿಕ್ಷಣಕ್ಕೆ ಹೆಚ್ಚು ಪ್ರಾಶಸ್ತ್ಯ ನೀಡುತ್ತಿರುವುದು ಶ್ಲಾಘನೀಯವಾದುದು ಎಂದರು.

ಪ್ರಣವ್ ಫೌಂಡೇಶನ್ ಮುಖ್ಯಸ್ಥ ನಾಗರಾಜ್ ಹೆಬ್ಬಾಳ್, ಆರ್.ವಿ ಇಂಜಿನಿಯರಿಂಗ್ ಕಾಲೇಜು ಡೀನ್ ಡಾ. ಉಮಾ ಮಾತನಾಡಿ, ಸರ್ಕಾರಿ ಶಾಲೆಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಯಾರಿಗೂ ಕಡಿಮೆ ಇಲ್ಲದಂತೆ ತಮ್ಮ ಜ್ಞಾನವನ್ನು ವಿಸ್ತರಿಸಿಕೊಳ್ಳುತ್ತಿದ್ದಾರೆ. ಖಾಸಗಿ ಶಾಲೆಗಳ ವ್ಯಾಮೋಹ ಬಿಟ್ಟು ಸರ್ಕಾರಿ ಶಾಲೆಗಳಲ್ಲಿ ವಿದ್ಯಾಭ್ಯಾಸ ಮಾಡುವುದು ಒಳಿತು ಎಂದು ಹೇಳಿದರು.

ಎಸ್‌ಡಿಎಂಸಿ ಅಧ್ಯಕ್ಷ ರೇಣುಗೋಪಾಲ್ ಮಾತನಾಡಿ, ಶಿಕ್ಷಣಕ್ಕೆ ಒತ್ತು ನೀಡುವ ಮೂಲಕ ಈ ಭಾಗದ ಸರ್ಕಾರಿ ಶಾಲೆಗಳ ಸಮಸ್ಯೆ ಬಗೆಹರಿಸಲು ಸಹಕರಿಸಬೇಕು ಎಂದು ಕೋರಿದರು.

ಈ ವೇಳೆ ದೊ.ಯೋ.ಪ್ರಾಧಿಕಾರ ಮಾಜಿ ನಿರ್ದೇಶಕ ಆನಂದ್ ಮೂರ್ತಿ, ಪ್ರಣವ್ ಫೌಂಡೇಶನ್ ಟ್ರಸ್ಟಿ ನೇತ್ರಾ, ಎನ್ಎಸ್ಎಸ್ ಶಿಕ್ಷಕಿ ಡಾ.ಎಂ ಲೋಕೇಶ್ವರಿ ಸೇರಿದಂತೆ ಇತರರು ಇದ್ದರು‌.

Ramesh Babu

Journalist

Recent Posts

‘ಫೊರೆನ್ಸಿಕ್ ತನಿಖೆಯಲ್ಲಿ ಕರ್ನಾಟಕಕ್ಕೆ ದೇಶದಲ್ಲೇ ಮುಂಚೂಣಿ ಸ್ಥಾನ’-ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಇಂದು ಬೆಂಗಳೂರಿನ ಮಡಿವಾಳದಲ್ಲಿರುವ ಎಫ್‌ಎಸ್‌ಎಲ್ ಕಚೇರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಭೇಟಿ ನೀಡಿ ಪರಿಶೀಲನಾ ಸಭೆ ನಡೆಸಿದರು. ಈ…

5 hours ago

ಜೂ. 28 ರಿಂದ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕೆ ಅಭಿಯಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನವು ಜೂನ್ 28 ರಿಂದ ಜುಲೈ 01 ರವರೆಗೆ ನಡೆಯಲಿದ್ದು, ಈ…

9 hours ago

24 ಗಂಟೆಯೊಳಗೆ ಸರಗಳ್ಳರ ಬಂಧನ: ₹2.96 ಲಕ್ಷ ಮೌಲ್ಯದ ಮಾಲು ವಶ

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಸರ ಕಳ್ಳತನ ಪ್ರಕರಣವನ್ನು ಪೊಲೀಸರು ಕೇವಲ 24 ಗಂಟೆಗಳೊಳಗೆ ಭೇದಿಸಿ ಇಬ್ಬರು…

10 hours ago

ದೊಡ್ಡಬೆಲವಂಗಲ ಠಾಣೆ ಇನ್ಸ್‌ಪೆಕ್ಟರ್ ಕಲ್ಲಪ್ಪ ಎಸ್. ಖರತ್‌ಗೆ ಡಿಜಿ-ಐಜಿಪಿ ಪ್ರಶಂಸನಾ ಪದಕ

ದೊಡ್ಡಬಳ್ಳಾಪುರ: ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ನೀಡಲಾಗುವ ಪ್ರತಿಷ್ಠಿತ 2025-26ನೇ ಸಾಲಿನ ಡಿಜಿ-ಐಜಿಪಿ ಪ್ರಶಂಸನಾ…

11 hours ago

ಕೆಐಎಎಲ್ ನಲ್ಲಿ ಸರಣಿ ಕಳ್ಳಸಾಗಣೆ ಪ್ರಕರಣಗಳು ಪತ್ತೆ: ₹4.33 ಕೋಟಿಗೂ ಅಧಿಕ ಮೌಲ್ಯದ ಮಾದಕ ವಸ್ತು, ಚಿನ್ನ ವಶ

ದೇವನಹಳ್ಳಿ: ಕೆಂಪೇಗೌಡರ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಳೆದ ಕೆಲ ದಿನಗಳಲ್ಲಿ ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಗಳಲ್ಲಿ ಮಾದಕ ವಸ್ತುಗಳು…

12 hours ago

ಯುವತಿಯ ಕುರಿತು ಅಪಪ್ರಚಾರದ ದ್ವೇಷ: ರೌಡಿ ಶೀಟರ್ ಖಲೀಮ್‌ನ ಬರ್ಬರ ಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಕುಟುಂಬದ ಬಗ್ಗೆ ಅವಹೇಳನ ಆರೋಪ: 7 ಮಂದಿಯ ತಂಡದ ಸಂಚು, 5 ಆರೋಪಿಗಳ ಬಂಧನ

ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ರೌಡಿ ಶೀಟರ್ ಖಲೀಮ್ (35)…

15 hours ago