ಪ್ರಾಥಮಿಕ ಶಿಕ್ಷಣ ಸಾರ್ವತ್ರೀಕರಣಕ್ಕಾಗಿ ಹಲವು ಯೋಜನೆ ಜಾರಿ- ಶಾಸಕ ಧೀರಜ್‌ ಮುನಿರಾಜ್

ಶಿಕ್ಷಣ ಇಲಾಖೆ ಪ್ರಾಥಮಿಕ ಶಿಕ್ಷಣವನ್ನು ಸಾರ್ವತ್ರೀಕರಣ ಗೊಳಿಸುವಲ್ಲಿ ಹಲವು ಯೋಜನೆ ಜಾರಿಗೆ ತರುತ್ತಿದೆ. ಇಂತಹ ಯೋಜನೆಗಳನ್ನು ವಿದ್ಯಾರ್ಥಿಗಳಿಗೆ ತಲುಪಿಸುವ ನಿಟ್ಟಿನಲ್ಲಿ ಶಿಕ್ಷಕರು ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದು ಶಾಸಕ ಧೀರಜ್ ಮುನಿರಾಜು ಅಭಿಪ್ರಾಯಪಟ್ಟರು.

ತಾಲ್ಲೂಕಿನ ಆರೂಡಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ಶಾಲಾ ಮಕ್ಕಳಿಗೆ ಪ್ರಣವ್ ಫೌಂಡೇಶನ್ ಸಂಸ್ಥೆಯಿಂದ ಹಮ್ಮಿಕೊಂಡಿದ್ದ ಉಚಿತ ಪಠ್ಯ ಪುಸ್ತಕ ಹಾಗೂ ಸಮವಸ್ತ್ರ ವಿತರಿಸಿ ಅವರು ಮಾತನಾಡಿದರು.

ಪ್ರಾಥಮಿಕ ಶಿಕ್ಷಣ ಎಂಬುದು ಭವಿಷ್ಯದ ತಳಹದಿಯಾಗಿದೆ. ಈ ಹಂತದಲ್ಲಿ ಉತ್ತಮ ಕಲಿಕೆ ಸಾಧ್ಯವಾದರೆ ಜೀವನದಲ್ಲಿ ಶೈಕ್ಷಣಿಕ ಸಾಧನೆ ಮಾಡುವಲ್ಲಿ ಸುಲಭವಾಗುತ್ತದೆ ಎಂದು ಹೇಳಿದರು.

ಆರೂಢಿ ಗ್ರಾಪಂ ಅಧ್ಯಕ್ಷ ಶ್ರೀಧರ್ ಮಾತನಾಡಿ, ಸ್ಪರ್ಧಾತ್ಮಕ ಜಗತ್ತಿನಲ್ಲಿ ಕಲಿಯುತ್ತಿರುವ ಮಕ್ಕಳಿಗೆ ಪ್ರಸಕ್ತ ವಿದ್ಯಮಾನಗಳ ಜ್ಞಾನ ಅತ್ಯವಶ್ಯಕ. ಇಂತಹ ಜ್ಞಾನವನ್ನು ವೃದ್ಧಿಸಿಕೊಳ್ಳಲು ವಿದ್ಯಾರ್ಥಿಗಳು ಹೆಚ್ಚು ಆಸಕ್ತಿ ತೋರಬೇಕಿದೆ ಎಂದರು.

ಮುಖ್ಯ ಶಿಕ್ಷಕ ಅಜ್ಜಪ್ಪ ಮಾತನಾಡಿ, ಶಾಲೆ ಪ್ರಾರಂಭಕ್ಕೂ ಮುಂಚಿತವಾಗಿಯೇ ಶಿಕ್ಷಣ ಇಲಾಖೆ ಸಮವಸ್ತ್ರ ಹಾಗೂ ಪಠ್ಯಪುಸ್ತಕ ವಿತರಿಸುವ ಮೂಲಕ ಶಿಕ್ಷಣಕ್ಕೆ ಹೆಚ್ಚು ಪ್ರಾಶಸ್ತ್ಯ ನೀಡುತ್ತಿರುವುದು ಶ್ಲಾಘನೀಯವಾದುದು ಎಂದರು.

ಪ್ರಣವ್ ಫೌಂಡೇಶನ್ ಮುಖ್ಯಸ್ಥ ನಾಗರಾಜ್ ಹೆಬ್ಬಾಳ್, ಆರ್.ವಿ ಇಂಜಿನಿಯರಿಂಗ್ ಕಾಲೇಜು ಡೀನ್ ಡಾ. ಉಮಾ ಮಾತನಾಡಿ, ಸರ್ಕಾರಿ ಶಾಲೆಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಯಾರಿಗೂ ಕಡಿಮೆ ಇಲ್ಲದಂತೆ ತಮ್ಮ ಜ್ಞಾನವನ್ನು ವಿಸ್ತರಿಸಿಕೊಳ್ಳುತ್ತಿದ್ದಾರೆ. ಖಾಸಗಿ ಶಾಲೆಗಳ ವ್ಯಾಮೋಹ ಬಿಟ್ಟು ಸರ್ಕಾರಿ ಶಾಲೆಗಳಲ್ಲಿ ವಿದ್ಯಾಭ್ಯಾಸ ಮಾಡುವುದು ಒಳಿತು ಎಂದು ಹೇಳಿದರು.

ಎಸ್‌ಡಿಎಂಸಿ ಅಧ್ಯಕ್ಷ ರೇಣುಗೋಪಾಲ್ ಮಾತನಾಡಿ, ಶಿಕ್ಷಣಕ್ಕೆ ಒತ್ತು ನೀಡುವ ಮೂಲಕ ಈ ಭಾಗದ ಸರ್ಕಾರಿ ಶಾಲೆಗಳ ಸಮಸ್ಯೆ ಬಗೆಹರಿಸಲು ಸಹಕರಿಸಬೇಕು ಎಂದು ಕೋರಿದರು.

ಈ ವೇಳೆ ದೊ.ಯೋ.ಪ್ರಾಧಿಕಾರ ಮಾಜಿ ನಿರ್ದೇಶಕ ಆನಂದ್ ಮೂರ್ತಿ, ಪ್ರಣವ್ ಫೌಂಡೇಶನ್ ಟ್ರಸ್ಟಿ ನೇತ್ರಾ, ಎನ್ಎಸ್ಎಸ್ ಶಿಕ್ಷಕಿ ಡಾ.ಎಂ ಲೋಕೇಶ್ವರಿ ಸೇರಿದಂತೆ ಇತರರು ಇದ್ದರು‌.

Ramesh Babu

Journalist

Recent Posts

ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ: ವೀರ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ

ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ಸಂವಿಧಾನದ ಪುಸ್ತಕ ಹಿಡಿದು, ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ…

2 hours ago

ರಾಜ್ಯದ 25ನೇ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ: ವೀರ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ

ರಾಜ್ಯದ 25 ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ…

2 hours ago

ಅಧಿಕಾರಕ್ಕೇರುವ ಮುನ್ನವೇ ಟ್ರಬಲ್ ಶೂಟರ್ ಚಾಣಾಕ್ಷ ನಡೆ: ದೇವೇಗೌಡ-ಯಡಿಯೂರಪ್ಪ ಆಶೀರ್ವಾದ ಪಡೆದ ಡಿಕೆಶಿ

ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿ ಆಗಿ ಅಧಿಕಾರ ಸ್ವೀಕರಿಸಲು ಸಜ್ಜಾಗಿರುವ ಡಿ.ಕೆ. ಶಿವಕುಮಾರ್ ಅವರು ಪ್ರಮಾಣ ವಚನಕ್ಕೂ ಮುನ್ನವೇ ತಮ್ಮ…

4 hours ago

ಡಿ.ಕೆ.ಶಿವಕುಮಾರ್ ಪದಗ್ರಹಣ: ಡಿಕೆಶಿ ಜೊತೆ ಓರ್ವ ಡಿಸಿಎಂ ಸೇರಿ 12 ಮಂದಿ ಸಚಿವರಾಗಿ ಪ್ರಮಾಣ ವಚನ….

ಇಂದು ಸಂಜೆ 4:05ಕ್ಕೆ ಲೋಕಭವನದ ಗಾಜಿನ ಮನೆಯಲ್ಲಿ ನಡೆಯಲಿರುವ ಸಮಾರಂಭದಲ್ಲಿ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಅವರು ಪ್ರಮಾಣ ವಚನ…

5 hours ago

ಬಿಜೆಪಿಗೆ ಅಧಿಕಾರ ಸಿಕ್ಕಾಗ ಒಬಿಸಿ, ದಲಿತರ ರಾಜಕೀಯ ಪ್ರಾತಿನಿಧ್ಯ ಏಕೆ ನೆನಪಾಗಲಿಲ್ಲ?- ಪ್ರಿಯಾಂಕ್ ಖರ್ಗೆ ಪ್ರಶ್ನೆ

ಬಿಜೆಪಿ ನಾಯಕರಿಗೆ ಈಗ ಏಕಾಏಕಿ ದಲಿತ ಮತ್ತು ಹಿಂದುಳಿದ ಸಮುದಾಯಗಳ ರಾಜಕೀಯ ಪ್ರಾತಿನಿಧ್ಯದ ಬಗ್ಗೆ ಕಾಳಜಿ ಬಂದುಬಿಟ್ಟಿದೆ. ಕಾಲ, ಸಂದರ್ಭ…

5 hours ago

ಡಾ.ಜಿ.ಪರಮೇಶ್ವರ್ ಗೆ ಉಪಮುಖ್ಯಮಂತ್ರಿ ಸ್ಥಾನ.?: ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC) ಸದಸ್ಯ ಸಿದ್ದರಾಮಯ್ಯ ಸುಳಿವು

ಇಂದು ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೂ ಮುನ್ನ, ನಿಯೋಜಿತ ಸಿಎಂ ಡಿ.ಕೆ.ಶಿವಕುಮಾರ್ ಅವರು ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC) ಸದಸ್ಯ…

6 hours ago