ಪ್ರಾಥಮಿಕ ಶಿಕ್ಷಣ ಸಾರ್ವತ್ರೀಕರಣಕ್ಕಾಗಿ ಹಲವು ಯೋಜನೆ ಜಾರಿ- ಶಾಸಕ ಧೀರಜ್‌ ಮುನಿರಾಜ್

ಶಿಕ್ಷಣ ಇಲಾಖೆ ಪ್ರಾಥಮಿಕ ಶಿಕ್ಷಣವನ್ನು ಸಾರ್ವತ್ರೀಕರಣ ಗೊಳಿಸುವಲ್ಲಿ ಹಲವು ಯೋಜನೆ ಜಾರಿಗೆ ತರುತ್ತಿದೆ. ಇಂತಹ ಯೋಜನೆಗಳನ್ನು ವಿದ್ಯಾರ್ಥಿಗಳಿಗೆ ತಲುಪಿಸುವ ನಿಟ್ಟಿನಲ್ಲಿ ಶಿಕ್ಷಕರು ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದು ಶಾಸಕ ಧೀರಜ್ ಮುನಿರಾಜು ಅಭಿಪ್ರಾಯಪಟ್ಟರು.

ತಾಲ್ಲೂಕಿನ ಆರೂಡಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ಶಾಲಾ ಮಕ್ಕಳಿಗೆ ಪ್ರಣವ್ ಫೌಂಡೇಶನ್ ಸಂಸ್ಥೆಯಿಂದ ಹಮ್ಮಿಕೊಂಡಿದ್ದ ಉಚಿತ ಪಠ್ಯ ಪುಸ್ತಕ ಹಾಗೂ ಸಮವಸ್ತ್ರ ವಿತರಿಸಿ ಅವರು ಮಾತನಾಡಿದರು.

ಪ್ರಾಥಮಿಕ ಶಿಕ್ಷಣ ಎಂಬುದು ಭವಿಷ್ಯದ ತಳಹದಿಯಾಗಿದೆ. ಈ ಹಂತದಲ್ಲಿ ಉತ್ತಮ ಕಲಿಕೆ ಸಾಧ್ಯವಾದರೆ ಜೀವನದಲ್ಲಿ ಶೈಕ್ಷಣಿಕ ಸಾಧನೆ ಮಾಡುವಲ್ಲಿ ಸುಲಭವಾಗುತ್ತದೆ ಎಂದು ಹೇಳಿದರು.

ಆರೂಢಿ ಗ್ರಾಪಂ ಅಧ್ಯಕ್ಷ ಶ್ರೀಧರ್ ಮಾತನಾಡಿ, ಸ್ಪರ್ಧಾತ್ಮಕ ಜಗತ್ತಿನಲ್ಲಿ ಕಲಿಯುತ್ತಿರುವ ಮಕ್ಕಳಿಗೆ ಪ್ರಸಕ್ತ ವಿದ್ಯಮಾನಗಳ ಜ್ಞಾನ ಅತ್ಯವಶ್ಯಕ. ಇಂತಹ ಜ್ಞಾನವನ್ನು ವೃದ್ಧಿಸಿಕೊಳ್ಳಲು ವಿದ್ಯಾರ್ಥಿಗಳು ಹೆಚ್ಚು ಆಸಕ್ತಿ ತೋರಬೇಕಿದೆ ಎಂದರು.

ಮುಖ್ಯ ಶಿಕ್ಷಕ ಅಜ್ಜಪ್ಪ ಮಾತನಾಡಿ, ಶಾಲೆ ಪ್ರಾರಂಭಕ್ಕೂ ಮುಂಚಿತವಾಗಿಯೇ ಶಿಕ್ಷಣ ಇಲಾಖೆ ಸಮವಸ್ತ್ರ ಹಾಗೂ ಪಠ್ಯಪುಸ್ತಕ ವಿತರಿಸುವ ಮೂಲಕ ಶಿಕ್ಷಣಕ್ಕೆ ಹೆಚ್ಚು ಪ್ರಾಶಸ್ತ್ಯ ನೀಡುತ್ತಿರುವುದು ಶ್ಲಾಘನೀಯವಾದುದು ಎಂದರು.

ಪ್ರಣವ್ ಫೌಂಡೇಶನ್ ಮುಖ್ಯಸ್ಥ ನಾಗರಾಜ್ ಹೆಬ್ಬಾಳ್, ಆರ್.ವಿ ಇಂಜಿನಿಯರಿಂಗ್ ಕಾಲೇಜು ಡೀನ್ ಡಾ. ಉಮಾ ಮಾತನಾಡಿ, ಸರ್ಕಾರಿ ಶಾಲೆಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಯಾರಿಗೂ ಕಡಿಮೆ ಇಲ್ಲದಂತೆ ತಮ್ಮ ಜ್ಞಾನವನ್ನು ವಿಸ್ತರಿಸಿಕೊಳ್ಳುತ್ತಿದ್ದಾರೆ. ಖಾಸಗಿ ಶಾಲೆಗಳ ವ್ಯಾಮೋಹ ಬಿಟ್ಟು ಸರ್ಕಾರಿ ಶಾಲೆಗಳಲ್ಲಿ ವಿದ್ಯಾಭ್ಯಾಸ ಮಾಡುವುದು ಒಳಿತು ಎಂದು ಹೇಳಿದರು.

ಎಸ್‌ಡಿಎಂಸಿ ಅಧ್ಯಕ್ಷ ರೇಣುಗೋಪಾಲ್ ಮಾತನಾಡಿ, ಶಿಕ್ಷಣಕ್ಕೆ ಒತ್ತು ನೀಡುವ ಮೂಲಕ ಈ ಭಾಗದ ಸರ್ಕಾರಿ ಶಾಲೆಗಳ ಸಮಸ್ಯೆ ಬಗೆಹರಿಸಲು ಸಹಕರಿಸಬೇಕು ಎಂದು ಕೋರಿದರು.

ಈ ವೇಳೆ ದೊ.ಯೋ.ಪ್ರಾಧಿಕಾರ ಮಾಜಿ ನಿರ್ದೇಶಕ ಆನಂದ್ ಮೂರ್ತಿ, ಪ್ರಣವ್ ಫೌಂಡೇಶನ್ ಟ್ರಸ್ಟಿ ನೇತ್ರಾ, ಎನ್ಎಸ್ಎಸ್ ಶಿಕ್ಷಕಿ ಡಾ.ಎಂ ಲೋಕೇಶ್ವರಿ ಸೇರಿದಂತೆ ಇತರರು ಇದ್ದರು‌.

Ramesh Babu

Journalist

Recent Posts

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

3 hours ago

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

8 hours ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

1 day ago

ದೊಡ್ಡಬಳ್ಳಾಪುರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…

2 days ago

ಘಾಟಿ ಕ್ಷೇತ್ರದಲ್ಲಿ ವರಮಹಾಲಕ್ಷ್ಮಿ ಸಂಭ್ರಮ; ಮಹಿಳೆಯರಿಗೆ ಬಳೆ, ಅರಶಿನ–ಕುಂಕುಮ ವಿತರಣೆ

ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…

2 days ago

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

3 days ago