ಪ್ರಾಥಮಿಕ ಶಿಕ್ಷಣ ಸಾರ್ವತ್ರೀಕರಣಕ್ಕಾಗಿ ಹಲವು ಯೋಜನೆ ಜಾರಿ- ಶಾಸಕ ಧೀರಜ್‌ ಮುನಿರಾಜ್

ಶಿಕ್ಷಣ ಇಲಾಖೆ ಪ್ರಾಥಮಿಕ ಶಿಕ್ಷಣವನ್ನು ಸಾರ್ವತ್ರೀಕರಣ ಗೊಳಿಸುವಲ್ಲಿ ಹಲವು ಯೋಜನೆ ಜಾರಿಗೆ ತರುತ್ತಿದೆ. ಇಂತಹ ಯೋಜನೆಗಳನ್ನು ವಿದ್ಯಾರ್ಥಿಗಳಿಗೆ ತಲುಪಿಸುವ ನಿಟ್ಟಿನಲ್ಲಿ ಶಿಕ್ಷಕರು ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದು ಶಾಸಕ ಧೀರಜ್ ಮುನಿರಾಜು ಅಭಿಪ್ರಾಯಪಟ್ಟರು.

ತಾಲ್ಲೂಕಿನ ಆರೂಡಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ಶಾಲಾ ಮಕ್ಕಳಿಗೆ ಪ್ರಣವ್ ಫೌಂಡೇಶನ್ ಸಂಸ್ಥೆಯಿಂದ ಹಮ್ಮಿಕೊಂಡಿದ್ದ ಉಚಿತ ಪಠ್ಯ ಪುಸ್ತಕ ಹಾಗೂ ಸಮವಸ್ತ್ರ ವಿತರಿಸಿ ಅವರು ಮಾತನಾಡಿದರು.

ಪ್ರಾಥಮಿಕ ಶಿಕ್ಷಣ ಎಂಬುದು ಭವಿಷ್ಯದ ತಳಹದಿಯಾಗಿದೆ. ಈ ಹಂತದಲ್ಲಿ ಉತ್ತಮ ಕಲಿಕೆ ಸಾಧ್ಯವಾದರೆ ಜೀವನದಲ್ಲಿ ಶೈಕ್ಷಣಿಕ ಸಾಧನೆ ಮಾಡುವಲ್ಲಿ ಸುಲಭವಾಗುತ್ತದೆ ಎಂದು ಹೇಳಿದರು.

ಆರೂಢಿ ಗ್ರಾಪಂ ಅಧ್ಯಕ್ಷ ಶ್ರೀಧರ್ ಮಾತನಾಡಿ, ಸ್ಪರ್ಧಾತ್ಮಕ ಜಗತ್ತಿನಲ್ಲಿ ಕಲಿಯುತ್ತಿರುವ ಮಕ್ಕಳಿಗೆ ಪ್ರಸಕ್ತ ವಿದ್ಯಮಾನಗಳ ಜ್ಞಾನ ಅತ್ಯವಶ್ಯಕ. ಇಂತಹ ಜ್ಞಾನವನ್ನು ವೃದ್ಧಿಸಿಕೊಳ್ಳಲು ವಿದ್ಯಾರ್ಥಿಗಳು ಹೆಚ್ಚು ಆಸಕ್ತಿ ತೋರಬೇಕಿದೆ ಎಂದರು.

ಮುಖ್ಯ ಶಿಕ್ಷಕ ಅಜ್ಜಪ್ಪ ಮಾತನಾಡಿ, ಶಾಲೆ ಪ್ರಾರಂಭಕ್ಕೂ ಮುಂಚಿತವಾಗಿಯೇ ಶಿಕ್ಷಣ ಇಲಾಖೆ ಸಮವಸ್ತ್ರ ಹಾಗೂ ಪಠ್ಯಪುಸ್ತಕ ವಿತರಿಸುವ ಮೂಲಕ ಶಿಕ್ಷಣಕ್ಕೆ ಹೆಚ್ಚು ಪ್ರಾಶಸ್ತ್ಯ ನೀಡುತ್ತಿರುವುದು ಶ್ಲಾಘನೀಯವಾದುದು ಎಂದರು.

ಪ್ರಣವ್ ಫೌಂಡೇಶನ್ ಮುಖ್ಯಸ್ಥ ನಾಗರಾಜ್ ಹೆಬ್ಬಾಳ್, ಆರ್.ವಿ ಇಂಜಿನಿಯರಿಂಗ್ ಕಾಲೇಜು ಡೀನ್ ಡಾ. ಉಮಾ ಮಾತನಾಡಿ, ಸರ್ಕಾರಿ ಶಾಲೆಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಯಾರಿಗೂ ಕಡಿಮೆ ಇಲ್ಲದಂತೆ ತಮ್ಮ ಜ್ಞಾನವನ್ನು ವಿಸ್ತರಿಸಿಕೊಳ್ಳುತ್ತಿದ್ದಾರೆ. ಖಾಸಗಿ ಶಾಲೆಗಳ ವ್ಯಾಮೋಹ ಬಿಟ್ಟು ಸರ್ಕಾರಿ ಶಾಲೆಗಳಲ್ಲಿ ವಿದ್ಯಾಭ್ಯಾಸ ಮಾಡುವುದು ಒಳಿತು ಎಂದು ಹೇಳಿದರು.

ಎಸ್‌ಡಿಎಂಸಿ ಅಧ್ಯಕ್ಷ ರೇಣುಗೋಪಾಲ್ ಮಾತನಾಡಿ, ಶಿಕ್ಷಣಕ್ಕೆ ಒತ್ತು ನೀಡುವ ಮೂಲಕ ಈ ಭಾಗದ ಸರ್ಕಾರಿ ಶಾಲೆಗಳ ಸಮಸ್ಯೆ ಬಗೆಹರಿಸಲು ಸಹಕರಿಸಬೇಕು ಎಂದು ಕೋರಿದರು.

ಈ ವೇಳೆ ದೊ.ಯೋ.ಪ್ರಾಧಿಕಾರ ಮಾಜಿ ನಿರ್ದೇಶಕ ಆನಂದ್ ಮೂರ್ತಿ, ಪ್ರಣವ್ ಫೌಂಡೇಶನ್ ಟ್ರಸ್ಟಿ ನೇತ್ರಾ, ಎನ್ಎಸ್ಎಸ್ ಶಿಕ್ಷಕಿ ಡಾ.ಎಂ ಲೋಕೇಶ್ವರಿ ಸೇರಿದಂತೆ ಇತರರು ಇದ್ದರು‌.

Ramesh Babu

Journalist

Recent Posts

ರಾಜ್ಯದಲ್ಲಿ ಹೆಚ್ಚಿದ ಸನ್ ಸ್ಟ್ರೋಕ್‌ ಪ್ರಕರಣ : ಉರಿ ಬಿಸಿಲಿಗೆ ತತ್ತರಿಸಿದ ಜನಜೀವನ

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಏರುತ್ತಿರುವ ಉಷ್ಣಾಂಶ ಜನಜೀವನದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಮೇ ತಿಂಗಳ ಉರಿ ಬಿಸಿಲು ಜನರನ್ನು…

1 hour ago

ವಿಜಯ್, ಆಃಡವನ್ ಮತ್ತು ಪ್ರಮಾಣವಚನ ನಿಷ್ಠೆ…….

ದೇವರ ದೃಷ್ಟಿಯಲ್ಲಿ ಮನುಷ್ಯರೆಲ್ಲಾ ಸಮಾನರು ಎಂಬುದು ನಮಗೆ ಮುಖ್ಯವಲ್ಲ, ಮನುಷ್ಯರ ದೃಷ್ಟಿಯಲ್ಲಿ ನಾವೆಲ್ಲರೂ ಸಮಾನರು ಎಂಬುದು ನಮಗೆ ಬಹಳ ಮುಖ್ಯ...…

4 hours ago

ಸಿನಿಮಾ ಸ್ಟೈಲ್‌ನಲ್ಲಿ ಪೊಲೀಸರ ಚೇಸಿಂಗ್: ಎರಡೇ ಗಂಟೆಗಳಲ್ಲಿ ಕಳವು ಮಾಡಿದ್ದ ಕ್ಯಾಷ್‌ ಸಮೇತ ಕಳ್ಳರ ಬಂಧನ

ಚಿಕ್ಕಬಳ್ಳಾಪುರ-‌ ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…

15 hours ago

ನಮ್ಮ ದೇಶದ ಪ್ರಗತಿ ಯುವಜನರಿಂದಲೇ ಆಗಬೇಕಿದೆ-ಇಂಧನ‌ ಸಚಿವ ಕೆ.ಜೆ.ಜಾರ್ಜ್

ಸುಶಿಕ್ಷಿತ, ಪ್ರಜ್ಞಾವಂತ ಯುವಶಕ್ತಿಯಿಂದ ನಮ್ಮ ದೇಶದ ಪ್ರಗತಿ ಸಾಧ್ಯವಾಗಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅಭಿಪ್ರಾಯಪಟ್ಟಿದ್ದಾರೆ. ಇಂಡಿಯನ್ ಅಕಾಡೆಮಿ ಆಫ್…

16 hours ago

ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಭೀಕರ ಅಪಘಾತ: ಬೈಕ್ ಸವಾರ ದುರ್ಮರಣ

ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಮೃತಪಟ್ಟಿರುವ ಘಟನೆ ಮೇ.12ರ ರಾತ್ರಿ…

20 hours ago

‘ಪಬ್ಲಿಕ್ ಮಿರ್ಚಿ’ ವರದಿ ಫಲಶೃತಿ: ಕೊನೆಗೂ ಹೊಸಹಳ್ಳಿ ರಸ್ತೆಗೆ ಡಾಂಬರ್ ಭಾಗ್ಯ – ಜನರಲ್ಲಿ ಸಂತಸ

ದೊಡ್ಡಬಳ್ಳಾಪುರ: ತಾಲ್ಲೂಕಿನ ಸಾಸಲು–ಆರೂಢಿ ಭಾಗದ ಜನರ ಪ್ರಮುಖ ಸಂಪರ್ಕ ರಸ್ತೆಯಾಗಿರುವ ಗುಂಡಮಗೆರೆ–ಹೊಸಹಳ್ಳಿ ರಸ್ತೆಗೆ ಕೊನೆಗೂ ಡಾಂಬರೀಕರಣ ಕಾಮಗಾರಿ ಆರಂಭವಾಗಿದ್ದು, ಗ್ರಾಮಸ್ಥರಲ್ಲಿ…

21 hours ago