ಪ್ರಾಥಮಿಕ ಹಂತದಲ್ಲೇ ಕ್ಷಯರೋಗ ಚಿಕಿತ್ಸೆ ಪಡೆದು ಗುಣಮುಖರಾಗಿ- ಸಿಇಒ ಡಾ.ಕೆ.ಎನ್ ಅನುರಾಧ

ಕ್ಷಯರೋಗ ಮಾರಣಾಂತಿಕ ಖಾಯಿಲೆ ಅಲ್ಲ, ಚಿಕಿತ್ಸೆ ಮೂಲಕ ಗುಣಪಡಿಸಬಹುದದಾದ ಒಂದು ರೋಗವಾಗಿದ್ದು ಕ್ಷಯರೋಗದ ಲಕ್ಷಣಗಳು ಕಂಡುಬಂದಲ್ಲಿ ಭಯಭೀತರಾಗದೇ ಪ್ರಾಥಮಿಕ ಹಂತದಲ್ಲೇ ಚಿಕಿತ್ಸೆ ಪಡೆಯುವ ಮೂಲಕ ಗುಣಮುಖರಾಗಿ ಎಂದು ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿ ಡಾ. ಕೆ.ಎನ್. ಅನುರಾಧ ಅವರು ಹೇಳಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಕ್ಷಯರೋಗ ನಿರ್ಮೂಲನಾ ಘಟಕ ವತಿಯಿಂದ ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಆಯೋಜಿಸಿದ್ದ ಕ್ಷಯರೋಗ ಪತ್ತೆ ಮತ್ತು ಚಿಕಿತ್ಸೆ-100 ದಿನಗಳ ವಿಷೇಶ ಆಂದೋಲನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಜಿಲ್ಲೆಯನ್ನು ಕ್ಷಯರೋಗ ಮುಕ್ತ ಜಿಲ್ಲೆಯನ್ನಾಗಿ ಮಾಡುವ ಉದ್ದೇಶದಿಂದ ಆರೋಗ್ಯ ಇಲಾಖೆಯ ಅಧಿಕಾರಿಗಳು ಕ್ಷಯರೋಗಿಗಳ ಪತ್ತೆ ಹಚ್ಚಿ, ಸೂಕ್ತ ಚಿಕಿತ್ಸೆ ನೀಡುವಲ್ಲಿ ಕಾರ್ಯಪ್ರವ್ರತ್ತರಾಗಿದ್ದು, ಡಿಸೆಂಬರ್ 07 ರಿಂದ 2025 ರ ಮಾರ್ಚ್ 17 ವರೆಗೆ ಜಿಲ್ಲೆಯಾದ್ಯಂತ 100 ದಿನಗಳ ಆಂದೋಲನ ಹಮ್ಮಿಕೊಳ್ಳಲಾಗಿದೆ.

ಈ ಆಂದೋಲನಕ್ಕೆ ಚುನಾಯಿತ ಜನ ಪ್ರತಿನಿಧಿಗಳ, ಟಿ.ಬಿ.ಚಾಂಪಿಯನ್ಸ್,(ಕ್ಷಯರೋಗದಿಂದ ಗುಣಹೊಂದಿರುವವರು) ನಿಕ್ಷಯ್ ಮಿತ್ರ(ಸ್ಥಳೀಯವಾಗಿ ಕ್ಷಯರೋಗಿಗಳಿಗೆ ಪೌಷ್ಠಿಕ ಆಹಾರ ಒದಗಿಸುವ ದಾನಿಗಳು), ಖಾಸಗಿ ಆರೋಗ್ಯ ಸಂಸ್ಥೆಗಳು, ಪಂಚಾಯತ್ ರಾಜ್ ಇಲಾಖೆ ಹಾಗೂ ಇತರೆ ಸಂಘ ಸಂಸ್ಥೆಗಳ ಸಹಕಾರದ ಜೊತೆಗೆ ಆರೋಗ್ಯ ಸಿಬ್ಬಂದಿ ತಪಾಸಣೆಗಾಗಿ ಮನೆಗೆ ಬಂದಲ್ಲಿ ಸಾರ್ವಜನಿಕರು ಸಹಕರಿಸಬೇಕು ಎಂದು ಸಿ.ಇ.ಒ ಮನವಿ ಮಾಡಿದರು.

ಪ್ರಸ್ತುತ ದಿನಮಾನಗಳ ಕ್ಷಯರೋಗಕ್ಕೂ ಸೂಕ್ತ ಚಿಕಿತ್ಸೆ ಇದ್ದು, ಸಕಾಲದಲ್ಲಿ ಔಷದೋಪಚಾರ ಪಡೆದುಕೊಂಡು ಆರೋಗ್ಯವಂತರಾಗಬೇಕು. 2023-24 ರಲ್ಲಿ 8 ಗ್ರಾಮ ಪಂಚಾಯತಿಗಳನ್ನು ‘’ಕ್ಷಯಮುಕ್ತ ಗ್ರಾಮ ಪಂಚಾಯತಿ’’ ಎಂದು ಘೋಷಿಸಲಾಗಿದೆ. ಪ್ರಸಕ್ತ 2024-25 ನೇ ಸಾಲಿನಲ್ಲಿ 40 ಗ್ರಾಮ ಪಂಚಾಯತಿಗಳನ್ನು ಆಯ್ಕೆ ಮಾಡಿಕೊಂಡು ಮಾನದಂಡಗಳ ಅನ್ವಯ ಕಾರ್ಯರಂಭ ಮಾಡಲಾಗಿದೆ ಎಂದರು.

ಜಿಲ್ಲಾ ಕ್ಷಯರೋಗ ನಿರ್ಮೂಲನೆ ಅಧಿಕಾರಿ ಡಾ. ನಾಗೇಶ್.ಎಸ್ ಅವರು ಮಾತನಾಡಿ, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಪ್ರತಿವರ್ಷ ಸುಮಾರು 35000 ಸಂಭಾವ್ಯ ಕ್ಷಯರೋಗಿಗಳ ತಪಾಸಣೆಗೊಳಪಡಿಸಲಾಗುತ್ತಿದೆ. ಇದರಲ್ಲಿ 800 ರಿಂದ 900 ಹೊಸ ಕ್ಷಯರೋಗ ಪ್ರಕರಣಗಳು ದಾಖಲಾಗುತ್ತಿವೆ.

1400-1500 ಕ್ಷಯರೋಗ ಸಂಪರ್ಕಿತರಿಗೆ ಸೋಂಕಿನ ತಪಾಸಣೆ ಮಾಡಲಾಗುತ್ತಿದೆ. ಈ ರೋಗ ಬಾದಿತರಲ್ಲಿ ಶೇ. 86% ರೋಗಿಗಳನ್ನು ಪರಿಣಾಮಕಾರಿ ಚಿಕಿತ್ಸಾ ಆರೈಕೆಗಳೊಂದಿಗೆ ಗುಣಪಡಿಸಲಾಗುತ್ತಿದೆ. 2015 ನೇ ಇಸವಿಯಿಂದ ಕ್ಷಯರೋಗ ಪ್ರಕರಣಗಳು ಕ್ರಮೇಣವಾಗಿ ಪ್ರತಿ ಲಕ್ಷ ಜನರಲ್ಲಿ 237 ರಿಂದ 80 ಕ್ಷಯರೋಗ ಪ್ರಕರಣಗಳು ಇಳಿಮುಖವಾಗುತ್ತಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಅಮರೇಶ ಹೆಚ್, ಜಿಲ್ಲಾ ಆರೋಗ್ಯಾಧಿಕಾರಿ ಡಾ. ಎಂ.ಸಿ ಸುನೀಲಕುಮಾರ, ತಾಲ್ಲೂಕು ಆರೋಗ್ಯಾಧಿಕಾರಿಗಳು ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು ಹಾಗೂ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಅಗಸ್ತ್ಯ ಅಂತರರಾಷ್ಟ್ರೀಯ ಸಂಸ್ಥೆ ವತಿಯಿಂದ ವಿಜ್ಞಾನ ರಸಪ್ರಶ್ನೆ ಕಾರ್ಯಕ್ರಮ: ವಿಜೇತರಿಗೆ ಬಹುಮಾನ ವಿತರಣೆ

ಫೆ.24ರಂದು ದೊಡ್ಡಬಳ್ಳಾಪುರ ನಗರದ ಬಸವ ಭವನದಲ್ಲಿ ಅಗಸ್ತ್ಯ ಅಂತರರಾಷ್ಟ್ರೀಯ ಸಂಸ್ಥೆಯ ವತಿಯಿಂದ ವಿಜ್ಞಾನ ರಸಪ್ರಶ್ನೆ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು. ಈ…

2 hours ago

ಹೆರಿಗೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಗರ್ಭಿಣಿ: ಚಿಕಿ*ತ್ಸೆ ಫಲಕಾರಿಯಾಗದೆ ಸಾವು: ಪ್ರತಿಭಟನೆ ಮತ್ತು ಪ್ರಕರಣ ದಾಖಲು

ಹಾಸನ: ಹೆರಿಗೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಗರ್ಭಿಣಿಯೊಬ್ಬರು ಚಿಕಿ*ತ್ಸೆ ಫಲಕಾರಿಯಾಗದೆ ಮೃ*ಪಟ್ಟ ಘಟನೆ ಹಾಸನ ನಗರದ ಹಿಮ್ಸ್ (HIMS) ಆಸ್ಪತ್ರೆಯಲ್ಲಿ ನಡೆದಿದೆ.…

13 hours ago

ತೂಬಗೆರೆಯ ದೊಡ್ಡಮ್ಮ ದೇವಾಲಯದಲ್ಲಿ ಕಳ್ಳತನ: ಹುಂಡಿ, ತಾಳಿ, ಆಭರಣ ಕಳವು

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ಗ್ರಾಮದ ದೊಡ್ಡಮ್ಮ ದೇವಾಲಯದಲ್ಲಿ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ. ಮಂಗಳವಾರ ಬೆಳಿಗ್ಗೆ ದೇವಾಲಯದ ಬಾಗಿಲಿನ ಬೀಗ…

14 hours ago

ಸಂಬಳಕ್ಕಾಗಿ ಕಾರ್ಮಿಕರಿಂದ ಕಾರ್ಖಾನೆ ಮುಂದೆ ಪ್ರತಿಭಟನೆ

ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಗಾರ್ಮೆಂಟ್ಸ್ ಕಾರ್ಖಾನೆ(ಶೈಲೇಂದ್ರ ಎಕ್ಸ್ ಪೋರ್ಟ್ ಪ್ರೈವೇಟ್ ಲಿಮಿಟೆಡ್)ಯಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಕಳೆದ…

15 hours ago

ನೆಲಮಂಗಲ ನಗರಸಭೆಯ ಏಳು ಸದಸ್ಯರನ್ನು ಅನರ್ಹಗೊಳಿಸಿ ಜಿಲ್ಲಾಧಿಕಾರಿ ಎಬಿ ಬಸವರಾಜು ಆದೇಶ

ಕರ್ನಾಟಕ ಸ್ಥಳೀಯ ಸಂಸ್ಥೆಗಳ(ಪಕ್ಷಾಂತರ ನಿಷೇಧ) ಅಧಿನಿಯಮ 4(2)(|||) ರನ್ವಯ ತಕ್ಷಣದಿಂದ ಜಾರಿಗೆ ಬರುವಂತೆ ನೆಲಮಂಗಲ ನಗರಸಭೆಯ ಏಳು ಸದಸ್ಯರನ್ನು ಅನರ್ಹಗೊಳಿಸಿ…

17 hours ago

ಸ್ಪೆಷಲ್ ಕ್ಲಾಸ್ ಮುಗಿಸಿ ಮನೆಗೆ ಬರುತ್ತಿದ್ದ ಸಂಕೇತ್ ಎಂಬ ವಿದ್ಯಾರ್ಥಿಯ ಹತ್ಯೆ

ಶಿವಮೊಗ್ಗದಲ್ಲಿ ಸ್ಪೆಷಲ್ ಕ್ಲಾಸ್ ಮುಗಿಸಿ ಮನೆಗೆ ಬರುತ್ತಿದ್ದ ಸಂಕೇತ್ ಎಂಬ ವಿದ್ಯಾರ್ಥಿಯನ್ನು ಹತ್ಯೆ ಮಾಡಲಾಗಿದೆ. ನನ್ನ ಮೊಮ್ಮಗ ಯಾರ ತಂಟೆಗೂ…

1 day ago