ಕ್ಷಯರೋಗ ಮಾರಣಾಂತಿಕ ಖಾಯಿಲೆ ಅಲ್ಲ, ಚಿಕಿತ್ಸೆ ಮೂಲಕ ಗುಣಪಡಿಸಬಹುದದಾದ ಒಂದು ರೋಗವಾಗಿದ್ದು ಕ್ಷಯರೋಗದ ಲಕ್ಷಣಗಳು ಕಂಡುಬಂದಲ್ಲಿ ಭಯಭೀತರಾಗದೇ ಪ್ರಾಥಮಿಕ ಹಂತದಲ್ಲೇ ಚಿಕಿತ್ಸೆ ಪಡೆಯುವ ಮೂಲಕ ಗುಣಮುಖರಾಗಿ ಎಂದು ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿ ಡಾ. ಕೆ.ಎನ್. ಅನುರಾಧ ಅವರು ಹೇಳಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಕ್ಷಯರೋಗ ನಿರ್ಮೂಲನಾ ಘಟಕ ವತಿಯಿಂದ ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಆಯೋಜಿಸಿದ್ದ ಕ್ಷಯರೋಗ ಪತ್ತೆ ಮತ್ತು ಚಿಕಿತ್ಸೆ-100 ದಿನಗಳ ವಿಷೇಶ ಆಂದೋಲನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಜಿಲ್ಲೆಯನ್ನು ಕ್ಷಯರೋಗ ಮುಕ್ತ ಜಿಲ್ಲೆಯನ್ನಾಗಿ ಮಾಡುವ ಉದ್ದೇಶದಿಂದ ಆರೋಗ್ಯ ಇಲಾಖೆಯ ಅಧಿಕಾರಿಗಳು ಕ್ಷಯರೋಗಿಗಳ ಪತ್ತೆ ಹಚ್ಚಿ, ಸೂಕ್ತ ಚಿಕಿತ್ಸೆ ನೀಡುವಲ್ಲಿ ಕಾರ್ಯಪ್ರವ್ರತ್ತರಾಗಿದ್ದು, ಡಿಸೆಂಬರ್ 07 ರಿಂದ 2025 ರ ಮಾರ್ಚ್ 17 ವರೆಗೆ ಜಿಲ್ಲೆಯಾದ್ಯಂತ 100 ದಿನಗಳ ಆಂದೋಲನ ಹಮ್ಮಿಕೊಳ್ಳಲಾಗಿದೆ.
ಈ ಆಂದೋಲನಕ್ಕೆ ಚುನಾಯಿತ ಜನ ಪ್ರತಿನಿಧಿಗಳ, ಟಿ.ಬಿ.ಚಾಂಪಿಯನ್ಸ್,(ಕ್ಷಯರೋಗದಿಂದ ಗುಣಹೊಂದಿರುವವರು) ನಿಕ್ಷಯ್ ಮಿತ್ರ(ಸ್ಥಳೀಯವಾಗಿ ಕ್ಷಯರೋಗಿಗಳಿಗೆ ಪೌಷ್ಠಿಕ ಆಹಾರ ಒದಗಿಸುವ ದಾನಿಗಳು), ಖಾಸಗಿ ಆರೋಗ್ಯ ಸಂಸ್ಥೆಗಳು, ಪಂಚಾಯತ್ ರಾಜ್ ಇಲಾಖೆ ಹಾಗೂ ಇತರೆ ಸಂಘ ಸಂಸ್ಥೆಗಳ ಸಹಕಾರದ ಜೊತೆಗೆ ಆರೋಗ್ಯ ಸಿಬ್ಬಂದಿ ತಪಾಸಣೆಗಾಗಿ ಮನೆಗೆ ಬಂದಲ್ಲಿ ಸಾರ್ವಜನಿಕರು ಸಹಕರಿಸಬೇಕು ಎಂದು ಸಿ.ಇ.ಒ ಮನವಿ ಮಾಡಿದರು.
ಪ್ರಸ್ತುತ ದಿನಮಾನಗಳ ಕ್ಷಯರೋಗಕ್ಕೂ ಸೂಕ್ತ ಚಿಕಿತ್ಸೆ ಇದ್ದು, ಸಕಾಲದಲ್ಲಿ ಔಷದೋಪಚಾರ ಪಡೆದುಕೊಂಡು ಆರೋಗ್ಯವಂತರಾಗಬೇಕು. 2023-24 ರಲ್ಲಿ 8 ಗ್ರಾಮ ಪಂಚಾಯತಿಗಳನ್ನು ‘’ಕ್ಷಯಮುಕ್ತ ಗ್ರಾಮ ಪಂಚಾಯತಿ’’ ಎಂದು ಘೋಷಿಸಲಾಗಿದೆ. ಪ್ರಸಕ್ತ 2024-25 ನೇ ಸಾಲಿನಲ್ಲಿ 40 ಗ್ರಾಮ ಪಂಚಾಯತಿಗಳನ್ನು ಆಯ್ಕೆ ಮಾಡಿಕೊಂಡು ಮಾನದಂಡಗಳ ಅನ್ವಯ ಕಾರ್ಯರಂಭ ಮಾಡಲಾಗಿದೆ ಎಂದರು.
ಜಿಲ್ಲಾ ಕ್ಷಯರೋಗ ನಿರ್ಮೂಲನೆ ಅಧಿಕಾರಿ ಡಾ. ನಾಗೇಶ್.ಎಸ್ ಅವರು ಮಾತನಾಡಿ, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಪ್ರತಿವರ್ಷ ಸುಮಾರು 35000 ಸಂಭಾವ್ಯ ಕ್ಷಯರೋಗಿಗಳ ತಪಾಸಣೆಗೊಳಪಡಿಸಲಾಗುತ್ತಿದೆ. ಇದರಲ್ಲಿ 800 ರಿಂದ 900 ಹೊಸ ಕ್ಷಯರೋಗ ಪ್ರಕರಣಗಳು ದಾಖಲಾಗುತ್ತಿವೆ.
1400-1500 ಕ್ಷಯರೋಗ ಸಂಪರ್ಕಿತರಿಗೆ ಸೋಂಕಿನ ತಪಾಸಣೆ ಮಾಡಲಾಗುತ್ತಿದೆ. ಈ ರೋಗ ಬಾದಿತರಲ್ಲಿ ಶೇ. 86% ರೋಗಿಗಳನ್ನು ಪರಿಣಾಮಕಾರಿ ಚಿಕಿತ್ಸಾ ಆರೈಕೆಗಳೊಂದಿಗೆ ಗುಣಪಡಿಸಲಾಗುತ್ತಿದೆ. 2015 ನೇ ಇಸವಿಯಿಂದ ಕ್ಷಯರೋಗ ಪ್ರಕರಣಗಳು ಕ್ರಮೇಣವಾಗಿ ಪ್ರತಿ ಲಕ್ಷ ಜನರಲ್ಲಿ 237 ರಿಂದ 80 ಕ್ಷಯರೋಗ ಪ್ರಕರಣಗಳು ಇಳಿಮುಖವಾಗುತ್ತಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಅಮರೇಶ ಹೆಚ್, ಜಿಲ್ಲಾ ಆರೋಗ್ಯಾಧಿಕಾರಿ ಡಾ. ಎಂ.ಸಿ ಸುನೀಲಕುಮಾರ, ತಾಲ್ಲೂಕು ಆರೋಗ್ಯಾಧಿಕಾರಿಗಳು ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು ಹಾಗೂ ಇತರರು ಉಪಸ್ಥಿತರಿದ್ದರು.
ದೊಡ್ಡಬಳ್ಳಾಪುರ: ಇಂದಿನ ವಿದ್ಯಾರ್ಥಿಗಳಿಗೆ ಪಾಠ ಹೇಳಿಕೊಡಲು ಶಿಕ್ಷಕರಿಗೆ ಜ್ಞಾನವಷ್ಟೇ ಸಾಕಾಗುವುದಿಲ್ಲ. ಅಪಾರ ತಾಳ್ಮೆ, ಸಹನೆ, ನಯ-ವಿನಯ ಹಾಗೂ ಮಕ್ಕಳ ಮನಸ್ಸನ್ನು…
ಕೋಲಾರ : ಬರ ಹಾಗೂ ಬಿಸಿಲಿನ ತಾಪದಿಂದ ರೈತರ ಬೆಳೆಗಳು ಒಣಗುತ್ತಿರುವ ಸಂದರ್ಭದಲ್ಲಿ ಸಮರ್ಪಕ ಹಾಗೂ ಗುಣಮಟ್ಟದ ವಿದ್ಯುತ್ ಪೂರೈಕೆ…
ದೊಡ್ಡಬಳ್ಳಾಪುರ: ನಗರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11…
ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…
ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…
ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…