ಪ್ರಾಥಮಿಕ ಹಂತದಲ್ಲೇ ಕ್ಷಯರೋಗ ಚಿಕಿತ್ಸೆ ಪಡೆದು ಗುಣಮುಖರಾಗಿ- ಸಿಇಒ ಡಾ.ಕೆ.ಎನ್ ಅನುರಾಧ

ಕ್ಷಯರೋಗ ಮಾರಣಾಂತಿಕ ಖಾಯಿಲೆ ಅಲ್ಲ, ಚಿಕಿತ್ಸೆ ಮೂಲಕ ಗುಣಪಡಿಸಬಹುದದಾದ ಒಂದು ರೋಗವಾಗಿದ್ದು ಕ್ಷಯರೋಗದ ಲಕ್ಷಣಗಳು ಕಂಡುಬಂದಲ್ಲಿ ಭಯಭೀತರಾಗದೇ ಪ್ರಾಥಮಿಕ ಹಂತದಲ್ಲೇ ಚಿಕಿತ್ಸೆ ಪಡೆಯುವ ಮೂಲಕ ಗುಣಮುಖರಾಗಿ ಎಂದು ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿ ಡಾ. ಕೆ.ಎನ್. ಅನುರಾಧ ಅವರು ಹೇಳಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಕ್ಷಯರೋಗ ನಿರ್ಮೂಲನಾ ಘಟಕ ವತಿಯಿಂದ ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಆಯೋಜಿಸಿದ್ದ ಕ್ಷಯರೋಗ ಪತ್ತೆ ಮತ್ತು ಚಿಕಿತ್ಸೆ-100 ದಿನಗಳ ವಿಷೇಶ ಆಂದೋಲನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಜಿಲ್ಲೆಯನ್ನು ಕ್ಷಯರೋಗ ಮುಕ್ತ ಜಿಲ್ಲೆಯನ್ನಾಗಿ ಮಾಡುವ ಉದ್ದೇಶದಿಂದ ಆರೋಗ್ಯ ಇಲಾಖೆಯ ಅಧಿಕಾರಿಗಳು ಕ್ಷಯರೋಗಿಗಳ ಪತ್ತೆ ಹಚ್ಚಿ, ಸೂಕ್ತ ಚಿಕಿತ್ಸೆ ನೀಡುವಲ್ಲಿ ಕಾರ್ಯಪ್ರವ್ರತ್ತರಾಗಿದ್ದು, ಡಿಸೆಂಬರ್ 07 ರಿಂದ 2025 ರ ಮಾರ್ಚ್ 17 ವರೆಗೆ ಜಿಲ್ಲೆಯಾದ್ಯಂತ 100 ದಿನಗಳ ಆಂದೋಲನ ಹಮ್ಮಿಕೊಳ್ಳಲಾಗಿದೆ.

ಈ ಆಂದೋಲನಕ್ಕೆ ಚುನಾಯಿತ ಜನ ಪ್ರತಿನಿಧಿಗಳ, ಟಿ.ಬಿ.ಚಾಂಪಿಯನ್ಸ್,(ಕ್ಷಯರೋಗದಿಂದ ಗುಣಹೊಂದಿರುವವರು) ನಿಕ್ಷಯ್ ಮಿತ್ರ(ಸ್ಥಳೀಯವಾಗಿ ಕ್ಷಯರೋಗಿಗಳಿಗೆ ಪೌಷ್ಠಿಕ ಆಹಾರ ಒದಗಿಸುವ ದಾನಿಗಳು), ಖಾಸಗಿ ಆರೋಗ್ಯ ಸಂಸ್ಥೆಗಳು, ಪಂಚಾಯತ್ ರಾಜ್ ಇಲಾಖೆ ಹಾಗೂ ಇತರೆ ಸಂಘ ಸಂಸ್ಥೆಗಳ ಸಹಕಾರದ ಜೊತೆಗೆ ಆರೋಗ್ಯ ಸಿಬ್ಬಂದಿ ತಪಾಸಣೆಗಾಗಿ ಮನೆಗೆ ಬಂದಲ್ಲಿ ಸಾರ್ವಜನಿಕರು ಸಹಕರಿಸಬೇಕು ಎಂದು ಸಿ.ಇ.ಒ ಮನವಿ ಮಾಡಿದರು.

ಪ್ರಸ್ತುತ ದಿನಮಾನಗಳ ಕ್ಷಯರೋಗಕ್ಕೂ ಸೂಕ್ತ ಚಿಕಿತ್ಸೆ ಇದ್ದು, ಸಕಾಲದಲ್ಲಿ ಔಷದೋಪಚಾರ ಪಡೆದುಕೊಂಡು ಆರೋಗ್ಯವಂತರಾಗಬೇಕು. 2023-24 ರಲ್ಲಿ 8 ಗ್ರಾಮ ಪಂಚಾಯತಿಗಳನ್ನು ‘’ಕ್ಷಯಮುಕ್ತ ಗ್ರಾಮ ಪಂಚಾಯತಿ’’ ಎಂದು ಘೋಷಿಸಲಾಗಿದೆ. ಪ್ರಸಕ್ತ 2024-25 ನೇ ಸಾಲಿನಲ್ಲಿ 40 ಗ್ರಾಮ ಪಂಚಾಯತಿಗಳನ್ನು ಆಯ್ಕೆ ಮಾಡಿಕೊಂಡು ಮಾನದಂಡಗಳ ಅನ್ವಯ ಕಾರ್ಯರಂಭ ಮಾಡಲಾಗಿದೆ ಎಂದರು.

ಜಿಲ್ಲಾ ಕ್ಷಯರೋಗ ನಿರ್ಮೂಲನೆ ಅಧಿಕಾರಿ ಡಾ. ನಾಗೇಶ್.ಎಸ್ ಅವರು ಮಾತನಾಡಿ, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಪ್ರತಿವರ್ಷ ಸುಮಾರು 35000 ಸಂಭಾವ್ಯ ಕ್ಷಯರೋಗಿಗಳ ತಪಾಸಣೆಗೊಳಪಡಿಸಲಾಗುತ್ತಿದೆ. ಇದರಲ್ಲಿ 800 ರಿಂದ 900 ಹೊಸ ಕ್ಷಯರೋಗ ಪ್ರಕರಣಗಳು ದಾಖಲಾಗುತ್ತಿವೆ.

1400-1500 ಕ್ಷಯರೋಗ ಸಂಪರ್ಕಿತರಿಗೆ ಸೋಂಕಿನ ತಪಾಸಣೆ ಮಾಡಲಾಗುತ್ತಿದೆ. ಈ ರೋಗ ಬಾದಿತರಲ್ಲಿ ಶೇ. 86% ರೋಗಿಗಳನ್ನು ಪರಿಣಾಮಕಾರಿ ಚಿಕಿತ್ಸಾ ಆರೈಕೆಗಳೊಂದಿಗೆ ಗುಣಪಡಿಸಲಾಗುತ್ತಿದೆ. 2015 ನೇ ಇಸವಿಯಿಂದ ಕ್ಷಯರೋಗ ಪ್ರಕರಣಗಳು ಕ್ರಮೇಣವಾಗಿ ಪ್ರತಿ ಲಕ್ಷ ಜನರಲ್ಲಿ 237 ರಿಂದ 80 ಕ್ಷಯರೋಗ ಪ್ರಕರಣಗಳು ಇಳಿಮುಖವಾಗುತ್ತಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಅಮರೇಶ ಹೆಚ್, ಜಿಲ್ಲಾ ಆರೋಗ್ಯಾಧಿಕಾರಿ ಡಾ. ಎಂ.ಸಿ ಸುನೀಲಕುಮಾರ, ತಾಲ್ಲೂಕು ಆರೋಗ್ಯಾಧಿಕಾರಿಗಳು ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು ಹಾಗೂ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಫ್ರಿಡ್ಜ್ ಕ್ಲೀನ್ ಮಾಡುವಾಗ ವಿದ್ಯುತ್ ಶಾಕ್: ಮಹಿಳೆ ದುರ್ಮರಣ

ದೊಡ್ಡಬಳ್ಳಾಪುರ: ಫ್ರಿಡ್ಜ್ ಸ್ವಚ್ಛಗೊಳಿಸುತ್ತಿದ್ದ ವೇಳೆ ವಿದ್ಯುತ್ ಶಾಕ್ ಹೊಡೆದು ಮಹಿಳೆಯೊಬ್ಬರು ಮೃತಪಟ್ಟಿರುವ ದುರ್ಘಟನೆ ದೊಡ್ಡಬಳ್ಳಾಪುರ ನಗರದ ಚೈತನ್ಯನಗರದಲ್ಲಿ ನಡೆದಿದೆ. ಮೃತರನ್ನು…

1 hour ago

“ಎಲ್ಲವೂ ವಿಫಲವಾದಾಗ ತಾಳ್ಮೆ ಸಫಲವಾಗುತ್ತದೆ”…….

" ಎಲ್ಲವೂ ವಿಫಲವಾದಾಗ ತಾಳ್ಮೆಯು ಸಫಲವಾಗುತ್ತದೆ....." ಎಂಬ ದಾರ್ಶನಿಕರ ಮಾತು ಎಷ್ಟೊಂದು ಅನುಭಾವದ ಅರ್ಥಪೂರ್ಣ ಮಾತಲ್ಲವೇ.... ಇದಕ್ಕೆ ಅತ್ಯಂತ ನೈಜ…

11 hours ago

ಎಲ್ರಿ ಅಧಿಕಾರಿಗಳು, ಜನರ ಸಮಸ್ಯೆ ಕೇಳೋದ್ಯಾರು..?- ತಹಶೀಲ್ದಾರ್ ಮಲ್ಲಪ್ಪ ಕೆ ಯರಗೋಳಗೆ ಸಚಿವ ಕೆ.ಎಚ್ ಮುನಿಯಪ್ಪ ತೀವ್ರ ತರಾಟೆ

ಎಲ್ರಿ ಅಧಿಕಾರಿಗಳು, ಜನ್ರ ಸಮಸ್ಯೆ ಕೇಳೋದ್ಯಾರು..?ಜನ ನನಗೆ ವೋಟ್ ಹಾಕಿದ್ಯಾಕೆ..? ಅಧಿಕಾರಿಗಳು ಇಲ್ಲಿದ್ರೆ ಜನರ ಸಮಸ್ಯೆ ಕೂಡಲೇ ಬಗೆಹರಿಸಬಹುದಲ್ವಾ.. ವೋಟ್…

22 hours ago

1 ಕೋಟಿ ರೂ. ವೆಚ್ಚದ ಸಿಸಿ ರಸ್ತೆ, ಚರಂಡಿ ಕಾಮಗಾರಿಗೆ ಚಾಲನೆ

ದೇವನಹಳ್ಳಿ ವಿಧಾನ ಸಭಾ ಕ್ಷೇತ್ರದ ಶಾಸಕನಾಗಿರುವ ಜೊತೆಗೆ ಜಿಲ್ಲೆಯ ಉಸ್ತುವಾರಿ ಮಂತ್ರಿಯಾಗಿದ್ದು, ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತಗಳ ಸರ್ವಾಂಗೀಣ ಅಭಿವೃದ್ಧಿಗಳಿಗೆ…

1 day ago

ಪ್ರಸ್ತುತ ಒಂದು ಮಲೇರಿಯಾ, 6 ಡೆಂಗ್ಯೂ ದಾಖಲು: ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಿ:- ಡಿಸಿ ಡಾ.ಕೆ ಎನ್ ಅನುರಾಧ

ಮುಂಗಾರು ಹಂಗಾಮಿನಲ್ಲಿ ಮಳೆಯಿಂದಾಗಿ ಸೊಳ್ಳೆಗಳ ಉತ್ಪತ್ತಿ ಹೆಚ್ಚಾಗಲಿದ್ದು ಇದರಿಂದ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆ ಇರುವುದರಿಂದ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ…

2 days ago

ಗ್ರಾಮಾಂತರ ಪೊಲೀಸ್ ಠಾಣೆಗೆ ಬೊಲೆರೋ ವಾಹನ ಹಸ್ತಾಂತರ

ನಗರಕ್ಕೆ ಸಂಚಾರಿ ಪೊಲೀಸ್ ಠಾಣೆ ಮಂಜೂರಾಗಿದೆ. ಆದರೆ, ಇಲ್ಲಿಯವರೆಗೂ ಅನುದಾನ ಬಿಡುಗಡೆ ಮಾಡಿಲ್ಲ. ಪೊಲೀಸ್ ಠಾಣೆಯ ಜೀಪ್ ಗೂ ಶಾಸಕರ…

2 days ago