ಕ್ಷಯರೋಗ ಮಾರಣಾಂತಿಕ ಖಾಯಿಲೆ ಅಲ್ಲ, ಚಿಕಿತ್ಸೆ ಮೂಲಕ ಗುಣಪಡಿಸಬಹುದದಾದ ಒಂದು ರೋಗವಾಗಿದ್ದು ಕ್ಷಯರೋಗದ ಲಕ್ಷಣಗಳು ಕಂಡುಬಂದಲ್ಲಿ ಭಯಭೀತರಾಗದೇ ಪ್ರಾಥಮಿಕ ಹಂತದಲ್ಲೇ ಚಿಕಿತ್ಸೆ ಪಡೆಯುವ ಮೂಲಕ ಗುಣಮುಖರಾಗಿ ಎಂದು ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿ ಡಾ. ಕೆ.ಎನ್. ಅನುರಾಧ ಅವರು ಹೇಳಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಕ್ಷಯರೋಗ ನಿರ್ಮೂಲನಾ ಘಟಕ ವತಿಯಿಂದ ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಆಯೋಜಿಸಿದ್ದ ಕ್ಷಯರೋಗ ಪತ್ತೆ ಮತ್ತು ಚಿಕಿತ್ಸೆ-100 ದಿನಗಳ ವಿಷೇಶ ಆಂದೋಲನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಜಿಲ್ಲೆಯನ್ನು ಕ್ಷಯರೋಗ ಮುಕ್ತ ಜಿಲ್ಲೆಯನ್ನಾಗಿ ಮಾಡುವ ಉದ್ದೇಶದಿಂದ ಆರೋಗ್ಯ ಇಲಾಖೆಯ ಅಧಿಕಾರಿಗಳು ಕ್ಷಯರೋಗಿಗಳ ಪತ್ತೆ ಹಚ್ಚಿ, ಸೂಕ್ತ ಚಿಕಿತ್ಸೆ ನೀಡುವಲ್ಲಿ ಕಾರ್ಯಪ್ರವ್ರತ್ತರಾಗಿದ್ದು, ಡಿಸೆಂಬರ್ 07 ರಿಂದ 2025 ರ ಮಾರ್ಚ್ 17 ವರೆಗೆ ಜಿಲ್ಲೆಯಾದ್ಯಂತ 100 ದಿನಗಳ ಆಂದೋಲನ ಹಮ್ಮಿಕೊಳ್ಳಲಾಗಿದೆ.
ಈ ಆಂದೋಲನಕ್ಕೆ ಚುನಾಯಿತ ಜನ ಪ್ರತಿನಿಧಿಗಳ, ಟಿ.ಬಿ.ಚಾಂಪಿಯನ್ಸ್,(ಕ್ಷಯರೋಗದಿಂದ ಗುಣಹೊಂದಿರುವವರು) ನಿಕ್ಷಯ್ ಮಿತ್ರ(ಸ್ಥಳೀಯವಾಗಿ ಕ್ಷಯರೋಗಿಗಳಿಗೆ ಪೌಷ್ಠಿಕ ಆಹಾರ ಒದಗಿಸುವ ದಾನಿಗಳು), ಖಾಸಗಿ ಆರೋಗ್ಯ ಸಂಸ್ಥೆಗಳು, ಪಂಚಾಯತ್ ರಾಜ್ ಇಲಾಖೆ ಹಾಗೂ ಇತರೆ ಸಂಘ ಸಂಸ್ಥೆಗಳ ಸಹಕಾರದ ಜೊತೆಗೆ ಆರೋಗ್ಯ ಸಿಬ್ಬಂದಿ ತಪಾಸಣೆಗಾಗಿ ಮನೆಗೆ ಬಂದಲ್ಲಿ ಸಾರ್ವಜನಿಕರು ಸಹಕರಿಸಬೇಕು ಎಂದು ಸಿ.ಇ.ಒ ಮನವಿ ಮಾಡಿದರು.
ಪ್ರಸ್ತುತ ದಿನಮಾನಗಳ ಕ್ಷಯರೋಗಕ್ಕೂ ಸೂಕ್ತ ಚಿಕಿತ್ಸೆ ಇದ್ದು, ಸಕಾಲದಲ್ಲಿ ಔಷದೋಪಚಾರ ಪಡೆದುಕೊಂಡು ಆರೋಗ್ಯವಂತರಾಗಬೇಕು. 2023-24 ರಲ್ಲಿ 8 ಗ್ರಾಮ ಪಂಚಾಯತಿಗಳನ್ನು ‘’ಕ್ಷಯಮುಕ್ತ ಗ್ರಾಮ ಪಂಚಾಯತಿ’’ ಎಂದು ಘೋಷಿಸಲಾಗಿದೆ. ಪ್ರಸಕ್ತ 2024-25 ನೇ ಸಾಲಿನಲ್ಲಿ 40 ಗ್ರಾಮ ಪಂಚಾಯತಿಗಳನ್ನು ಆಯ್ಕೆ ಮಾಡಿಕೊಂಡು ಮಾನದಂಡಗಳ ಅನ್ವಯ ಕಾರ್ಯರಂಭ ಮಾಡಲಾಗಿದೆ ಎಂದರು.
ಜಿಲ್ಲಾ ಕ್ಷಯರೋಗ ನಿರ್ಮೂಲನೆ ಅಧಿಕಾರಿ ಡಾ. ನಾಗೇಶ್.ಎಸ್ ಅವರು ಮಾತನಾಡಿ, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಪ್ರತಿವರ್ಷ ಸುಮಾರು 35000 ಸಂಭಾವ್ಯ ಕ್ಷಯರೋಗಿಗಳ ತಪಾಸಣೆಗೊಳಪಡಿಸಲಾಗುತ್ತಿದೆ. ಇದರಲ್ಲಿ 800 ರಿಂದ 900 ಹೊಸ ಕ್ಷಯರೋಗ ಪ್ರಕರಣಗಳು ದಾಖಲಾಗುತ್ತಿವೆ.
1400-1500 ಕ್ಷಯರೋಗ ಸಂಪರ್ಕಿತರಿಗೆ ಸೋಂಕಿನ ತಪಾಸಣೆ ಮಾಡಲಾಗುತ್ತಿದೆ. ಈ ರೋಗ ಬಾದಿತರಲ್ಲಿ ಶೇ. 86% ರೋಗಿಗಳನ್ನು ಪರಿಣಾಮಕಾರಿ ಚಿಕಿತ್ಸಾ ಆರೈಕೆಗಳೊಂದಿಗೆ ಗುಣಪಡಿಸಲಾಗುತ್ತಿದೆ. 2015 ನೇ ಇಸವಿಯಿಂದ ಕ್ಷಯರೋಗ ಪ್ರಕರಣಗಳು ಕ್ರಮೇಣವಾಗಿ ಪ್ರತಿ ಲಕ್ಷ ಜನರಲ್ಲಿ 237 ರಿಂದ 80 ಕ್ಷಯರೋಗ ಪ್ರಕರಣಗಳು ಇಳಿಮುಖವಾಗುತ್ತಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಅಮರೇಶ ಹೆಚ್, ಜಿಲ್ಲಾ ಆರೋಗ್ಯಾಧಿಕಾರಿ ಡಾ. ಎಂ.ಸಿ ಸುನೀಲಕುಮಾರ, ತಾಲ್ಲೂಕು ಆರೋಗ್ಯಾಧಿಕಾರಿಗಳು ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು ಹಾಗೂ ಇತರರು ಉಪಸ್ಥಿತರಿದ್ದರು.
ಡೇ ಕೇರ್........, ಮುದ್ದು ಕಂದಮ್ಮಗಳ ಹೊಣೆ ಕೆಲಸಗಾರರದ್ದೋ, ನಮ್ಮದೋ...... ಬೆಂಗಳೂರಿನಲ್ಲಿ ಪುಟ್ಟ ಮಕ್ಕಳನ್ನು ಆರೈಕೆ ಮಾಡುವ ಡೇಕೇರ್ ಎಂಬ ಪರಿಕಲ್ಪನೆಯ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ರೈಲ್ವೆ ಪೊಲೀಸ್ ಠಾಣೆ ವ್ಯಾಪ್ತಿಯ ಒಡ್ಡರಹಳ್ಳಿ ಮತ್ತು ಮಾಕಳೀದುರ್ಗ ರೈಲು ನಿಲ್ದಾಣಗಳ ನಡುವಿನ ಮಾಕಳಿ ಗೋಶಾಲೆ ಸಮೀಪದ…
ಚಿಕ್ಕಬಳ್ಳಾಪುರ: ಪತ್ನಿಯ ಶೀಲದ ಬಗ್ಗೆ ಅನುಮಾನ ಹಾಗೂ ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದ ಕುಟುಂಬ ಕಲಹದ ಹಿನ್ನೆಲೆಯಲ್ಲಿ ಗೃಹಿಣಿಯನ್ನು ಪತಿಯೇ ಕೊಲೆ…
ಚಿಂತಾಮಣಿ: ಕಳೆದ ಕೆಲವು ದಿನಗಳಿಂದ ನಡೆಯುತ್ತಿದ್ದ ಕೌಟುಂಬಿಕ ಕಲಹ ಕೊನೆಗೆ ಭೀಕರ ತಿರುವು ಪಡೆದು, ವ್ಯಕ್ತಿಯೊಬ್ಬ ತನ್ನ ಪತ್ನಿ ಹಾಗೂ…
ದೊಡ್ಡಬಳ್ಳಾಪುರ: ಹೈನುಗಾರಿಕೆಗೆ ಅಗತ್ಯವಾದ ಹಿಂಡಿ, ಬೂಸ, ಮೇವು ಸೇರಿದಂತೆ ಕಚ್ಚಾ ವಸ್ತುಗಳ ಬೆಲೆ ನಿರಂತರ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತರ ಸಂಕಷ್ಟವನ್ನು…
ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಜು.7 ರಂದು 66/11 ಕೆವಿ ಡಿಕ್ರಾಸ್ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F15-Tropical Flavours ಮತ್ತು 220/66/11ಕೆವಿ…