ಪ್ರಾಥಮಿಕ ಹಂತದಲ್ಲೇ ಕ್ಷಯರೋಗ ಚಿಕಿತ್ಸೆ ಪಡೆದು ಗುಣಮುಖರಾಗಿ- ಸಿಇಒ ಡಾ.ಕೆ.ಎನ್ ಅನುರಾಧ

ಕ್ಷಯರೋಗ ಮಾರಣಾಂತಿಕ ಖಾಯಿಲೆ ಅಲ್ಲ, ಚಿಕಿತ್ಸೆ ಮೂಲಕ ಗುಣಪಡಿಸಬಹುದದಾದ ಒಂದು ರೋಗವಾಗಿದ್ದು ಕ್ಷಯರೋಗದ ಲಕ್ಷಣಗಳು ಕಂಡುಬಂದಲ್ಲಿ ಭಯಭೀತರಾಗದೇ ಪ್ರಾಥಮಿಕ ಹಂತದಲ್ಲೇ ಚಿಕಿತ್ಸೆ ಪಡೆಯುವ ಮೂಲಕ ಗುಣಮುಖರಾಗಿ ಎಂದು ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿ ಡಾ. ಕೆ.ಎನ್. ಅನುರಾಧ ಅವರು ಹೇಳಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಕ್ಷಯರೋಗ ನಿರ್ಮೂಲನಾ ಘಟಕ ವತಿಯಿಂದ ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಆಯೋಜಿಸಿದ್ದ ಕ್ಷಯರೋಗ ಪತ್ತೆ ಮತ್ತು ಚಿಕಿತ್ಸೆ-100 ದಿನಗಳ ವಿಷೇಶ ಆಂದೋಲನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಜಿಲ್ಲೆಯನ್ನು ಕ್ಷಯರೋಗ ಮುಕ್ತ ಜಿಲ್ಲೆಯನ್ನಾಗಿ ಮಾಡುವ ಉದ್ದೇಶದಿಂದ ಆರೋಗ್ಯ ಇಲಾಖೆಯ ಅಧಿಕಾರಿಗಳು ಕ್ಷಯರೋಗಿಗಳ ಪತ್ತೆ ಹಚ್ಚಿ, ಸೂಕ್ತ ಚಿಕಿತ್ಸೆ ನೀಡುವಲ್ಲಿ ಕಾರ್ಯಪ್ರವ್ರತ್ತರಾಗಿದ್ದು, ಡಿಸೆಂಬರ್ 07 ರಿಂದ 2025 ರ ಮಾರ್ಚ್ 17 ವರೆಗೆ ಜಿಲ್ಲೆಯಾದ್ಯಂತ 100 ದಿನಗಳ ಆಂದೋಲನ ಹಮ್ಮಿಕೊಳ್ಳಲಾಗಿದೆ.

ಈ ಆಂದೋಲನಕ್ಕೆ ಚುನಾಯಿತ ಜನ ಪ್ರತಿನಿಧಿಗಳ, ಟಿ.ಬಿ.ಚಾಂಪಿಯನ್ಸ್,(ಕ್ಷಯರೋಗದಿಂದ ಗುಣಹೊಂದಿರುವವರು) ನಿಕ್ಷಯ್ ಮಿತ್ರ(ಸ್ಥಳೀಯವಾಗಿ ಕ್ಷಯರೋಗಿಗಳಿಗೆ ಪೌಷ್ಠಿಕ ಆಹಾರ ಒದಗಿಸುವ ದಾನಿಗಳು), ಖಾಸಗಿ ಆರೋಗ್ಯ ಸಂಸ್ಥೆಗಳು, ಪಂಚಾಯತ್ ರಾಜ್ ಇಲಾಖೆ ಹಾಗೂ ಇತರೆ ಸಂಘ ಸಂಸ್ಥೆಗಳ ಸಹಕಾರದ ಜೊತೆಗೆ ಆರೋಗ್ಯ ಸಿಬ್ಬಂದಿ ತಪಾಸಣೆಗಾಗಿ ಮನೆಗೆ ಬಂದಲ್ಲಿ ಸಾರ್ವಜನಿಕರು ಸಹಕರಿಸಬೇಕು ಎಂದು ಸಿ.ಇ.ಒ ಮನವಿ ಮಾಡಿದರು.

ಪ್ರಸ್ತುತ ದಿನಮಾನಗಳ ಕ್ಷಯರೋಗಕ್ಕೂ ಸೂಕ್ತ ಚಿಕಿತ್ಸೆ ಇದ್ದು, ಸಕಾಲದಲ್ಲಿ ಔಷದೋಪಚಾರ ಪಡೆದುಕೊಂಡು ಆರೋಗ್ಯವಂತರಾಗಬೇಕು. 2023-24 ರಲ್ಲಿ 8 ಗ್ರಾಮ ಪಂಚಾಯತಿಗಳನ್ನು ‘’ಕ್ಷಯಮುಕ್ತ ಗ್ರಾಮ ಪಂಚಾಯತಿ’’ ಎಂದು ಘೋಷಿಸಲಾಗಿದೆ. ಪ್ರಸಕ್ತ 2024-25 ನೇ ಸಾಲಿನಲ್ಲಿ 40 ಗ್ರಾಮ ಪಂಚಾಯತಿಗಳನ್ನು ಆಯ್ಕೆ ಮಾಡಿಕೊಂಡು ಮಾನದಂಡಗಳ ಅನ್ವಯ ಕಾರ್ಯರಂಭ ಮಾಡಲಾಗಿದೆ ಎಂದರು.

ಜಿಲ್ಲಾ ಕ್ಷಯರೋಗ ನಿರ್ಮೂಲನೆ ಅಧಿಕಾರಿ ಡಾ. ನಾಗೇಶ್.ಎಸ್ ಅವರು ಮಾತನಾಡಿ, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಪ್ರತಿವರ್ಷ ಸುಮಾರು 35000 ಸಂಭಾವ್ಯ ಕ್ಷಯರೋಗಿಗಳ ತಪಾಸಣೆಗೊಳಪಡಿಸಲಾಗುತ್ತಿದೆ. ಇದರಲ್ಲಿ 800 ರಿಂದ 900 ಹೊಸ ಕ್ಷಯರೋಗ ಪ್ರಕರಣಗಳು ದಾಖಲಾಗುತ್ತಿವೆ.

1400-1500 ಕ್ಷಯರೋಗ ಸಂಪರ್ಕಿತರಿಗೆ ಸೋಂಕಿನ ತಪಾಸಣೆ ಮಾಡಲಾಗುತ್ತಿದೆ. ಈ ರೋಗ ಬಾದಿತರಲ್ಲಿ ಶೇ. 86% ರೋಗಿಗಳನ್ನು ಪರಿಣಾಮಕಾರಿ ಚಿಕಿತ್ಸಾ ಆರೈಕೆಗಳೊಂದಿಗೆ ಗುಣಪಡಿಸಲಾಗುತ್ತಿದೆ. 2015 ನೇ ಇಸವಿಯಿಂದ ಕ್ಷಯರೋಗ ಪ್ರಕರಣಗಳು ಕ್ರಮೇಣವಾಗಿ ಪ್ರತಿ ಲಕ್ಷ ಜನರಲ್ಲಿ 237 ರಿಂದ 80 ಕ್ಷಯರೋಗ ಪ್ರಕರಣಗಳು ಇಳಿಮುಖವಾಗುತ್ತಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಅಮರೇಶ ಹೆಚ್, ಜಿಲ್ಲಾ ಆರೋಗ್ಯಾಧಿಕಾರಿ ಡಾ. ಎಂ.ಸಿ ಸುನೀಲಕುಮಾರ, ತಾಲ್ಲೂಕು ಆರೋಗ್ಯಾಧಿಕಾರಿಗಳು ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು ಹಾಗೂ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಘಾಟಿ ಕ್ಷೇತ್ರದಲ್ಲಿ ನಾಗರ ಪಂಚಮಿ ಸಂಭ್ರಮ

ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…

10 hours ago

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

1 day ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

1 day ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

2 days ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

2 days ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

2 days ago