ಕ್ಷಯರೋಗ ಮಾರಣಾಂತಿಕ ಖಾಯಿಲೆ ಅಲ್ಲ, ಚಿಕಿತ್ಸೆ ಮೂಲಕ ಗುಣಪಡಿಸಬಹುದದಾದ ಒಂದು ರೋಗವಾಗಿದ್ದು ಕ್ಷಯರೋಗದ ಲಕ್ಷಣಗಳು ಕಂಡುಬಂದಲ್ಲಿ ಭಯಭೀತರಾಗದೇ ಪ್ರಾಥಮಿಕ ಹಂತದಲ್ಲೇ ಚಿಕಿತ್ಸೆ ಪಡೆಯುವ ಮೂಲಕ ಗುಣಮುಖರಾಗಿ ಎಂದು ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿ ಡಾ. ಕೆ.ಎನ್. ಅನುರಾಧ ಅವರು ಹೇಳಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಕ್ಷಯರೋಗ ನಿರ್ಮೂಲನಾ ಘಟಕ ವತಿಯಿಂದ ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಆಯೋಜಿಸಿದ್ದ ಕ್ಷಯರೋಗ ಪತ್ತೆ ಮತ್ತು ಚಿಕಿತ್ಸೆ-100 ದಿನಗಳ ವಿಷೇಶ ಆಂದೋಲನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಜಿಲ್ಲೆಯನ್ನು ಕ್ಷಯರೋಗ ಮುಕ್ತ ಜಿಲ್ಲೆಯನ್ನಾಗಿ ಮಾಡುವ ಉದ್ದೇಶದಿಂದ ಆರೋಗ್ಯ ಇಲಾಖೆಯ ಅಧಿಕಾರಿಗಳು ಕ್ಷಯರೋಗಿಗಳ ಪತ್ತೆ ಹಚ್ಚಿ, ಸೂಕ್ತ ಚಿಕಿತ್ಸೆ ನೀಡುವಲ್ಲಿ ಕಾರ್ಯಪ್ರವ್ರತ್ತರಾಗಿದ್ದು, ಡಿಸೆಂಬರ್ 07 ರಿಂದ 2025 ರ ಮಾರ್ಚ್ 17 ವರೆಗೆ ಜಿಲ್ಲೆಯಾದ್ಯಂತ 100 ದಿನಗಳ ಆಂದೋಲನ ಹಮ್ಮಿಕೊಳ್ಳಲಾಗಿದೆ.
ಈ ಆಂದೋಲನಕ್ಕೆ ಚುನಾಯಿತ ಜನ ಪ್ರತಿನಿಧಿಗಳ, ಟಿ.ಬಿ.ಚಾಂಪಿಯನ್ಸ್,(ಕ್ಷಯರೋಗದಿಂದ ಗುಣಹೊಂದಿರುವವರು) ನಿಕ್ಷಯ್ ಮಿತ್ರ(ಸ್ಥಳೀಯವಾಗಿ ಕ್ಷಯರೋಗಿಗಳಿಗೆ ಪೌಷ್ಠಿಕ ಆಹಾರ ಒದಗಿಸುವ ದಾನಿಗಳು), ಖಾಸಗಿ ಆರೋಗ್ಯ ಸಂಸ್ಥೆಗಳು, ಪಂಚಾಯತ್ ರಾಜ್ ಇಲಾಖೆ ಹಾಗೂ ಇತರೆ ಸಂಘ ಸಂಸ್ಥೆಗಳ ಸಹಕಾರದ ಜೊತೆಗೆ ಆರೋಗ್ಯ ಸಿಬ್ಬಂದಿ ತಪಾಸಣೆಗಾಗಿ ಮನೆಗೆ ಬಂದಲ್ಲಿ ಸಾರ್ವಜನಿಕರು ಸಹಕರಿಸಬೇಕು ಎಂದು ಸಿ.ಇ.ಒ ಮನವಿ ಮಾಡಿದರು.
ಪ್ರಸ್ತುತ ದಿನಮಾನಗಳ ಕ್ಷಯರೋಗಕ್ಕೂ ಸೂಕ್ತ ಚಿಕಿತ್ಸೆ ಇದ್ದು, ಸಕಾಲದಲ್ಲಿ ಔಷದೋಪಚಾರ ಪಡೆದುಕೊಂಡು ಆರೋಗ್ಯವಂತರಾಗಬೇಕು. 2023-24 ರಲ್ಲಿ 8 ಗ್ರಾಮ ಪಂಚಾಯತಿಗಳನ್ನು ‘’ಕ್ಷಯಮುಕ್ತ ಗ್ರಾಮ ಪಂಚಾಯತಿ’’ ಎಂದು ಘೋಷಿಸಲಾಗಿದೆ. ಪ್ರಸಕ್ತ 2024-25 ನೇ ಸಾಲಿನಲ್ಲಿ 40 ಗ್ರಾಮ ಪಂಚಾಯತಿಗಳನ್ನು ಆಯ್ಕೆ ಮಾಡಿಕೊಂಡು ಮಾನದಂಡಗಳ ಅನ್ವಯ ಕಾರ್ಯರಂಭ ಮಾಡಲಾಗಿದೆ ಎಂದರು.
ಜಿಲ್ಲಾ ಕ್ಷಯರೋಗ ನಿರ್ಮೂಲನೆ ಅಧಿಕಾರಿ ಡಾ. ನಾಗೇಶ್.ಎಸ್ ಅವರು ಮಾತನಾಡಿ, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಪ್ರತಿವರ್ಷ ಸುಮಾರು 35000 ಸಂಭಾವ್ಯ ಕ್ಷಯರೋಗಿಗಳ ತಪಾಸಣೆಗೊಳಪಡಿಸಲಾಗುತ್ತಿದೆ. ಇದರಲ್ಲಿ 800 ರಿಂದ 900 ಹೊಸ ಕ್ಷಯರೋಗ ಪ್ರಕರಣಗಳು ದಾಖಲಾಗುತ್ತಿವೆ.
1400-1500 ಕ್ಷಯರೋಗ ಸಂಪರ್ಕಿತರಿಗೆ ಸೋಂಕಿನ ತಪಾಸಣೆ ಮಾಡಲಾಗುತ್ತಿದೆ. ಈ ರೋಗ ಬಾದಿತರಲ್ಲಿ ಶೇ. 86% ರೋಗಿಗಳನ್ನು ಪರಿಣಾಮಕಾರಿ ಚಿಕಿತ್ಸಾ ಆರೈಕೆಗಳೊಂದಿಗೆ ಗುಣಪಡಿಸಲಾಗುತ್ತಿದೆ. 2015 ನೇ ಇಸವಿಯಿಂದ ಕ್ಷಯರೋಗ ಪ್ರಕರಣಗಳು ಕ್ರಮೇಣವಾಗಿ ಪ್ರತಿ ಲಕ್ಷ ಜನರಲ್ಲಿ 237 ರಿಂದ 80 ಕ್ಷಯರೋಗ ಪ್ರಕರಣಗಳು ಇಳಿಮುಖವಾಗುತ್ತಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಅಮರೇಶ ಹೆಚ್, ಜಿಲ್ಲಾ ಆರೋಗ್ಯಾಧಿಕಾರಿ ಡಾ. ಎಂ.ಸಿ ಸುನೀಲಕುಮಾರ, ತಾಲ್ಲೂಕು ಆರೋಗ್ಯಾಧಿಕಾರಿಗಳು ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು ಹಾಗೂ ಇತರರು ಉಪಸ್ಥಿತರಿದ್ದರು.
ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…