ಪ್ರಾಪರ್ಟಿ ಪರೇಡ್: ನಾಲ್ಕು ಜನ ಮೊಬೈಲ್ ಕಳ್ಳರಿಂದ 1037 ಮೊಬೈಲ್ ಗಳನ್ನು ವಶ

ಮೊಬೈಲ್ ಕಳವು ಮಾಡಿ ಮಾರಾಟ ಮಾಡುತ್ತಿದ್ದ ಜಾಲವನ್ನು ಬೇಧಿಸಿರುವ ಬನ್ನೇರುಘಟ್ಟ ಪೊಲೀಸರು, ಬೆಂಗಳೂರಿನ ಮಹಮ್ಮದ್‌ ಪಾಷಾ, ಮಹಮ್ಮದ್‌ ಉಮರ್‌, ಐಯಾನ್‌, ಮಹಮ್ಮದ್ ಸಲೀಂ ಎಂಬ ನಾಲ್ವರು ಆರೋಪಿಗಳನ್ನು ಬಂಧಿಸಿ, ಬೆಲೆ‌ ಬಾಳುವ ವಿವಿಧ ಕಂಪನಿಗಳ 1,037 ಮೊಬೈಲ್‌ಗಳನ್ನು ವಶಪಡಿಸಿಕೊಂಡಿದ್ದಾರೆ.

ಬನ್ನೇರುಘಟ್ಟ ನ್ಯಾಷನಲ್ ಪಾರ್ಕ್, ಮೆಜೆಸ್ಟಿಕ್‌, ಶಿವಾಜಿನಗರ, ಎಂ.ಜಿ.ರೋಡ್‌ ಮತ್ತಿತರ ಜನದಟ್ಟಣೆ ಪ್ರದೇಶಗಳಲ್ಲಿ ಮತ್ತು ಬಿಎಂಟಿಸಿ ಬಸ್‌ಗಳಲ್ಲಿ ಕದ್ದ ಮೊಬೈಲ್ ಗಳನ್ನು ಕಳ್ಳರ ಗುಂಪು, ಆರೋಪಿ ಮಹಮದ್‌ ಪಾಷಾನಿಗೆ ನೀಡುತ್ತಿತ್ತು. ಕದ್ದು ತಂದ ಮೊಬೈಲ್ ಗಳಿಗೆ ಆರೋಪಿಯು 2 ರಿಂದ 3 ಸಾವಿರ ಹಣ ನೀಡುತ್ತಿದ್ದ ಎಂದು ಪೊಲೀಸರು ಹೇಳಿದ್ದಾರೆ.

ಬನ್ನೇರುಘಟ್ಟದ ಎಎಂಸಿ ಕಾಲೇಜು ಬಳಿ ಕದ್ದ ಮೊಬೈಲ್‌ಗಳನ್ನು ಮಾರಾಟ ಮಾಡುತ್ತಿರುವ ಕುರಿತು ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಿದ ಪೊಲೀಸರು, ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ನಿಜಾಂಶ ಬಯಲಾಗಿದೆ.

ಕಳವು ಮಾಡಿದ ಮೊಬೈಲ್‌ಗಳನ್ನು ಬೆಂಗಳೂರಿನ ಹೆಗಡೆನಗರದ ಬಾಡಿಗೆ ಮನೆಯಲ್ಲಿ ಸಂಗ್ರಹಿಸಿಟ್ಟು ಚೆನ್ನೈ, ಕೇರಳದ ಮಂಜೇರಿಗೆ ಖಾಸಗಿ ಬಸ್‌ಗಳಲ್ಲಿ ಪಾರ್ಸಲ್‌ ಕಳುಹಿಸಿ ಮಾರಾಟ ಮಾಡುತ್ತಿದ್ದರು ಎಂಬುದು ವಿಚಾರಣೆ ವೇಳೆ ತಿಳಿದುಬಂದಿದೆ.

ಐಜಿಪಿ ಡಾ.ಬಿ.ಆರ್.ರವಿಕಾಂತೇಗೌಡ, ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಎಎಸ್ಪಿ ಪುರುಷೋತ್ತಮ್ ನೇತೃತ್ವದಲ್ಲಿ ಪ್ರಾಪರ್ಟಿ ಪರೇಡ್ ನಡೆಯಿತು.

ನಾಲ್ಕು ಜನ ಮೊಬೈಲ್ ಕಳ್ಳರನ್ನು ದಸ್ತಗಿರಿ ಮಾಡಿ ಅವರಿಂದ 1037 ಮೊಬೈಲ್ ಗಳನ್ನು ವಶಪಡಿಸಿಕೊಂಡಿರುವ ಪೊಲೀಸ್ ಇನ್ಸ್ ಪೆಕ್ಟರ್, ಕ್ರೈಂ ಸಿಬ್ಬಂದಿಯ ಕಾರ್ಯವನ್ನು ಗುರುತಿಸಿ ಪ್ರಶಂಸನಾ ಪತ್ರ ನೀಡಿ ಅಭಿನಂದಿಸಲಾಯಿತು.

ಈ ವೇಳೆ ಆನೇಕಲ್ ವಿಭಾಗದ ಡಿಸಿಪಿ, ಬನ್ನೇರುಘಟ್ಟ ಪೊಲೀಸ್ ಇನ್ಸ್ ಪೆಕ್ಟರ್, ಕ್ರೈಂ ಸಿಬ್ಬಂದಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

7 hours ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

11 hours ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

11 hours ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

14 hours ago

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

1 day ago

ತೂಬಗೆರೆ ಸೊಸೈಟಿ ಅಧ್ಯಕ್ಷರಾಗಿ ವಾಸುದೇವ್, ಉಪಾಧ್ಯಕ್ಷರಾಗಿ ಸತ್ಯನಾರಾಯಣಸ್ವಾಮಿ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್‌ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…

1 day ago