ಮೊಬೈಲ್ ಕಳವು ಮಾಡಿ ಮಾರಾಟ ಮಾಡುತ್ತಿದ್ದ ಜಾಲವನ್ನು ಬೇಧಿಸಿರುವ ಬನ್ನೇರುಘಟ್ಟ ಪೊಲೀಸರು, ಬೆಂಗಳೂರಿನ ಮಹಮ್ಮದ್ ಪಾಷಾ, ಮಹಮ್ಮದ್ ಉಮರ್, ಐಯಾನ್, ಮಹಮ್ಮದ್ ಸಲೀಂ ಎಂಬ ನಾಲ್ವರು ಆರೋಪಿಗಳನ್ನು ಬಂಧಿಸಿ, ಬೆಲೆ ಬಾಳುವ ವಿವಿಧ ಕಂಪನಿಗಳ 1,037 ಮೊಬೈಲ್ಗಳನ್ನು ವಶಪಡಿಸಿಕೊಂಡಿದ್ದಾರೆ.
ಬನ್ನೇರುಘಟ್ಟ ನ್ಯಾಷನಲ್ ಪಾರ್ಕ್, ಮೆಜೆಸ್ಟಿಕ್, ಶಿವಾಜಿನಗರ, ಎಂ.ಜಿ.ರೋಡ್ ಮತ್ತಿತರ ಜನದಟ್ಟಣೆ ಪ್ರದೇಶಗಳಲ್ಲಿ ಮತ್ತು ಬಿಎಂಟಿಸಿ ಬಸ್ಗಳಲ್ಲಿ ಕದ್ದ ಮೊಬೈಲ್ ಗಳನ್ನು ಕಳ್ಳರ ಗುಂಪು, ಆರೋಪಿ ಮಹಮದ್ ಪಾಷಾನಿಗೆ ನೀಡುತ್ತಿತ್ತು. ಕದ್ದು ತಂದ ಮೊಬೈಲ್ ಗಳಿಗೆ ಆರೋಪಿಯು 2 ರಿಂದ 3 ಸಾವಿರ ಹಣ ನೀಡುತ್ತಿದ್ದ ಎಂದು ಪೊಲೀಸರು ಹೇಳಿದ್ದಾರೆ.
ಕಳವು ಮಾಡಿದ ಮೊಬೈಲ್ಗಳನ್ನು ಬೆಂಗಳೂರಿನ ಹೆಗಡೆನಗರದ ಬಾಡಿಗೆ ಮನೆಯಲ್ಲಿ ಸಂಗ್ರಹಿಸಿಟ್ಟು ಚೆನ್ನೈ, ಕೇರಳದ ಮಂಜೇರಿಗೆ ಖಾಸಗಿ ಬಸ್ಗಳಲ್ಲಿ ಪಾರ್ಸಲ್ ಕಳುಹಿಸಿ ಮಾರಾಟ ಮಾಡುತ್ತಿದ್ದರು ಎಂಬುದು ವಿಚಾರಣೆ ವೇಳೆ ತಿಳಿದುಬಂದಿದೆ.
ಐಜಿಪಿ ಡಾ.ಬಿ.ಆರ್.ರವಿಕಾಂತೇಗೌಡ, ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಎಎಸ್ಪಿ ಪುರುಷೋತ್ತಮ್ ನೇತೃತ್ವದಲ್ಲಿ ಪ್ರಾಪರ್ಟಿ ಪರೇಡ್ ನಡೆಯಿತು.
ಈ ವೇಳೆ ಆನೇಕಲ್ ವಿಭಾಗದ ಡಿಸಿಪಿ, ಬನ್ನೇರುಘಟ್ಟ ಪೊಲೀಸ್ ಇನ್ಸ್ ಪೆಕ್ಟರ್, ಕ್ರೈಂ ಸಿಬ್ಬಂದಿ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…
ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…
ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…
ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…
ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…
ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…