Categories: Home

ಪ್ರಾಪರ್ಟಿ ಪೇರೆಡ್: 22 ಪ್ರಕರಣ: 40ಮಂದಿ ಕಳ್ಳರಿಂದ 1,17,91,400 ರೂ. ಮೌಲ್ಯದ 41ಬೈಕ್, 21ಮೊಬೈಲ್ ಮತ್ತು 1435 ಗ್ರಾಂ ಚಿನ್ನಾಭರಣ ವಶ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿದ್ದ 22 ವಿವಿಧ ಪ್ರಕರಣಗಳಲ್ಲಿ 40 ಜನ ಕಳ್ಳರನ್ನು ದಸ್ತಗಿರಿ ಮಾಡಿ ಅವರಿಂದ 1,17,91,400 ರೂ. ಮೌಲ್ಯದ 41ಬೈಕ್, 21ಮೊಬೈಲ್ ಮತ್ತು 1435 ಗ್ರಾಂ  ಚಿನ್ನಾಭರಣವನ್ನು ಪೊಲೀಸರು ವಶಪಡಿಸಿಕೊಂಡಿರುತ್ತಾರೆ.

ಈ ಹಿನ್ನೆಲೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ಅಧೀಕ್ಷಕ ಸಿ.ಕೆ.ಬಾಬಾ ಅವರ ನೇತೃತ್ವದಲ್ಲಿ ಪ್ರಾಪರ್ಟಿ ಪರೇಡ್ ನಡೆಯಿತು.

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ಪೊಲೀಸ್ ಇನ್ಸ್ಪೆಕ್ಟರ್ ಸಾಧಿಕ್ ಪಾಶ ಅವರ ನೇತೃತ್ವದಲ್ಲಿ ಕಳೆದ ಮೂರು ತಿಂಗಳಿನಿಂದ ಸುಮಾರು 15 ಲಕ್ಷ ಬೆಲೆ ಬಾಳುವ 186 ಗ್ರಾಂ  ಚಿನ್ನದ ಒಡವೆಗಳು ಹಾಗೂ 3 ಲಕ್ಷ  ಬೆಲೆಬಾಳುವ 20 ಮೊಬೈಲ್ ಫೋನ್ ಗಳನ್ನು ಬೇರೆ ಬೇರೆ ಪ್ರಕರಣಗಳಲ್ಲಿ ಆರೋಪಿಗಳನ್ನು ದಸ್ತಗಿರಿ ಮಾಡಿ ವಶಪಡಿಸಿಕೊಂಡಿರುತ್ತೆ.

ಈ ವೇಳೆ ಅಪರ ಪೊಲೀಸ್ ಅಧೀಕ್ಷಕರು, ಆನೇಕಲ್, ನೆಲಮಂಗಲ, ಹೊಸಕೋಟೆ ಮತ್ತು ದೊಡ್ಡಬಳ್ಳಾಪುರ ಉಪ ವಿಭಾಗಗಳ ಡಿ.ವೈ.ಎಸ್.ಪಿಗಳು, ಪೊಲೀಸ್ ಇನ್ಸ್ ಪೆಕ್ಟರ್ ಮತ್ತು ಕ್ರೈಂ ಸಿಬ್ಬಂದಿಯು ಉಪಸ್ಥಿತರಿದ್ದರು.

Ramesh Babu

Journalist

Recent Posts

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

6 hours ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

7 hours ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

22 hours ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

2 days ago

ದೇವಾಲಯಗಳ ಹುಂಡಿ ಭದ್ರತೆಗೆ ಸಿಸಿಟಿವಿ ಕಣ್ಗಾವಲು- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಪ್ರವರ್ಗ ಎ ಮತ್ತು ಬಿ ದೇವಾಲಯಗಳ ಹುಂಡಿ ಭದ್ರತೆ ಸೇರಿದಂತೆ ಎಣಿಕೆ ಕಾರ್ಯ,…

2 days ago