ನಿನ್ನೆ ರಸ್ತೆ ಅಪಘಾತದಲ್ಲಿ ವ್ಯಕ್ತಿ ಸಾವನ್ನಪ್ಪಿದ್ದ. ಮೃತನ ಬಳಿ ಇದ್ದ ಬೆಲೆ ಬಾಳುವ ವಸ್ತುಗಳನ್ನು ಮೃತನ ಗೆಳೆಯನಿಗೆ ಹಸ್ತಾಂತರ ಮಾಡುವ ಮೂಲಕ 108 ಅಂಬುಲೆನ್ಸ್ ಚಾಲಕ ಪ್ರಾಮಾಣಿಕತೆ ಮೆರೆದಿದ್ದಾರೆ.
ನಿನ್ನೆ ಸಂಜೆ ಹೊಸಕೋಟೆ – ದಾಬಸ್ಪೇಟೆ ನಡುವಿನ ರಾಷ್ಟ್ರೀಯ ಹೆದ್ದಾರಿ ನಾಗದೇನಹಳ್ಳಿಯ ಗೀತಂ ಕಾಲೇಜ ಬಳಿಯ ಮೇಲ್ಲೇತುವೆಯಲ್ಲಿ ದೇವನಹಳ್ಳಿ ಕಡೆಯಿಂದ ಬಂದ ದ್ವಿಚಕ್ರ ವಾಹನ ಸವಾರ ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡೆದು ತೀವ್ರವಾಗಿ ಗಾಯಗೊಂಡಿದ್ದರು.
ಈ ಕುರಿತು ಮಾಹಿತಿ ತಿಳಿದ 108 ಸಿಬ್ಬಂದಿ ನರಸಿಂಹಮೂರ್ತಿ ಕೆ, ಸ್ಥಳಕ್ಕೆ ದೌಡಾಯಿಸಿ, ಬ್ಯಾಟರಾಯನಪುರ ಸಮೀಪದ ಕೆಂಪಾಪುರ ನಿವಾಸಿ ಮದನ್ (40) ಅವರನ್ನು ಆಸ್ಪತ್ರೆಗೆ ಕರೆದೊಯ್ಯುವ ವೇಳೆ ರಸ್ತೆ ನಡುವೆ ಸಾವನಪ್ಪಿದ್ದರು.
ಇನ್ನೂ ಮೃತನ ಕುರಿತು ದಾಖಲೆ ಪರಿಶೀಲನೆ ನಡೆಸಿದ 108 ಚಾಲಕ ನರಸಿಂಹಮೂರ್ತಿ ಮೃತನ ಧರಿಸಿದ್ದ 40 ಗ್ರಾಂ ನಷ್ಟು ಚಿನ್ನ, 25 ಸಾವಿರ ಹಣ, ಮೊಬೈಲ್ ಮತ್ತು ಪರ್ಸ್ ನ್ನು ಮೃತನ ಗೆಳೆಯನಿಗೆ ಹಸ್ತಾಂತರ ಮಾಡಿ ಪ್ರಾಮಾಣಿಕತೆ ಮೆರೆದಿದ್ದಾರೆ.
ಇನ್ನೂ ಮೃತನು ಯುಗಾದಿ ಹಿನ್ನೆಲೆ ನಂದಿಗಿರಿಗೆ ಭೇಟಿ ನೀಡಿದ್ದಾಗ ಅಪಘಾತ ಸಂಭವಿಸಿದೆ.
ಬೇಸಿಗೆ ಆರಂಭದಲ್ಲಿಯೇ ನಗರ ವ್ಯಾಪ್ತಿಯಲ್ಲಿ ನೀರಿಗೆ ಪರದಾಟ ಆರಂಭವಾಗಿದ್ದು, ನಗರಸಭೆಯಿಂದ ವಾರಕ್ಕೊಮ್ಮೆ ಕೇವಲ ಅರ್ಧ ಗಂಟೆ ನೀರು ಬಿಡುತ್ತಿರುವುದು ಸರಿಯಲ್ಲ.…
ಕೊಲ್ಲಿ ರಾಷ್ಟ್ರಗಳ ಯುದ್ಧದ ಹಿನ್ನೆಲೆಯಲ್ಲಿ ಗ್ಯಾಸ್ ಸಿಲಿಂಡರ್ ಅಭಾವ ಮುಂದಿಟ್ಟುಕೊಂಡು ಕಾಳ ಸಂತೆಯಲ್ಲಿ ಸಿಲಿಂಡರ್ ಮಾರಾಟ ಮಾಡಿದರೆ ಅಂತಹ ಗ್ಯಾಸ್…
ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸಪ್ಲೆ, ಕಾಲೇಜುಗಳ ಬಳಿ ಸುಖಾ ಸುಮ್ಮನೆ ಓಡಾಟ, ಏರಿಯಾಗಳಲ್ಲಿ ಹವಾ ಮೇಂಟೈನ್ ಮಾಡೋದು, ಹಫ್ತಾ ವಸೂಲಿ…
ಅಂದು ಫ್ರೆಂಡ್ ಬರ್ತಡೇ ಇತ್ತು. ಒಂದೇ ಊರಿನ ಐದು ಮಂದಿ, ಒಬ್ಬ ಕೋಲಾರದ ಮಾಲೂರು ಮೂಲದವನು ಸೇರಿ ಬರ್ತಡೇ ಬಾಯ್…
ಬೆಳ್ಳಂಬೆಳಗ್ಗೆ ಕಂಟೇನರ್-ಸಿಮೆಂಟ್ ಲಾರಿ ನಡುವೆ ಅಪಘಾತ ಸಂಭವಿಸಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಚೆನ್ನಾದೇವಿ ಅಗ್ರಹಾರದ ಪೆಟ್ರೋಲ್ ಬಂಕ್ ಸಮೀಪ ನಡೆದಿದೆ....…
ಪಶು ಆಹಾರಗಳ ಬೆಲೆ ಏರಿಕೆ.. ಬೇಸಿಗೆಯಿಂದಾಗಿ ಹಾಲು ಉತ್ಪಾದನೆ ಕುಂಠಿತ.. ಹಸುಗಳಲ್ಲಿ ಹೆಚ್ಚಿದ ಕೆಚ್ಚಲುಬಾವು ರೋಗ.. ರಾಸುಗಳಿಗೆ ಮೇವು ಇಲ್ಲದೆ…