ನಿನ್ನೆ ರಸ್ತೆ ಅಪಘಾತದಲ್ಲಿ ವ್ಯಕ್ತಿ ಸಾವನ್ನಪ್ಪಿದ್ದ. ಮೃತನ ಬಳಿ ಇದ್ದ ಬೆಲೆ ಬಾಳುವ ವಸ್ತುಗಳನ್ನು ಮೃತನ ಗೆಳೆಯನಿಗೆ ಹಸ್ತಾಂತರ ಮಾಡುವ ಮೂಲಕ 108 ಅಂಬುಲೆನ್ಸ್ ಚಾಲಕ ಪ್ರಾಮಾಣಿಕತೆ ಮೆರೆದಿದ್ದಾರೆ.
ನಿನ್ನೆ ಸಂಜೆ ಹೊಸಕೋಟೆ – ದಾಬಸ್ಪೇಟೆ ನಡುವಿನ ರಾಷ್ಟ್ರೀಯ ಹೆದ್ದಾರಿ ನಾಗದೇನಹಳ್ಳಿಯ ಗೀತಂ ಕಾಲೇಜ ಬಳಿಯ ಮೇಲ್ಲೇತುವೆಯಲ್ಲಿ ದೇವನಹಳ್ಳಿ ಕಡೆಯಿಂದ ಬಂದ ದ್ವಿಚಕ್ರ ವಾಹನ ಸವಾರ ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡೆದು ತೀವ್ರವಾಗಿ ಗಾಯಗೊಂಡಿದ್ದರು.
ಈ ಕುರಿತು ಮಾಹಿತಿ ತಿಳಿದ 108 ಸಿಬ್ಬಂದಿ ನರಸಿಂಹಮೂರ್ತಿ ಕೆ, ಸ್ಥಳಕ್ಕೆ ದೌಡಾಯಿಸಿ, ಬ್ಯಾಟರಾಯನಪುರ ಸಮೀಪದ ಕೆಂಪಾಪುರ ನಿವಾಸಿ ಮದನ್ (40) ಅವರನ್ನು ಆಸ್ಪತ್ರೆಗೆ ಕರೆದೊಯ್ಯುವ ವೇಳೆ ರಸ್ತೆ ನಡುವೆ ಸಾವನಪ್ಪಿದ್ದರು.
ಇನ್ನೂ ಮೃತನ ಕುರಿತು ದಾಖಲೆ ಪರಿಶೀಲನೆ ನಡೆಸಿದ 108 ಚಾಲಕ ನರಸಿಂಹಮೂರ್ತಿ ಮೃತನ ಧರಿಸಿದ್ದ 40 ಗ್ರಾಂ ನಷ್ಟು ಚಿನ್ನ, 25 ಸಾವಿರ ಹಣ, ಮೊಬೈಲ್ ಮತ್ತು ಪರ್ಸ್ ನ್ನು ಮೃತನ ಗೆಳೆಯನಿಗೆ ಹಸ್ತಾಂತರ ಮಾಡಿ ಪ್ರಾಮಾಣಿಕತೆ ಮೆರೆದಿದ್ದಾರೆ.
ಇನ್ನೂ ಮೃತನು ಯುಗಾದಿ ಹಿನ್ನೆಲೆ ನಂದಿಗಿರಿಗೆ ಭೇಟಿ ನೀಡಿದ್ದಾಗ ಅಪಘಾತ ಸಂಭವಿಸಿದೆ.
ಡಿ.15 ರಂದು ಕಾಣೆಯಾಗಿದ್ದ ಪ್ರಥಮ ಪಿಯುಸಿ ವಿದ್ಯಾರ್ಥಿ ಇಂದು ಶವವಾಗಿ ಪತ್ತೆಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ…
ಬಸ್ಸಿನಲ್ಲಿ ಸಾಗಿಸುತ್ತಿದ್ದ 55 ಲಕ್ಷ ರೂ. ನಗದು ಹಾಗೂ ಕಟ್ಟಡಕ್ಕೆ ಸಂಬಂಧಿಸಿದ ದಾಖಲೆಗಳನ್ನು ಕಳವು ಮಾಡಿದ್ದ ಅಂತಾರಾಜ್ಯ ಕಳ್ಳರನ್ನ ಬಂಧಿಸುವಲ್ಲಿ…
ಟಿಪ್ಪರ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಒಂದೇ ಗ್ರಾಮದ ನಾಲ್ವರು ಯುವಕರು ಮೃತಪಟ್ಟಿರುವಂತಹ ಹೃದಯವಿದ್ರಾವಕ ಘಟನೆ ಚಿಕ್ಕಬಳ್ಳಾಪುರ…
ಅಭಿಮಾನಿಗಳ ಅತಿರೇಕ.... ಹುಚ್ಚುತನದ ಪರಮಾವಧಿ..... ದಚ್ಚು - ಕಿಚ್ಚ. (ದರ್ಶನ್ - ಸುದೀಪ್) + (ಡೆವಿಲ್ - ಮಾರ್ಕ್)........ ಅವರ…
ದಕ್ಷಿಣ ಭಾರತದಲ್ಲಿ ನಾಗರಾಧನೆಗೆ ಸುಪ್ರಸಿದ್ಧಿ ಪಡೆದಿರುವ ಘಾಟಿ ಸುಬ್ರಹ್ಮಣ್ಯ ಸ್ವಾಮಿಯ ಬ್ರಹ್ಮರಥೋತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿಂದು ಅದ್ಧೂರಿಯಾಗಿ ನೆರವೇರಿತು. ತಾಲೂಕಿನ…
ಕ್ರಿಸ್ಮಸ್ ಮತ್ತು ಜೀಸಸ್, ಪ್ರೀತಿ ಮತ್ತು ಸೇವೆ.......... ಜಗತ್ತಿನ ಬೆಳಕಿನ ಹಬ್ಬ - ಶಾಂತಿಯ ಸಂದೇಶ ಎಲ್ಲೆಡೆಯೂ ರವಾನೆಯಾಗಲಿ..... ಯೇಸುಕ್ರಿಸ್ತನ…