ಪ್ರಾಮಾಣಿಕತೆ ಮೆರೆದ 108 ಅಂಬುಲೆನ್ಸ್ ಚಾಲಕ: ಯಾವ ವಿಚಾರದಲ್ಲಿ ಪ್ರಾಮಾಣಿಕ ಮೆರೆದಿದ್ದಾರೆ…? ಇಲ್ಲಿದೆ ಮಾಹಿತಿ ಓದಿ….

ನಿನ್ನೆ ರಸ್ತೆ ಅಪಘಾತದಲ್ಲಿ ವ್ಯಕ್ತಿ ಸಾವನ್ನಪ್ಪಿದ್ದ. ಮೃತನ ಬಳಿ‌ ಇದ್ದ ಬೆಲೆ ಬಾಳುವ ವಸ್ತುಗಳನ್ನು ಮೃತನ ಗೆಳೆಯನಿಗೆ ಹಸ್ತಾಂತರ ಮಾಡುವ ಮೂಲಕ 108 ಅಂಬುಲೆನ್ಸ್ ಚಾಲಕ ಪ್ರಾಮಾಣಿಕತೆ ಮೆರೆದಿದ್ದಾರೆ.

ನಿನ್ನೆ ಸಂಜೆ ಹೊಸಕೋಟೆ – ದಾಬಸ್‌ಪೇಟೆ ನಡುವಿನ ರಾಷ್ಟ್ರೀಯ ಹೆದ್ದಾರಿ ನಾಗದೇನಹಳ್ಳಿಯ ಗೀತಂ ಕಾಲೇಜ ಬಳಿಯ ಮೇಲ್ಲೇತುವೆಯಲ್ಲಿ ದೇವನಹಳ್ಳಿ ಕಡೆಯಿಂದ ಬಂದ ದ್ವಿಚಕ್ರ ವಾಹನ ಸವಾರ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದು ತೀವ್ರವಾಗಿ ಗಾಯಗೊಂಡಿದ್ದರು.

ಈ ಕುರಿತು ಮಾಹಿತಿ ತಿಳಿದ 108 ಸಿಬ್ಬಂದಿ ನರಸಿಂಹಮೂರ್ತಿ ಕೆ, ಸ್ಥಳಕ್ಕೆ ದೌಡಾಯಿಸಿ, ಬ್ಯಾಟರಾಯನಪುರ ಸಮೀಪದ ಕೆಂಪಾಪುರ ನಿವಾಸಿ ಮದನ್ (40) ಅವರನ್ನು ಆಸ್ಪತ್ರೆಗೆ ಕರೆದೊಯ್ಯುವ ವೇಳೆ ರಸ್ತೆ ನಡುವೆ ಸಾವನಪ್ಪಿದ್ದರು.

ಇನ್ನೂ ಮೃತನ ಕುರಿತು ದಾಖಲೆ ಪರಿಶೀಲನೆ ನಡೆಸಿದ 108 ಚಾಲಕ ನರಸಿಂಹಮೂರ್ತಿ ಮೃತನ ಧರಿಸಿದ್ದ 40 ಗ್ರಾಂ ನಷ್ಟು ಚಿನ್ನ, 25 ಸಾವಿರ ಹಣ, ಮೊಬೈಲ್ ಮತ್ತು ಪರ್ಸ್ ನ್ನು ಮೃತನ ಗೆಳೆಯನಿಗೆ ಹಸ್ತಾಂತರ ಮಾಡಿ ಪ್ರಾಮಾಣಿಕತೆ ಮೆರೆದಿದ್ದಾರೆ.

ಇನ್ನೂ ಮೃತನು ಯುಗಾದಿ ಹಿನ್ನೆಲೆ ನಂದಿಗಿರಿಗೆ ಭೇಟಿ ನೀಡಿದ್ದಾಗ ಅಪಘಾತ ಸಂಭವಿಸಿದೆ.

Ramesh Babu

Journalist

Recent Posts

ಕೋಲಾರಮ್ಮ ಜಿಲ್ಲಾ ಕೋಳಿ ಸಾಕಾಣಿಕೆದಾರರ ಮತ್ತು ಮಾರಾಟಗಾರರ ಸಹಕಾರ ಸಂಘದ ಜಿಲ್ಲಾ ಸಮ್ಮೇಳನ

ಕೋಲಾರ: ರೈತರು ಕಂಪನಿಯೊಂದಿಗೆ (ಇಂಟಿಗ್ರೇಟೆಡ್) ಒಪ್ಪಂದ ಮಾಡಿಕೊಂಡು ಕೋಳಿ ಸಾಕುವ ಪದ್ದತಿಯಿಂದಾಗಿ ಕಾರ್ಪೊರೇಟ್ ಸಂಸ್ಥೆಗಳಿಂದ ನಿರಂತರವಾಗಿ ಶೋಷಣೆ ನಡೆಯುತ್ತಿದೆ ಸರ್ಕಾರವು…

23 minutes ago

ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರಿಲ್ಲದೆ ಬಾಣಂತಿ ಹಾಗೂ ನವಜಾತ ಗಂಡು ಮಗುವಿನ ಸಾ*ವು..!

ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ ಬಾಣಂತಿ ಹಾಗೂ ಹಸುಗೂಸು ಸಾ*ವಾಗಿದೆ, ಇದಕ್ಕೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರು ಆರೋಪ‌‌ ಮಾಡಿದ್ದಾರೆ.…

2 hours ago

ಬಾಗಲಕೋಟೆಯಲ್ಲಿ ಕಲ್ಲುತೂರಾಟ ಪ್ರಕರಣ: ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ

ಬಾಗಲಕೋಟೆಯಲ್ಲಿ ನಡೆದ ಕಲ್ಲುತೂರಾಟ ಘಟನೆಯು ಸಮಾಜದ ಶಾಂತಿ, ಸೌಹಾರ್ದತೆಗೆ ಮಾರಕ. ಇದನ್ನು ನಾನು ಮತ್ತು ನಮ್ಮ ಸರ್ಕಾರ ಬಲವಾಗಿ ಖಂಡಿಸುತ್ತದೆ.…

3 hours ago

ಪ್ರತಿಭಟನೆ – ಮುಷ್ಕರ – ಮುತ್ತಿಗೆ – ಚಳವಳಿ – ಬಂದ್ – ಸತ್ಯಾಗ್ರಹ – ಹರತಾಳ – ಅಮರಣಾಂತ ಉಪವಾಸ – ಜೈಲ್ ಭರೋ ..

ಪ್ರತಿಭಟನೆ - ಮುಷ್ಕರ - ಮುತ್ತಿಗೆ - ಚಳವಳಿ - ಬಂದ್ - ಸತ್ಯಾಗ್ರಹ - ಹರತಾಳ - ಅಮರಣಾಂತ…

9 hours ago

ಕೆ.ಜಿ.ಹಳ್ಳಿ ಮೂಲಸೌಕರ್ಯ ಸಮಸ್ಯೆಗಳ ಪರಿಹಾರಕ್ಕೆ ಇಂಧನ ಸಚಿವ ಕೆ.ಜೆ.ಜಾರ್ಜ್ ಸೂಚನೆ

‘ಪ್ರಜಾಪ್ರಭುತ್ವದಲ್ಲಿ ಜನರೇ ಪ್ರಭುಗಳು. ಅವರು ಕೇಳಿದ ಕೆಲಸ ಮಾಡಿಕೊಡಬೇಕು, ವಿಳಂಬ ಮಾಡಬೇಡಿ’ ಎಂದು ಇಂಧನ ಸಚಿವ ಹಾಗೂ ಸರ್ವಜ್ಞ ನಗರ…

20 hours ago

ಯೂರಿಯಾ ಅಕ್ರಮ ದಾಸ್ತಾನು ಗೋದಾಮುಗಳ ಮೇಲೆ ಕೃಷಿ ಇಲಾಖೆ ಅಧಿಕಾರಿಗಳ ದಾಳಿ…18 ಲಕ್ಷ ಮೌಲ್ಯದ ಗೊಬ್ಬರ ವಶ..1296 ಮೂಟೆ ಯೂರಿಯಾ ವಶ…

ಅಕ್ರಮವಾಗಿ ರಸಗೊಬ್ಬರ ದಾಸ್ತಾನು ಮಾಡಲಾಗಿದ್ದ ಗೋದಾಮುಗಳ ಮೇಲೆ ಕೃಷಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ 18 ಲಕ್ಷ ಮೌಲ್ಯದ 1296…

20 hours ago