ನಿನ್ನೆ ರಸ್ತೆ ಅಪಘಾತದಲ್ಲಿ ವ್ಯಕ್ತಿ ಸಾವನ್ನಪ್ಪಿದ್ದ. ಮೃತನ ಬಳಿ ಇದ್ದ ಬೆಲೆ ಬಾಳುವ ವಸ್ತುಗಳನ್ನು ಮೃತನ ಗೆಳೆಯನಿಗೆ ಹಸ್ತಾಂತರ ಮಾಡುವ ಮೂಲಕ 108 ಅಂಬುಲೆನ್ಸ್ ಚಾಲಕ ಪ್ರಾಮಾಣಿಕತೆ ಮೆರೆದಿದ್ದಾರೆ.
ನಿನ್ನೆ ಸಂಜೆ ಹೊಸಕೋಟೆ – ದಾಬಸ್ಪೇಟೆ ನಡುವಿನ ರಾಷ್ಟ್ರೀಯ ಹೆದ್ದಾರಿ ನಾಗದೇನಹಳ್ಳಿಯ ಗೀತಂ ಕಾಲೇಜ ಬಳಿಯ ಮೇಲ್ಲೇತುವೆಯಲ್ಲಿ ದೇವನಹಳ್ಳಿ ಕಡೆಯಿಂದ ಬಂದ ದ್ವಿಚಕ್ರ ವಾಹನ ಸವಾರ ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡೆದು ತೀವ್ರವಾಗಿ ಗಾಯಗೊಂಡಿದ್ದರು.
ಈ ಕುರಿತು ಮಾಹಿತಿ ತಿಳಿದ 108 ಸಿಬ್ಬಂದಿ ನರಸಿಂಹಮೂರ್ತಿ ಕೆ, ಸ್ಥಳಕ್ಕೆ ದೌಡಾಯಿಸಿ, ಬ್ಯಾಟರಾಯನಪುರ ಸಮೀಪದ ಕೆಂಪಾಪುರ ನಿವಾಸಿ ಮದನ್ (40) ಅವರನ್ನು ಆಸ್ಪತ್ರೆಗೆ ಕರೆದೊಯ್ಯುವ ವೇಳೆ ರಸ್ತೆ ನಡುವೆ ಸಾವನಪ್ಪಿದ್ದರು.
ಇನ್ನೂ ಮೃತನ ಕುರಿತು ದಾಖಲೆ ಪರಿಶೀಲನೆ ನಡೆಸಿದ 108 ಚಾಲಕ ನರಸಿಂಹಮೂರ್ತಿ ಮೃತನ ಧರಿಸಿದ್ದ 40 ಗ್ರಾಂ ನಷ್ಟು ಚಿನ್ನ, 25 ಸಾವಿರ ಹಣ, ಮೊಬೈಲ್ ಮತ್ತು ಪರ್ಸ್ ನ್ನು ಮೃತನ ಗೆಳೆಯನಿಗೆ ಹಸ್ತಾಂತರ ಮಾಡಿ ಪ್ರಾಮಾಣಿಕತೆ ಮೆರೆದಿದ್ದಾರೆ.
ಇನ್ನೂ ಮೃತನು ಯುಗಾದಿ ಹಿನ್ನೆಲೆ ನಂದಿಗಿರಿಗೆ ಭೇಟಿ ನೀಡಿದ್ದಾಗ ಅಪಘಾತ ಸಂಭವಿಸಿದೆ.
ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…
ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…
ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…
ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…
ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…
ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…