ನಿನ್ನೆ ರಸ್ತೆ ಅಪಘಾತದಲ್ಲಿ ವ್ಯಕ್ತಿ ಸಾವನ್ನಪ್ಪಿದ್ದ. ಮೃತನ ಬಳಿ ಇದ್ದ ಬೆಲೆ ಬಾಳುವ ವಸ್ತುಗಳನ್ನು ಮೃತನ ಗೆಳೆಯನಿಗೆ ಹಸ್ತಾಂತರ ಮಾಡುವ ಮೂಲಕ 108 ಅಂಬುಲೆನ್ಸ್ ಚಾಲಕ ಪ್ರಾಮಾಣಿಕತೆ ಮೆರೆದಿದ್ದಾರೆ.
ನಿನ್ನೆ ಸಂಜೆ ಹೊಸಕೋಟೆ – ದಾಬಸ್ಪೇಟೆ ನಡುವಿನ ರಾಷ್ಟ್ರೀಯ ಹೆದ್ದಾರಿ ನಾಗದೇನಹಳ್ಳಿಯ ಗೀತಂ ಕಾಲೇಜ ಬಳಿಯ ಮೇಲ್ಲೇತುವೆಯಲ್ಲಿ ದೇವನಹಳ್ಳಿ ಕಡೆಯಿಂದ ಬಂದ ದ್ವಿಚಕ್ರ ವಾಹನ ಸವಾರ ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡೆದು ತೀವ್ರವಾಗಿ ಗಾಯಗೊಂಡಿದ್ದರು.
ಈ ಕುರಿತು ಮಾಹಿತಿ ತಿಳಿದ 108 ಸಿಬ್ಬಂದಿ ನರಸಿಂಹಮೂರ್ತಿ ಕೆ, ಸ್ಥಳಕ್ಕೆ ದೌಡಾಯಿಸಿ, ಬ್ಯಾಟರಾಯನಪುರ ಸಮೀಪದ ಕೆಂಪಾಪುರ ನಿವಾಸಿ ಮದನ್ (40) ಅವರನ್ನು ಆಸ್ಪತ್ರೆಗೆ ಕರೆದೊಯ್ಯುವ ವೇಳೆ ರಸ್ತೆ ನಡುವೆ ಸಾವನಪ್ಪಿದ್ದರು.
ಇನ್ನೂ ಮೃತನ ಕುರಿತು ದಾಖಲೆ ಪರಿಶೀಲನೆ ನಡೆಸಿದ 108 ಚಾಲಕ ನರಸಿಂಹಮೂರ್ತಿ ಮೃತನ ಧರಿಸಿದ್ದ 40 ಗ್ರಾಂ ನಷ್ಟು ಚಿನ್ನ, 25 ಸಾವಿರ ಹಣ, ಮೊಬೈಲ್ ಮತ್ತು ಪರ್ಸ್ ನ್ನು ಮೃತನ ಗೆಳೆಯನಿಗೆ ಹಸ್ತಾಂತರ ಮಾಡಿ ಪ್ರಾಮಾಣಿಕತೆ ಮೆರೆದಿದ್ದಾರೆ.
ಇನ್ನೂ ಮೃತನು ಯುಗಾದಿ ಹಿನ್ನೆಲೆ ನಂದಿಗಿರಿಗೆ ಭೇಟಿ ನೀಡಿದ್ದಾಗ ಅಪಘಾತ ಸಂಭವಿಸಿದೆ.
ಗಣೇಶ್ ಕುಮಾರ್ ಮತ್ತು ಪೂರ್ಣಿಮಾ ಅವರ ಪೋಷಕತ್ವದಲ್ಲಿ, ಕೇಶವ ಮತ್ತು ಸುಷ್ಮಾ ದಂಪತಿಯ ಪುತ್ರಿ ಅದ್ವಿತಾ ಅವರ ಜನ್ಮದಿನವನ್ನು ಬಿಸವನಹಳ್ಳಿ…
ದೊಡ್ಡಬಳ್ಳಾಪುರ: ಹಿಂದೂಪುರ–ಯಲಹಂಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿಗೆ ದಿಢೀರನೆ ನಾಯಿ ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ…
ಕೆ.ಎಚ್ ಮುನಿಯಪ್ಪನವರು ಏಳು ಬಾರಿ ಲೋಕಸಭಾ ಸದಸ್ಯರಾಗಿ, ಎರಡು ಬಾರಿ ಕೇಂದ್ರ ಸಚಿವರಾಗಿ, ಅಪಾರ ಅನುಭವ ಹಾಗೂ ಅವರ ಹಿರಿತನಕ್ಕೆ…
ಸಾಮಾನ್ಯ ಜನರಿಗೆ ವಾಸ್ತು ಸೂತ್ರಗಳ ಅನ್ವಯ ಜ್ಞಾನವನ್ನು ನೀಡುವ ಸಲುವಾಗಿ ಶ್ರೀ ಪೂತಮಾನಸ ಜ್ಯೋತಿಷ್ಯಾಲಯ ವತಿಯಿಂದ ಸುಕನ್ಯ ಮತ್ತು ಎಸ್.ಕೃಷ್ಣಮೂರ್ತಿ…
ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜೂನ್ 20 ರಿಂದ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಯನ್ನು…
ದೊಡ್ಡಬಳ್ಳಾಪುರ: ಪರಿಸರವನ್ನು ಕಾಪಾಡುವುದು ಕೇವಲ ಸರ್ಕಾರದ ಜವಾಬ್ದಾರಿಯಲ್ಲ, ಅದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ನಾವು ಇಂದು ಮಾಡುವ ಸಣ್ಣ…