ಪ್ರಿಯತಮೆ ಹೊಟ್ಟೆಗೆ ಚಾಕುವಿನಿಂದ ಇರಿದು ಪ್ರಿಯಕರ ಕೊಲೆ ಮಾಡಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಕೊಲೆ ನಂತರ ತಾನೂ ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆ ಪಾಲಾಗಿರುವ ಘಟನೆ ಹೊಸಕೋಟೆ ನಗರದ ಕಾಲೇಜು ರಸ್ತೆಯಲ್ಲಿ ನಡೆದಿದೆ.
ಆಂಧ್ರಪ್ರದೇಶದ ಮದನಪಲ್ಲಿ ಮೂಲದ ಹೇಮಾವತಿ (35) ಕೊಲೆಗೀಡಾದ ಮಹಿಳೆ. ಚಿಂತಾಮಣಿ ಮೂಲದ ವೇಣು (40) ಕೊಲೆಗೈದ ವ್ಯಕ್ತಿ.
ಹೇಮಾವತಿ ಮದನಪಲ್ಲಿಯಿಂದ ಬಂದು ಕಳೆದ ನಾಲ್ಕು ತಿಂಗಳಿಂದ ಹೊಸಕೋಟೆಯಲ್ಲಿ ಮನೆ ಮಾಡಿ ಪೆಟ್ರೋಲ್ ಬಂಕ್ ನಲ್ಲಿ ಕೆಲಸ ಮಾಡುತ್ತಿದ್ದಳು.
ಈ ವೇಳೆ ವೇಣು ಹಾಗೂ ಹೇಮಾವತಿ ನಡುವೆ ಸ್ನೇಹ ಬೆಳೆದಿದೆ. ಆರೋಪಿ ವೇಣು ಆಗಾಗ ಹೇಮಾವತಿ ಇದ್ದ ಮನೆಗೆ ಬಂದು ಕೆಲ ದಿನ ಇದ್ದು ಹೋಗುತ್ತಿದ್ದ.
ಹೇಮಾವತಿಗೆ ಮದುವೆ ಮಾಡಲು ಆಕೆಯ ಕುಟುಂವಸ್ಥರು ಗಂಡು ನೋಡುತ್ತಿದ್ದರು. ಈ ವಿಚಾರವನ್ನು ವೇಣುಗೆ ತಿಳಿಸುತ್ತಾಳೆ. ಆಗ ಆರೋಪಿ ವೇಣು ನಿಮ್ಮ ಮನೆಯವರು ನೀಡಿದ ಹುಡುಗನನ್ನು ಮದುವೆ ಆಗ ಬೇಡ ಎಂದು ತಿಳಿಸುತ್ತಾನೆ. ಹೀಗೆ ಹಲವು ದಿನಗಳಿಂದ ಹೇಳುತ್ತಾ ಬಂದಿದ್ದ. ಆದರೆ ಮದುವೆ ಮಾತ್ರ ಆಗಿರಲಿಲ್ಲ. ಆಗ ಹೇಮಾವತಿ, ನನ್ನನ್ನು ಮದುವೆ ಆಗು ಇಲ್ಲದಿದ್ದರೆ ನಮ್ಮ ಮನೆಯವರು ನೋಡಯವ ಹುಡುಗನನ್ನು ಮದುವೆ ಆಗುತ್ತೇನೆ ಎಂದು ವೇಣುಗೆ ತಿಳಿಸುತ್ತಾಳೆ. ಇದಕ್ಕೆ ಕುಪಿತಗೊಂಡು, ಅನುಮಾನ ಹೆಚ್ಚಾಗಿ ಚಾಕುವಿನಿಂದ ಹೊಟ್ಟೆಯ ಭಾಗಕ್ಕೆ ಚಾಕುವಿನಿಂದ ಇರಿದು ಕೊಲೆ ಮಾಡಿ ಪರಾರಿಯಾಗಿದ್ದಾನೆ ಎಂದು ಆರೋಪ ಕೇಳಿಬಂದಿದೆ.
ರಾತ್ರಿಯೆಲ್ಲಾ ಆಕೆಯ ಜೊತೆ ಕಾಲ ಕಳೆದು ಮುಂಜಾನೆ ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ಆರೋಪಿ ವೇಣು ಮಹಿಳೆಯನ್ನ ಕೊಲೆ ಮಾಡಿ ಚಿಂತಾಮಣಿಗೆ ಹೋಗಿದ್ದಾನೆ. ಈ ವೇಳೆ ಮನೆಯಲ್ಲಿ ತಾನೂ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾನೆ.
ಸದ್ಯ ಕೊಲೆ ಆರೋಪಿ ವೇಣು ಆಸ್ಪತ್ರೆಗೆ ದಾಖಲಾಗಿದ್ದಾನೆ. ಸ್ಥಳಕ್ಕೆ ಹೊಸಕೋಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಹೊಸಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಭಾರತದ ಅಗ್ರ ಪೀಠೋಪಕರಣ ಬ್ರ್ಯಾಂಡ್ ಆಗಿರುವ ರಾಯಲ್ ಓಕ್ ಫರ್ನಿಚರ್, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನೂತನ ಮಳಿಗೆಗೆ ಚಾಲನೆ…
ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ *ಆಟೋ ಎಲ್.ಪಿ.ಜಿ*.ಗೆ ಯಾವುದೇ ರೀತಿಯ ಕೊರತೆ…
Cheap Emotional Support Animal Letter: Affordable ESA Documentation Affordable Emotional Support Animal Letters for Enhanced…
ಶ್ರೀರಾಮನವಮಿ ಅಂಗವಾಗಿ ವಿಶ್ವ ಹಿಂದೂ ಪರಿಷತ್ ಬಜರಂಗ ದಳ ವತಿಯಿಂದ ದೊಡ್ಡಬಳ್ಳಾಪುರ ನಗರದಲ್ಲಿ ಮಾರ್ಚ್ 27 ರಿಂದ ಮೂರು ದಿನಗಳ…
ಆಟವಾಡುತ್ತಾ ಈಜಲು ಹೋದ ನಾಲ್ವರು ಮಕ್ಕಳು ಕೃಷಿ ಹೊಂಡದಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ನಗನೂರು…
ಶ್ರೀರಾಮನವಮಿ ಅನ್ನ ಪ್ರಸಾದಿಂದ ಗ್ರಾಮಸ್ಥರಿಗೆ ಫುಡ್ ಪಾಯಿಸನ್...!!?ಆಗಿದ್ದು, ಅನ್ನಪ್ರಸಾದ ಸೇವಿಸಿದ ಗ್ರಾಮಸ್ಥರಲ್ಲಿ ಬಹುತೇಕ ಜನ ಆಸ್ಪತ್ರೆ ಪಾಲಾಗಿದ್ದಾರೆ. ಆಸ್ಪತ್ರೆಯಲ್ಲಿ ದಾಖಲಾಗಿರುವ…