ಪ್ರಿಯತಮೆ ಹೊಟ್ಟೆಗೆ ಚಾಕುವಿನಿಂದ ಇರಿದು ಪ್ರಿಯಕರ ಕೊಲೆ ಮಾಡಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಕೊಲೆ ನಂತರ ತಾನೂ ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆ ಪಾಲಾಗಿರುವ ಘಟನೆ ಹೊಸಕೋಟೆ ನಗರದ ಕಾಲೇಜು ರಸ್ತೆಯಲ್ಲಿ ನಡೆದಿದೆ.
ಆಂಧ್ರಪ್ರದೇಶದ ಮದನಪಲ್ಲಿ ಮೂಲದ ಹೇಮಾವತಿ (35) ಕೊಲೆಗೀಡಾದ ಮಹಿಳೆ. ಚಿಂತಾಮಣಿ ಮೂಲದ ವೇಣು (40) ಕೊಲೆಗೈದ ವ್ಯಕ್ತಿ.
ಹೇಮಾವತಿ ಮದನಪಲ್ಲಿಯಿಂದ ಬಂದು ಕಳೆದ ನಾಲ್ಕು ತಿಂಗಳಿಂದ ಹೊಸಕೋಟೆಯಲ್ಲಿ ಮನೆ ಮಾಡಿ ಪೆಟ್ರೋಲ್ ಬಂಕ್ ನಲ್ಲಿ ಕೆಲಸ ಮಾಡುತ್ತಿದ್ದಳು.
ಈ ವೇಳೆ ವೇಣು ಹಾಗೂ ಹೇಮಾವತಿ ನಡುವೆ ಸ್ನೇಹ ಬೆಳೆದಿದೆ. ಆರೋಪಿ ವೇಣು ಆಗಾಗ ಹೇಮಾವತಿ ಇದ್ದ ಮನೆಗೆ ಬಂದು ಕೆಲ ದಿನ ಇದ್ದು ಹೋಗುತ್ತಿದ್ದ.
ಹೇಮಾವತಿಗೆ ಮದುವೆ ಮಾಡಲು ಆಕೆಯ ಕುಟುಂವಸ್ಥರು ಗಂಡು ನೋಡುತ್ತಿದ್ದರು. ಈ ವಿಚಾರವನ್ನು ವೇಣುಗೆ ತಿಳಿಸುತ್ತಾಳೆ. ಆಗ ಆರೋಪಿ ವೇಣು ನಿಮ್ಮ ಮನೆಯವರು ನೀಡಿದ ಹುಡುಗನನ್ನು ಮದುವೆ ಆಗ ಬೇಡ ಎಂದು ತಿಳಿಸುತ್ತಾನೆ. ಹೀಗೆ ಹಲವು ದಿನಗಳಿಂದ ಹೇಳುತ್ತಾ ಬಂದಿದ್ದ. ಆದರೆ ಮದುವೆ ಮಾತ್ರ ಆಗಿರಲಿಲ್ಲ. ಆಗ ಹೇಮಾವತಿ, ನನ್ನನ್ನು ಮದುವೆ ಆಗು ಇಲ್ಲದಿದ್ದರೆ ನಮ್ಮ ಮನೆಯವರು ನೋಡಯವ ಹುಡುಗನನ್ನು ಮದುವೆ ಆಗುತ್ತೇನೆ ಎಂದು ವೇಣುಗೆ ತಿಳಿಸುತ್ತಾಳೆ. ಇದಕ್ಕೆ ಕುಪಿತಗೊಂಡು, ಅನುಮಾನ ಹೆಚ್ಚಾಗಿ ಚಾಕುವಿನಿಂದ ಹೊಟ್ಟೆಯ ಭಾಗಕ್ಕೆ ಚಾಕುವಿನಿಂದ ಇರಿದು ಕೊಲೆ ಮಾಡಿ ಪರಾರಿಯಾಗಿದ್ದಾನೆ ಎಂದು ಆರೋಪ ಕೇಳಿಬಂದಿದೆ.
ರಾತ್ರಿಯೆಲ್ಲಾ ಆಕೆಯ ಜೊತೆ ಕಾಲ ಕಳೆದು ಮುಂಜಾನೆ ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ಆರೋಪಿ ವೇಣು ಮಹಿಳೆಯನ್ನ ಕೊಲೆ ಮಾಡಿ ಚಿಂತಾಮಣಿಗೆ ಹೋಗಿದ್ದಾನೆ. ಈ ವೇಳೆ ಮನೆಯಲ್ಲಿ ತಾನೂ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾನೆ.
ಸದ್ಯ ಕೊಲೆ ಆರೋಪಿ ವೇಣು ಆಸ್ಪತ್ರೆಗೆ ದಾಖಲಾಗಿದ್ದಾನೆ. ಸ್ಥಳಕ್ಕೆ ಹೊಸಕೋಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಹೊಸಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…
ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…
ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…
ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆಗೊಂಡಿದ್ದು, ಈ ಹಿನ್ನೆಲೆ ಇಂದು ಎಸ್…
ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ. ಪ್ರಹ್ಲಾದ್ ಜೋಶಿ ಕೂಡ ಒಂದೇ ಒಂದು ದಿನ…
ಗೆದ್ದವರಿಗೆ ಅಭಿನಂದಿಸುತ್ತಾ, ಸೋತವರಿಗೆ ಸಾಂತ್ವನ ಹೇಳುತ್ತಾ, ಮತದಾರರಿಗೆ ಧನ್ಯವಾದಗಳನ್ನು ಅರ್ಪಿಸುತ್ತಾ, ಸಂವಿಧಾನಕ್ಕೆ ಸಲಾಂ ಹೊಡೆಯುತ್ತಾ, ನಮ್ಮ ಮುಗ್ದತೆ ಮತ್ತು ಮೂರ್ಖತನ…