ಪ್ರಿಯಕರನಿಂದ ಕೊಲೆಯಾದ ಪ್ರಿಯತಮೆ: ಪ್ರಿಯತಮೆ ಗುಪ್ತಾಂಗಕ್ಕೆ ಚಾಕು ಇರಿದು ಕೊಲೆ: ಗುಪ್ತಾಂಗದಲ್ಲೇ ಸಿಲುಕಿರುವ ಚಾಕು

ಪ್ರಿಯತಮೆ ಹೊಟ್ಟೆಗೆ ಚಾಕುವಿನಿಂದ ಇರಿದು ಪ್ರಿಯಕರ ಕೊಲೆ ಮಾಡಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಕೊಲೆ ನಂತರ ತಾನೂ ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆ ಪಾಲಾಗಿರುವ ಘಟನೆ ಹೊಸಕೋಟೆ ನಗರದ ಕಾಲೇಜು ರಸ್ತೆಯಲ್ಲಿ ನಡೆದಿದೆ.

ಆಂಧ್ರಪ್ರದೇಶದ ಮದನಪಲ್ಲಿ ಮೂಲದ ಹೇಮಾವತಿ (35) ಕೊಲೆಗೀಡಾದ ಮಹಿಳೆ. ಚಿಂತಾಮಣಿ ಮೂಲದ ವೇಣು (40) ಕೊಲೆಗೈದ ವ್ಯಕ್ತಿ.

ಹೇಮಾವತಿ ಮದನಪಲ್ಲಿಯಿಂದ ಬಂದು ಕಳೆದ ನಾಲ್ಕು ತಿಂಗಳಿಂದ ಹೊಸಕೋಟೆಯಲ್ಲಿ ಮನೆ ಮಾಡಿ ಪೆಟ್ರೋಲ್ ಬಂಕ್ ನಲ್ಲಿ ಕೆಲಸ ಮಾಡುತ್ತಿದ್ದಳು.

ಈ ವೇಳೆ ವೇಣು ಹಾಗೂ ಹೇಮಾವತಿ ನಡುವೆ ಸ್ನೇಹ ಬೆಳೆದಿದೆ. ಆರೋಪಿ‌ ವೇಣು ಆಗಾಗ ಹೇಮಾವತಿ ಇದ್ದ ಮನೆಗೆ ಬಂದು ಕೆಲ ದಿನ ಇದ್ದು ಹೋಗುತ್ತಿದ್ದ.

ಹೇಮಾವತಿಗೆ ಮದುವೆ ಮಾಡಲು ಆಕೆಯ ಕುಟುಂವಸ್ಥರು ಗಂಡು ನೋಡುತ್ತಿದ್ದರು. ಈ ವಿಚಾರವನ್ನು ವೇಣುಗೆ ತಿಳಿಸುತ್ತಾಳೆ. ಆಗ ಆರೋಪಿ ವೇಣು ನಿಮ್ಮ ಮನೆಯವರು ನೀಡಿದ ಹುಡುಗನನ್ನು ಮದುವೆ ಆಗ ಬೇಡ ಎಂದು ತಿಳಿಸುತ್ತಾನೆ. ಹೀಗೆ ಹಲವು ದಿನಗಳಿಂದ ಹೇಳುತ್ತಾ ಬಂದಿದ್ದ. ಆದರೆ ಮದುವೆ ಮಾತ್ರ ಆಗಿರಲಿಲ್ಲ. ಆಗ ಹೇಮಾವತಿ, ನನ್ನನ್ನು ಮದುವೆ ಆಗು ಇಲ್ಲದಿದ್ದರೆ ನಮ್ಮ ಮನೆಯವರು ನೋಡಯವ ಹುಡುಗನನ್ನು ಮದುವೆ ಆಗುತ್ತೇನೆ ಎಂದು ವೇಣುಗೆ ತಿಳಿಸುತ್ತಾಳೆ. ಇದಕ್ಕೆ ಕುಪಿತಗೊಂಡು, ಅನುಮಾನ ಹೆಚ್ಚಾಗಿ ಚಾಕುವಿನಿಂದ ಹೊಟ್ಟೆಯ ಭಾಗಕ್ಕೆ ಚಾಕುವಿನಿಂದ ಇರಿದು ಕೊಲೆ ಮಾಡಿ ಪರಾರಿಯಾಗಿದ್ದಾನೆ ಎಂದು ಆರೋಪ ಕೇಳಿಬಂದಿದೆ.

ರಾತ್ರಿಯೆಲ್ಲಾ ಆಕೆಯ ಜೊತೆ ಕಾಲ‌ ಕಳೆದು‌ ಮುಂಜಾನೆ ಕೊಲೆ‌ ಮಾಡಿದ್ದಾನೆ ಎನ್ನಲಾಗಿದೆ. ಆರೋಪಿ ವೇಣು ಮಹಿಳೆಯನ್ನ ಕೊಲೆ ಮಾಡಿ ಚಿಂತಾಮಣಿಗೆ ಹೋಗಿದ್ದಾನೆ. ಈ ವೇಳೆ ಮನೆಯಲ್ಲಿ ತಾನೂ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾನೆ.

ಸದ್ಯ ಕೊಲೆ ಆರೋಪಿ ವೇಣು ಆಸ್ಪತ್ರೆಗೆ ದಾಖಲಾಗಿದ್ದಾನೆ. ಸ್ಥಳಕ್ಕೆ ಹೊಸಕೋಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ‌ ನಡೆಸಿದ್ದಾರೆ.

ಹೊಸಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Ramesh Babu

Journalist

Recent Posts

ಮೆಳೇಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಕಳ್ಳತನ: ರಾಮ ಲಕ್ಷ್ಮಣರಿಗೆ ಅಳವಡಿಸಿದ್ದ ಬೆಳ್ಳಿ ಕಿರೀಟ ಕದ್ದೊಯ್ದ ಐನಾತಿಗಳು

ಮುಜರಾಯಿ ಇಲಾಖೆಗೆ ಒಳಪಡುವ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ರಾಮ ಲಕ್ಷ್ಮಣರಿಗೆ ಅಳವಡಿಸಿದ್ದ ಬೆಳ್ಳಿ ಕಿರೀಟವನ್ನು ಕಳ್ಳರು ಕದ್ದೊಯ್ದಿರುವ ಘಟನೆ ಕಳೆದ…

3 hours ago

ಮಾರಮ್ಮ ದೇವಿಯ ಮೂರು ಚಿನ್ನದ ತಾಳಿ, ನಾಲ್ಕು ಗುಂಡುಗಳನ್ನ ಕದ್ದ ಖದೀಮರು

ದೊಡ್ಡಬಳ್ಳಾಪುರ ತಾಲೂಕಿನ ಕಲ್ಲುದೇವನಹಳ್ಳಿ ಮಾರಮ್ಮ ದೇವಿ ದೇವಸ್ಥಾನದಲ್ಲಿ ಕಳೆದ ರಾತ್ರಿ ಕಳ್ಳತನ‌ ನಡೆದಿದೆ.. ಕಲ್ಲುದೇವನಹಳ್ಳಿ ಗ್ರಾಮದ ಮಧ್ಯ ಭಾಗದಲ್ಲಿರುವ ಮಾರಮ್ಮ…

4 hours ago

T20 World Cup: ವಿಶ್ವ ವಿಜೇತ ಟೀಂ ಇಂಡಿಯಾಗೆ ದಾಖಲೆಯ ಮೂರನೇ T20 ವಿಶ್ವಕಪ್ ಕಿರೀಟ

ಅಹ್ಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಟಿ20 ವಿಶ್ವಕಪ್ ಫೈನಲ್ಸ್ ಪಂದ್ಯದಲ್ಲಿ ಭಾರತ ತಂಡ ನ್ಯೂಜಿಲ್ಯಾಂಡ್ ವಿರುದ್ಧ ಅದ್ಭುತವಾದ…

15 hours ago

2026-27ನೇ ಸಾಲಿನ ರಾಜ್ಯ ಬಜೆಟ್: ಬಜೆಟ್ ಬಗ್ಗೆ ಶಾಸಕ ಧೀರಜ್ ಮುನಿರಾಜ್ ಏನಂದ್ರು ಗೊತ್ತಾ….? ಅವರ ಪ್ರತಿಕ್ರಿಯೆ ಇಲ್ಲಿದೆ ನೋಡಿ….

ಸಿಎಂ ಸಿದ್ದರಾಮಯ್ಯ ಮಂಡಿಸಿರುವ ಎಲ್ಲಾ ಬಜೆಟ್ ಗಳ ಪೈಕಿ 2026-27ರ ಬಜೆಟ್ ಅತ್ಯಂತ ನಿರಾಶಾದಾಯಕವಾಗಿದೆ. ಈ ಬಜೆಟ್ ನಲ್ಲಿ ಹೊಸ…

23 hours ago

ವಸತಿ ಶಾಲಾ ಸಹಪಾಠಿಗಳ ಮೇಲೆ ಕಬ್ಬಿಣದ ಸರಳು, ಸ್ಕ್ರೂಡ್ರೈವರ್‌, ಚಾಕುವಿನಿಂದ ದಾಳಿ: ಒಬ್ಬ ವಿದ್ಯಾರ್ಥಿ ಸಾವು: 8 ಮಂದಿಗೆ ಗಾಯ

ಬಳ್ಳಾರಿ ನಗರದ "ಗುರುಕುಲ ವಸತಿ ಶಾಲೆ"ಯಲ್ಲಿ ಶನಿವಾರ ರಾತ್ರಿ ವಿದ್ಯಾರ್ಥಿಯೊಬ್ಬ ತನ್ನ ಸಹಪಾಠಿಗಳ ಮೇಲೆ ಕಬ್ಬಿಣದ ಸರಳು, ಸ್ಕ್ರೂಡ್ರೈವರ್‌, ಚಾಕುವಿನಿಂದ…

1 day ago

ತಮಿಳುನಾಡಿನ ಮಹಿಳೆಯರಿಗೆ ಬಂಪರ್‌ ಕೊಡುಗೆ ಘೋಷಿಸಿ ಹೆಣ್ಮಕ್ಕಳ ಕಣ್ಮಣಿಯಾಗಲು ಹೊರಟ ನಟ, ಟಿವಿಕೆ ಪಕ್ಷದ ಅಧ್ಯಕ್ಷ ವಿಜಯ್

ನಟಿ ತ್ರಿಷಾ ಜತೆ ಅಫೇರ್‌ ಆರೋಪ, ಹೆಂಡ್ತಿ ಡಿವೋರ್ಸ್‌ ಗೆ ಅರ್ಜಿ ವಿಚಾರ, ವಿಪಕ್ಷಗಳ ಟೀಕಾ ಪ್ರಹಾರ, ಸೋಷಿಯಲ್‌ ಮೀಡಿಯಾದಲ್ಲಿ…

1 day ago