ಪ್ರಿಯಕರನಿಂದ ಕೊಲೆಯಾದ ಪ್ರಿಯತಮೆ: ಪ್ರಿಯತಮೆ ಗುಪ್ತಾಂಗಕ್ಕೆ ಚಾಕು ಇರಿದು ಕೊಲೆ: ಗುಪ್ತಾಂಗದಲ್ಲೇ ಸಿಲುಕಿರುವ ಚಾಕು

ಪ್ರಿಯತಮೆ ಹೊಟ್ಟೆಗೆ ಚಾಕುವಿನಿಂದ ಇರಿದು ಪ್ರಿಯಕರ ಕೊಲೆ ಮಾಡಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಕೊಲೆ ನಂತರ ತಾನೂ ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆ ಪಾಲಾಗಿರುವ ಘಟನೆ ಹೊಸಕೋಟೆ ನಗರದ ಕಾಲೇಜು ರಸ್ತೆಯಲ್ಲಿ ನಡೆದಿದೆ.

ಆಂಧ್ರಪ್ರದೇಶದ ಮದನಪಲ್ಲಿ ಮೂಲದ ಹೇಮಾವತಿ (35) ಕೊಲೆಗೀಡಾದ ಮಹಿಳೆ. ಚಿಂತಾಮಣಿ ಮೂಲದ ವೇಣು (40) ಕೊಲೆಗೈದ ವ್ಯಕ್ತಿ.

ಹೇಮಾವತಿ ಮದನಪಲ್ಲಿಯಿಂದ ಬಂದು ಕಳೆದ ನಾಲ್ಕು ತಿಂಗಳಿಂದ ಹೊಸಕೋಟೆಯಲ್ಲಿ ಮನೆ ಮಾಡಿ ಪೆಟ್ರೋಲ್ ಬಂಕ್ ನಲ್ಲಿ ಕೆಲಸ ಮಾಡುತ್ತಿದ್ದಳು.

ಈ ವೇಳೆ ವೇಣು ಹಾಗೂ ಹೇಮಾವತಿ ನಡುವೆ ಸ್ನೇಹ ಬೆಳೆದಿದೆ. ಆರೋಪಿ‌ ವೇಣು ಆಗಾಗ ಹೇಮಾವತಿ ಇದ್ದ ಮನೆಗೆ ಬಂದು ಕೆಲ ದಿನ ಇದ್ದು ಹೋಗುತ್ತಿದ್ದ.

ಹೇಮಾವತಿಗೆ ಮದುವೆ ಮಾಡಲು ಆಕೆಯ ಕುಟುಂವಸ್ಥರು ಗಂಡು ನೋಡುತ್ತಿದ್ದರು. ಈ ವಿಚಾರವನ್ನು ವೇಣುಗೆ ತಿಳಿಸುತ್ತಾಳೆ. ಆಗ ಆರೋಪಿ ವೇಣು ನಿಮ್ಮ ಮನೆಯವರು ನೀಡಿದ ಹುಡುಗನನ್ನು ಮದುವೆ ಆಗ ಬೇಡ ಎಂದು ತಿಳಿಸುತ್ತಾನೆ. ಹೀಗೆ ಹಲವು ದಿನಗಳಿಂದ ಹೇಳುತ್ತಾ ಬಂದಿದ್ದ. ಆದರೆ ಮದುವೆ ಮಾತ್ರ ಆಗಿರಲಿಲ್ಲ. ಆಗ ಹೇಮಾವತಿ, ನನ್ನನ್ನು ಮದುವೆ ಆಗು ಇಲ್ಲದಿದ್ದರೆ ನಮ್ಮ ಮನೆಯವರು ನೋಡಯವ ಹುಡುಗನನ್ನು ಮದುವೆ ಆಗುತ್ತೇನೆ ಎಂದು ವೇಣುಗೆ ತಿಳಿಸುತ್ತಾಳೆ. ಇದಕ್ಕೆ ಕುಪಿತಗೊಂಡು, ಅನುಮಾನ ಹೆಚ್ಚಾಗಿ ಚಾಕುವಿನಿಂದ ಹೊಟ್ಟೆಯ ಭಾಗಕ್ಕೆ ಚಾಕುವಿನಿಂದ ಇರಿದು ಕೊಲೆ ಮಾಡಿ ಪರಾರಿಯಾಗಿದ್ದಾನೆ ಎಂದು ಆರೋಪ ಕೇಳಿಬಂದಿದೆ.

ರಾತ್ರಿಯೆಲ್ಲಾ ಆಕೆಯ ಜೊತೆ ಕಾಲ‌ ಕಳೆದು‌ ಮುಂಜಾನೆ ಕೊಲೆ‌ ಮಾಡಿದ್ದಾನೆ ಎನ್ನಲಾಗಿದೆ. ಆರೋಪಿ ವೇಣು ಮಹಿಳೆಯನ್ನ ಕೊಲೆ ಮಾಡಿ ಚಿಂತಾಮಣಿಗೆ ಹೋಗಿದ್ದಾನೆ. ಈ ವೇಳೆ ಮನೆಯಲ್ಲಿ ತಾನೂ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾನೆ.

ಸದ್ಯ ಕೊಲೆ ಆರೋಪಿ ವೇಣು ಆಸ್ಪತ್ರೆಗೆ ದಾಖಲಾಗಿದ್ದಾನೆ. ಸ್ಥಳಕ್ಕೆ ಹೊಸಕೋಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ‌ ನಡೆಸಿದ್ದಾರೆ.

ಹೊಸಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Ramesh Babu

Journalist

Recent Posts

ವೀಲಿಂಗ್ ಪುಂಡನ ಬೈಕ್ ಡಿಕ್ಕಿ: ಗೃಹ ರಕ್ಷಕ ದಳ ಸಿಬ್ಬಂದಿ ಗಂಭೀರ ಗಾಯ

ದೊಡ್ಡಬಳ್ಳಾಪುರ: ಮೋಟಾರ್ ವಾಹನಗಳ ತಪಾಸಣೆ ವೇಳೆ ವೀಲಿಂಗ್ ಮಾಡುತ್ತಿದ್ದ ಬೈಕ್ ಸವಾರನೊಬ್ಬ ಗೃಹ ರಕ್ಷಕ ದಳದ ಸಿಬ್ಬಂದಿಗೆ ಡಿಕ್ಕಿ ಹೊಡೆದು…

3 minutes ago

ಡಿಸಿ ಭವನದಲ್ಲಿ ಜಿಲ್ಲಾಧಿಕಾರಿಗಳಿಂದ ರಿಯಾಲಿಟಿ ಚೆಕ್: ಅಧಿಕಾರಿಗಳು ಫುಲ್ ಶಾಕ್: ಸಮಯಕ್ಕೆ ಬಾರದ ಅಧಿಕಾರಿಗಳಿಗೆ ಡಿಸಿ ಕ್ಲಾಸ್

ಬೆಂಗಳೂರು ಗ್ರಾಮಾಂತರ: ಸೋಮವಾರ ಬೆಳಗ್ಗೆ ಎಂದಿನಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗಳಿಗೆ ಆಗಮಿಸುತ್ತಿದ್ದ ವೇಳೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.…

6 hours ago

ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯಲ್ಲಿ ವಾಹನ ದಟ್ಟಣೆ ಹೆಚ್ಚಳ: ಫ್ಲೈಓವರ್, ರಸ್ತೆ ವಿಸ್ತರಣೆ, ಬಸ್ ನಿಲ್ದಾಣ ನಿರ್ಮಾಣಕ್ಕೆ ಆಗ್ರಹ

ದೊಡ್ಡಬಳ್ಳಾಪುರ: ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯ ಹುಲಿಕುಂಟೆ ಟೋಲ್‌ಪ್ಲಾಜಾದಲ್ಲಿ ಶುಲ್ಕ ಪಾವತಿಸುವುದನ್ನು ತಪ್ಪಿಸಲು ವಾಹನಗಳು ಹೆಚ್ಚಿನ ಪ್ರಮಾಣದಲ್ಲಿ ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯನ್ನು ಪರ್ಯಾಯ…

10 hours ago

ಹಳ್ಳಿಗಳಿಂದ ಅಪಾರ್ಟ್‌ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ……

ನಾವೂ ಒಂದು ಪಾತ್ರವಾಗುತ್ತಾ..... ಹಳ್ಳಿಗಳಿಂದ ಅಪಾರ್ಟ್‌ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ......... ಕೆಲ ವರುಷಗಳ ಹಿಂದೆ ಹುಲ್ಲಿನ ಗುಡಿಸಲು,…

13 hours ago

ಉಪೇಂದ್ರ ಮತ್ತು ಪ್ರಜಾಕೀಯ……..

ಬದಲಾವಣೆ ಬಯಸುವ, ಪರ್ಯಾಯ ರಾಜಕೀಯ ಶಕ್ತಿಗಾಗಿ ಹಾತೊರೆಯುತ್ತಿರುವ ಕೆಲವು ಯುವಕರು ಆಸಕ್ತಿಯಿಂದ - ಆಶಾಭಾವನೆಯಿಂದ - ಕುತೂಹಲದಿಂದ ಕಣ್ಣರಳಿಸಿ ನೋಡುತ್ತಿರುವ…

1 day ago

ಗಾನಕೋಗಿಲೆ ಎಸ್. ಜಾನಕಿ ನಿಧನ

ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ, ಗಾನಕೋಗಿಲೆ ಎಸ್. ಜಾನಕಿ ಅವರು ಶನಿವಾರ ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ವಯೋಸಹಜ ಅನಾರೋಗ್ಯದಿಂದ ನಿಧನರಾದರು.…

2 days ago