ಪ್ರಿಯಕರನಿಂದ ಕೊಲೆಯಾದ ಪ್ರಿಯತಮೆ: ಪ್ರಿಯತಮೆ ಗುಪ್ತಾಂಗಕ್ಕೆ ಚಾಕು ಇರಿದು ಕೊಲೆ: ಗುಪ್ತಾಂಗದಲ್ಲೇ ಸಿಲುಕಿರುವ ಚಾಕು

ಪ್ರಿಯತಮೆ ಹೊಟ್ಟೆಗೆ ಚಾಕುವಿನಿಂದ ಇರಿದು ಪ್ರಿಯಕರ ಕೊಲೆ ಮಾಡಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಕೊಲೆ ನಂತರ ತಾನೂ ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆ ಪಾಲಾಗಿರುವ ಘಟನೆ ಹೊಸಕೋಟೆ ನಗರದ ಕಾಲೇಜು ರಸ್ತೆಯಲ್ಲಿ ನಡೆದಿದೆ.

ಆಂಧ್ರಪ್ರದೇಶದ ಮದನಪಲ್ಲಿ ಮೂಲದ ಹೇಮಾವತಿ (35) ಕೊಲೆಗೀಡಾದ ಮಹಿಳೆ. ಚಿಂತಾಮಣಿ ಮೂಲದ ವೇಣು (40) ಕೊಲೆಗೈದ ವ್ಯಕ್ತಿ.

ಹೇಮಾವತಿ ಮದನಪಲ್ಲಿಯಿಂದ ಬಂದು ಕಳೆದ ನಾಲ್ಕು ತಿಂಗಳಿಂದ ಹೊಸಕೋಟೆಯಲ್ಲಿ ಮನೆ ಮಾಡಿ ಪೆಟ್ರೋಲ್ ಬಂಕ್ ನಲ್ಲಿ ಕೆಲಸ ಮಾಡುತ್ತಿದ್ದಳು.

ಈ ವೇಳೆ ವೇಣು ಹಾಗೂ ಹೇಮಾವತಿ ನಡುವೆ ಸ್ನೇಹ ಬೆಳೆದಿದೆ. ಆರೋಪಿ‌ ವೇಣು ಆಗಾಗ ಹೇಮಾವತಿ ಇದ್ದ ಮನೆಗೆ ಬಂದು ಕೆಲ ದಿನ ಇದ್ದು ಹೋಗುತ್ತಿದ್ದ.

ಹೇಮಾವತಿಗೆ ಮದುವೆ ಮಾಡಲು ಆಕೆಯ ಕುಟುಂವಸ್ಥರು ಗಂಡು ನೋಡುತ್ತಿದ್ದರು. ಈ ವಿಚಾರವನ್ನು ವೇಣುಗೆ ತಿಳಿಸುತ್ತಾಳೆ. ಆಗ ಆರೋಪಿ ವೇಣು ನಿಮ್ಮ ಮನೆಯವರು ನೀಡಿದ ಹುಡುಗನನ್ನು ಮದುವೆ ಆಗ ಬೇಡ ಎಂದು ತಿಳಿಸುತ್ತಾನೆ. ಹೀಗೆ ಹಲವು ದಿನಗಳಿಂದ ಹೇಳುತ್ತಾ ಬಂದಿದ್ದ. ಆದರೆ ಮದುವೆ ಮಾತ್ರ ಆಗಿರಲಿಲ್ಲ. ಆಗ ಹೇಮಾವತಿ, ನನ್ನನ್ನು ಮದುವೆ ಆಗು ಇಲ್ಲದಿದ್ದರೆ ನಮ್ಮ ಮನೆಯವರು ನೋಡಯವ ಹುಡುಗನನ್ನು ಮದುವೆ ಆಗುತ್ತೇನೆ ಎಂದು ವೇಣುಗೆ ತಿಳಿಸುತ್ತಾಳೆ. ಇದಕ್ಕೆ ಕುಪಿತಗೊಂಡು, ಅನುಮಾನ ಹೆಚ್ಚಾಗಿ ಚಾಕುವಿನಿಂದ ಹೊಟ್ಟೆಯ ಭಾಗಕ್ಕೆ ಚಾಕುವಿನಿಂದ ಇರಿದು ಕೊಲೆ ಮಾಡಿ ಪರಾರಿಯಾಗಿದ್ದಾನೆ ಎಂದು ಆರೋಪ ಕೇಳಿಬಂದಿದೆ.

ರಾತ್ರಿಯೆಲ್ಲಾ ಆಕೆಯ ಜೊತೆ ಕಾಲ‌ ಕಳೆದು‌ ಮುಂಜಾನೆ ಕೊಲೆ‌ ಮಾಡಿದ್ದಾನೆ ಎನ್ನಲಾಗಿದೆ. ಆರೋಪಿ ವೇಣು ಮಹಿಳೆಯನ್ನ ಕೊಲೆ ಮಾಡಿ ಚಿಂತಾಮಣಿಗೆ ಹೋಗಿದ್ದಾನೆ. ಈ ವೇಳೆ ಮನೆಯಲ್ಲಿ ತಾನೂ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾನೆ.

ಸದ್ಯ ಕೊಲೆ ಆರೋಪಿ ವೇಣು ಆಸ್ಪತ್ರೆಗೆ ದಾಖಲಾಗಿದ್ದಾನೆ. ಸ್ಥಳಕ್ಕೆ ಹೊಸಕೋಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ‌ ನಡೆಸಿದ್ದಾರೆ.

ಹೊಸಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Ramesh Babu

Journalist

Recent Posts

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

47 minutes ago

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

7 hours ago

ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ ಸುಸೂತ್ರ; ದೊಡ್ಡಬಳ್ಳಾಪುರದ 7 ಕೇಂದ್ರಗಳಲ್ಲಿ ಯಶಸ್ವಿ ಆಯೋಜನೆ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…

8 hours ago

ಈ ಬಾರಿಯ ದಸರಾ ಉದ್ಘಾಟನೆ ಯಾರು ಮಾಡಿದರೆ ಉತ್ತಮ…..

ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…

2 days ago

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

2 days ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

2 days ago