ಪ್ರಿಯಕರನಿಂದ ಕೊಲೆಯಾದ ಪ್ರಿಯತಮೆ: ಪ್ರಿಯತಮೆ ಗುಪ್ತಾಂಗಕ್ಕೆ ಚಾಕು ಇರಿದು ಕೊಲೆ: ಗುಪ್ತಾಂಗದಲ್ಲೇ ಸಿಲುಕಿರುವ ಚಾಕು

ಪ್ರಿಯತಮೆ ಹೊಟ್ಟೆಗೆ ಚಾಕುವಿನಿಂದ ಇರಿದು ಪ್ರಿಯಕರ ಕೊಲೆ ಮಾಡಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಕೊಲೆ ನಂತರ ತಾನೂ ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆ ಪಾಲಾಗಿರುವ ಘಟನೆ ಹೊಸಕೋಟೆ ನಗರದ ಕಾಲೇಜು ರಸ್ತೆಯಲ್ಲಿ ನಡೆದಿದೆ.

ಆಂಧ್ರಪ್ರದೇಶದ ಮದನಪಲ್ಲಿ ಮೂಲದ ಹೇಮಾವತಿ (35) ಕೊಲೆಗೀಡಾದ ಮಹಿಳೆ. ಚಿಂತಾಮಣಿ ಮೂಲದ ವೇಣು (40) ಕೊಲೆಗೈದ ವ್ಯಕ್ತಿ.

ಹೇಮಾವತಿ ಮದನಪಲ್ಲಿಯಿಂದ ಬಂದು ಕಳೆದ ನಾಲ್ಕು ತಿಂಗಳಿಂದ ಹೊಸಕೋಟೆಯಲ್ಲಿ ಮನೆ ಮಾಡಿ ಪೆಟ್ರೋಲ್ ಬಂಕ್ ನಲ್ಲಿ ಕೆಲಸ ಮಾಡುತ್ತಿದ್ದಳು.

ಈ ವೇಳೆ ವೇಣು ಹಾಗೂ ಹೇಮಾವತಿ ನಡುವೆ ಸ್ನೇಹ ಬೆಳೆದಿದೆ. ಆರೋಪಿ‌ ವೇಣು ಆಗಾಗ ಹೇಮಾವತಿ ಇದ್ದ ಮನೆಗೆ ಬಂದು ಕೆಲ ದಿನ ಇದ್ದು ಹೋಗುತ್ತಿದ್ದ.

ಹೇಮಾವತಿಗೆ ಮದುವೆ ಮಾಡಲು ಆಕೆಯ ಕುಟುಂವಸ್ಥರು ಗಂಡು ನೋಡುತ್ತಿದ್ದರು. ಈ ವಿಚಾರವನ್ನು ವೇಣುಗೆ ತಿಳಿಸುತ್ತಾಳೆ. ಆಗ ಆರೋಪಿ ವೇಣು ನಿಮ್ಮ ಮನೆಯವರು ನೀಡಿದ ಹುಡುಗನನ್ನು ಮದುವೆ ಆಗ ಬೇಡ ಎಂದು ತಿಳಿಸುತ್ತಾನೆ. ಹೀಗೆ ಹಲವು ದಿನಗಳಿಂದ ಹೇಳುತ್ತಾ ಬಂದಿದ್ದ. ಆದರೆ ಮದುವೆ ಮಾತ್ರ ಆಗಿರಲಿಲ್ಲ. ಆಗ ಹೇಮಾವತಿ, ನನ್ನನ್ನು ಮದುವೆ ಆಗು ಇಲ್ಲದಿದ್ದರೆ ನಮ್ಮ ಮನೆಯವರು ನೋಡಯವ ಹುಡುಗನನ್ನು ಮದುವೆ ಆಗುತ್ತೇನೆ ಎಂದು ವೇಣುಗೆ ತಿಳಿಸುತ್ತಾಳೆ. ಇದಕ್ಕೆ ಕುಪಿತಗೊಂಡು, ಅನುಮಾನ ಹೆಚ್ಚಾಗಿ ಚಾಕುವಿನಿಂದ ಹೊಟ್ಟೆಯ ಭಾಗಕ್ಕೆ ಚಾಕುವಿನಿಂದ ಇರಿದು ಕೊಲೆ ಮಾಡಿ ಪರಾರಿಯಾಗಿದ್ದಾನೆ ಎಂದು ಆರೋಪ ಕೇಳಿಬಂದಿದೆ.

ರಾತ್ರಿಯೆಲ್ಲಾ ಆಕೆಯ ಜೊತೆ ಕಾಲ‌ ಕಳೆದು‌ ಮುಂಜಾನೆ ಕೊಲೆ‌ ಮಾಡಿದ್ದಾನೆ ಎನ್ನಲಾಗಿದೆ. ಆರೋಪಿ ವೇಣು ಮಹಿಳೆಯನ್ನ ಕೊಲೆ ಮಾಡಿ ಚಿಂತಾಮಣಿಗೆ ಹೋಗಿದ್ದಾನೆ. ಈ ವೇಳೆ ಮನೆಯಲ್ಲಿ ತಾನೂ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾನೆ.

ಸದ್ಯ ಕೊಲೆ ಆರೋಪಿ ವೇಣು ಆಸ್ಪತ್ರೆಗೆ ದಾಖಲಾಗಿದ್ದಾನೆ. ಸ್ಥಳಕ್ಕೆ ಹೊಸಕೋಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ‌ ನಡೆಸಿದ್ದಾರೆ.

ಹೊಸಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Ramesh Babu

Journalist

Recent Posts

ದೊಡ್ಡಬಳ್ಳಾಪುರ ತಾಲೂಕು ಯಾದವ ಯುವ ವೇದಿಕೆಗೆ ನೂತನ ಪದಾಧಿಕಾರಿಗಳ ನೇಮಕ

ದೊಡ್ಡಬಳ್ಳಾಪುರ: ದೇವನಹಳ್ಳಿಯಲ್ಲಿರುವ ಕರ್ನಾಟಕ ಯಾದವ ಯುವ ವೇದಿಕೆಯ ಕೇಂದ್ರ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕರ್ನಾಟಕ ಯಾದವ ಯುವ ವೇದಿಕೆ ದೊಡ್ಡಬಳ್ಳಾಪುರ…

11 hours ago

‘ಕೆಐಎಡಿಬಿ ಮಧ್ಯವರ್ತಿ ಸಂಸ್ಥೆ’: ಜೂ.5ಕ್ಕೆ ಭೂಸ್ವಾಧೀನ ವಿರೋಧಿಸಿ ರೈತರ ವಿಧಾನಸೌಧ ಚಲೋ: ರೈತ ಸಂಘದ ಜಿಲ್ಲಾ ಘಟಕ ಬೆಂಬಲ

ದೊಡ್ಡಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯ ಜಂಗಮ ಕೋಟೆಯ 1885 ಎಕರೆ ಭೂಸ್ವಾಧೀನ ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು…

11 hours ago

ಇಂಧನ ಬೆಲೆ ಏರಿಕೆ ಖಂಡಿಸಿ ಕನ್ನಡ ಪಕ್ಷ ಪ್ರತಿಭಟನೆ

  ದೊಡ್ಡಬಳ್ಳಾಪುರ: ಪದೇ ಪದೇ ಏರಿಕೆಯಾಗುತ್ತಿರುವ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಗಳಿಂದ ಜನಸಾಮಾನ್ಯರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಆರೋಪಿಸಿ ಕನ್ನಡ…

11 hours ago

ಘನ ತ್ಯಾಜ್ಯ ಸಮರ್ಪಕ ನಿರ್ವಹಣೆಗೆ ಸಾರ್ವಜನಿಕರ ಸಹಕಾರ ಅಗತ್ಯ- ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ ಕರೆ

ಘನ ತ್ಯಾಜ್ಯವನ್ನು ಎಲ್ಲೆಂದರಲ್ಲಿ ಬಿಸಾಡುವ ಬದಲು ಮನೆಗಳಲ್ಲಿ ಪ್ರತ್ಯೇಕವಾಗಿ ವಿಂಗಡಿಸಿ ನಗರಸಭೆ, ಪುರಸಭೆಯ ತ್ಯಾಜ್ಯ ಸಂಗ್ರಹ ವಾಹನಗಳಿಗೆ ಹಸ್ತಾಂತರಿಸುವ ಮೂಲಕ…

11 hours ago

ಮೀನಿನ ಬಲೆಯಲ್ಲಿ ಸಿಲುಕಿ ಒದ್ದಾಡಿದ ಬೃಹತ್ ಹೆಬ್ಬಾವು; ಗ್ರಾಮಸ್ಥರಿಂದ ರಕ್ಷಣೆ

ದೊಡ್ಡಬಳ್ಳಾಪುರ: ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯ ಹುಲುಕುಡಿ ಬೆಟ್ಟದ ತಪ್ಪಲಿನ ಮಾಡೇಶ್ವರ ಗ್ರಾಮದ ಸಮೀಪ ಬೃಹತ್ ಗಾತ್ರದ ಹೆಬ್ಬಾವು ಮೀನಿನ ಹಳೆಯ…

14 hours ago

ಬಾಶೆಟ್ಟಿಹಳ್ಳಿ ಕೆರೆಯಲ್ಲಿ ಅಕ್ರಮ ಮಣ್ಣು ದಂಧೆ ಆರೋಪ: ಚಾಲಕ, ಮಣ್ಣು ಸಮೇತ ಟಿಪ್ಪರ್ ಲಾರಿಗಳ ವಶ

ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೆರೆಯಲ್ಲಿ ಅಕ್ರಮ ಮಣ್ಣು ದಂಧೆ ಬೆಳಕಿಗೆ ಬಂದಿದ್ದು, ಖಚಿತ ಮಾಹಿತಿ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್…

18 hours ago